Homeಮುಖಪುಟಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ ಹೆಸರುಗಳನ್ನು ತೆಗೆದುಹಾಕಿದೆ.

ತಮಿಳುನಾಡಿನಲ್ಲಿ ಕೈಬಿಡಲಾದ 97 ಲಕ್ಷ ಹೆಸರುಗಳಲ್ಲಿ 66.4 ಲಕ್ಷ ಜನರು ತಮ್ಮ ವಾಸಸ್ಥಳಗಳನ್ನು ಬದಲಾಯಿಸಿದ್ದಾರೆ, 26.9 ಲಕ್ಷ ಜನರು ಸಾವನ್ನಪ್ಪಿದ್ದಾರೆ ಮತ್ತು 3.9 ಲಕ್ಷ ಜನರ ಹೆಸರುಗಳು ಒಂದಕ್ಕಿಂತ ಹೆಚ್ಚು ಬಾರಿ ದಾಖಲಾಗಿತ್ತು ಎಂದು ಚುನಾವಣಾ ಆಯೋಗ ಹೇಳಿದೆ.

ಹೆಸರು ತೆಗೆದು ಹಾಕಲಾದ ಜನರು ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಿ ಹೆಸರು ಸೇರ್ಪಡೆಗೆ ಜನವರಿ 18ರವರೆಗೆ ಅವಕಾಶ ನೀಡಲಾಗಿದೆ.

ಚುನಾವಣಾ ಆಯೋಗ ಪ್ರಕಟಿಸಿರುವ ತಮಿಳುನಾಡಿನ ಕರಡು ಮತದಾರರ ಪಟ್ಟಿಯಲ್ಲಿ 2.6 ಕೋಟಿ ಪುರುಷರು ಮತ್ತು 2.7 ಕೋಟಿ ಮಹಿಳಾ ಮತದಾರರಿದ್ದಾರೆ ಎಂದು ವರದಿಗಳು ಹೇಳಿವೆ.

ಚೆನ್ನೈ ನಗರದ ಸುಮಾರು 14.2 ಲಕ್ಷ ಮತದಾರರ ಹೆಸರುಗಳನ್ನು ಕರಡು ಪಟ್ಟಿಯಿಂದ ತೆಗೆದುಹಾಕಲಾಗಿದ್ದು, ಇದರಿಂದ ಅತಿ ಹೆಚ್ಚು , ಅಂದರೆ ಶೇಕಡ 35ರಷ್ಟು ಮತದಾರರ ಪ್ರಮಾಣ ಕಡಿಮೆಯಾಗಿದೆ ವರದಿಗಳು ವಿವರಿಸಿವೆ.

ಎಸ್‌ಐಆರ್‌ ಬಳಿಕ ಗುಜರಾತ್‌ನ ಕರಡು ಪಟ್ಟಿಯಲ್ಲಿದ್ದ ಮತದಾರರ ಸಂಖ್ಯೆ 5 ಕೋಟಿಯಿಂದ 4.3 ಕೋಟಿಗೆ ಇಳಿದಿದೆ.

ತೆಗೆದು ಹಾಕಲಾದ ಒಟ್ಟು 73.7 ಲಕ್ಷ ಹೆಸರುಗಳಲ್ಲಿ 51.8 ಲಕ್ಷ ಜನರು ತಮ್ಮ ವಾಸಸ್ಥಳಗಳನ್ನು ಬದಲಾಯಿಸಿದ್ದಾರೆ. 18 ಲಕ್ಷ ಜನರು ಸಾವನ್ನಪ್ಪಿದ್ದಾರೆ ಮತ್ತು 3.8 ಲಕ್ಷ ಜನರ ಹೆಸರುಗಳು ಒಂದಕ್ಕಿಂತ ಹೆಚ್ಚು ಬಾರಿ ಇತ್ತು ಎಂದು ಚುನಾವಣಾ ಆಯೋಗ ಹೇಳಿದೆ.

ತಮಿಳುನಾಡು ಮತ್ತು ಗುಜರಾತ್‌ನಲ್ಲಿ ಪರಿಷ್ಕೃತ ಎಣಿಕೆ ಅವಧಿ ಡಿಸೆಂಬರ್ 14 ರಂದು ಕೊನೆಗೊಂಡಿತ್ತು.

2026ರ ಮೊದಲಾರ್ಧದಲ್ಲಿ ತಮಿಳುನಾಡು ಮತ್ತು 2027ರ ಕೊನೆಯಲ್ಲಿ ಗುಜರಾತ್ ವಿಧಾನಸಭಾ ಚುನಾವಣೆಗಳು ನಡೆಯುವ ನಿರೀಕ್ಷೆಯಿದೆ.

ಎಸ್‌ಐಆರ್‌ ಬಳಿಕ, ಮಂಗಳವಾರ ಚುನಾವಣಾ ಆಯೋಗವು ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. 58 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ.

ತಮಿಳುನಾಡು, ಗುಜರಾತ್ ಮತ್ತು ಪಶ್ಚಿಮ ಬಂಗಾಳದ ಜೊತೆಗೆ, ಇತರ ಒಂಬತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಯುತ್ತಿದೆ.

ನವೆಂಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಗೆ ಮುನ್ನ ಪರಿಷ್ಕರಣೆ ಪೂರ್ಣಗೊಂಡ ಬಿಹಾರದಲ್ಲಿ, ಕನಿಷ್ಠ 47 ಲಕ್ಷ ಮತದಾರರನ್ನು ಅಂತಿಮ ಮತದಾರರ ಪಟ್ಟಿಯಿಂದ ಹೊರಗಿಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...