Homeಮುಖಪುಟಕನ್ನಡಿಗರು ಎಂದೂ ಮರೆಯದ ಡಾ.ರಾಜ್‌ ಅವರ ಟಾಪ್‌-5 ಚಿತ್ರಗಳು!

ಕನ್ನಡಿಗರು ಎಂದೂ ಮರೆಯದ ಡಾ.ರಾಜ್‌ ಅವರ ಟಾಪ್‌-5 ಚಿತ್ರಗಳು!

- Advertisement -
- Advertisement -

‘ಡಾ. ರಾಜ್‌ಕುಮಾರ್‌’ ಕನ್ನಡ ಮತ್ತು ಕನ್ನಡಿಗರ ಮಟ್ಟಿಗೆ ಇದೊಂದು ಮಾಂತ್ರಿಕ ಶಬ್ಧವೇ ಸರಿ. ಕನ್ನಡಿಗರು ಮತ್ತು ಇಡೀ ಕನ್ನಡದ ಚಿತ್ರರಂಗದ ಪಾಲಿಗೆ ದಶಕಗಳ ಕಾಲ ಅಜಾತಶತೃವಿನಂತೆ ಮಿಂಚಿದ್ದ ರಾಜ್‌ಕುಮಾರ್‌ ಸಿನಿಮಾ ಆಚೆಗೂ ಮೇರು ವ್ಯಕ್ತಿತ್ವ. ಕನ್ನಡ ಚಳುವಳಿಗಳಲ್ಲಿ ಇಂದಿಗೂ ಸಹ ಅಳಿಸಿ ಹಾಕಲಾಗದ ಹೆಸರು-ವ್ಯಕ್ತಿತ್ವವಾಗಿದ್ದಾರೆ.

50ರ ದಶಕದಿಂದ ಕಳೆದ ಶತಮಾನದ ಕೊನೆಯ ದಶಕದವರೆಗೂ ರಾಜ್‌ಕುಮಾರ್‌ ನಾಯಕ ನಟನಾಗಿಯೇ ನಟಿಸಿದ್ದರು. ಈ ಅವಧಿಯಲ್ಲಿ ಸುಮಾರು 208 ಚಿತ್ರಗಳಲ್ಲಿ ನಟಿಸಿದ್ದ ಅವರ ಒಂದೊಂದು ಚಿತ್ರವೂ ಅವರ ಅಭಿಮಾನಿಗಳ ಪಾಲಿಗೆ ಪಾಠವೇ ಆಗಿ ಹೋಗಿದೆ. ಓರ್ವ ಮಗನಾಗಿ, ತಂದೆಯಾಗಿ, ಪ್ರಿಯತಮನಾಗಿ, ಸಮಾಜ ಸುಧಾರಕನಾಗಿ, ದೇಶ ಕಾಯುವ ಸೈನಿಕನಾಗಿ, ಸರ್ಕಾರಿ ಅಧಿಕಾರಿಯಾಗಿ, ಶಿಕ್ಷಕನಾಗಿ ಹೀಗೆ ಅವರು ನಿರ್ವಹಿಸಿದ ಎಲ್ಲಾ ಪಾತ್ರದಲ್ಲೂ ಒಂದು ಸಮಾಜಿಕ ಕಳಕಳಿಯನ್ನು ಈ ನಾಡಿಗೆ ಕೊಟ್ಟು ಹೋಗಿದ್ದಾರೆ.

