Homeಮುಖಪುಟನಾಡಗೀತೆ ವಿವಾದ | ತಮಿಳುನಾಡು ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ಕೇಂದ್ರಕ್ಕೆ ಸ್ಟಾಲಿನ್ ಆಗ್ರಹ

ನಾಡಗೀತೆ ವಿವಾದ | ತಮಿಳುನಾಡು ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ಕೇಂದ್ರಕ್ಕೆ ಸ್ಟಾಲಿನ್ ಆಗ್ರಹ

- Advertisement -
- Advertisement -

ತಮಿಳುನಾಡು ರಾಜ್ಯಪಾಲ ಆರ್‌ಎನ್‌ ರವಿ ಮುಖ್ಯ ಅಥಿಯಾಗಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನಾಡಗೀತೆ (ತಮಿಳ್‌ ತಾಯಿ ವಝುತ್ತು) ಹಾಡುವಾಗ, ಅದರಲ್ಲಿನ ‘ದ್ರಾವಿಡ’ ಪದವಿರುವ ವಾಕ್ಯವನ್ನು ಕೈ ಬಿಟ್ಟಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಶುಕ್