Homeಮುಖಪುಟಕರಡು ಮಾರ್ಗಸೂಚಿಗೆ ಭಾರೀ ವಿರೋಧ: ಮೀಸಲಾತಿ ರದ್ದುಪಡಿಸಲ್ಲ ಎಂದ ಯುಜಿಸಿ ಅಧ್ಯಕ್ಷ

ಕರಡು ಮಾರ್ಗಸೂಚಿಗೆ ಭಾರೀ ವಿರೋಧ: ಮೀಸಲಾತಿ ರದ್ದುಪಡಿಸಲ್ಲ ಎಂದ ಯುಜಿಸಿ ಅಧ್ಯಕ್ಷ

- Advertisement -
- Advertisement -

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಮೀಸಲಿಟ್ಟ ಹುದ್ದೆಗಳಿಗೆ ಸಾಕಷ್ಟು ಅಭ್ಯರ್ಥಿಗಳು ದೊರಕದಿದ್ದರೆ, ಅಂತಹ ಹುದ್ದೆಗಳನ್ನು ‘ಮೀಸಲು ರಹಿತ’ ಎಂದು ಘೋಷಿಸಬಹುದು ಎಂಬ ಪ್ರಸ್ತಾವನೆಯ ಕರಡು ಮಾರ್ಗಸೂಚಿಯನ್ನು ವಿಶ್ವವಿದ್ಯಾಲಯದ ಧನಸಹಾಯ ಆಯೋಗ (ಯುಜಿಸಿ) ಮುಂದಿಟ್ಟಿದೆ.

ಸಾಮಾನ್ಯವಾಗಿ, ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಮೀಸಲಿಟ್ಟ ಹುದ್ದೆಗಳನ್ನು ಇತರ ವರ್ಗಗಳ ಅಭ್ಯರ್ಥಿಗಳಿಗೆ ನೀಡಲಾಗುವುದಿಲ್ಲ. ಆದರೆ, ಎ ದರ್ಜೆ ಹುದ್ದೆಗಳು ಅತ್ಯಂತ ಪ್ರಮುಖವಾದ್ದರಿಂದ, ಅವುಗಳಿಗೆ ಅಭ್ಯರ್ಥಿಗಳು ಸಿಗದಿದ್ದರೆ. ಅದನ್ನು ‘ಮೀಸಲಾತಿ ರಹಿತ’ ಎಂದು ಘೋಷಿಸಬಹುದು. ಸಾರ್ವಜನಿಕ ಹಿತಾಸಕ್ತಿಯಿಂದ ಎ ದರ್ಜೆ ಹುದ್ದೆಗಳನ್ನು ಖಾಲಿ ಬಿಡುವಂತಿಲ್ಲ ಎಂದು ಯುಜಿಸಿ ಕರಡು ಮಾರ್ಗಸೂಚಿ ಹೇಳಿದೆ.

ಗ್ರೂಪ್ ಸಿ ಮತ್ತು ಡಿ ಹುದ್ದೆಗಳಿಗೆ ವಿಶ್ವವಿದ್ಯಾನಿಲಯದ ಕಾರ್ಯನಿರ್ವಾಹಕ ಮಂಡಳಿ ನೇಮಕಾತಿ ಮಾಡಿಕೊಳ್ಳಬಹುದು. ಆದರೆ, ಗ್ರೂಪ್ ಎ ಹುದ್ದೆಗಳಿಗೆ ಶಿಕ್ಷಣ ಸಚಿವಾಲಯಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಮೀಸಲಾತಿ ತೆಗೆದು ಹಾಕಲು ಪ್ರಸ್ತಾಪಿಸುವ ಯುಜಿಸಿಯ ಮಾರ್ಗಸೂಚಿ ಎಲ್ಲಾ ಕೇಂದ್ರೀಯ ವಿಶ್ವವಿದ್ಯಾಲಯಗಳು, ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯಗಳು ಮತ್ತು ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಇತರ ಸ್ವಾಯತ್ತ ಸಂಸ್ಥೆಗಳಿಗೆ ಮತ್ತು ಕೇಂದ್ರ ಸರ್ಕಾರ ಅಥವಾ ಭಾರತದ ಏಕೀಕೃತ ನಿಧಿಯಿಂದ ಅನುದಾನವನ್ನು ಪಡೆಯುವವರಿಗೆ ಅನ್ವಯಿಸಲಿದೆ.

