Homeಕರ್ನಾಟಕಪುನೀತ್‌ ಎಂದ ಕೂಡಲೇ ಕಣ್ಣೆದುರಿಗೆ ಬರುವುದು ಡಾ.ರಾಜ್‌ ವ್ಯಕ್ತಿತ್ವ

ಪುನೀತ್‌ ಎಂದ ಕೂಡಲೇ ಕಣ್ಣೆದುರಿಗೆ ಬರುವುದು ಡಾ.ರಾಜ್‌ ವ್ಯಕ್ತಿತ್ವ

ಡಾ.ರಾಜ್‌ ಕುಟುಂಬದೊಂದಿಗೆ ಅಪಾರ ಒಡನಾಟ ಹೊಂದಿರುವ ಸಾಹಿತಿ ಹಾಗೂ ಸಿನಿಮಾ ನಿರ್ದೇಶಕರಾದ ಡಾ.ಬರಗೂರು ರಾಮಚಂದ್ರಪ್ಪ ಅವರು ಪುನೀತ್‌ ರಾಜ್‌ಕುಮಾರ್‌ ಅವರ ಮಾನವೀಯ ಕಾರ್ಯಗಳನ್ನು ಓದುಗರೊಂದಿಗೆ ಹಂಚಿಕೊಂಡಿದ್ದಾರೆ.

- Advertisement -
- Advertisement -

ಪುನೀತ್‌ ಎಂದ ಕೂಡಲೇ ನನ್ನ ಕಣ್ಣೆದುರಿಗೆ ಬರುವುದು ರಾಜ್‌ಕುಮಾರ್‌ ಅವರೇನೇ. ಪುನೀತ್‌ ಅಷ್ಟೇ ಅಲ್ಲ, ರಾಜ್‌ಕುಮಾರ್‌ ಅವರ ಮೂವರು ಮಕ್ಕಳೂ ಡಾ.ರಾಜ್‌ ಅವರ ಸಾರ್ವಜನಿಕ ನಡವಳಿಕೆಯ ಮಾದರಿಯನ್ನು ಅನುಸರಿಸಿದವರು.

ಜನಪ್ರಿಯ ಹೀರೋ ಎಂದ ಕೂಡಲೇ ಅಭಿಮಾನಿಗಳ ದೊಡ್ಡ ಬಳಗವೇ ಇರುತ್ತದೆ. ಆಗ ಒಬ್ಬ ಹೀರೋ ನಿಜವಾದ ಅರ್ಥದಲ್ಲಿ ತನ್ನ ಚಿತ್ರಗಳ ಮೂಲಕ ಯಾವ ಸಂದೇಶವನ್ನು ನೀಡುತ್ತಾನೆ ಎಂಬುದು ಮುಖ್ಯವಾಗುತ್ತದೆ. ಅಂದರೆ ಅವರು ಎಂತಹ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎಂಬ ಸಂಗತಿ.

ಪಾತ್ರದ ವಿಚಾರ ನಿರ್ದೇಶಕನದ್ದಲ್ಲವೇ ಎಂದು ಕೆಲವರು ಕೇಳಬಹುದು, ನಿಜ. ಆದರೆ ಜನಪ್ರಿಯ ನಟರಾದವರ ಕೈಯಲ್ಲೇ ಕಥಾ ವಸ್ತುವಿನ ಆಯ್ಕೆ ಇರುತ್ತದೆ. ನಾನು ಇಂತಹ ಕಥೆ ಇದ್ದರೆ ಮಾತ್ರ ನಟಿಸುತ್ತೇನೆ ಎಂದು ಹೇಳುವ ಮಟ್ಟಕ್ಕೆ ನಟ ಬೆಳೆದಿರುತ್ತಾನೆ. ಇಂತಹ ಸಂದರ್ಭದಲ್ಲಿ ತನಗೆ ಹೊಂದುವಂತಹ ಕಥೆ ಇದ್ದಾಗ ಮಾತ್ರ ನಟನೆಗೆ ಮುಂದಾಗುತ್ತಾನೆ. ಒಬ್ಬ ನಾಯಕ ಎಂತಹ ಕಥೆ ಆಯ್ಕೆ ಮಾಡಿಕೊಳ್ಳುತ್ತಾನೆ ಎಂಬುದು ಮುಖ್ಯವಾಗುತ್ತದೆ. ಈ ಅರ್ಥದಲ್ಲಿ ಪುನೀತ್‌ ರಾಜ್‌ಕುಮಾರ್‌ ಅವರು ಸದಭಿರುಚಿಯ ಕಥಾ ವಸ್ತುಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದರು.

