Homeಕರ್ನಾಟಕಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ಡಾ. ಶ್ರೀಧರ್; ಯಶಸ್ವಿನಿ ಟ್ರಸ್ಟ್‌ನಿಂದ ಹೆಸರು ಕೈಬಿಟ್ಟ ಸರ್ಕಾರ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ಡಾ. ಶ್ರೀಧರ್; ಯಶಸ್ವಿನಿ ಟ್ರಸ್ಟ್‌ನಿಂದ ಹೆಸರು ಕೈಬಿಟ್ಟ ಸರ್ಕಾರ

- Advertisement -
- Advertisement -

ರಾಷ್ಟ್ರೀಯ ಸ್ವಯುಂ ಸೇವಕ ಸಂಘದ (ಆರ್‌ಎಸ್‌ಎಸ್‌) ಪಥಸಂಚಲನದಲ್ಲಿ ಗಣವಸ್ತ್ರ ಧರಿಸಿ ಭಾಗಿಯಾಗಿದ್ದ ತಿಪಟೂರಿನ ವೈದ್ಯ ಶ್ರೀಧರ್ ಹೆಸರನ್ನು ಸರ್ಕಾರದ ‘ಯಶಸ್ವಿನಿ ಟ್ರಸ್ಟ್‌’ನಿಂದ ತೆಗೆದುಹಾಕಲಾಗಿದೆ. ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ವೈದ್ಯರಿಗೆ ಟ್ರಸ್ಟಿಯಾಗಿ ನೇಮಿಸಲಾಗಿತ್ತು; ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.

ಇದು ಕಾಂಗ್ರೆಸ್‌ ಪಕ್ಷವು ಹೊಂದಿರುವ ಕೋಮುವಾದಿ ವಿರೋಧಿ ಮತ್ತು ಸಾಮರಸ್ಯ ನೀತಿಗೆ ವಿರುದ್ಧವಾಗಿದೆ. ತಕ್ಷಣವೇ ಡಾ. ಶ್ರೀಧರ್ ಅವರನ್ನು ಟ್ರಸ್ಟಿಯಾಗಿ ನೇಮಿಸಿ ಹೊರಡಿಸಿರುವ ಸುತ್ತೋಲೆಯನ್ನು ಹಿಂಪಡೆಯಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸಿ.ಬಿ ಶಶಿಧರ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಒತ್ತಾಯಿಸಿದ್ದರು.

ತೀವ್ರ ವಿರೋಧಗಳ ಬೆನ್ನಲ್ಲೇ ಯಶಸ್ವಿನಿ ಟ್ರಸ್ಟ್‌ನ ಟ್ರಸ್ಟಿ ಸ್ಥಾನದಿಂದ ವೈದ್ಯ ಶ್ರೀಧರ್ ಹೆಸರನ್ನು ಕೈಬಿಡಲಾಗಿದೆ. ಈ ಸಂಬಂಧ ಸರ್ಕಾರ ಆದೇಶವನ್ನು ಹೊರಡಿಸಿದ್ದು, “ಆಡಳಿತಾತ್ಮಕ ದೃಷ್ಟಿಯಿಂದ ಈ ಹಿಂದಿನ ಆದೇಶವನ್ನು ಮಾರ್ಪಡಿಸಿ, ಡಾ. ಶೀಧರ್ ಅವರ ಹೆಸರನ್ನು ಕೈಬಿಡಲಾಗಿದೆ” ಎಂದು ತಿಳಿಸಿದೆ.

ಈ ಹಿಂದಿನ ಆದೇಶ ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಶಶಿಧರ್, “ಅಕ್ಟೋಬರ್ 12ರಂದು ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ಆಯೋಜಿಸಿತ್ತು. ಆ ಕಾರ್ಯಕ್ರಮದಲ್ಲಿ ಕುಮಾರ್ ಆಸ್ಪತ್ರೆಯ ಡಾ. ಶ್ರೀಧರ್ ಅವರು ಗಣವೇಶ ಧರಿಸಿ ಭಾಗಿಯಾಗಿದ್ದರು. ಮಾತ್ರವಲ್ಲದೆ, ಆ್ಯಂಬುಲೆನ್ಸ್‌ಅನ್ನೂ ಕೊಂಡೊಯ್ದಿದ್ದರು. ಅವರನ್ನು ಸರ್ಕಾರದ ‘ಯಶಸ್ವಿನಿ ಟ್ರಸ್ಟ್‌’ಗೆ ಟ್ರಸ್ಟಿಯಾಗಿ ನೇಮಿಸುವಂತೆ ಕಾಂಗ್ರೆಸ್‌ ಶಾಸಕ ಪಡಕ್ಷರಿ ಅವರು ಶಿಫಾರಸು ಮಾಡಿದ್ದರು. ಅವರ ಶಿಫಾರಸಿನಂತೆ ಸರ್ಕಾರವು ಡಾ. ಶ್ರೀಧರ್ ಅವರನ್ನು ಟ್ರಸ್ಟಿಯಾಗಿ ನೇಮಿಸಿದೆ. ಇದು, ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಕಳವಳ ಹುಟ್ಟುಹಾಕಿದೆ” ಎಂದು ತಿಳಿಸಿದ್ದರು.

“ಕೋಮುವಾದಿ ಸಂಘ ಪರಿವಾರದ (ಆರ್ ಎಸ್ ಎಸ್) ವಿರುದ್ಧ ಕಾಂಗ್ರೆಸ್ ನಾಯಕತ್ವ ರಾಜ್ಯ ಮತ್ತು ದೇಶವ್ಯಾಪಿ ಸಮರ ಸಾರಿರುವ ಸಂದರ್ಭದಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿಯವರು ಪಕ್ಷದ ಸಿದ್ಧಾಂತಗಳಿಗೆ ವ್ಯತಿರಿಕ್ತ ಎನ್ನಿಸುವ ನಡೆಗಳನ್ನು ಅನುಸರಿಸುತ್ತಿರುವುದು ಆಘಾತಕಾರಿ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದರು.

“ಇತ್ತೀಚೆಗೆ (ಅಕ್ಟೋಬರ್ 12 ರಂದು) ತಿಪಟೂರು ಪಟ್ಟಣದಲ್ಲಿ ಆರ್ ಎಸ್ ಎಸ್ ಗಣವೇಶಧಾರಿಯಾಗಿ ಪಥಸಂಚಲನದ ಮುಂಚೂಣಿಯಲ್ಲಿ ಭಾಗವಹಿಸಿದ ಡಾ. ಶ್ರೀಧರ್ ಅವರಿಗೆ ರಾಜ್ಯ ಸರ್ಕಾರದ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯ ಯಶಸ್ವಿ ಅನುಷ್ಟಾನಕ್ಕಾಗಿ ರೂಪಿಸಿದ ಸಹಕಾರ ಇಲಾಖೆಯ ಯಶಸ್ವಿನಿ‌ ಟ್ರಸ್ಟ್ ನ ಟ್ರಸ್ಟಿಯಾಗಿ ನೇಮಕ ಮಾಡಿದ್ದು, ಅವರ ಹೆಸರು ಶಿಫಾರಸ್ಸು ಮಾಡಿದ ಶಾಸಕ ಷಡಕ್ಷರಿ ಅವರ ಕ್ರಮದಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ತೀವ್ರ ಮುಜುಗರ ಉಂಟಾಗಿದೆ” ಎಂದು ಅವರು ಹೇಳಿದ್ದರು.

