Homeಮುಖಪುಟದ್ರಾವಿಡಮೂಲದ ಕನ್ನಡವನ್ನು ಬೆನ್ನತ್ತಿ...

ದ್ರಾವಿಡಮೂಲದ ಕನ್ನಡವನ್ನು ಬೆನ್ನತ್ತಿ…

- Advertisement -
- Advertisement -

| ಡಾ. ಸರ್ಜಾಶಂಕರ ಹರಳಿಮಠ |

ದ್ರಾವಿಡಶೋಧದ ನೆಲೆಯ ಕನ್ನಡ ಅಸ್ಮಿತೆಯ ಮುಖ್ಯ ಚಹರೆಯೆಂದರೆ ಸ್ವವಿಮರ್ಶೆಯ ಗುಣ. ಇದು ಇಂಗ್ಲಿಷನ್ನೋ ಅಥವಾ ನೆರೆಯ ಭಾಷೆಯನ್ನೋ ಕನ್ನಡದ ವೈರಿಭಾಷೆಯೆಂದು ಪರಿಗಣಿಸುವುದಿಲ್ಲ. ಸಂಸ್ಕೃತವನ್ನು ಕನ್ನಡಕ್ಕೆ ಕಂಟಕ ತರುತ್ತಿದೆ ಎಂದು ಭಾವಿಸಿದರೂ ಅಲ್ಲಿ ಮುಖ್ಯವಾಗಿರುವುದು ಭಾಷೆಯಾಗಿ ಸಂಸ್ಕೃತಕ್ಕಿಂತಲೂ ಸಂಸ್ಕೃತದ ಮೂಲಕ ತಮ್ಮ ಶ್ರೇಷ್ಠತೆಯನ್ನು ಪ್ರತಿಷ್ಟಾಪಿಸಲು ಬಯಸುವ ಸಾಮಾಜಿಕ ವರ್ಗ.

ಭಾರತದಲ್ಲಿ ಬ್ರಿಟಿಷ್ ಅಧಿಕಾರಿಗಳು ದಕ್ಷಿಣ ಭಾರತದ ಭಾಷೆಗಳ ಮೂಲವನ್ನು ಅರಿಯಲು ಸಂಶೋಧನೆಗೆ ತೊಡಗಲು ಭಾಷಾ ಸಂಬಂಧಿ ಆಸಕ್ತಿ ಮತ್ತು ಸ್ಥಳೀಯ ಭಾಷೆಗಳನ್ನು ಅರ್ಥಮಾಡಿಕೊಳ್ಳುವುದು ಪ್ರಮುಖ ಪ್ರೇರಣೆಯಾಗಿದ್ದವು. ಆದರೆ ಈ ಸಂಶೋಧಕರು ಹೊರಗೆಡಹಿದ ಫಲಿತಗಳು ಮಾತ್ರ ಭಾರತದ ಸಾಮಾಜಿಕ ವಲಯದಲ್ಲಿ ಸಂಚಲನೆಗೆ ಕಾರಣವಾಯಿತು. ಪುರೋಹಿತಶಾಹಿ ವರ್ಗದವರಿಗೆ ಹೆಚ್ಚಿನ ಪ್ರಮಾಣದಲ್ಲಿ ಸಿಗುತ್ತಿದ್ದ, ಬಹುಸಂಖ್ಯಾತ ತಳವರ್ಗದವರಿಗೆ ಅಲಭ್ಯವಾಗಿದ್ದ ಶಿಕ್ಷಣ ಸೌಲಭ್ಯವೇ ಕಾರಣವಾಗಿ ಸಮಾಜದಲ್ಲಿ ಜಾತಿ ತಾರತಮ್ಯ, ಅವಮಾನ, ಆರ್ಥಿಕ ಅಸಮಾನತೆಗಳಿಗೆ ಕಾರಣವಾಗಿತ್ತು. ಸಂಸ್ಕೃತ ಪುರೋಹಿತಶಾಹಿ ವರ್ಗದ ಭಾಷೆಯಾಗಿದ್ದು ಈ ಭಾಷೆಯನ್ನು ಕಲಿಯಲು ಬೇರೆಯವರಿಗೆ ನಿರ್ಬಂಧವಿತ್ತು. ಪರಿಣಾಮವಾಗಿ ಭಾರತೀಯ ಬಹುಸಂಖ್ಯಾತ ತಳವರ್ಗದಲ್ಲಿ ಪುರೋಹಿತಶಾಹಿ ಮತ್ತು ಸಂಸ್ಕೃತದ ಮೇಲಿನ ಸಿಟ್ಟು ಬೇರ್ಪಡಿಸಲಾಗದಂತಿತ್ತು. ಆದರೂ ಕನ್ನಡದ ಮೂಲಭಾಷೆ ಸಂಸ್ಕೃತ ಎನ್ನುವ ಪ್ರಚಲಿತದಲ್ಲಿದ್ದ ನಂಬಿಕೆಯ ಹಿನ್ನೆಲೆಯಲ್ಲಿ ಆ ಸಿಟ್ಟು ವ್ಯಕ್ತವಾಗುತ್ತಿರಲಿಲ್ಲ. ಯಾವಾಗ ಕನ್ನಡ ಸಂಸ್ಕೃತದಿಂದ ಟಿಸಿಲೊಡೆದ ಭಾಷೆ ಅಲ್ಲ, ಇದು ದ್ರಾವಿಡಭಾಷಾ ಕುಟುಂಬದಿಂದ ಬಂದ ಭಾಷೆ ಎನ್ನುವ ಸತ್ಯ ಅನಾವರಣವಾಯಿತೋ ಅದು ತಳವರ್ಗದವರಲ್ಲಿ ಸ್ವಾಭಿಮಾನದ ಸಂಗತಿಯಾಗಿ ಹೊರಹೊಮ್ಮತೊಡಗಿತು. ಅಂದರೆ ಕನ್ನಡವನ್ನು ಸಂಸ್ಕೃತದಿಂದ ಬೇರ್ಪಡಿಸಿ, ದ್ರಾವಿಡ ನೆಲೆಯಿಂದ ನೋಡುವುದು ಭಾಷಿಕ ಕಾರಣಕ್ಕಿಂತ ಸಾಮಾಜಿಕ ಕಾರಣಕ್ಕಾಗಿ ಮುನ್ನೆಲೆಗೆ ಬಂದಿತು. ಈ ಅಂಶಗಳು ದ್ರಾವಿಡಮೂಲದ ಕನ್ನಡವನ್ನು ಪುನರೂಪಿಸುವ ಪ್ರಯತ್ನದ ಹಿಂದೆಯೂ ದಟ್ಟವಾಗಿರುವುದನ್ನು ಗುರುತಿಸಬಹುದು.