ಒಂದು ವಿಶ್ವವಿದ್ಯಾಲಯದಲ್ಲಿ ಎ ದರ್ಜೆಯ ಮೀಸಲು ಹುದ್ದೆ ಖಾಲಿಯಿದ್ದು, ಅದಕ್ಕೆ ಮೀಸಲು ವರ್ಗದ ಅಭ್ಯರ್ಥಿ ಸಿಗದಿದ್ದರೆ ಅಂತಹ ವಿಶ್ವವಿದ್ಯಾಲಯ ಆ ಹುದ್ದೆಯನ್ನು ಮೀಸಲು ರಹಿತ ಎಂದು ಘೋಷಿಸಿ, ಇತರ ವರ್ಗದ ಅಭ್ಯರ್ಥಿಗಳ ನೇಮಕಕ್ಕೆ ಪ್ರಸ್ತಾವನೆ ಕಳಿಸಬಹುದು.

ಪ್ರಸ್ತಾವನೆ ಸಲ್ಲಿಸುವ ವೇಳೆ, ಹುದ್ದೆಯ ಪದನಾಮ, ವೇತನ ಮಟ್ಟ, ಸೇವಾ ವಲಯ, ಜವಬ್ದಾರಿ ಮತ್ತು ಕಾರ್ಯಗಳು, ಶೈಕ್ಷಣಿಕ ಅರ್ಹತೆ, ಹುದ್ದೆ ತುಂಬಲು ಮಾಡಿದ ಪ್ರಯತ್ನ, ಹುದ್ದೆಯನ್ನು ಖಾಲಿ ಬಿಡದಿರಲು ಕಾರಣ, ಮೀಸಲು ರಹಿತವೆಂದು ಘೋಷಿಸಲು ಸ್ಪಷ್ಟನೆ ಮತ್ತು ಇತ್ಯಾದಿ ಮಾಹಿತಿಗಳನ್ನು ಆಯಾ ವಿಶ್ವವಿದ್ಯಾಲಯ ಒದಗಿಸಬೇಕು ಎಂದು ಕರಡು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

ಯುಜಿಸಿ ಕರಡು ಮಾರ್ಗಸೂಚಿಗಳಿಗೆ ಆಕ್ಷೇಪ:

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಭಾರತ ಸರ್ಕಾರದ ಮೀಸಲಾತಿ ನೀತಿಯ ಅನುಷ್ಠಾನಕ್ಕೆ 52 ಪುಟಗಳ ಕರಡು ಮಾರ್ಗಸೂಚಿಯನ್ನು ಪ್ರಕಟಿಸಿದ್ದ ಯುಜಿಸಿ, ಅದನ್ನು ಸಾರ್ವಜನಿಕರ ಅಭಿಪ್ರಾಯಕ್ಕೆ ಬಿಟ್ಟಿತ್ತು. ಜನವರಿ 28ಕ್ಕೆ ಅಭಿಪ್ರಾಯ ತಿಳಿಸಲು ಕೊನೆಯ ದಿನವಾಗಿತ್ತು. ಈ ಕರಡು ಮಾರ್ಗಸೂಚಿಗೆ ಭಾರೀ ವಿರೋಧ ವ್ಯಕ್ತವಾಗಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ವಿಶ್ವವಿದ್ಯಾನಿಲಯಗಳಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಹುದ್ದೆಗಳಿಗೆ ಮೀಸಲಾತಿ ಕೊನೆಗೊಳ್ಳಬೇಕು ಎಂದು ಮೋದಿ ಸರ್ಕಾರದ ಯುಜಿಸಿ ಇದೀಗ ಅಧಿಸೂಚನೆಯನ್ನು ಹೊರಡಿಸಿದೆ. ಬಿಜೆಪಿ ಯುವಕರ ಉದ್ಯೋಗ ಕಿತ್ತುಕೊಳ್ಳುವುದರಲ್ಲಿ ನಿರತವಾಗಿದೆ” ಎಂದು ಕಿಡಿಕಾರಿದ್ದಾರೆ.

ಸಿಪಿಐ ಪಾಲಿಟ್‌ ಬ್ಯೂರೋ ಸದಸ್ಯ ಸೀತಾರಾಮ್‌ ಯೆಚೂರಿ ಕೂಡ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, “ಮನುವಾದದ ಉತ್ತೇಜನ, ಆದಿವಾಸಿ, ದಲಿತ ವಿರೋಧಿ ಸಮಾಜ ನಿರ್ಮಾನಕ್ಕೆ ಮೋದಿ ಸರ್ಕಾರ ಹೆಜ್ಜೆಯಿಟ್ಟಿದೆ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು ಸಿಗದ ಹುದ್ದೆಗಳ ಮೀಸಲಾತಿ ತೆಗೆದು ಹಾಕುವ ಮೂಲಕ ಜಾತಿ ಆಧಾರಿತ ದಬ್ಬಾಳಿಕೆ ಮುಂದುವರೆಸಲು ಮುಂದಾಗಿದೆ. ಈ ಕರಡನ್ನು ವಾಪಾಸ್‌ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಕೆಲವು ವರ್ಷಗಳ ಹಿಂದೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮೀಸಲಾತಿಯನ್ನು ಪರಿಶೀಲಿಸುವ ಬಗ್ಗೆ ಮಾತನಾಡಿದ್ದರು. ಈಗ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗೆ ನೀಡಿರುವ ಮೀಸಲಾತಿಯನ್ನು ಕೊನೆಗೊಳಿಸುವ ಷಡ್ಯಂತ್ರ ನಡೆಯುತ್ತಿದೆ. ಯುಜಿಸಿಯ ಈ ಪ್ರಸ್ತಾವನೆಯು ಮೋಹನ್ ಭಾಗವತ್ ಅವರ ಆಶಯಗಳಿಗೆ ಅನುಗುಣವಾಗಿದೆ ಮತ್ತು ದಲಿತರು, ಆದಿವಾಸಿಗಳು ಮತ್ತು ಹಿಂದುಳಿದ ಜನರಿಗೆ ಸ್ಪಷ್ಟವಾಗಿ ಅನ್ಯಾಯವಾಗಿದೆ” ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್ ಹೇಳಿದ್ದಾರೆ.