ನೆನಪಿರಲಿ ರಾಜ್‌ಕುಮಾರ್ ನಿಜ ಜೀವನದಲ್ಲಿ ಸಿಗರೇಟ್‌ ಸೇದುತ್ತಿದ್ದರು. ಆದರೆ, ಅದು ತನ್ನ ಅಭಿಮಾನಿಗಳಿಗೆ ಕೆಟ್ಟ ಅನುಕರಣೆಯಾಗಬಾರದು ಎಂಬ ಏಕೈಕ ಕಾರಣಕ್ಕೆ ಅವರು ತೆರೆಯ ಮೇಲೆ ಎಂದಿಗೂ ಸಿಗರೇಟ್‌ ಸೇದುವ ಹಾಗೂ ಮದ್ಯಪಾನ ಮಾಡುವ ದೃಶ್ಯಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಇದು ಅವರ ಸಾಮಾಜಿಕ ಬದ್ಧತೆಯನ್ನು ತೋರಿಸುತ್ತದೆ. ಇಂದು ಅವರ ಜನ್ಮದಿನ. ಆ ನೆಪದಲ್ಲಿ ಡಾ.ರಾಜ್‌ಕುಮಾರ್‌ ಅವರ ಟಾಪ್‌-5 ಅತ್ಯುತ್ತಮ ಚಲನ ಚಿತ್ರಗಳ ಪಟ್ಟಿ ಇಲ್ಲದೆ.

1. ಕಸ್ತೂರಿ ನಿವಾಸ (1971)
ನಿರ್ದೇಶಕ – ದೊರೈ-ಭಗವಾನ್
ಸಂಗೀತ – ಜಿ.ಕೆ.ವೆಂಕಟೇಶ್
ನಿರ್ಮಾಪಕ – ಕೆ.ಸಿ.ಎನ್.ಗೌಡ
ತಾರಾಗಣ – ಡಾ.ರಾಜ್‌ಕುಮಾರ್, ಕೆ.ಎಸ್.ಅಶ್ವತ್, ಜಯಂತಿ, ಭಾರತಿ.

ಕನ್ನಡಿಗರು ಎಂದೂ ಮರೆಯದ ಚಿತ್ರ “ಕಸ್ತೂರಿ ನಿವಾಸ”. ಈ ಚಿತ್ರಕ್ಕಿಂತಲೂ ಹಿಂದೆ ಡಾ.ರಾಜ್‌ಕುಮಾರ್, ಬೇಡರ ಕಣ್ಣಪ್ಪ, ಸತ್ಯ ಹರಿಶ್ಚಂದ್ರ ನಂತಹ ಅದ್ಭುತವಾದ ಪೌರಾಣಿಕ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ರೂ ಸಹ ಕಸ್ತೂರಿ ನಿವಾಸ ಸಿನಿಮಾ ಸೃಷ್ಠಿ ಮಾಡಿದಷ್ಟು ಭಾವನಾತ್ಮಕ ಅಲೆಯನ್ನು ಭಾಗಶಃ ಆ ಕಾಲಘಟ್ಟದಲ್ಲಿ ಯಾವ ಚಿತ್ರವೂ ಸೃಷ್ಠಿಸಿರಲಾರದು.

ಅಣ್ಣಾವ್ರ ಅದ್ಭುತವಾದ ನಟನೆಗೆ ಪ್ರೇಕ್ಷಕರ ಕಣ್ಣಂಚಲ್ಲಿ ನೀರು ಜಿನುಗಿತ್ತು. ಆ ಕಾಲದಲ್ಲೇ ಈ ಚಿತ್ರ ದಾಖಲೆಯ ಗಳಿಕೆ ಕಂಡಿತ್ತು. ಕನ್ನಡ ಚಿತ್ರೋದ್ಯಮದ ಪಾಲಿಗೆ ಈ ಚಿತ್ರ ಈಗಲೂ ಮೈಲುಗಲ್ಲಾದ್ರೆ, ಕನ್ನಡಿಗರು ಹಾಗೂ ಅಣ್ಣಾವ್ರ ಅಭಿಮಾನಿಗಳ ಪಾಲಿಗೆ ಕಸ್ತೂರಿ ನಿವಾಸ ಎಂದೂ ಮರೆಯಲಾರದ ಚಿತ್ರವೇ ಸರಿ.

2 . ಬಂಗಾರದ ಮನುಷ್ಯ (1972)
ನಿರ್ದೇಶನ – ಸಿದ್ದಲಿಂಗಯ್ಯ
ನಿರ್ಮಾಪಕ – ಆರ್.ಲಕ್ಷ್ಮಣ ಗೋಪಾಲ್
ಸಂಗೀತ – ಜಿ.ಕೆ.ವೆಂಕಟೇಶ್
ತಾರಾಗಣ – ಡಾ.ರಾಜ್‌ಕುಮಾರ್, ಭಾರತಿ, ಎಂ.ಎನ್.ಲಕ್ಷ್ಮೀದೇವಿ

“ಬಂಗಾರದ ಮನುಷ್ಯ” ಕನ್ನಡ ಚಿತ್ರರಂಗದ ಪಾಲಿಗೆ ಮೈಲುಗಲ್ಲಾದ ಚಿತ್ರ. ಡಾ.ರಾಜ್‌ಕುಮಾರ್‌ರವರಿಗೆ ಬಂಗಾರದ ಮನುಷ್ಯ ಎಂಬ ಬಿರುದು ತಂದುಕೊಟ್ಟ ಚಿತ್ರ. ನಿರ್ದೇಶಕ ಸಿದ್ದಲಿಂಗಯ್ಯನವರ ಕಲ್ಪನೆಯಲ್ಲಿ ಮೂಡಿಬಂದಿದ್ದ ಬಂಗಾರದ ಮನುಷ್ಯ ಕೃಷಿ ಹಾಗೂ ಅದರ ಮಹತ್ವವನ್ನು ಸಾರುವ ಚಿತ್ರವಾಗಿದ್ದು, ಆ ಕಾಲಕ್ಕೆ ಭಾರೀ ಜನಪ್ರಿಯತೆ ಗಳಿಸಿತ್ತು.

ಈ ಚಿತ್ರವನ್ನು ವೀಕ್ಷಿಸಿದ ಅಸಂಖ್ಯಾತ ಯುವಕರು ಮತ್ತೆ ಹಳ್ಳಿಗಳಿಗೆ ಮರಳಿ ಕೃಷಿಯಲ್ಲಿ ತೊಡಗಿಕೊಂಡರು ಎಂಬುದು ಇತಿಹಾಸ. ಹೀಗೆ ಒಂದು ಚಿತ್ರದ ಮೂಲಕ ಸಾಮಾಜಿಕ ಕ್ರಾಂತಿ ಸಾಧ್ಯ ಎಂಬ ಸಾಧ್ಯತೆಯನ್ನು ಕನ್ನಡಿಗರ ಪಾಲಿಗೆ ಸಾಧಿಸಿ ತೋರಿಸಿದ ಕೀರ್ತಿ ಈ ಚಿತ್ರಕ್ಕೆ ಮತ್ತು ಡಾ.ರಾಜ್‌ಕುಮಾರ್‌ ಎಂಬ ಎರಡು ಶಬ್ಧದ ಶಕ್ತಿಗೆ ಸಲ್ಲುತ್ತದೆ.

3. ಗಂಧದಗುಡಿ (1973)
ನಿರ್ದೇಶಕ – ವಿಜಯ್
ನಿರ್ಮಾಪಕ – ಎಂ.ಪಿ.ಶಂಕರ್
ಸಂಗೀತ – ರಾಜನ್-ನಾಗೇಂದ್ರ
ತಾರಾಗಣ – ಡಾ.ರಾಜ್‌ಕುಮಾರ್, ಡಾ.ವಿಷ್ಣುವರ್ಧನ್, ಕಲ್ಪನಾ.