‘ದ್ರಾವಿಡ’ ಎಂಬ ಪದವು ದೇಶವಾಚಕವಾಗಿ, ಜನಾಂಗವಾಚಕವಾಗಿ ಸಾಮಾನ್ಯವಾಗಿ ರೂಢಿಯಲ್ಲಿದೆ. ದ್ರಾವಿಡಭಾಷೆ ಎಂದಾಗ ಅದು ಒಂದು ಭಾಷಾವರ್ಗವನ್ನು ಹೆಸರಿಸುತ್ತದೆ. ಸಂಸ್ಕೃತ ವಿದ್ವಾಂಸರ ಪ್ರಕಾರ ದ್ರಾವಿಡ ಎಂಬುದು ದಕ್ಷಿಣ ಭಾರತದ ಒಂದು ಭೂಭಾಗವೇ ಆಗಿದೆ. ಸಂಸ್ಕೃತದ ಮಹಾವಿದ್ವಾಂಸನಾದ ಫೆಡ್ರಿಕ್ ಮ್ಯಾಕ್ಸ್ ಮುಲ್ಲರ್ ಮೊತ್ತಮೊದಲ ಬಾರಿಗೆ ಹತ್ತೊಂಬತ್ತನೆಯ ಶತಮಾನದ ದಶಕದಲ್ಲಿ ದ್ರಾವಿಡ ಭಾಷೆಗಳನ್ನು ವಿಭಾಗಿಸಿದ. ಅಲ್ಲಿಂದ ಮುಂದೆ ‘ದ್ರಾವಿಡ’ ಎಂಬುದು ಒಂದು ಭಾಷಿಕ ಪರಿಕಲ್ಪನೆಯಾಗಿ ಭಾರತದಲ್ಲಿ ನಿರ್ದಿಷ್ಟವಾದ ಒಂದು ‘ಭಾಷಾ ಪರಿವಾರ’ ಎಂಬರ್ಥದಲ್ಲಿ ಪ್ರಕಟಗೊಂಡಿತು ಸಾಮಾನ್ಯವಾಗಿ ದಕ್ಷಿಣ ಭಾರತವನ್ನು ದೃಷ್ಟಿಯಲ್ಲಿರಿಸಿಕೊಂಡು ಅದನ್ನು ದ್ರಾವಿಡ ನಾಡೆಂದು, ಇಲ್ಲಿ ವಾಸ ಮಾಡುವ ಜನರನ್ನು ದ್ರಾವಿಡರು ಎಂದು ಗುರುತಿಸುವುದಿದೆ. ಇನ್ನೂ ನಿರ್ದಿಷ್ಟವಾಗಿ ದ್ರಾವಿಡ ಪದವನ್ನು ವ್ಯಾಪಕವಾಗಿ ‘ತಮಿಳ’ ಪದಕ್ಕೆ ಪರ್ಯಾಯವಾಗಿ ಬಳಸಲಾಗಿದೆ.

ಶಂಬಾ ಅವರು ಪಾಶ್ಚಾತ್ಯ ಮಾನವಶಾಸ್ತ್ರಜ್ಞರು ಮತ್ತು ದೇಶಿ ವಿದ್ವಾಂಸರ ‘ದ್ರಾವಿಡ’ ಅಧ್ಯಯನಗಳನ್ನು ಆಧರಿಸಿ, ‘ದ್ರಾವಿಡ’ ಪದಕ್ಕಿರುವ ಅರ್ಥವ್ಯಾಪ್ತಿಯನ್ನು ಚರ್ಚಿಸುತ್ತಾರೆ. ‘ದ್ರಾವಿಡ’ ಪ್ರಯೋಗ ವೈದಿಕ ವಾಙ್ಮಯದಲ್ಲಿ ‘ದಸ್ಯು’ಗಳನ್ನು ನಿರ್ದೇಶಿಸುವ ಪದ. ಆರ್ಯರೊಂದಿಗೆ ಹೋರಾಡಿದ ದಸ್ಯುಗಳೇ ದ್ರಾವಿಡರಾಗಿದ್ದು, ದ್ರಾವಿಡ ಮೂಲದ ‘ಬ್ರಾಹೂಯಿ’ ಭಾಷೆ ಇಂದಿಗೂ ಬಲೂಚಿಸ್ಥಾನದ ಪರಿಸರದಲ್ಲಿರುವುದು, ಸಿಂಧು ಸಂಸ್ಕೃತಿಯು ದ್ರಾವಿಡರ ಅಸ್ತಿತ್ವಕ್ಕೆ ಪ್ರಬಲ ಪುರಾವೆಯೆನ್ನುವುದು ಶಂಬಾ ಅವರ ವಾದ. ಇಂದಿನ ತಮಿಳರು ಮತ್ತು ಕನ್ನಡಿಗರು ಮೂಲ ದ್ರಾವಿಡ ಪಂಗಡಕ್ಕೆ ಸೇರಿದವರೆನ್ನುವುದನ್ನು ಹಳಗನ್ನಡ ಮತ್ತು ತಮಿಳು ಭಾಷೆಗಳೆರಡು ಒಡೆಯುವ ಪೂರ್ವದಲ್ಲಿದ್ದ ಏಕರೂಪ ‘ಕಂದಮಿಳ’ ಭಾಷೆ. ಕಂದಮಿಳ ಭಾಷೆಯನ್ನಾಡುವವರೇ ‘ಕಂದಮಿಳರು’, ದ್ರಾವಿಡ ಸಂಸ್ಕøತಿಯ ಮೂಲಿಗರಾದ ‘ಕಂದಮಿಳರು’ ಕ್ರಿಸ್ತಪೂರ್ವ ಸು.2000 ವರ್ಷಗಳ ಹಿಂದೆ ನರ್ಮದೆಯ ಪರಿಸರದಲ್ಲಿ ಅಂದರೆ ಇಂದಿನ ಗುಜರಾಥ (ಲಾಟ), ಬಂಗಾಲ, ಮಹಾರಾಷ್ಟ್ರದಲ್ಲಿ ನೆಲೆಸಿದ್ದರು ಎಂದು ಶಂಬಾ ಅವರು ನಿರ್ಣಯಕ್ಕೆ ಬರುತ್ತಾರೆ.