ಇತ್ತೀಚೆಗೆ ಜನನಾಯಕ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ನೀಡಿದಾಗ, ರಾಹುಲ್ ಗಾಂಧಿ ದೇಶಕ್ಕೆ ‘ನೈಜ ನ್ಯಾಯ’ ಬೇಕು ಮತ್ತು ‘ಸಾಂಕೇತಿಕ ರಾಜಕೀಯ’ ಅಲ್ಲ ಎಂದು ಹೇಳಿದ್ದರು. ದಲಿತರು, ಹಿಂದುಳಿದವರು ಮತ್ತು ಆದಿವಾಸಿಗಳ ವಿಷಯದಲ್ಲಿ ಮೋದಿ ಸರ್ಕಾರ ಕೇವಲ ‘ಸಾಂಕೇತಿಕ ರಾಜಕಾರಣ’ ಮಾಡುತ್ತಿದೆ. ಯುಜಿಸಿಯ ಈ ಪ್ರಸ್ತಾವನೆಯ ಮೂಲಕ ಅವರ ನಿಜವಾದ ಉದ್ದೇಶ ಏನು ಎಂಬುದು ಮತ್ತೊಮ್ಮೆ ಬಹಿರಂಗವಾಗಿದೆ ಎಂದು ಕಿಡಿಕಾರಿದ್ದಾರೆ.

ಈ ಅನ್ಯಾಯ ಮತ್ತು ಬಾಬಾ ಸಾಹೇಬರ ಸಂವಿಧಾನದ ಮೇಲಿನ ನಿರಂತರ ದಾಳಿಯ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ. ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಮೀಸಲಾತಿಯನ್ನು ಕೊನೆಗೊಳಿಸುವ ಈ ಪ್ರಸ್ತಾಪವು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಕೂಡಲೇ ಇದನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಮೀಸಲಾತಿ ರದ್ದುಪಡಿಸಲ್ಲ ಎಂದು ಯುಜಿಸಿ ಅಧ್ಯಕ್ಷ : 

ಕರಡು ಮಾರ್ಗಸೂಚಿಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಯುಜಿಸಿ ಅಧ್ಯಕ್ಷ ಎಂ.ಜಗದೀಶ್ ಕುಮಾರ್ ಪ್ರತಿಕ್ರಿಯಿಸಿದ್ದು, “ಕೇಂದ್ರ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿಯ ಪರಿಣಾಮಕಾರಿ ಜಾರಿಗೆ ಕರಡು ಮಾರ್ಗಸೂಚಿ ಪ್ರಕಟಿಸಲಾಗಿದೆ. ಅಲ್ಲದೆ, ಯಾವುದೇ ಮೀಸಲಾತಿ ರದ್ದುಪಡಿಸುವ ಉದ್ದೇಶವಿಲ್ಲ. ಇದು ಕೇವಲ ಕರಡು ಮಾರ್ಗಸೂಚಿಯಾಗಿದ್ದು, ಇದೇ ಅಂತಿಮವಲ್ಲ ಎಂದಿದ್ದಾರೆ. ಮಾರ್ಗಸೂಚಿಗಳನ್ನು ಕಳೆದ ವರ್ಷ ಡಿಸೆಂಬರ್‌ನಲ್ಲಿ ಸಾರ್ವಜನಿಕರ ಅಭಿಪ್ರಾಯಕ್ಕೆ ಬಿಡಲಾಗಿತ್ತು. ಈ ವರ್ಷದ ಜನವರಿ 28ಕ್ಕೆ ಅಭಿಪ್ರಾಯ ಸಲ್ಲಿಸಲು ಕೊನೆಯ ದಿನವಾಗಿತ್ತು” ಎಂದಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ: ಹಾಲಿ ಬಿಜೆಪಿ ಸಂಸದರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...