ಕನ್ನಡ ರಾಜ್ಯೋತ್ಸವ ಸಮಾರಂಭಗಳಲ್ಲಿ ಈಗಲೂ ಕಡ್ಡಾಯ ಹಾಡಾಗಿರುವ “ನಾವಾಡುವ ನುಡಿಯೇ ಕನ್ನಡ ನುಡಿ” ಎಂಬ ಹಾಡು ಎಲ್ಲಿಯವರೆಗೆ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿರುತ್ತದೆಯೋ ಅಲ್ಲಿಯ ವರೆಗೆ “ಗಂಧದಗುಡಿ” ಎಂಬ ಚಿತ್ರ ಜನರ ಸ್ಮೃತಿ ಪಟಲದಿಂದ ಮರೆಯಾಗಲು ಸಾಧ್ಯವೇ ಇಲ್ಲ.

ಇದು ಸ್ಯಾಂಡಲ್‌ವುಡ್ ಇತಿಹಾಸದಲ್ಲಿ ಎರಡು ಮೇರು ಪರ್ವತಗಳಾಗಿರುವ ಡಾ.ರಾಜ್‌ಕುಮಾರ್ ಹಾಗೂ ಡಾ.ವಿಷ್ಣುವರ್ಧನ್ ಒಟ್ಟಿಗೆ ನಟಿಸಿದ ಏಕೈಕ ಚಿತ್ರವೂ ಹೌದು. ಅರಣ್ಯ ಸಂರಕ್ಷಣೆ ಕುರಿತು ಜನರಲ್ಲಿ ಪ್ರಜ್ಞೆ ಮೂಡಿಸಿದ ಈ ಚಿತ್ರ ಆ ಕಾಲದಲ್ಲಿ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿತ್ತು. ಹಿರಿಯ ನಿರ್ದೇಶಕ ವಿಜಯ್ ವೃತ್ತಿ ಬದುಕಿನ ಅತ್ಯಂತ ಶ್ರೇಷ್ಠ ಚಿತ್ರಗಳ ಪೈಕಿ ಇದಕ್ಕೆ ಅಗ್ರಸ್ಥಾನ. ಆದರೆ ಭವಿಷ್ಯದಲ್ಲಿ ಡಾ.ರಾಜ್‌ಕುಮಾರ್ ಹಾಗೂ ಡಾ.ವಿಷ್ಣುವರ್ಧನ್ ಮತ್ತೊಮ್ಮೆ ಜತೆಯಾಗಿ ನಟಿಸದಿರುವುದು ಕನ್ನಡಿಗರ ಪಾಲಿಗೆ ದುರಾದೃಷ್ಟವೇ ಸರಿ.

4. ಒಂದು ಮುತ್ತಿನ ಕಥೆ (1987)
ನಿರ್ದೇಶಕ – ಶಂಕರ್‌ನಾಗ್
ನಿರ್ಮಾಪಕ – ಎ.ದ್ವಾರಕಾನಾಥ್
ಸಂಗೀತ – ಎಲ್.ವೈದ್ಯನಾಥ್
ತಾರಾಗಣ – ಡಾ.ರಾಜ್, ಅರ್ಚನಾ

ಒಂದು ಮುತ್ತಿನ ಕಥೆ” ಶಂಕರ್‌ನಾಗ್ ನಿರ್ದೇಶನದ ಕೊನೆಯ ಚಿತ್ರ. ಅನೇಕ ಕಾರಣಗಳಿಗಾಗಿ ಇದು ಕನ್ನಡದ ಮಹತ್ವದ ಚಿತ್ರಗಳಲ್ಲೊಂದು. ಕನ್ನಡದ ಕ್ರಿಯಾಶೀಲ ಕಲಾವಿದ ಹಾಗೂ ನಿರ್ದೇಶಕ ಎಂದೇ ಹೆಸರಾದ ಶಂಕರ್‌ನಾಗ್ ಈ ಚಿತ್ರದ ಮೂಲಕ ಕನ್ನಡದ ಚಿತ್ರರಂಗವನ್ನು ತಾಂತ್ರಿಕವಾಗಿ ಉನ್ನತ ಮಟ್ಟಕ್ಕೆ ಏರಿಸಿದ್ದರು.