ದ್ರಾವಿಡಶೋಧದ ನೆಲೆಯಲ್ಲಿ ಕನ್ನಡ ಅಸ್ಮಿತೆಯನ್ನು ಕಟ್ಟಿಕೊಳ್ಳುವ ಪ್ರಯತ್ನದ ಹಿಂದಿನ ಪ್ರೇರಣೆಗಳಿಗೆ ಹಲವು ಆಯಾಮಗಳಿವೆ. ತಿಳಿವಳಿಕೆಯ ಕೊರತೆಯಿಂದ ಆಗಿರಬಹುದಾದ ಸಂಸ್ಕೃತವೇ ಕನ್ನಡದ ಮೂಲ ಎಂಬ ಸಮಾಜದಲ್ಲಿದ್ದ ನಂಬಿಕೆಯು ಸಂಶೋಧನೆಗಳು ನಡೆದು ಸತ್ಯ ತಿಳಿದ ನಂತರ ಸ್ವಲ್ಪಮಟ್ಟಿಗೆ ಬದಲಾಯಿತು. ಆದರೆ ಸಂಸ್ಕೃತವೇ ಕನ್ನಡದ ಮೂಲ ಎಂಬ ವಾದವನ್ನು ಒಂದು ವರ್ಗ ಮುಂದುವರೆಸಿದ್ದು ಇದರ ಹಿಂದೆ ನಿರ್ದಿಷ್ಠ ಉದ್ದೇಶ ಇರುವುದನ್ನು ಹೇಳಿತು. ಈ ಉದ್ದೇಶ ಭಾಷಾಮೂಲದ್ದಾಗಿರದೆ ವರ್ಗ ಹಿತಾಸಕ್ತಿಯದ್ದಾಗಿತ್ತು.

ಕನ್ನಡ ಅಸ್ಮಿತೆಯನ್ನು ದ್ರಾವಿಡ ನೆಲೆಯಿಂದ ನೋಡುವ ಚಿಂತನಾಕ್ರಮದ ಹಿಂದೆ ಭಾಷಿಕ ಕಾರಣವೂ ಇದೆ. ಈ ಭಾಷಿಕ ಕಾರಣವೂ ಸಾಮಾಜಿಕ ನೆಲೆಯಲ್ಲಿ ಅಂತರ್ಗತವಾಗಿದೆ. ಬರಹದ ಭಾಷೆ ಸಂಸ್ಕೃತದಿಂದ ಪ್ರಭಾವಿತವಾಗಿದ್ದು ಆಡುಭಾಷೆಗಿಂತ ಭಿನ್ನವಾಗಿದೆ. ಬರಹದ ಭಾಷೆಯ ಎದುರು ಆಡುಭಾಷೆ ಕೀಳರಿಮೆಯನ್ನು ಅನುಭವಿಸುತ್ತಿದ್ದು, ಮುಖ್ಯವಾಗಿ ತಳವರ್ಗದವರಿಗೆ ಇದು ಬಳಕೆಯ ಸಂದರ್ಭದಲ್ಲಿ ತೊಡಕಾಗಿ ಪರಿಣಮಿಸುತ್ತ್ತಿದೆ. ಆಡುಭಾಷೆಯ ಕನ್ನಡ ಹೆಚ್ಚು ಸಂಸ್ಕೃತ ಪದಗಳಿಲ್ಲದ ಮೂಲ ಕನ್ನಡ ಭಾಷೆಗೆ ಹತ್ತಿರವಾಗಿದೆ. ಇದು ತಳವರ್ಗದವರಿಗೆ ಬಳಸಲು ಸುಲಭವಾಗಿದೆ. ಆಡುಭಾಷೆಯ ಕನ್ನಡವನ್ನೇ ಬರಹದಲ್ಲಿಯೂ ಬಳಸುವಂತೆ ದ್ರಾವಿಡ ನೆಲೆಯ ಕನ್ನಡ ಅಸ್ಮಿತೆ ಒತ್ತಾಯಿಸುತ್ತದೆ. ಈ ಒತ್ತಾಯದ ಹಿಂದೆ ಎರಡು ಉದ್ದೇಶಗಳಿವೆ. ಮೊದಲನೆಯದು ಸಂಸ್ಕೃತದ ವಿರೋಧ. ಒಂದು ಭಾಷೆಯ ಹೇರಿಕೆಯ ವಿರೋಧ, ಆ ಸಂಸ್ಕೃತಿಯ ವಿರೋಧವೂ ಆಗಿಬಿಡುತ್ತದೆ. ಎರಡನೆಯದು ಸಂಸ್ಕೃತದ ಹಿಡಿತದಿಂದ ಹೊರಬರುವ ಮತ್ತು ತಳವರ್ಗದ ಕನ್ನಡ ಭಾಷೆಯನ್ನು ಮೇಲ್ಚಲನೆಗೊಳಪಡಿಸುವ ಉದ್ದೇಶ.

