Homeಕರ್ನಾಟಕಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ಡಾ. ಶ್ರೀಧರ್; ಯಶಸ್ವಿನಿ ಟ್ರಸ್ಟ್‌ನಿಂದ ಹೆಸರು ಕೈಬಿಟ್ಟ ಸರ್ಕಾರ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ಡಾ. ಶ್ರೀಧರ್; ಯಶಸ್ವಿನಿ ಟ್ರಸ್ಟ್‌ನಿಂದ ಹೆಸರು ಕೈಬಿಟ್ಟ ಸರ್ಕಾರ

- Advertisement -
- Advertisement -

ರಾಷ್ಟ್ರೀಯ ಸ್ವಯುಂ ಸೇವಕ ಸಂಘದ (ಆರ್‌ಎಸ್‌ಎಸ್‌) ಪಥಸಂಚಲನದಲ್ಲಿ ಗಣವಸ್ತ್ರ ಧರಿಸಿ ಭಾಗಿಯಾಗಿದ್ದ ತಿಪಟೂರಿನ ವೈದ್ಯ ಶ್ರೀಧರ್ ಹೆಸರನ್ನು ಸರ್ಕಾರದ ‘ಯಶಸ್ವಿನಿ ಟ್ರಸ್ಟ್‌’ನಿಂದ ತೆಗೆದುಹಾಕಲಾಗಿದೆ. ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ವೈದ್ಯರಿಗೆ ಟ್ರಸ್ಟಿಯಾಗಿ ನೇಮಿಸಲಾಗಿತ್ತು; ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.

ಇದು ಕಾಂಗ್ರೆಸ್‌ ಪಕ್ಷವು ಹೊಂದಿರುವ ಕೋಮುವಾದಿ ವಿರೋಧಿ ಮತ್ತು ಸಾಮರಸ್ಯ ನೀತಿಗೆ ವಿರುದ್ಧವಾಗಿದೆ. ತಕ್ಷಣವೇ ಡಾ. ಶ್ರೀಧರ್ ಅವರನ್ನು ಟ್ರಸ್ಟಿಯಾಗಿ ನೇಮಿಸಿ ಹೊರಡಿಸಿರುವ ಸುತ್ತೋಲೆಯನ್ನು ಹಿಂಪಡೆಯಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸಿ.ಬಿ ಶಶಿಧರ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಒತ್ತಾಯಿಸಿದ್ದರು.

ತೀವ್ರ ವಿರೋಧಗಳ ಬೆನ್ನಲ್ಲೇ ಯಶಸ್ವಿನಿ ಟ್ರಸ್ಟ್‌ನ ಟ್ರಸ್ಟಿ ಸ್ಥಾನದಿಂದ ವೈದ್ಯ ಶ್ರೀಧರ್ ಹೆಸರನ್ನು ಕೈಬಿಡಲಾಗಿದೆ. ಈ ಸಂಬಂಧ ಸರ್ಕಾರ ಆದೇಶವನ್ನು ಹೊರಡಿಸಿದ್ದು, “ಆಡಳಿತಾತ್ಮಕ ದೃಷ್ಟಿಯಿಂದ ಈ ಹಿಂದಿನ ಆದೇಶವನ್ನು ಮಾರ್ಪಡಿಸಿ, ಡಾ. ಶೀಧರ್ ಅವರ ಹೆಸರನ್ನು ಕೈಬಿಡಲಾಗಿದೆ” ಎಂದು ತಿಳಿಸಿದೆ.

