Homeಮುಖಪುಟಕರಡು ಮಾರ್ಗಸೂಚಿಗೆ ಭಾರೀ ವಿರೋಧ: ಮೀಸಲಾತಿ ರದ್ದುಪಡಿಸಲ್ಲ ಎಂದ ಯುಜಿಸಿ ಅಧ್ಯಕ್ಷ

ಕರಡು ಮಾರ್ಗಸೂಚಿಗೆ ಭಾರೀ ವಿರೋಧ: ಮೀಸಲಾತಿ ರದ್ದುಪಡಿಸಲ್ಲ ಎಂದ ಯುಜಿಸಿ ಅಧ್ಯಕ್ಷ

- Advertisement -
- Advertisement -

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಮೀಸಲಿಟ್ಟ ಹುದ್ದೆಗಳಿಗೆ ಸಾಕಷ್ಟು ಅಭ್ಯರ್ಥಿಗಳು ದೊರಕದಿದ್ದರೆ, ಅಂತಹ ಹುದ್ದೆಗಳನ್ನು ‘ಮೀಸಲು ರಹಿತ’ ಎಂದು ಘೋಷಿಸಬಹುದು ಎಂಬ ಪ್ರಸ್ತಾವನೆಯ ಕರಡು ಮಾರ್ಗಸೂಚಿಯನ್ನು ವಿಶ್ವವಿದ್ಯಾಲಯದ ಧನಸಹಾಯ ಆಯೋಗ (ಯುಜಿಸಿ) ಮುಂದಿಟ್ಟಿದೆ.

ಸಾಮಾನ್ಯವಾಗಿ, ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಮೀಸಲಿಟ್ಟ ಹುದ್ದೆಗಳನ್ನು ಇತರ ವರ್ಗಗಳ ಅಭ್ಯರ್ಥಿಗಳಿಗೆ ನೀಡಲಾಗುವುದಿಲ್ಲ. ಆದರೆ, ಎ ದರ್ಜೆ ಹುದ್ದೆಗಳು ಅತ್ಯಂತ ಪ್ರಮುಖವಾದ್ದರಿಂದ, ಅವುಗಳಿಗೆ ಅಭ್ಯರ್ಥಿಗಳು ಸಿಗದಿದ್ದರೆ. ಅದನ್ನು ‘ಮೀಸಲಾತಿ ರಹಿತ’ ಎಂದು ಘೋಷಿಸಬಹುದು. ಸಾರ್ವಜನಿಕ ಹಿತಾಸಕ್ತಿಯಿಂದ ಎ ದರ್ಜೆ ಹುದ್ದೆಗಳನ್ನು ಖಾಲಿ ಬಿಡುವಂತಿಲ್ಲ ಎಂದು ಯುಜಿಸಿ ಕರಡು ಮಾರ್ಗಸೂಚಿ ಹೇಳಿದೆ.

ಗ್ರೂಪ್ ಸಿ ಮತ್ತು ಡಿ ಹುದ್ದೆಗಳಿಗೆ ವಿಶ್ವವಿದ್ಯಾನಿಲಯದ ಕಾರ್ಯನಿರ್ವಾಹಕ ಮಂಡಳಿ ನೇಮಕಾತಿ ಮಾಡಿಕೊಳ್ಳಬಹುದು. ಆದರೆ, ಗ್ರೂಪ್ ಎ ಹುದ್ದೆಗಳಿಗೆ ಶಿಕ್ಷಣ ಸಚಿವಾಲಯಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಮೀಸಲಾತಿ ತೆಗೆದು ಹಾಕಲು ಪ್ರಸ್ತಾಪಿಸುವ ಯುಜಿಸಿಯ ಮಾರ್ಗಸೂಚಿ ಎಲ್ಲಾ ಕೇಂದ್ರೀಯ ವಿಶ್ವವಿದ್ಯಾಲಯಗಳು, ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯಗಳು ಮತ್ತು ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಇತರ ಸ್ವಾಯತ್ತ ಸಂಸ್ಥೆಗಳಿಗೆ ಮತ್ತು ಕೇಂದ್ರ ಸರ್ಕಾರ ಅಥವಾ ಭಾರತದ ಏಕೀಕೃತ ನಿಧಿಯಿಂದ ಅನುದಾನವನ್ನು ಪಡೆಯುವವರಿಗೆ ಅನ್ವಯಿಸಲಿದೆ.

