Homeಕರ್ನಾಟಕಬಿಜೆಪಿಗೆ ಮತ್ತೊಂದು ಶಾಕ್: ಕಾಂಗ್ರೆಸ್ ಸೇರಲು ಮುಂದಾದ ಬಿಜೆಪಿ ಯುವ ಘಟಕದ ಮಾಜಿ ಅಧ್ಯಕ್ಷ ಡಾ.ಸಂದೀಪ್

ಬಿಜೆಪಿಗೆ ಮತ್ತೊಂದು ಶಾಕ್: ಕಾಂಗ್ರೆಸ್ ಸೇರಲು ಮುಂದಾದ ಬಿಜೆಪಿ ಯುವ ಘಟಕದ ಮಾಜಿ ಅಧ್ಯಕ್ಷ ಡಾ.ಸಂದೀಪ್

- Advertisement -
- Advertisement -

ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಬಿಜೆಪಿ ರಾಜ್ಯ ಯುವ ಮೋರ್ಚಾ ನಿಕಟಪೂರ್ವ ಅಧ್ಯಕ್ಷ ಡಾ.ಸಂದೀಪ್ ಕಾಂಗ್ರೆಸ್ ಸೇರ್ಪಡೆಯಾಗುವುದು ಬಹುತೇಖ ಖಚಿತವಾಗಿದೆ.

ಡಾ.ಸಂದೀಪ್ ಮತ್ತು ಕಾಂಗ್ರೆಸ್ ನಾಯಕರ ನಡುವೆ ಮಾತುಕತೆಗಳು ನಡೆದಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಏಪ್ರಿಲ್ ಮೊದಲ ವಾರದಲ್ಲೇ ಪಕ್ಷ ಸೇರ್ಪಡೆಯಾಗಲಿರುವ ಸಾಧ್ಯತೆ ಇದೆ.

ಪರಿಶಿಷ್ಟ ಜಾತಿಗೆ ಸೇರಿದ ಪ್ರಬಲ ನಾಯಕರಲ್ಲಿ ಒಬ್ಬರಾದ ಡಾ.ಸಂದೀಪ್ ಬಿಜೆಪಿಯಲ್ಲಿ ತಳಹಂತದಿಂದ ಹಿಡಿದು ಬಿಜೆಪಿ ಯುವ ಘಟಕದ ಅಧ್ಯಕ್ಷ ಸ್ಥಾನದವರೆಗೆ ಕ್ರಿಯಾಶೀಲವಾಗಿ ಪಕ್ಷದ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು.

ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸಕಲೇಶಪುರ-ಆಲೂರು ಅಥವಾ ಆನೇಕಲ್ ವಿಧಾನಸಭಾ ಕ್ಷೇತ್ರಗಳ ಪೈಕಿ ಒಂದರಲ್ಲಿ ಅವರನ್ನು ಸ್ಪರ್ಧೆಗೆ ಇಳಿಸುವುದಾಗಿ ಬಿಜೆಪಿ ಮತ್ತು ಆರೆಸ್ಸೆಸ್‌ ನಾಯಕರು ಭರವಸೆ ನೀಡಿದ್ದರಾದರೂ ಕೊನೆ ಘಳಿಗೆಯಲ್ಲಿ ಟಿಕೆಟ್ ವಂಚಿತರಾಗಿದ್ದರು.

ಈ ಕುರಿತು ನಾನು ಗೌರಿ.ಕಾಂ ಜೊತೆ ಮಾತನಾಡಿದ ಡಾ. ಸಂದೀಪ್, ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಮಾತುಕತೆ ನಡೆಯುತ್ತಿದೆ. ಪ್ರಸ್ತುತ ವಿದ್ಯಮಾನವನ್ನು ನೋಡಿದಾಗ ಬಾಬಾ ಸಾಹೇಬರ ಸಂವಿಧಾನದ ಆಶಯ, ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಮಾರಕವಾಗಿರುವ ಹಿನ್ನೆಲೆ ಬಿಜೆಪಿ ತೊರೆಯುವ ನಿರ್ಧಾರಕ್ಕೆ ಬಂದಿದ್ದೆ, ಈ ಬಾರಿ ಟಿಕೆಟ್‌ಗೆ ಆಕಾಂಕ್ಷಿಯಾಗಿಲ್ಲ, ಕಳೆದ ಬಾರಿ ಆನೇಕಲ್‌ನಿಂದ ಟಿಕೆಟ್‌ ನಿರೀಕ್ಷೆಯಲ್ಲಿದ್ದೆ, ಬಹುತೇಖ ಟಿಕೆಟ್‌ ಸಿಗುತ್ತದೆ ಎಂದುಕೊಂಡಿದ್ದೆ, ಕೊನೆಗೆ ಹಣ, ಭ್ರ‍ಷ್ಟಾಚಾರ ಇಂತವರಿಗೆ ಮಣೆ ಹಾಕಿ ಟಿಕೆಟ್‌ ನೀಡಲಾಗಿದೆ. ಬಿಜೆಪಿ ಪಕ್ಷವನ್ನು ಕಾರ್ಯಕರ್ತರ ಪಕ್ಷಕ ಎನ್ನುತ್ತಾರೆ, ಆದರೆ ಕಾರ್ಯಕರ್ತರಿಗೆ ಮನ್ನಣೆ, ಬೆಂಬಲ ನೀಡುವುದಿಲ್ಲ. ಇದು ಬೇರೆ ತರನೇ ಅಪ್ಪ-ಮಕ್ಕಳ ಪಕ್ಷವಾಗಿದೆ. ಕಳೆದ 10 ವರ್ಷಗಳಿಂದ ಬಿಜೆಪಿ-ಆರೆಸ್ಸೆಸ್‌ನಲ್ಲಿ ಸಕ್ರಿಯವಾಗದ್ದೆ, ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಪ್ರಾಥಮಿಕವಾಗಿ ಮಾತುಕತೆ ನಡೆದಿದೆ. ಕಾಂಗ್ರೆಸ್‌ ಸೇರ್ಪಡೆ ಬಹತೇಖ ಖಚಿತ ಎಂದು ಹೇಳಿದ್ದಾರೆ.

ಇದನ್ನು ಓದಿ: ಅರವಿಂದ್ ಕೇಜ್ರಿವಾಲ್ ಬಂಧನದಿಂದ ಬಿಜೆಪಿಗೆ ವಿಶ್ವಾದ್ಯಂತ ಅವಮಾನ: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...