ಈ ಹಿಂದಿನ ಆದೇಶ ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಶಶಿಧರ್, “ಅಕ್ಟೋಬರ್ 12ರಂದು ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ಆಯೋಜಿಸಿತ್ತು. ಆ ಕಾರ್ಯಕ್ರಮದಲ್ಲಿ ಕುಮಾರ್ ಆಸ್ಪತ್ರೆಯ ಡಾ. ಶ್ರೀಧರ್ ಅವರು ಗಣವೇಶ ಧರಿಸಿ ಭಾಗಿಯಾಗಿದ್ದರು. ಮಾತ್ರವಲ್ಲದೆ, ಆ್ಯಂಬುಲೆನ್ಸ್‌ಅನ್ನೂ ಕೊಂಡೊಯ್ದಿದ್ದರು. ಅವರನ್ನು ಸರ್ಕಾರದ ‘ಯಶಸ್ವಿನಿ ಟ್ರಸ್ಟ್‌’ಗೆ ಟ್ರಸ್ಟಿಯಾಗಿ ನೇಮಿಸುವಂತೆ ಕಾಂಗ್ರೆಸ್‌ ಶಾಸಕ ಪಡಕ್ಷರಿ ಅವರು ಶಿಫಾರಸು ಮಾಡಿದ್ದರು. ಅವರ ಶಿಫಾರಸಿನಂತೆ ಸರ್ಕಾರವು ಡಾ. ಶ್ರೀಧರ್ ಅವರನ್ನು ಟ್ರಸ್ಟಿಯಾಗಿ ನೇಮಿಸಿದೆ. ಇದು, ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಕಳವಳ ಹುಟ್ಟುಹಾಕಿದೆ” ಎಂದು ತಿಳಿಸಿದ್ದರು.

“ಕೋಮುವಾದಿ ಸಂಘ ಪರಿವಾರದ (ಆರ್ ಎಸ್ ಎಸ್) ವಿರುದ್ಧ ಕಾಂಗ್ರೆಸ್ ನಾಯಕತ್ವ ರಾಜ್ಯ ಮತ್ತು ದೇಶವ್ಯಾಪಿ ಸಮರ ಸಾರಿರುವ ಸಂದರ್ಭದಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿಯವರು ಪಕ್ಷದ ಸಿದ್ಧಾಂತಗಳಿಗೆ ವ್ಯತಿರಿಕ್ತ ಎನ್ನಿಸುವ ನಡೆಗಳನ್ನು ಅನುಸರಿಸುತ್ತಿರುವುದು ಆಘಾತಕಾರಿ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದರು.

“ಇತ್ತೀಚೆಗೆ (ಅಕ್ಟೋಬರ್ 12 ರಂದು) ತಿಪಟೂರು ಪಟ್ಟಣದಲ್ಲಿ ಆರ್ ಎಸ್ ಎಸ್ ಗಣವೇಶಧಾರಿಯಾಗಿ ಪಥಸಂಚಲನದ ಮುಂಚೂಣಿಯಲ್ಲಿ ಭಾಗವಹಿಸಿದ ಡಾ. ಶ್ರೀಧರ್ ಅವರಿಗೆ ರಾಜ್ಯ ಸರ್ಕಾರದ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯ ಯಶಸ್ವಿ ಅನುಷ್ಟಾನಕ್ಕಾಗಿ ರೂಪಿಸಿದ ಸಹಕಾರ ಇಲಾಖೆಯ ಯಶಸ್ವಿನಿ‌ ಟ್ರಸ್ಟ್ ನ ಟ್ರಸ್ಟಿಯಾಗಿ ನೇಮಕ ಮಾಡಿದ್ದು, ಅವರ ಹೆಸರು ಶಿಫಾರಸ್ಸು ಮಾಡಿದ ಶಾಸಕ ಷಡಕ್ಷರಿ ಅವರ ಕ್ರಮದಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ತೀವ್ರ ಮುಜುಗರ ಉಂಟಾಗಿದೆ” ಎಂದು ಅವರು ಹೇಳಿದ್ದರು.