ತಾಯಿ ಮತ್ತು ಮಗನ ಸಂಬಂಧದ ಕೌಟುಂಬಿಕ ಪಾತ್ರಗಳು ಒಂದು ಕಡೆ ಇರುತ್ತವೆ. ಇನ್ನೊಂದು ಕಡೆ ಅನಾಥ ಮಕ್ಕಳನ್ನು ಪುನರ್ವಸತಿ ಕೇಂದ್ರದಲ್ಲಿ ಇಟ್ಟಾಗ ಏನು ಸಂದೇಶ ಸಾರಬಹುದು, ಗಣಿಗಾರಿಕೆ ನಡೆಯುತ್ತಿರುವ ಸಂದರ್ಭದಲ್ಲಿ ಗಣಿಗಾರಿಕೆಯ ಅನಾಹುತಗಳೇನು?- ಈ ಥರದ ಕಥಾ ವಸ್ತುಗಳಲ್ಲೂ ಅವರು ಹೀರೋ ಆಗಿ ಅಭಿನಯಿಸಿದರು.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

ಹೀರೋಗಳ ಸಾರ್ವಜನಿಕ ನಡೆವಳಿಕೆಯೂ ಬಹಳ ಮುಖ್ಯ ಎಂದು ಭಾವಿಸಿದ್ದೇನೆ. ಆ ದೃಷ್ಟಿಯಿಂದಲೂ ನಮ್ಮ ಚಿತ್ರರಂಗದಲ್ಲಿ ಮೆಚ್ಚಲೇಬೇಕಾದ, ಗೌರವಿಸಬೇಕಾದ ವ್ಯಕ್ತಿತ್ವ ಪುನೀತ್‌ ರಾಜ್‌ಕುಮಾರ್‌. ವರನಟ ಡಾ.ರಾಜ್‌ಕುಮಾರ್‌ ಥರದ ಪ್ರಬುದ್ಧ ಕಲಾವಿದ ಮತ್ತೊಬ್ಬ ಸಿಗುವುದು ಕಷ್ಟ. ಹೀಗಾಗಿ ರಾಜ್‌ ಕುಮಾರ್ ಅವರನ್ನು ಇಡೀ ನಾಡು ಅಪಾರವಾಗಿ ಗೌರವಿಸುತ್ತದೆ. ಜೊತೆಗೆ ರಾಜ್‌ಕುಮಾರ್‌ ಅವರ ಸಾರ್ವಜನಿಕ ನಡವಳಿಕೆ ಮಾದರಿಯಾದದ್ದು. ಡಾ.ರಾಜ್‌ಕುಮಾರ್‌ ಅವರ ಸಜ್ಜನಿಕೆ, ವಿನಯ, ಅನ್ಯರ ಬಗೆಗಿನ ಗೌರವ, ಸರಳತೆ, ಅಹಂಕಾರ ಇಲ್ಲದೆ ಇರುವುದು- ಇದೆಲ್ಲವೂ ಪುನೀತ್‌ ರಾಜ್‌ಕುಮಾರ್‌ ಅವರಲ್ಲಿತ್ತು.

