Homeಮುಖಪುಟಕರಡು ಮಾರ್ಗಸೂಚಿಗೆ ಭಾರೀ ವಿರೋಧ: ಮೀಸಲಾತಿ ರದ್ದುಪಡಿಸಲ್ಲ ಎಂದ ಯುಜಿಸಿ ಅಧ್ಯಕ್ಷ

ಕರಡು ಮಾರ್ಗಸೂಚಿಗೆ ಭಾರೀ ವಿರೋಧ: ಮೀಸಲಾತಿ ರದ್ದುಪಡಿಸಲ್ಲ ಎಂದ ಯುಜಿಸಿ ಅಧ್ಯಕ್ಷ

- Advertisement -
- Advertisement -

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಮೀಸಲಿಟ್ಟ ಹುದ್ದೆಗಳಿಗೆ ಸಾಕಷ್ಟು ಅಭ್ಯರ್ಥಿಗಳು ದೊರಕದಿದ್ದರೆ, ಅಂತಹ ಹುದ್ದೆಗಳನ್ನು ‘ಮೀಸಲು ರಹಿತ’ ಎಂದು ಘೋಷಿಸಬಹುದು ಎಂಬ ಪ್ರಸ್ತಾವನೆಯ ಕರಡು ಮಾರ್ಗಸೂಚಿಯನ್ನು ವಿಶ್ವವಿದ್ಯಾಲಯದ ಧನಸಹಾಯ ಆಯೋಗ (ಯುಜಿಸಿ) ಮುಂದಿಟ್ಟಿದೆ.

ಸಾಮಾನ್ಯವಾಗಿ, ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಮೀಸಲಿಟ್ಟ ಹುದ್ದೆಗಳನ್ನು ಇತರ ವರ್ಗಗಳ ಅಭ್ಯರ್ಥಿಗಳಿಗೆ ನೀಡಲಾಗುವುದಿಲ್ಲ. ಆದರೆ, ಎ ದರ್ಜೆ ಹುದ್ದೆಗಳು ಅತ್ಯಂತ ಪ್ರಮುಖವಾದ್ದರಿಂದ, ಅವುಗಳಿಗೆ ಅಭ್ಯರ್ಥಿಗಳು ಸಿಗದಿದ್ದರೆ. ಅದನ್ನು ‘ಮೀಸಲಾತಿ ರಹಿತ’ ಎಂದು ಘೋಷಿಸಬಹುದು. ಸಾರ್ವಜನಿಕ ಹಿತಾಸಕ್ತಿಯಿಂದ ಎ ದರ್ಜೆ ಹುದ್ದೆಗಳನ್ನು ಖಾಲಿ ಬಿಡುವಂತಿಲ್ಲ ಎಂದು ಯುಜಿಸಿ ಕರಡು ಮಾರ್ಗಸೂಚಿ ಹೇಳಿದೆ.

ಗ್ರೂಪ್ ಸಿ ಮತ್ತು ಡಿ ಹುದ್ದೆಗಳಿಗೆ ವಿಶ್ವವಿದ್ಯಾನಿಲಯದ ಕಾರ್ಯನಿರ್ವಾಹಕ ಮಂಡಳಿ ನೇಮಕಾತಿ ಮಾಡಿಕೊಳ್ಳಬಹುದು. ಆದರೆ, ಗ್ರೂಪ್ ಎ ಹುದ್ದೆಗಳಿಗೆ ಶಿಕ್ಷಣ ಸಚಿವಾಲಯಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಮೀಸಲಾತಿ ತೆಗೆದು ಹಾಕಲು ಪ್ರಸ್ತಾಪಿಸುವ ಯುಜಿಸಿಯ ಮಾರ್ಗಸೂಚಿ ಎಲ್ಲಾ ಕೇಂದ್ರೀಯ ವಿಶ್ವವಿದ್ಯಾಲಯಗಳು, ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯಗಳು ಮತ್ತು ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಇತರ ಸ್ವಾಯತ್ತ ಸಂಸ್ಥೆಗಳಿಗೆ ಮತ್ತು ಕೇಂದ್ರ ಸರ್ಕಾರ ಅಥವಾ ಭಾರತದ ಏಕೀಕೃತ ನಿಧಿಯಿಂದ ಅನುದಾನವನ್ನು ಪಡೆಯುವವರಿಗೆ ಅನ್ವಯಿಸಲಿದೆ.

