Homeಮುಖಪುಟಭಾರತೀಯ ವಾಯುಸೇನೆಯ ಮೊದಲ ಮಹಿಳಾ ಅಧಿಕಾರಿ ಡಾ.ವಿಜಯಲಕ್ಷ್ಮಿ ರಮಣನ್ ನಿಧನ!

ಭಾರತೀಯ ವಾಯುಸೇನೆಯ ಮೊದಲ ಮಹಿಳಾ ಅಧಿಕಾರಿ ಡಾ.ವಿಜಯಲಕ್ಷ್ಮಿ ರಮಣನ್ ನಿಧನ!

ವಿಜಯಲಕ್ಷ್ಮಿ ರಮಣನ್ ಅವರಿಗೆ ಆಗಸ್ಟ್ 1972 ರಲ್ಲಿ ವಿಂಗ್ ಕಮಾಂಡರ್ ಹುದ್ದೆಗೆ ಬಡ್ತಿ ನೀಡಲಾಯಿತು. ಇದಾದ 5 ವರ್ಷಗಳ ನಂತರ ವಿಶಿಷ್ಟ್‌ ಸೇವಾ ಪದಕ ನೀಡಿ ಗೌರವಿಸಲಾಯಿತು.

- Advertisement -
- Advertisement -

ನಿವೃತ್ತ ವಿಂಗ್ ಕಮಾಂಡರ್ ಡಾ. ವಿಜಯಲಕ್ಷ್ಮಿ ರಮಣನ್, ಭಾರತೀಯ ವಾಯುಸೇನೆಯ ಮೊದಲ ಮಹಿಳಾ ಅಧಿಕಾರಿ ತಮ್ಮ 96 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ವಿಶೀಷ್ಠ ಸೇವಾ ಪದಕ (ವಿಎಸ್ಎಂ) ಪಡೆದ ವಿಜಯಲಕ್ಷ್ಮಿ ರಮಣನ್, ವೃದ್ಧಾಪ್ಯ ಸಹಜ ಕಾಯಿಲೆಗಳಿಂದಾಗಿ ತಮ್ಮ ಮಗಳ ಮನೆಯಲ್ಲಿ ನಿಧನರಾದರು ಎಂದು ಅವರ ಅಳಿಯ ಎಸ್.ಎಲ್.ವಿ ನಾರಾಯಣ್ ಹೇಳಿದರು.

ಫೆಬ್ರವರಿ 1924 ರಲ್ಲಿ ಜನಿಸಿದ ಅವರು, ಎಂಬಿಬಿಎಸ್ ಮಾಡಿದ ನಂತರ ಆಗಸ್ಟ್ 22, 1955 ರಂದು ಆರ್ಮಿ ಮೆಡಿಕಲ್ ಕಾರ್ಪ್ಸ್‌ನಲ್ಲಿ ನಿಯೋಜಿಸಲ್ಪಟ್ಟರು. ಇದರ ಜೊತೆಗೆ ವಿವಿಧ ವಾಯುಪಡೆಯ ಆಸ್ಪತ್ರೆಗಳಲ್ಲಿ ಸ್ತ್ರೀರೋಗತಜ್ಞರಾಗಿ ಸೇವೆ ಸಲ್ಲಿಸಿದ್ದು, ಯುದ್ಧಗಳ ಸಮಯದಲ್ಲಿ ಗಾಯಗೊಂಡ ಸೈನಿಕರಿಗೂ ಚಿಕಿತ್ಸೆ ನೀಡುತ್ತಾ ಆಡಳಿತಾತ್ಮಕ ಕರ್ತವ್ಯಗಳನ್ನೂ ನಿರ್ವಹಿಸಿದ್ದರು.

ಇದನ್ನೂ ಓದಿ: ಬಳಸಿದ ಮಾಸ್ಕ್‌ & ಪಿಪಿಇ ಕಿಟ್ ವಿವೇವಾರಿಗೆ ಮಾರ್ಗಸೂಚಿ ಹೊರಡಿಸುವಂತೆ ರಾಜ್ಯಕ್ಕೆ ಹೈಕೋರ್ಟ್ ಸೂಚನೆ

ಇವರಿಗೆ ಆಗಸ್ಟ್ 1972 ರಲ್ಲಿ ವಿಂಗ್ ಕಮಾಂಡರ್ ಹುದ್ದೆಗೆ ಬಡ್ತಿ ನೀಡಲಾಯಿತು. ಇದಾದ 5 ವರ್ಷಗಳ ನಂತರ ವಿಶಿಷ್ಟ್ ಸೇವಾ ಪದಕ ನೀಡಿ ಗೌರವಿಸಲಾಯಿತು. ನಂತರ ಫೆಬ್ರವರಿ, 1979 ರಲ್ಲಿ ನಿವೃತ್ತರಾಗಿದ್ದರು.

ಇವರ ಪತಿ ದಿವಂಗತ ಕೆ ವಿ ರಮಣನ್ ಕೂಡ ಭಾರತೀಯ ವಾಯುಪಡೆಯ ಅಧಿಕಾರಿಯಾಗಿದ್ದರು.

ಇವರಿಗೆ ಮಗಳು ಮತ್ತು ಮಗ ಇದ್ದಾರೆ. ವಿಜಯಲಕ್ಷ್ಮಿ ರಮಣನ್ ಕರ್ನಾಟಕ ಸಂಗೀತದಲ್ಲಿ ತರಬೇತಿ ಪಡೆದಿದ್ದು, ಚಿಕ್ಕ ವಯಸ್ಸಿನಲ್ಲಿಯೇ ಆಲ್ ಇಂಡಿಯಾ ರೇಡಿಯೊದಲ್ಲಿ ಕಲಾವಿದರಾಗಿದ್ದರು.


ಇದನ್ನೂ ಓದಿ: ಚಿಲಿ: ಭುಗಿಲೆದ್ದ ಪ್ರತಿಭಟನೆ; ಪೊಲೀಸ್ ಪ್ರಧಾನ ಕಚೇರಿ ಸೇರಿದಂತೆ 2 ಚರ್ಚುಗಳಿಗೆ ಬೆಂಕಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...