ಪುನೀತ್‌ ರಾಜ್‌ಕುಮಾರ್‌ ಅವರ ಸಾರ್ವಜನಿಕ ನಡವಳಿಕೆ ಇವತ್ತಿನ ಯುವಕರ ದೃಷ್ಟಿಯಿಂದ ಬಹಳ ಮುಖ್ಯವಾದದ್ದು. ಯಾಕೆಂದರೆ ಒಬ್ಬ ಹೀರೋ ಹೇಗಿರುತ್ತಾನೋ ಹಾಗೇ ತಮ್ಮ ಅಭಿಮಾನಿಗಳು ವರ್ತಿಸಲು ಶುರುಮಾಡುತ್ತಾರೆ. ಪುನೀತ್‌ ಅವರ ಸಭ್ಯತೆ ಮತ್ತು ಸಂಭಾವಿತನದ ಇಮೇಜ್‌ ಯುವಕರಿಗೆ ಮಾದರಿಯಾಗಿತ್ತು. ಈ ಗುಣಗಳು ಅವರ ಅಭಿಮಾನಿಗಳ ಮೇಲೆ ಪ್ರಭಾವ ಬೀರಿದೆ.

ರಾಜ್‌ಕುಮಾರ್‌ ಅವರ ಮಕ್ಕಳು ಎಲ್ಲಿಯೂ ಸಾರ್ವಜನಿಕ ವಿವಾದಗಳಿಗೆ ಒಳಗಾದವರಲ್ಲ. ಪುನೀತ್ ಅವರನ್ನು ಕರ್ನಾಟಕದ ಅಸಂಖ್ಯಾತ ಯುವಕರು ಇಷ್ಟಪಡುತ್ತಾರೆ. ಅವರನ್ನು ಸಾರ್ವತ್ರಿಕವಾಗಿ ಇಷ್ಟಪಡುವ ಬಹುದೊಡ್ಡ ಪಡೆಯೇ ನಾಡಿನಲ್ಲಿದೆ. ಅವರ ನಡವಳಿಕೆಯನ್ನು ಸಾಮಾಜಿಕ ಜವಾಬ್ದಾರಿಯ ನಡವಳಿಕೆ ಎನ್ನಬಹುದು.

ಸಾರ್ವಜನಿಕ ಸೇವೆಯ ಗುರುತು

ಪುನೀತ್‌ ರಾಜ್‌ಕುಮಾರ್‌ ಅವರ ಸಾರ್ವಜನಿಕ ಸೇವೆ ಅನನ್ಯವಾದದ್ದು. ಮೈಸೂರಿನಲ್ಲಿ ಪಾರ್ವತಮ್ಮ ರಾಜ್‌ಕುಮಾರ್‌ ಅವರ ನೇತೃತ್ವದಲ್ಲಿ ಶಕ್ತಿಧಾಮ ಶುರು ಮಾಡಲಾಯಿತು. ರಾಜ್‌ಕುಮಾರ್‌ ಅವರ ಬೆಂಬಲ ಶಕ್ತಿಧಾಮ ಸ್ಥಾಪನೆಗೆ ಇತ್ತು. ಬೀದಿಗೆ ಬಿದ್ದ ಹೆಣ್ಣು ಮಕ್ಕಳಿಗೆ ಆಶ್ರಯವನ್ನು ಶಕ್ತಿಧಾಮ ನೀಡುತ್ತಿದೆ. ಪುನೀತ್‌ ರಾಜ್‌ಕುಮಾರ್‌ ಹಾಡಿ ಸಂಪಾದಿಸಿದ್ದು ಇರಬಹುದು, ಕನ್ನಡದ ಕೋಟ್ಯಾಧಿಪತಿ ರಿಯಾಲಿಟಿ ಶೋ ಮೂಲಕ ಬಂದ ಸಂಭಾವನೆ ಇರಬಹುದು- ಇದರ ಬಹುಪಾಲನ್ನು ಶಕ್ತಿಧಾಮಕ್ಕೆ ನೀಡುತ್ತಾ ಬಂದಿದ್ದರು. ಅನೇಕ ಅನಾಥಾಶ್ರಮಗಳಿಗೆ ಹಣ ಕೊಡುತ್ತಿದ್ದರು.

