Homeಮುಖಪುಟಯುವ ವೈದ್ಯೆ ಶಹನಾ ಆತ್ಮಹತ್ಯೆ: ತನಿಖೆಗೆ ಆದೇಶಿಸಿದ ಕೇರಳ ಸರ್ಕಾರ

ಯುವ ವೈದ್ಯೆ ಶಹನಾ ಆತ್ಮಹತ್ಯೆ: ತನಿಖೆಗೆ ಆದೇಶಿಸಿದ ಕೇರಳ ಸರ್ಕಾರ

- Advertisement -
- Advertisement -

ಕೇರಳದ ತಿರುವನಂತಪುರಂನಲ್ಲಿ 26ರ ಹರೆಯದ ವೈದ್ಯೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವುದು ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ.

ತಿರುವನಂತಪುರಂನ ಸರ್ಕಾರಿ ವೈದ್ಯಕೀಯ ಕಾಲೇಜಿನ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ ಸ್ನಾತಕೋತ್ತರ ಕೋರ್ಸ್ ವ್ಯಾಸಂಗ ಮಾಡುತ್ತಿದ್ದ ಡಾ.ಶಹಾನಾ ಸಾವಿಗೆ ಶರಣಾದ ವೈದ್ಯೆ. ಕಳೆದ ಮಂಗಳವಾರ ಬೆಳಿಗ್ಗೆ ನಗರದ ಅಪಾರ್ಟ್‌ಮೆಂಟ್‌ನಲ್ಲಿ ಶಹನಾ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆರೋಗ್ಯ ಸಚಿವೆ ವೀಣಾ ಜಾರ್ಜ್ ಈ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.

ಮದುವೆ ನಿರಾಕರಿಸಿದ್ದಕ್ಕೆ ಆತ್ಮಹತ್ಯೆ?

ವರದಿಗಳ ಪ್ರಕಾರ ಮೃತ ಡಾ. ಶಹನಾ ಮತ್ತು ವೈದ್ಯ ಡಾ. ಇ.ಎ ರುವೈಸ್ ಪರಸ್ಪರ ಪ್ರೀತಿಸುತ್ತಿದ್ದರು. ಶಹನಾಳನ್ನು ಮದುವೆಯಾಗುವುದಾಗಿ ರುವೈಸ್‌ ಮಾತು ಕೊಟ್ಟಿದ್ದರು. ಆದರೆ, ಇತ್ತೀಚೆಗೆ ವರದಕ್ಷಿಣೆಯ ಕಾರಣ ನೀಡಿ ಮದುವೆಯಾಗಲು ನಿರಾಕರಿಸಿದ್ದಾರೆ. ಇದರಿಂದ ನೊಂದ ಶಹನಾ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹಣ, ಒಡವೆ, ಕಾರಿಗೆ ಬೇಡಿಕೆ ಇಟ್ಟಿದ್ದ ರುವೈಸ್

ಶಹನಾರನ್ನು ರುವೈಸ್ ಮದುವೆಯಾಗಬೇಕಾದರೆ ವರದಕ್ಷಿಣೆಯಾಗಿ 150 ಗ್ರಾಂ. ಚಿನ್ನಾಭರಣ, 15 ಎಕರೆ ಜಮೀನು ಮತ್ತು ಬಿಎಂಡಬ್ಲ್ಯು ಕಾರು ಕೊಡಬೇಕೆಂದು ರುವೈಸ್‌ ಕುಟುಂಬಸ್ಥರು ಬೇಡಿಕೆ ಇಟ್ಟಿದ್ದರು ಎಂದು ಶಹಾನಾ ಕುಟುಂಬ ಆರೋಪಿಸಿದೆ.

ರುವೈಸ್ ಕುಟುಂಬಸ್ಥರು ಕೇಳಿದಷ್ಟು ವರದಕ್ಷಿಣೆ ಕೊಡಲು ಸಾಧ್ಯವಿಲ್ಲ ಎಂದು ಶಹಾನಾ ಕುಟುಂಬ ಹೇಳಿದ್ದಕ್ಕೆ ಮದುವೆ ರದ್ದಾಗಿತ್ತು. ಇದರಿಂದ ಮನನೊಂದು ಶಹನಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಲಯಾಳಂ ಸುದ್ದಿ ವಾಹಿನಿ ಮಾತೃಭೂಮಿ ವರದಿ ಮಾಡಿದೆ.

ಶಹನಾ ಅವರ ಅಪಾರ್ಟ್‌ಮೆಂಟ್‌ನಲ್ಲಿ ಸಿಕ್ಕ ಸೂಸೈಡ್ ನೋಟ್‌ನಲ್ಲಿ “ಎಲ್ಲರಿಗೆ ಹಣ ಮಾತ್ರ ಬೇಕು” ಎಂದು ಬರೆಯಲಾಗಿದೆ ಎಂದು ತಿಳಿದು ಬಂದಿದೆ.

ಘಟನೆ ಸಂಬಂಧ ಆತ್ಮಹತ್ಯೆಗೆ ಪ್ರಚೋದನೆ ಹಾಗೂ ವರದಕ್ಷಿಣೆ ತಡೆ ಕಾಯ್ದೆಯಡಿ ಪೊಲೀಸರು ಶಹನಾರ ಪ್ರಿಯಕರ ಡಾ. ರುವೈಸ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಆತನನ್ನು ಬಂಧಿಸಿದ್ದಾರೆ. ಶಹನಾ ಸಂಬಂಧಿಕರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.

ವರದಕ್ಷಿಣೆ ಬೇಡಿಕೆಯ ಆರೋಪದ ಕುರಿತು ವರದಿ ಸಲ್ಲಿಸುವಂತೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಹೇಳಿದ್ದಾರೆ.

ರಾಜ್ಯ ಅಲ್ಪಸಂಖ್ಯಾತ ಆಯೋಗವೂ ಈ ಬಗ್ಗೆ ಪರಿಶೀಲನೆ ನಡೆಸುತ್ತಿದೆ. ಡಿ.14ರಂದು ಆಯೋಗದ ಮುಂದೆ ಹಾಜರಾಗಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ, ನಗರ ಪೊಲೀಸ್ ಆಯುಕ್ತ ಹಾಗೂ ವೈದ್ಯಕೀಯ ಶಿಕ್ಷಣ ನಿರ್ದೇಶಕರಿಗೆ ಸಮಿತಿ ಅಧ್ಯಕ್ಷ ಎ.ಎ.ರಶೀದ್ ಸೂಚಿಸಿದ್ದಾರೆ.

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪಿ.ಸತಿದೇವಿ ಅವರು ಶಹಾನಾ ಮನೆಗೆ ಭೇಟಿ ನೀಡಿ ಕುಟುಂಬದವರನ್ನು ಭೇಟಿ ಮಾಡಿದ್ದಾರೆ. ವರದಕ್ಷಿಣೆ ಬೇಡಿಕೆಯಿಂದ ಉಂಟಾಗಿರುವ ಮಾನಸಿಕ ಸಂಕಟ ಯುವ ವೈದ್ಯೆಯನ್ನು ಆತ್ಮಹತ್ಯೆಗೆ ದೂಡಿರುವುದು ನಿಜವಾದರೆ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕು ಎಂದು ಸತಿದೇವಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿತ ಸಾವು: ಮೊದಲ ಸ್ಥಾನದಲ್ಲಿರುವ ಯುಪಿ

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...