ಒಂದು ವಿಶ್ವವಿದ್ಯಾಲಯದಲ್ಲಿ ಎ ದರ್ಜೆಯ ಮೀಸಲು ಹುದ್ದೆ ಖಾಲಿಯಿದ್ದು, ಅದಕ್ಕೆ ಮೀಸಲು ವರ್ಗದ ಅಭ್ಯರ್ಥಿ ಸಿಗದಿದ್ದರೆ ಅಂತಹ ವಿಶ್ವವಿದ್ಯಾಲಯ ಆ ಹುದ್ದೆಯನ್ನು ಮೀಸಲು ರಹಿತ ಎಂದು ಘೋಷಿಸಿ, ಇತರ ವರ್ಗದ ಅಭ್ಯರ್ಥಿಗಳ ನೇಮಕಕ್ಕೆ ಪ್ರಸ್ತಾವನೆ ಕಳಿಸಬಹುದು.

ಪ್ರಸ್ತಾವನೆ ಸಲ್ಲಿಸುವ ವೇಳೆ, ಹುದ್ದೆಯ ಪದನಾಮ, ವೇತನ ಮಟ್ಟ, ಸೇವಾ ವಲಯ, ಜವಬ್ದಾರಿ ಮತ್ತು ಕಾರ್ಯಗಳು, ಶೈಕ್ಷಣಿಕ ಅರ್ಹತೆ, ಹುದ್ದೆ ತುಂಬಲು ಮಾಡಿದ ಪ್ರಯತ್ನ, ಹುದ್ದೆಯನ್ನು ಖಾಲಿ ಬಿಡದಿರಲು ಕಾರಣ, ಮೀಸಲು ರಹಿತವೆಂದು ಘೋಷಿಸಲು ಸ್ಪಷ್ಟನೆ ಮತ್ತು ಇತ್ಯಾದಿ ಮಾಹಿತಿಗಳನ್ನು ಆಯಾ ವಿಶ್ವವಿದ್ಯಾಲಯ ಒದಗಿಸಬೇಕು ಎಂದು ಕರಡು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

ಯುಜಿಸಿ ಕರಡು ಮಾರ್ಗಸೂಚಿಗಳಿಗೆ ಆಕ್ಷೇಪ:

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಭಾರತ ಸರ್ಕಾರದ ಮೀಸಲಾತಿ ನೀತಿಯ ಅನುಷ್ಠಾನಕ್ಕೆ 52 ಪುಟಗಳ ಕರಡು ಮಾರ್ಗಸೂಚಿಯನ್ನು ಪ್ರಕಟಿಸಿದ್ದ ಯುಜಿಸಿ, ಅದನ್ನು ಸಾರ್ವಜನಿಕರ ಅಭಿಪ್ರಾಯಕ್ಕೆ ಬಿಟ್ಟಿತ್ತು. ಜನವರಿ 28ಕ್ಕೆ ಅಭಿಪ್ರಾಯ ತಿಳಿಸಲು ಕೊನೆಯ ದಿನವಾಗಿತ್ತು. ಈ ಕರಡು ಮಾರ್ಗಸೂಚಿಗೆ ಭಾರೀ ವಿರೋಧ ವ್ಯಕ್ತವಾಗಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ವಿಶ್ವವಿದ್ಯಾನಿಲಯಗಳಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಹುದ್ದೆಗಳಿಗೆ ಮೀಸಲಾತಿ ಕೊನೆಗೊಳ್ಳಬೇಕು ಎಂದು ಮೋದಿ ಸರ್ಕಾರದ ಯುಜಿಸಿ ಇದೀಗ ಅಧಿಸೂಚನೆಯನ್ನು ಹೊರಡಿಸಿದೆ. ಬಿಜೆಪಿ ಯುವಕರ ಉದ್ಯೋಗ ಕಿತ್ತುಕೊಳ್ಳುವುದರಲ್ಲಿ ನಿರತವಾಗಿದೆ” ಎಂದು ಕಿಡಿಕಾರಿದ್ದಾರೆ.

ಸಿಪಿಐ ಪಾಲಿಟ್‌ ಬ್ಯೂರೋ ಸದಸ್ಯ ಸೀತಾರಾಮ್‌ ಯೆಚೂರಿ ಕೂಡ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, “ಮನುವಾದದ ಉತ್ತೇಜನ, ಆದಿವಾಸಿ, ದಲಿತ ವಿರೋಧಿ ಸಮಾಜ ನಿರ್ಮಾನಕ್ಕೆ ಮೋದಿ ಸರ್ಕಾರ ಹೆಜ್ಜೆಯಿಟ್ಟಿದೆ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು ಸಿಗದ ಹುದ್ದೆಗಳ ಮೀಸಲಾತಿ ತೆಗೆದು ಹಾಕುವ ಮೂಲಕ ಜಾತಿ ಆಧಾರಿತ ದಬ್ಬಾಳಿಕೆ ಮುಂದುವರೆಸಲು ಮುಂದಾಗಿದೆ. ಈ ಕರಡನ್ನು ವಾಪಾಸ್‌ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಕೆಲವು ವರ್ಷಗಳ ಹಿಂದೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮೀಸಲಾತಿಯನ್ನು ಪರಿಶೀಲಿಸುವ ಬಗ್ಗೆ ಮಾತನಾಡಿದ್ದರು. ಈಗ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗೆ ನೀಡಿರುವ ಮೀಸಲಾತಿಯನ್ನು ಕೊನೆಗೊಳಿಸುವ ಷಡ್ಯಂತ್ರ ನಡೆಯುತ್ತಿದೆ. ಯುಜಿಸಿಯ ಈ ಪ್ರಸ್ತಾವನೆಯು ಮೋಹನ್ ಭಾಗವತ್ ಅವರ ಆಶಯಗಳಿಗೆ ಅನುಗುಣವಾಗಿದೆ ಮತ್ತು ದಲಿತರು, ಆದಿವಾಸಿಗಳು ಮತ್ತು ಹಿಂದುಳಿದ ಜನರಿಗೆ ಸ್ಪಷ್ಟವಾಗಿ ಅನ್ಯಾಯವಾಗಿದೆ” ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್ ಹೇಳಿದ್ದಾರೆ.