PC: newindianexpress.com

ರಾಜ್‌ಕುಮಾರ್‌‌ ಅವರು ನೂರು ಸಿನಿಮಾಗಳನ್ನು ಪೂರೈಸಿದಾಗ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಿ.ವಿ.ಎಲ್‌.ಶಾಸ್ತ್ರಿಯವರ ಅಧ್ಯಕ್ಷತೆಯಲ್ಲಿ ಒಂದು ಶಿಕ್ಷಣ ಸಮಿತಿ ರಚಿಸುತ್ತಾರೆ. ಆನಂತರದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಸಾಕಷ್ಟು ಕೆಲಸಗಳನ್ನು ಮಾಡುತ್ತಾರೆ. ಅನಾಥಾಶ್ರಮಗಳಿಗೆ ಸಹಕಾರ ನೀಡುತ್ತಾರೆ. ರಂಗ ಮಂದಿರಗಳು ರಾಜ್ಯಾದ್ಯಾಂತ ಸ್ಥಾಪನೆಯಾಗಲು ರಸಸಂಜೆ ಕಾರ್ಯಕ್ರಮಗಳ ಮೂಲಕ ನೆರವಾಗುತ್ತಾರೆ.

ಒಮ್ಮೆ ರಾಜ್‌ಕುಮಾರ್‌ ಅವರು ನಮ್ಮ ಮನೆಗೆ ಬಂದಾಗ, “ಇಷ್ಟೆಲ್ಲ ಮಾಡುತ್ತೀರಿ, ಆದರೂ ಎಲ್ಲಿಯೂ ಪ್ರಚಾರ ತೆಗೆದುಕೊಳ್ಳುವುದಿಲ್ಲವಲ್ಲ ಸಾರ್” ಎಂದೆ. “ನಾವು ಕಲಾವಿದರು. ಬಲಗೈಲಿ ಕೊಟ್ಟಿದ್ದು, ಎಡಗೈಗೆ ಗೊತ್ತಾಗಬಾರದು. ನಾವು ಸಿನಿಮಾ ಮಾಡ್ತೀವಿ. ಇದನ್ನೆಲ್ಲ ಯಾಕೆ ಪ್ರಚಾರ ಮಾಡಬೇಕು” ಎಂದಿದ್ದರು.

