Homeಮುಖಪುಟಕರಡು ಮಾರ್ಗಸೂಚಿಗೆ ಭಾರೀ ವಿರೋಧ: ಮೀಸಲಾತಿ ರದ್ದುಪಡಿಸಲ್ಲ ಎಂದ ಯುಜಿಸಿ ಅಧ್ಯಕ್ಷ

ಕರಡು ಮಾರ್ಗಸೂಚಿಗೆ ಭಾರೀ ವಿರೋಧ: ಮೀಸಲಾತಿ ರದ್ದುಪಡಿಸಲ್ಲ ಎಂದ ಯುಜಿಸಿ ಅಧ್ಯಕ್ಷ

- Advertisement -
- Advertisement -

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಮೀಸಲಿಟ್ಟ ಹುದ್ದೆಗಳಿಗೆ ಸಾಕಷ್ಟು ಅಭ್ಯರ್ಥಿಗಳು ದೊರಕದಿದ್ದರೆ, ಅಂತಹ ಹುದ್ದೆಗಳನ್ನು ‘ಮೀಸಲು ರಹಿತ’ ಎಂದು ಘೋಷಿಸಬಹುದು ಎಂಬ ಪ್ರಸ್ತಾವನೆಯ ಕರಡು ಮಾರ್ಗಸೂಚಿಯನ್ನು ವಿಶ್ವವಿದ್ಯಾಲಯದ ಧನಸಹಾಯ ಆಯೋಗ (ಯುಜಿಸಿ) ಮುಂದಿಟ್ಟಿದೆ.

ಸಾಮಾನ್ಯವಾಗಿ, ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಮೀಸಲಿಟ್ಟ ಹುದ್ದೆಗಳನ್ನು ಇತರ ವರ್ಗಗಳ ಅಭ್ಯರ್ಥಿಗಳಿಗೆ ನೀಡಲಾಗುವುದಿಲ್ಲ. ಆದರೆ, ಎ ದರ್ಜೆ ಹುದ್ದೆಗಳು ಅತ್ಯಂತ ಪ್ರಮುಖವಾದ್ದರಿಂದ, ಅವುಗಳಿಗೆ ಅಭ್ಯರ್ಥಿಗಳು ಸಿಗದಿದ್ದರೆ. ಅದನ್ನು ‘ಮೀಸಲಾತಿ ರಹಿತ’ ಎಂದು ಘೋಷಿಸಬಹುದು. ಸಾರ್ವಜನಿಕ ಹಿತಾಸಕ್ತಿಯಿಂದ ಎ ದರ್ಜೆ ಹುದ್ದೆಗಳನ್ನು ಖಾಲಿ ಬಿಡುವಂತಿಲ್ಲ ಎಂದು ಯುಜಿಸಿ ಕರಡು ಮಾರ್ಗಸೂಚಿ ಹೇಳಿದೆ.

ಗ್ರೂಪ್ ಸಿ ಮತ್ತು ಡಿ ಹುದ್ದೆಗಳಿಗೆ ವಿಶ್ವವಿದ್ಯಾನಿಲಯದ ಕಾರ್ಯನಿರ್ವಾಹಕ ಮಂಡಳಿ ನೇಮಕಾತಿ ಮಾಡಿಕೊಳ್ಳಬಹುದು. ಆದರೆ, ಗ್ರೂಪ್ ಎ ಹುದ್ದೆಗಳಿಗೆ ಶಿಕ್ಷಣ ಸಚಿವಾಲಯಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಮೀಸಲಾತಿ ತೆಗೆದು ಹಾಕಲು ಪ್ರಸ್ತಾಪಿಸುವ ಯುಜಿಸಿಯ ಮಾರ್ಗಸೂಚಿ ಎಲ್ಲಾ ಕೇಂದ್ರೀಯ ವಿಶ್ವವಿದ್ಯಾಲಯಗಳು, ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯಗಳು ಮತ್ತು ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಇತರ ಸ್ವಾಯತ್ತ ಸಂಸ್ಥೆಗಳಿಗೆ ಮತ್ತು ಕೇಂದ್ರ ಸರ್ಕಾರ ಅಥವಾ ಭಾರತದ ಏಕೀಕೃತ ನಿಧಿಯಿಂದ ಅನುದಾನವನ್ನು ಪಡೆಯುವವರಿಗೆ ಅನ್ವಯಿಸಲಿದೆ.