ಒಂದು ವಿಶ್ವವಿದ್ಯಾಲಯದಲ್ಲಿ ಎ ದರ್ಜೆಯ ಮೀಸಲು ಹುದ್ದೆ ಖಾಲಿಯಿದ್ದು, ಅದಕ್ಕೆ ಮೀಸಲು ವರ್ಗದ ಅಭ್ಯರ್ಥಿ ಸಿಗದಿದ್ದರೆ ಅಂತಹ ವಿಶ್ವವಿದ್ಯಾಲಯ ಆ ಹುದ್ದೆಯನ್ನು ಮೀಸಲು ರಹಿತ ಎಂದು ಘೋಷಿಸಿ, ಇತರ ವರ್ಗದ ಅಭ್ಯರ್ಥಿಗಳ ನೇಮಕಕ್ಕೆ ಪ್ರಸ್ತಾವನೆ ಕಳಿಸಬಹುದು.

ಪ್ರಸ್ತಾವನೆ ಸಲ್ಲಿಸುವ ವೇಳೆ, ಹುದ್ದೆಯ ಪದನಾಮ, ವೇತನ ಮಟ್ಟ, ಸೇವಾ ವಲಯ, ಜವಬ್ದಾರಿ ಮತ್ತು ಕಾರ್ಯಗಳು, ಶೈಕ್ಷಣಿಕ ಅರ್ಹತೆ, ಹುದ್ದೆ ತುಂಬಲು ಮಾಡಿದ ಪ್ರಯತ್ನ, ಹುದ್ದೆಯನ್ನು ಖಾಲಿ ಬಿಡದಿರಲು ಕಾರಣ, ಮೀಸಲು ರಹಿತವೆಂದು ಘೋಷಿಸಲು ಸ್ಪಷ್ಟನೆ ಮತ್ತು ಇತ್ಯಾದಿ ಮಾಹಿತಿಗಳನ್ನು ಆಯಾ ವಿಶ್ವವಿದ್ಯಾಲಯ ಒದಗಿಸಬೇಕು ಎಂದು ಕರಡು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

ಯುಜಿಸಿ ಕರಡು ಮಾರ್ಗಸೂಚಿಗಳಿಗೆ ಆಕ್ಷೇಪ:

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಭಾರತ ಸರ್ಕಾರದ ಮೀಸಲಾತಿ ನೀತಿಯ ಅನುಷ್ಠಾನಕ್ಕೆ 52 ಪುಟಗಳ ಕರಡು ಮಾರ್ಗಸೂಚಿಯನ್ನು ಪ್ರಕಟಿಸಿದ್ದ ಯುಜಿಸಿ, ಅದನ್ನು ಸಾರ್ವಜನಿಕರ ಅಭಿಪ್ರಾಯಕ್ಕೆ ಬಿಟ್ಟಿತ್ತು. ಜನವರಿ 28ಕ್ಕೆ ಅಭಿಪ್ರಾಯ ತಿಳಿಸಲು ಕೊನೆಯ ದಿನವಾಗಿತ್ತು. ಈ ಕರಡು ಮಾರ್ಗಸೂಚಿಗೆ ಭಾರೀ ವಿರೋಧ ವ್ಯಕ್ತವಾಗಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ವಿಶ್ವವಿದ್ಯಾನಿಲಯಗಳಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಹುದ್ದೆಗಳಿಗೆ ಮೀಸಲಾತಿ ಕೊನೆಗೊಳ್ಳಬೇಕು ಎಂದು ಮೋದಿ ಸರ್ಕಾರದ ಯುಜಿಸಿ ಇದೀಗ ಅಧಿಸೂಚನೆಯನ್ನು ಹೊರಡಿಸಿದೆ. ಬಿಜೆಪಿ ಯುವಕರ ಉದ್ಯೋಗ ಕಿತ್ತುಕೊಳ್ಳುವುದರಲ್ಲಿ ನಿರತವಾಗಿದೆ” ಎಂದು ಕಿಡಿಕಾರಿದ್ದಾರೆ.

ಸಿಪಿಐ ಪಾಲಿಟ್‌ ಬ್ಯೂರೋ ಸದಸ್ಯ ಸೀತಾರಾಮ್‌ ಯೆಚೂರಿ ಕೂಡ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, “ಮನುವಾದದ ಉತ್ತೇಜನ, ಆದಿವಾಸಿ, ದಲಿತ ವಿರೋಧಿ ಸಮಾಜ ನಿರ್ಮಾನಕ್ಕೆ ಮೋದಿ ಸರ್ಕಾರ ಹೆಜ್ಜೆಯಿಟ್ಟಿದೆ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು ಸಿಗದ ಹುದ್ದೆಗಳ ಮೀಸಲಾತಿ ತೆಗೆದು ಹಾಕುವ ಮೂಲಕ ಜಾತಿ ಆಧಾರಿತ ದಬ್ಬಾಳಿಕೆ ಮುಂದುವರೆಸಲು ಮುಂದಾಗಿದೆ. ಈ ಕರಡನ್ನು ವಾಪಾಸ್‌ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಕೆಲವು ವರ್ಷಗಳ ಹಿಂದೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮೀಸಲಾತಿಯನ್ನು ಪರಿಶೀಲಿಸುವ ಬಗ್ಗೆ ಮಾತನಾಡಿದ್ದರು. ಈಗ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗೆ ನೀಡಿರುವ ಮೀಸಲಾತಿಯನ್ನು ಕೊನೆಗೊಳಿಸುವ ಷಡ್ಯಂತ್ರ ನಡೆಯುತ್ತಿದೆ. ಯುಜಿಸಿಯ ಈ ಪ್ರಸ್ತಾವನೆಯು ಮೋಹನ್ ಭಾಗವತ್ ಅವರ ಆಶಯಗಳಿಗೆ ಅನುಗುಣವಾಗಿದೆ ಮತ್ತು ದಲಿತರು, ಆದಿವಾಸಿಗಳು ಮತ್ತು ಹಿಂದುಳಿದ ಜನರಿಗೆ ಸ್ಪಷ್ಟವಾಗಿ ಅನ್ಯಾಯವಾಗಿದೆ” ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್ ಹೇಳಿದ್ದಾರೆ.