ದ್ರಾವಿಡಶೋಧದ ನೆಲೆಯ ಕನ್ನಡ ಅಸ್ಮಿತೆಯ ಮುಖ್ಯ ಚಹರೆಯೆಂದರೆ ಸ್ವವಿಮರ್ಶೆಯ ಗುಣ. ಇದು ಇಂಗ್ಲಿಶನ್ನೋ ಅಥವಾ ನೆರೆಯ ಭಾಷೆಯನ್ನೋ ಕನ್ನಡದ ವೈರಿಭಾಷೆಯೆಂದು ಪರಿಗಣಿಸುವುದಿಲ್ಲ. ಸಂಸ್ಕೃತವನ್ನು ಕನ್ನಡಕ್ಕೆ ಕಂಟಕ ತರುತ್ತಿದೆ ಎಂದು ಭಾವಿಸಿದರೂ ಅಲ್ಲಿ ಮುಖ್ಯವಾಗಿರುವುದು ಭಾಷೆಯಾಗಿ ಸಂಸ್ಕೃತಕ್ಕಿಂತಲೂ ಸಂಸ್ಕೃತದ ಮೂಲಕ ತಮ್ಮ ಶ್ರೇಷ್ಠತೆಯನ್ನು ಪ್ರತಿಷ್ಟಾಪಿಸಲು ಬಯಸುವ ಸಾಮಾಜಿಕ ವರ್ಗ. ದ್ರಾವಿಡಶೋಧದ ನೆಲೆ ಕನ್ನಡದೊಳಗೆ ಪರಿವರ್ತನೆ ಮತ್ತು ಸುಧಾರಣೆಯ ಮೂಲಕ ಕನ್ನಡವನ್ನು ಉಳಿಸಲು ಮತ್ತು ಬೆಳೆಸಲು ಪ್ರಯತ್ನಿಸುತ್ತದೆ. ಇದು ಕನ್ನಡದೊಳಗೇ ಇರುವ ವಿವಿಧ ಸಾಮಾಜಿಕ ವರ್ಗಗಳ ಹಿತಾಸಕ್ತಿಗಳು ಕನ್ನಡಕ್ಕೆ ಉಂಟು ಮಾಡುತ್ತಿರುವ ತೊಡಕುಗಳನ್ನು ಪ್ರಧಾನವಾಗಿ ಗಮನಿಸುತ್ತದೆ.

ಕನ್ನಡದಲ್ಲಿ ದ್ರಾವಿಡಶೋಧದ ನೆಲೆಯಲ್ಲಿ ಕನ್ನಡ ಅಸ್ಮಿತೆಯನ್ನು ಕಟ್ಟಿಕೊಡುತ್ತಿರುವವರಲ್ಲಿ ಡಿ.ಎನ್.ಶಂಕರಭಟ್ಟರು ಮತ್ತು ಕೆ.ವಿ.ನಾರಾಯಣ ಅವರು ಪ್ರಮುಖರು. ಡಿ.ಎನ್.ಶಂಕರಭಟ್ಟರು ದ್ರಾವಿಡಮೂಲದ ಕನ್ನಡವನ್ನು ಪುನರ್ ರೂಪಿಸುವ ಪ್ರಯತ್ನದಲ್ಲಿದ್ದಾರೆ. ಕೆ.ವಿ.ನಾರಾಯಣ ಅವರು ಜಾಗತಿಕ ಪರಿವರ್ತನೆಗಳು, ಆಧುನಿಕ ತಂತ್ರಜ್ಞಾನ, ಸಾಮಾಜಿಕ ಚಲನೆಗಳು, ವ್ಶೆಜ್ಞಾನಿಕವಾಗಿ ಕಂಡುಕೊಂಡ ಕಲಿಕೆಯ ಸಾಮಥ್ರ್ಯ, ಹೀಗೆ ಎಲ್ಲ ಆಯಾಮಗಳಿಂದಲೂ ಕನ್ನಡಕ್ಕೆ ಆಗುವ ಪರಿಣಾಮಗಳನ್ನು ಮುಕ್ತವಾಗಿ ಚಿಂತಿಸಿದರೂ ಈ ಚಿಂತನೆಗಳು ದ್ರಾವಿಡ ಮೂಲದಿಂದ ಹೊರಡುತ್ತವೆ ಎನ್ನುವುದು ಮುಖ್ಯವಾದ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...