“ಸ್ವತಃ ಮುಖ್ಯಮಂತ್ರಿಗಳಾದ ತಾವು ಪ್ರಧಾನ ಪೋಷಕರಾಗಿರುವ ಈ ಟ್ರಸ್ಟ್ ಗೆ ಸಂಘ ಪರಿವಾರದ ಕಟ್ಟಾ ಕಾರ್ಯಕರ್ತ ಡಾ ಶ್ರೀಧರ್ ಅವರನ್ನು ಟ್ರಸ್ಟಿಯಾಗಿಸಿ ಹೊರಡಿಸಿದ ಇತ್ತೀಚಿನ ಸುತ್ತೋಲೆಯನ್ನು ಮುಖ್ಯಮಂತ್ರಿಗಳಾದ ತಾವು ಹಾಗೂ ಕೆಪಿಸಿಸಿ ಅಧ್ಯಕ್ಷ ಹಾಗು ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಅವರು ಗಮನಿಸಿಲ್ಲವೇ ಎನ್ನುವುದು ತಿಪಟೂರು ಮತ್ತು ತುಮಕೂರು ಜಿಲ್ಲೆಯ ನಿಷ್ಠಾವಂತ ಕಾಂಗ್ರೆಸ್ ಧುರೀಣರಲ್ಲಿ ಹಾಗೂ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿದೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

“ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ಮುತುವರ್ಜಿ ವಹಿಸಿ ಸಂಘ ಪರಿವಾರಕ್ಕೆ ಸೇರಿದ ತಿಪಟೂರಿನ ಕುಮಾರ್ ಆಸ್ಪತ್ರೆಯ ಡಾ. ಶ್ರೀಧರ್ ಹೆಸರನ್ನು ಯಶಸ್ವಿನಿ ಟ್ರಸ್ಟ್ ಗೆ ಶಿಫಾರಸ್ಸು ಮಾಡಿದ್ದು ಈಗ ಗುಟ್ಟಾಗಿ ಉಳಿದಿಲ್ಲ. ಕೋಮುವಾದಿಗಳ ಪರ ಎನ್ನಿಸುವ ಶಾಸಕರ ಇಂಥ ಧೋರಣೆಯನ್ನು ಸಹಿಸಲು ಅಸಾಧ್ಯ ಎಂದು ಕಾಂಗ್ರೆಸ್ ಕಾರ್ಯಕರ್ತರು ನನ್ನ ಬಳಿ ದೂರಿ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿಯೂ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷದ ಕೋಮುವಾದ ವಿರೋಧಿ ನಿಲುವಿಗೆ, ಸಾಮರಸ್ಯ ನೀತಿಗೆ ಮತ್ತು ಘನತೆಗೆ ಚ್ಯುತಿ ಬಂದಂತಾಗಿದೆ. ತಿಪಟೂರು ತಾಲ್ಲೂಕಿನ ಹಾಗೂ ತುಮಕೂರು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರ ಇಂಥ ಆಕ್ರೋಶ ಮತ್ತು ಅಸಮಾಧಾನಗಳನ್ನು ಕೆಪಿಸಿಸಿಯ ಒಬ್ಬ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದ ಹೈಕಮಾಂಡ್ ಗಮನಕ್ಕೆ ತರುವುದು ನನ್ನ ನೈತಿಕ ಹೊಣೆಗಾರಿಕೆ ಎಂದು ಭಾವಿಸಿದ್ದೇನೆ” ಎಂದು ಅವರು ಹೇಳಿದ್ದಾರೆ.

“ಕೂಡಲೇ ಈ ಸುತ್ತೋಲೆ ವಾಪಸ್ ಪಡೆದು ಕ್ಷೇತ್ರದ ಕಾರ್ಯಕರ್ತರನ್ನು ತೀವ್ರ ಮುಜುಗರದಿಂದ ಪಾರು ಮಾಡುವಂತೆ ತಮ್ಮಲ್ಲಿ ಕಳಕಳಿಯ ಮನವಿ ಮಾಡುತ್ತಿದ್ದೇನೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ಕಲ್ಲಡ್ಕ ಪ್ರಭಾಕರ್ ಭಟ್ ಕೆಣಕಿ ಉಳಿದ ಸರ್ಕಾರವಿಲ್ಲ, ಕರಾವಳಿ ಕಿಡಿಯಾದೀತು”: ಪ್ರಚೋದನಕಾರಿ ಪೋಸ್ಟ್ ವಿರುದ್ಧ ಕ್ರಮಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...