ಡಾ.ರಾಜ್‌ಕುಮಾರ್ ಅಭಿನಯದ ಈ ಚಿತ್ರದಲ್ಲಿ ಮೊದಲ ಬಾರಿಗೆ ನೀರಿನ ಆಳದಲ್ಲಿ ಚಿತ್ರಿಸಲಾಗಿತ್ತು. ಸಮುದ್ರದಾಳದಲ್ಲಿ ನಾಯಕ ಕೃತಕ ಆಕ್ಟೋಪಸ್ ಜತೆಗೆ ಸಾಹಸ ಮಾಡುವ ಹಲವು ದೃಶ್ಯಗಳನ್ನು ಸೆರೆ ಹಿಡಿಯಲಾಗಿತ್ತು. ಆ ಕಾಲಕ್ಕೆ ಇದು ಕನ್ನಡ ಚಿತ್ರರಂಗಕ್ಕೆ ತಾಂತ್ರಿಕವಾಗಿ ಹೊಸ ಭಾಷ್ಯ ಬರೆದ ಚಿತ್ರವಾಗಿತ್ತು.

ತಾಂತ್ರಿಕವಾಗಿ ಮಾತ್ರವಲ್ಲದೆ ಚಿತ್ರದ ಕಥೆಯನ್ನೂ ಸಹ ಶಂಕರ್‌ನಾಗ್ ಮನೋಜ್ಞವಾಗಿ ಚಿತ್ರಿಸಿದ್ದರು. ಮುತ್ತಿನ ಶಿಕಾರಿಗೆ ಹೋಗುವ ನಾಯಕನಿಗೆ ದೊಡ್ಡ ಗಾತ್ರದ ಅಪರೂಪದ ಮುತ್ತು ಸಿಗುತ್ತಿದೆ. ಆದರೆ ಅನಕ್ಷರಸ್ಥರಾದ ಈ ಬುಡಕಟ್ಟು ಸಮಾಜದವರನ್ನು ವ್ಯಾಪಾರಿಗಳು ಹೇಗೆಲ್ಲ ಮೋಸ ಮಾಡಿ ಕೊಳ್ಳೆ ಹೊಡೆಯಲು ಪ್ರಯತ್ನಿಸುತ್ತಾರೆ. ಕೊನೆಗೆ ನಾಯಕ ಆ ಮುತ್ತನ್ನು ಏನು ಮಾಡುತ್ತಾನೆ ಎಂಬ ಅಂಶವನ್ನು ಮನಮುಟ್ಟುವಂತೆ ಚಿತ್ರಿಸಲಾಗಿತ್ತು.

ಚಿತ್ರ ಬಿಡುಗಡೆಯಾದಾಗ ಡಾ.ರಾಜ್ ನಟನೆ ಹಾಗೂ ಶಂಕರ್‌ನಾಗ್ ಕ್ರಿಯಾಶೀಲತೆಗೆ ವಿಮರ್ಶಕರಿಂದ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು. ಆದ್ರೆ ಡಾ.ರಾಜ್‌ಕುಮಾರ್ ರಂತಹ ಘಟಾನುಘಟಿ ನಟಿಸಿಯೂ ಸಹ ಈ ಚಿತ್ರ ನಿರೀಕ್ಷಿತ ಗೆಲುವು ಸಾಧಿಸುವಲ್ಲಿ ವಿಫಲವಾಗಿತ್ತು. ಒಟ್ಟಾರೆ ಕನ್ನಡಿಗರು ನೋಡಲೇಬೇಕಿದ್ದ ಗೆಲ್ಲಿಸಲೇಬೇಕಿದ್ದ ಅಪರೂಪದ ಚಿತ್ರವೊಂದು ಸೋಲಿನ ರುಚಿ ಕಂಡಿದ್ದು ಮಾತ್ರ ವಿಪರ್ಯಾಸ.