ಇತ್ತೀಚೆಗೆ ಜನನಾಯಕ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ನೀಡಿದಾಗ, ರಾಹುಲ್ ಗಾಂಧಿ ದೇಶಕ್ಕೆ ‘ನೈಜ ನ್ಯಾಯ’ ಬೇಕು ಮತ್ತು ‘ಸಾಂಕೇತಿಕ ರಾಜಕೀಯ’ ಅಲ್ಲ ಎಂದು ಹೇಳಿದ್ದರು. ದಲಿತರು, ಹಿಂದುಳಿದವರು ಮತ್ತು ಆದಿವಾಸಿಗಳ ವಿಷಯದಲ್ಲಿ ಮೋದಿ ಸರ್ಕಾರ ಕೇವಲ ‘ಸಾಂಕೇತಿಕ ರಾಜಕಾರಣ’ ಮಾಡುತ್ತಿದೆ. ಯುಜಿಸಿಯ ಈ ಪ್ರಸ್ತಾವನೆಯ ಮೂಲಕ ಅವರ ನಿಜವಾದ ಉದ್ದೇಶ ಏನು ಎಂಬುದು ಮತ್ತೊಮ್ಮೆ ಬಹಿರಂಗವಾಗಿದೆ ಎಂದು ಕಿಡಿಕಾರಿದ್ದಾರೆ.

ಈ ಅನ್ಯಾಯ ಮತ್ತು ಬಾಬಾ ಸಾಹೇಬರ ಸಂವಿಧಾನದ ಮೇಲಿನ ನಿರಂತರ ದಾಳಿಯ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ. ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಮೀಸಲಾತಿಯನ್ನು ಕೊನೆಗೊಳಿಸುವ ಈ ಪ್ರಸ್ತಾಪವು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಕೂಡಲೇ ಇದನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಮೀಸಲಾತಿ ರದ್ದುಪಡಿಸಲ್ಲ ಎಂದು ಯುಜಿಸಿ ಅಧ್ಯಕ್ಷ : 

ಕರಡು ಮಾರ್ಗಸೂಚಿಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಯುಜಿಸಿ ಅಧ್ಯಕ್ಷ ಎಂ.ಜಗದೀಶ್ ಕುಮಾರ್ ಪ್ರತಿಕ್ರಿಯಿಸಿದ್ದು, “ಕೇಂದ್ರ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿಯ ಪರಿಣಾಮಕಾರಿ ಜಾರಿಗೆ ಕರಡು ಮಾರ್ಗಸೂಚಿ ಪ್ರಕಟಿಸಲಾಗಿದೆ. ಅಲ್ಲದೆ, ಯಾವುದೇ ಮೀಸಲಾತಿ ರದ್ದುಪಡಿಸುವ ಉದ್ದೇಶವಿಲ್ಲ. ಇದು ಕೇವಲ ಕರಡು ಮಾರ್ಗಸೂಚಿಯಾಗಿದ್ದು, ಇದೇ ಅಂತಿಮವಲ್ಲ ಎಂದಿದ್ದಾರೆ. ಮಾರ್ಗಸೂಚಿಗಳನ್ನು ಕಳೆದ ವರ್ಷ ಡಿಸೆಂಬರ್‌ನಲ್ಲಿ ಸಾರ್ವಜನಿಕರ ಅಭಿಪ್ರಾಯಕ್ಕೆ ಬಿಡಲಾಗಿತ್ತು. ಈ ವರ್ಷದ ಜನವರಿ 28ಕ್ಕೆ ಅಭಿಪ್ರಾಯ ಸಲ್ಲಿಸಲು ಕೊನೆಯ ದಿನವಾಗಿತ್ತು” ಎಂದಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ: ಹಾಲಿ ಬಿಜೆಪಿ ಸಂಸದರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...