“ಸ್ವತಃ ಮುಖ್ಯಮಂತ್ರಿಗಳಾದ ತಾವು ಪ್ರಧಾನ ಪೋಷಕರಾಗಿರುವ ಈ ಟ್ರಸ್ಟ್ ಗೆ ಸಂಘ ಪರಿವಾರದ ಕಟ್ಟಾ ಕಾರ್ಯಕರ್ತ ಡಾ ಶ್ರೀಧರ್ ಅವರನ್ನು ಟ್ರಸ್ಟಿಯಾಗಿಸಿ ಹೊರಡಿಸಿದ ಇತ್ತೀಚಿನ ಸುತ್ತೋಲೆಯನ್ನು ಮುಖ್ಯಮಂತ್ರಿಗಳಾದ ತಾವು ಹಾಗೂ ಕೆಪಿಸಿಸಿ ಅಧ್ಯಕ್ಷ ಹಾಗು ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಅವರು ಗಮನಿಸಿಲ್ಲವೇ ಎನ್ನುವುದು ತಿಪಟೂರು ಮತ್ತು ತುಮಕೂರು ಜಿಲ್ಲೆಯ ನಿಷ್ಠಾವಂತ ಕಾಂಗ್ರೆಸ್ ಧುರೀಣರಲ್ಲಿ ಹಾಗೂ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿದೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

“ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ಮುತುವರ್ಜಿ ವಹಿಸಿ ಸಂಘ ಪರಿವಾರಕ್ಕೆ ಸೇರಿದ ತಿಪಟೂರಿನ ಕುಮಾರ್ ಆಸ್ಪತ್ರೆಯ ಡಾ. ಶ್ರೀಧರ್ ಹೆಸರನ್ನು ಯಶಸ್ವಿನಿ ಟ್ರಸ್ಟ್ ಗೆ ಶಿಫಾರಸ್ಸು ಮಾಡಿದ್ದು ಈಗ ಗುಟ್ಟಾಗಿ ಉಳಿದಿಲ್ಲ. ಕೋಮುವಾದಿಗಳ ಪರ ಎನ್ನಿಸುವ ಶಾಸಕರ ಇಂಥ ಧೋರಣೆಯನ್ನು ಸಹಿಸಲು ಅಸಾಧ್ಯ ಎಂದು ಕಾಂಗ್ರೆಸ್ ಕಾರ್ಯಕರ್ತರು ನನ್ನ ಬಳಿ ದೂರಿ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿಯೂ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷದ ಕೋಮುವಾದ ವಿರೋಧಿ ನಿಲುವಿಗೆ, ಸಾಮರಸ್ಯ ನೀತಿಗೆ ಮತ್ತು ಘನತೆಗೆ ಚ್ಯುತಿ ಬಂದಂತಾಗಿದೆ. ತಿಪಟೂರು ತಾಲ್ಲೂಕಿನ ಹಾಗೂ ತುಮಕೂರು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರ ಇಂಥ ಆಕ್ರೋಶ ಮತ್ತು ಅಸಮಾಧಾನಗಳನ್ನು ಕೆಪಿಸಿಸಿಯ ಒಬ್ಬ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದ ಹೈಕಮಾಂಡ್ ಗಮನಕ್ಕೆ ತರುವುದು ನನ್ನ ನೈತಿಕ ಹೊಣೆಗಾರಿಕೆ ಎಂದು ಭಾವಿಸಿದ್ದೇನೆ” ಎಂದು ಅವರು ಹೇಳಿದ್ದಾರೆ.

“ಕೂಡಲೇ ಈ ಸುತ್ತೋಲೆ ವಾಪಸ್ ಪಡೆದು ಕ್ಷೇತ್ರದ ಕಾರ್ಯಕರ್ತರನ್ನು ತೀವ್ರ ಮುಜುಗರದಿಂದ ಪಾರು ಮಾಡುವಂತೆ ತಮ್ಮಲ್ಲಿ ಕಳಕಳಿಯ ಮನವಿ ಮಾಡುತ್ತಿದ್ದೇನೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ಕಲ್ಲಡ್ಕ ಪ್ರಭಾಕರ್ ಭಟ್ ಕೆಣಕಿ ಉಳಿದ ಸರ್ಕಾರವಿಲ್ಲ, ಕರಾವಳಿ ಕಿಡಿಯಾದೀತು”: ಪ್ರಚೋದನಕಾರಿ ಪೋಸ್ಟ್ ವಿರುದ್ಧ ಕ್ರಮಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...