5. ಜೀವನ ಚೈತ್ರ (1992)
ನಿರ್ದೇಶಕ – ದೊರೆ-ಭಗವಾನ್
ನಿರ್ಮಾಪಕರು – ಪಾರ್ವತಮ್ಮ ರಾಜ್‌ಕುಮಾರ್
ಸಂಗೀತ – ಉಪೇಂದ್ರ ಕುಮಾರ್
ತಾರಾಗಣ – ಡಾ.ರಾಜ್, ಮಾಧವಿ, ಸುಧಾರಾಣಿ

ಕನ್ನಡ ಚಿತ್ರರಂಗದಲ್ಲಿ ಸಾಮಾಜಿಕ ಕಳಕಳಿಯನ್ನು ಪರಿಣಾಮಕಾರಿಯಾಗಿ ಜನರಿಗೆ ಮುಟ್ಟಿಸಿದ ಹಾಗೂ ಆ ಮೂಲಕ ಕೆಲವು ಪರಿಣಾಮಕಾರಿ ಸಾಮಾಜಿಕ ಬದಲಾವಣೆಗೆ ಕಾರಣವಾದ ಕೆಲವೇ ಕೆಲವು ಚಿತ್ರಗಳ ಪೈಕಿ ಜೀವನ ಚೈತ್ರ ಸಹ ಒಂದು.

ಈ ಚಿತ್ರದಲ್ಲಿ ಡಾ.ರಾಜ್‌ಕುಮಾರ್ ಮದ್ಯ ಸೇವನೆಯ ವಿರುದ್ಧ ಹೋರಾಡುವ ಪಾತ್ರದಲ್ಲಿಅಭಿನಯಿಸಿದ್ದರು. ಚಿತ್ರದ ನಾಯಕಿ ಮಾಧವಿ. ಸತತ ಮೂರು ವರ್ಷ ಯಾವುದೇ ಸಿನಿಮಾದಲ್ಲಿ ನಟಿಸದ ರಾಜ್‌ಕುಮಾರ್‌ ಈ ಚಿತ್ರದ ಮೂಲಕ ತೆರೆಗೆ ಮರಳಿದ್ದರು. ಅಲ್ಲದೆ, ಈ ಚಿತ್ರ ವರ್ಷಗಳ ಕಾಲ ಚಿತ್ರಮಂದಿರದಲ್ಲಿ ಪ್ರದರ್ಶನ ಕಾಣುವ ಮೂಲಕ ದಾಖಲೆ ಬರೆದಿತ್ತು.

ಈ ಚಿತ್ರ ವಿಶಾಲಾಕ್ಷಿ ದಕ್ಷಿಣಾಮೂರ್ತಿ ಅವರ ಇದೇ ಹೆಸರಿನ ಕಾದಂಬರಿ ಆಧಾರಿತ ಚಲನಚಿತ್ರ ಎಂಬುದು ವಿಶೇಷ. ಈ ಚಿತ್ರದ ಪರಿಣಾಮವಾಗಿ ಕರ್ನಾಟಕದಲ್ಲಿ ಹಲವಾರು ಹೆಂಡದಂಗಡಿಗಳು ಮುಚ್ಚಲ್ಪಟ್ಟವು ಹಾಗೂ ಡಾ.ರಾಜ್ ಹಲವು ಅಭಿಮಾನಿಗಳು ಮದ್ಯಪಾನ ತ್ಯಜಿಸಿದರೆಂದು ಅಂದಿನ ದಿನಪತ್ರಿಕೆಗಳಲ್ಲಿ ಪ್ರಕಟವಾಗಿತ್ತು.

ಈ ಚಿತ್ರದ “ನಾದಮಯ” ಗೀತೆಗಾಗಿ ರಾಜ್ ಕುಮಾರ್ 40ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಅತ್ಯುತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿಗೆ ಭಾಜನರಾದರು.


ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್‌…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...