ಒಂದು ವಿಶ್ವವಿದ್ಯಾಲಯದಲ್ಲಿ ಎ ದರ್ಜೆಯ ಮೀಸಲು ಹುದ್ದೆ ಖಾಲಿಯಿದ್ದು, ಅದಕ್ಕೆ ಮೀಸಲು ವರ್ಗದ ಅಭ್ಯರ್ಥಿ ಸಿಗದಿದ್ದರೆ ಅಂತಹ ವಿಶ್ವವಿದ್ಯಾಲಯ ಆ ಹುದ್ದೆಯನ್ನು ಮೀಸಲು ರಹಿತ ಎಂದು ಘೋಷಿಸಿ, ಇತರ ವರ್ಗದ ಅಭ್ಯರ್ಥಿಗಳ ನೇಮಕಕ್ಕೆ ಪ್ರಸ್ತಾವನೆ ಕಳಿಸಬಹುದು.

ಪ್ರಸ್ತಾವನೆ ಸಲ್ಲಿಸುವ ವೇಳೆ, ಹುದ್ದೆಯ ಪದನಾಮ, ವೇತನ ಮಟ್ಟ, ಸೇವಾ ವಲಯ, ಜವಬ್ದಾರಿ ಮತ್ತು ಕಾರ್ಯಗಳು, ಶೈಕ್ಷಣಿಕ ಅರ್ಹತೆ, ಹುದ್ದೆ ತುಂಬಲು ಮಾಡಿದ ಪ್ರಯತ್ನ, ಹುದ್ದೆಯನ್ನು ಖಾಲಿ ಬಿಡದಿರಲು ಕಾರಣ, ಮೀಸಲು ರಹಿತವೆಂದು ಘೋಷಿಸಲು ಸ್ಪಷ್ಟನೆ ಮತ್ತು ಇತ್ಯಾದಿ ಮಾಹಿತಿಗಳನ್ನು ಆಯಾ ವಿಶ್ವವಿದ್ಯಾಲಯ ಒದಗಿಸಬೇಕು ಎಂದು ಕರಡು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

ಯುಜಿಸಿ ಕರಡು ಮಾರ್ಗಸೂಚಿಗಳಿಗೆ ಆಕ್ಷೇಪ:

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಭಾರತ ಸರ್ಕಾರದ ಮೀಸಲಾತಿ ನೀತಿಯ ಅನುಷ್ಠಾನಕ್ಕೆ 52 ಪುಟಗಳ ಕರಡು ಮಾರ್ಗಸೂಚಿಯನ್ನು ಪ್ರಕಟಿಸಿದ್ದ ಯುಜಿಸಿ, ಅದನ್ನು ಸಾರ್ವಜನಿಕರ ಅಭಿಪ್ರಾಯಕ್ಕೆ ಬಿಟ್ಟಿತ್ತು. ಜನವರಿ 28ಕ್ಕೆ ಅಭಿಪ್ರಾಯ ತಿಳಿಸಲು ಕೊನೆಯ ದಿನವಾಗಿತ್ತು. ಈ ಕರಡು ಮಾರ್ಗಸೂಚಿಗೆ ಭಾರೀ ವಿರೋಧ ವ್ಯಕ್ತವಾಗಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ವಿಶ್ವವಿದ್ಯಾನಿಲಯಗಳಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಹುದ್ದೆಗಳಿಗೆ ಮೀಸಲಾತಿ ಕೊನೆಗೊಳ್ಳಬೇಕು ಎಂದು ಮೋದಿ ಸರ್ಕಾರದ ಯುಜಿಸಿ ಇದೀಗ ಅಧಿಸೂಚನೆಯನ್ನು ಹೊರಡಿಸಿದೆ. ಬಿಜೆಪಿ ಯುವಕರ ಉದ್ಯೋಗ ಕಿತ್ತುಕೊಳ್ಳುವುದರಲ್ಲಿ ನಿರತವಾಗಿದೆ” ಎಂದು ಕಿಡಿಕಾರಿದ್ದಾರೆ.

ಸಿಪಿಐ ಪಾಲಿಟ್‌ ಬ್ಯೂರೋ ಸದಸ್ಯ ಸೀತಾರಾಮ್‌ ಯೆಚೂರಿ ಕೂಡ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, “ಮನುವಾದದ ಉತ್ತೇಜನ, ಆದಿವಾಸಿ, ದಲಿತ ವಿರೋಧಿ ಸಮಾಜ ನಿರ್ಮಾನಕ್ಕೆ ಮೋದಿ ಸರ್ಕಾರ ಹೆಜ್ಜೆಯಿಟ್ಟಿದೆ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು ಸಿಗದ ಹುದ್ದೆಗಳ ಮೀಸಲಾತಿ ತೆಗೆದು ಹಾಕುವ ಮೂಲಕ ಜಾತಿ ಆಧಾರಿತ ದಬ್ಬಾಳಿಕೆ ಮುಂದುವರೆಸಲು ಮುಂದಾಗಿದೆ. ಈ ಕರಡನ್ನು ವಾಪಾಸ್‌ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಕೆಲವು ವರ್ಷಗಳ ಹಿಂದೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮೀಸಲಾತಿಯನ್ನು ಪರಿಶೀಲಿಸುವ ಬಗ್ಗೆ ಮಾತನಾಡಿದ್ದರು. ಈಗ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗೆ ನೀಡಿರುವ ಮೀಸಲಾತಿಯನ್ನು ಕೊನೆಗೊಳಿಸುವ ಷಡ್ಯಂತ್ರ ನಡೆಯುತ್ತಿದೆ. ಯುಜಿಸಿಯ ಈ ಪ್ರಸ್ತಾವನೆಯು ಮೋಹನ್ ಭಾಗವತ್ ಅವರ ಆಶಯಗಳಿಗೆ ಅನುಗುಣವಾಗಿದೆ ಮತ್ತು ದಲಿತರು, ಆದಿವಾಸಿಗಳು ಮತ್ತು ಹಿಂದುಳಿದ ಜನರಿಗೆ ಸ್ಪಷ್ಟವಾಗಿ ಅನ್ಯಾಯವಾಗಿದೆ” ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್ ಹೇಳಿದ್ದಾರೆ.