ಇದನ್ನೂ ಓದಿರಿ: ಹೊಸ ಪ್ರತಿಭೆಗಳ ಮಹಾನ್‌ ಪ್ರೋತ್ಸಾಹಕ ಪುನೀತ್‌ ರಾಜ್‌ಕುಮಾರ್

ಪುನೀತ್ ಅವರಲ್ಲಿ ಒಮ್ಮೆ ಮಾತನಾಡುತ್ತಿದ್ದಾಗ ಹೇಳಿದೆ: “ನಿಮ್ಮ ತಂದೆಯವರು ಬಲಗೈಲಿ ಕೊಟ್ಟಿದ್ದು, ಎಡಗೈಗೆ ಗೊತ್ತಾಗಬಾರದು ಎಂದು ಹೇಳುತ್ತಿದ್ದರು. ಆ ಕಾಲದಲ್ಲಿ ಹೇಳಿದ್ದನ್ನೇ ನೀವು ಈಗಲೂ ಅನುಸರಿಸುತ್ತಿದ್ದೀರಿ. ಆದರೆ ಇವತ್ತಿನ ಪ್ರಪಂಚ, ಇವತ್ತಿನ ಸಮಾಜ ಬದಲಾಗಿದೆ. ನೀವು ಏನು ಮಾಡುತ್ತಿದ್ದೀರಿ ಎಂದು ಜನ ಕೇಳುತ್ತಾರೆ. ನೀವು ಮಾಡಿರುವುದನ್ನು ಹೇಳಬಹುದಲ್ಲ” ಎಂದೆ. ಆಗ ಪುನೀತ್ ಅವರು (ಐದು ವರ್ಷಗಳ ಹಿಂದೆ) ನಮ್ಮ ಮನೆಗೆ ಸಹಾಯಕರ ಮೂಲಕ ಒಂದು ಪಟ್ಟಿ ಕಳುಹಿಸಿಕೊಟ್ಟರು. ಸುಮಾರು ಐವತ್ತರಿಂದ ಅರವತ್ತು ಸರ್ಕಾರಿ ಶಾಲೆಗಳಿಗೆ ಲಕ್ಷಾಂತರ ರೂಪಾಯಿ ನೀಡಿರುವ ವಿವರಗಳನ್ನು ಆ ಪಟ್ಟಿಯಲ್ಲಿ ನೋಡಿದೆ.

ಸರ್ಕಾರಿ ಶಾಲೆಗಳಿಗೆ ಅವರು ಹಣ ನೀಡಿರುವುದು ಮುಖ್ಯ ಅನಿಸಿತು. ಕೆಲವು ಸರ್ಕಾರಿ ಶಾಲೆಗಳಿಗೆ ಕೊಠಡಿಗಳನ್ನು ಕಟ್ಟಿಸಿಕೊಟ್ಟಿದ್ದರು, ಕೆಲವು ಸರ್ಕಾರಿ ಶಾಲೆಗಳಿಗೆ ಕಂಪ್ಯೂಟರ್‌ ಕೊಟ್ಟಿದ್ದರು. ಹಣ ಸಹಾಯ ಮಾಡಿದ್ದರು. ವೃದ್ಧಾಶ್ರಮಗಳಿಗೆ, ಅನಾಥಾಶ್ರಮಗಳಿಗೆ ಹಣ ಕೊಟ್ಟಿದ್ದರು. ಹಾಗಾಗಿ ಪುನೀತ್‌ ಯುವಕರಿಗೆ ರಂಜನೆ ಮಾಡುತ್ತಿದ್ದ ನಟನಾಗಿ ಅಷ್ಟೇ ಇರಲಿಲ್ಲ. ಸಾಮಾಜಿಕ ಜವಾಬ್ದಾರಿಗಳನ್ನು ಸಿನಿಮಾಗಳ ಮೂಲಕ ತೋರಿಸಿಕೊಡುತ್ತಿದ್ದರು. ಯುವಕರು ಹಾದಿ ತಪ್ಪಬಹುದಾದ ಸಿನಿಮಾಗಳನ್ನು ಅವರು ಮಾಡಲಿಲ್ಲ.