ಇತ್ತೀಚೆಗೆ ಜನನಾಯಕ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ನೀಡಿದಾಗ, ರಾಹುಲ್ ಗಾಂಧಿ ದೇಶಕ್ಕೆ ‘ನೈಜ ನ್ಯಾಯ’ ಬೇಕು ಮತ್ತು ‘ಸಾಂಕೇತಿಕ ರಾಜಕೀಯ’ ಅಲ್ಲ ಎಂದು ಹೇಳಿದ್ದರು. ದಲಿತರು, ಹಿಂದುಳಿದವರು ಮತ್ತು ಆದಿವಾಸಿಗಳ ವಿಷಯದಲ್ಲಿ ಮೋದಿ ಸರ್ಕಾರ ಕೇವಲ ‘ಸಾಂಕೇತಿಕ ರಾಜಕಾರಣ’ ಮಾಡುತ್ತಿದೆ. ಯುಜಿಸಿಯ ಈ ಪ್ರಸ್ತಾವನೆಯ ಮೂಲಕ ಅವರ ನಿಜವಾದ ಉದ್ದೇಶ ಏನು ಎಂಬುದು ಮತ್ತೊಮ್ಮೆ ಬಹಿರಂಗವಾಗಿದೆ ಎಂದು ಕಿಡಿಕಾರಿದ್ದಾರೆ.

ಈ ಅನ್ಯಾಯ ಮತ್ತು ಬಾಬಾ ಸಾಹೇಬರ ಸಂವಿಧಾನದ ಮೇಲಿನ ನಿರಂತರ ದಾಳಿಯ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ. ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಮೀಸಲಾತಿಯನ್ನು ಕೊನೆಗೊಳಿಸುವ ಈ ಪ್ರಸ್ತಾಪವು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಕೂಡಲೇ ಇದನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಮೀಸಲಾತಿ ರದ್ದುಪಡಿಸಲ್ಲ ಎಂದು ಯುಜಿಸಿ ಅಧ್ಯಕ್ಷ : 

ಕರಡು ಮಾರ್ಗಸೂಚಿಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಯುಜಿಸಿ ಅಧ್ಯಕ್ಷ ಎಂ.ಜಗದೀಶ್ ಕುಮಾರ್ ಪ್ರತಿಕ್ರಿಯಿಸಿದ್ದು, “ಕೇಂದ್ರ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿಯ ಪರಿಣಾಮಕಾರಿ ಜಾರಿಗೆ ಕರಡು ಮಾರ್ಗಸೂಚಿ ಪ್ರಕಟಿಸಲಾಗಿದೆ. ಅಲ್ಲದೆ, ಯಾವುದೇ ಮೀಸಲಾತಿ ರದ್ದುಪಡಿಸುವ ಉದ್ದೇಶವಿಲ್ಲ. ಇದು ಕೇವಲ ಕರಡು ಮಾರ್ಗಸೂಚಿಯಾಗಿದ್ದು, ಇದೇ ಅಂತಿಮವಲ್ಲ ಎಂದಿದ್ದಾರೆ. ಮಾರ್ಗಸೂಚಿಗಳನ್ನು ಕಳೆದ ವರ್ಷ ಡಿಸೆಂಬರ್‌ನಲ್ಲಿ ಸಾರ್ವಜನಿಕರ ಅಭಿಪ್ರಾಯಕ್ಕೆ ಬಿಡಲಾಗಿತ್ತು. ಈ ವರ್ಷದ ಜನವರಿ 28ಕ್ಕೆ ಅಭಿಪ್ರಾಯ ಸಲ್ಲಿಸಲು ಕೊನೆಯ ದಿನವಾಗಿತ್ತು” ಎಂದಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ: ಹಾಲಿ ಬಿಜೆಪಿ ಸಂಸದರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...