ಇತ್ತೀಚೆಗೆ ಜನನಾಯಕ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ನೀಡಿದಾಗ, ರಾಹುಲ್ ಗಾಂಧಿ ದೇಶಕ್ಕೆ ‘ನೈಜ ನ್ಯಾಯ’ ಬೇಕು ಮತ್ತು ‘ಸಾಂಕೇತಿಕ ರಾಜಕೀಯ’ ಅಲ್ಲ ಎಂದು ಹೇಳಿದ್ದರು. ದಲಿತರು, ಹಿಂದುಳಿದವರು ಮತ್ತು ಆದಿವಾಸಿಗಳ ವಿಷಯದಲ್ಲಿ ಮೋದಿ ಸರ್ಕಾರ ಕೇವಲ ‘ಸಾಂಕೇತಿಕ ರಾಜಕಾರಣ’ ಮಾಡುತ್ತಿದೆ. ಯುಜಿಸಿಯ ಈ ಪ್ರಸ್ತಾವನೆಯ ಮೂಲಕ ಅವರ ನಿಜವಾದ ಉದ್ದೇಶ ಏನು ಎಂಬುದು ಮತ್ತೊಮ್ಮೆ ಬಹಿರಂಗವಾಗಿದೆ ಎಂದು ಕಿಡಿಕಾರಿದ್ದಾರೆ.

ಈ ಅನ್ಯಾಯ ಮತ್ತು ಬಾಬಾ ಸಾಹೇಬರ ಸಂವಿಧಾನದ ಮೇಲಿನ ನಿರಂತರ ದಾಳಿಯ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ. ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಮೀಸಲಾತಿಯನ್ನು ಕೊನೆಗೊಳಿಸುವ ಈ ಪ್ರಸ್ತಾಪವು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಕೂಡಲೇ ಇದನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಮೀಸಲಾತಿ ರದ್ದುಪಡಿಸಲ್ಲ ಎಂದು ಯುಜಿಸಿ ಅಧ್ಯಕ್ಷ : 

ಕರಡು ಮಾರ್ಗಸೂಚಿಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಯುಜಿಸಿ ಅಧ್ಯಕ್ಷ ಎಂ.ಜಗದೀಶ್ ಕುಮಾರ್ ಪ್ರತಿಕ್ರಿಯಿಸಿದ್ದು, “ಕೇಂದ್ರ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿಯ ಪರಿಣಾಮಕಾರಿ ಜಾರಿಗೆ ಕರಡು ಮಾರ್ಗಸೂಚಿ ಪ್ರಕಟಿಸಲಾಗಿದೆ. ಅಲ್ಲದೆ, ಯಾವುದೇ ಮೀಸಲಾತಿ ರದ್ದುಪಡಿಸುವ ಉದ್ದೇಶವಿಲ್ಲ. ಇದು ಕೇವಲ ಕರಡು ಮಾರ್ಗಸೂಚಿಯಾಗಿದ್ದು, ಇದೇ ಅಂತಿಮವಲ್ಲ ಎಂದಿದ್ದಾರೆ. ಮಾರ್ಗಸೂಚಿಗಳನ್ನು ಕಳೆದ ವರ್ಷ ಡಿಸೆಂಬರ್‌ನಲ್ಲಿ ಸಾರ್ವಜನಿಕರ ಅಭಿಪ್ರಾಯಕ್ಕೆ ಬಿಡಲಾಗಿತ್ತು. ಈ ವರ್ಷದ ಜನವರಿ 28ಕ್ಕೆ ಅಭಿಪ್ರಾಯ ಸಲ್ಲಿಸಲು ಕೊನೆಯ ದಿನವಾಗಿತ್ತು” ಎಂದಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ: ಹಾಲಿ ಬಿಜೆಪಿ ಸಂಸದರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...