ಜೂನಿಯರ್‌ ರಾಜ್‌ಕುಮಾರ್‌ ಎಂದೇ ಖ್ಯಾತರಾದ ಹಾವೇರಿಯ ಅಶೋಕ್‌ ಬಸ್ತಿ ಅವರು ರಾಜ್‌ಕುಮಾರ್‌ ಅವರ ಹೆಸರಲ್ಲಿ ಸಾಂಸ್ಕೃತಿಕ ಭವನ ಮಾಡಲಿದ್ದರು. ಅದೇ ಸಮಯದಲ್ಲಿ ಧಾರಾವಾಡದಲ್ಲಿ ಪುನೀತ್‌ ರಾಜ್‌ಕುಮಾರ್‌ ಅವರು ಶೂಟಿಂಗ್‌ನಲ್ಲಿ ಇದ್ದರು. ಅಶೋಕ್ ಬಸ್ತಿ ಅವರ ಸಾಂಸ್ಕೃತಿಕ ಭವನದ ಕುರಿತು ಪುನೀತ್‌ ಅವರಿಗೆ ತಿಳಿಸಿದೆ. ಸಾಂಸ್ಕೃತಿಕ ಭವನದ ಶಂಕು ಸ್ಥಾಪನೆಗೆ ಹೋಗಿಬಂದಿದ್ದರು. ಇನ್ನೊಬ್ಬರು ಜೂನಿಯರ್‌ ರಾಜ್‌ಕುಮಾರ್‌ ಕುಂಬಳಗೋಡು ಬಳಿಯ ಮುನಿಕುಮಾರ್‌. ಪುನೀತ್‌ ರಾಜ್‌ಕುಮಾರ್‌ ಅವರನ್ನು ಭೇಟಿ ಮಾಡಬೇಕು ಎಂಬ ಆಕಾಂಕ್ಷೆಯನ್ನು ತೋಡಿಕೊಂಡಿದ್ದರು. ಇದನ್ನು ತಿಳಿಸಲು ಹದಿನೈದು ದಿನಗಳ ಹಿಂದೆ ಪುನೀತ್ ಅವರಿಗೆ ಕರೆ ಮಾಡಿದ್ದೆ. “ಚೂರು ಕೆಲಸಗಳಿವೆ. ಖಂಡಿತ ಭೇಟಿ ಮಾಡೋಣ” ಎಂದಿದ್ದರು.

ಮೊದಲೆಲ್ಲ ಕರೆ ಮಾಡಿದಾಗ ‘ಸಾರ್‌’ ಎನ್ನುತ್ತಿದ್ದರು. ಇತ್ತೀಚೆಗೆ ನನ್ನನ್ನು ‘ಅಣ್ಣ’ ಎನ್ನುತ್ತಿದ್ದರು. ಮೊನ್ನೆಯೂ ‘ಆಯ್ತು ಅಣ್ಣ, ಮುನಿಕುಮಾರ್‌ ಅವರನ್ನು ಭೇಟಿಯಾಗೋಣ’ ಎಂದಿದ್ದರು. ಅಷ್ಟು ಆತ್ಮೀಯತೆ ಇತ್ತು. ಯಾವುದಾದರೂ ಆಡಿಯೋ ರಿಲೀಸ್‌ಗೆ ಕರೆದರೆ ತಕ್ಷಣ ಬಂದು ಬಿಡುತ್ತಿದ್ದರು. ಒಂದು ಸಿನಿಮಾವನ್ನು ನೀವು ನೋಡಬೇಕು ಎಂದರೆ ಬಂದು ನೋಡುತ್ತಿದ್ದರು. ಅವರ ವಿನಯವಂತಿಗೆ ಅಪಾರ.

ಅವರನ್ನು ಚಿಕ್ಕವರಿದ್ದಾಗಿನಿಂದಲೂ ನೋಡಿದ್ದೇನೆ. ಅವರ ಅಭಿನಯ, ಅವರು ನಡೆದುಕೊಳ್ಳುತ್ತಿದ್ದ ರೀತಿ… ಇಷ್ಟು ಚಿಕ್ಕ ವಯಸ್ಸಿಗೆ ಹೋಗಿದ್ದನ್ನು ಊಹಿಸಿಕೊಳ್ಳಲೂ ಆಗುತ್ತಿಲ್ಲ.

-ಡಾ.ಬರಗೂರು ರಾಮಚಂದ್ರಪ್ಪ

ನಿರೂಪಣೆ: ಯತಿರಾಜ್‌ ಬ್ಯಾಲಹಳ್ಳಿ


ಇದನ್ನೂ ಓದಿರಿ: ಕಂಠೀರವ ಸ್ಟುಡಿಯೊದಲ್ಲಿ ಪುನೀತ್‌ ರಾಜ್‌ಕುಮಾರ್‌ ಅಂತ್ಯ ಸಂಸ್ಕಾರ; ಬಿಗಿ ಬಂದೋಬಸ್ತ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....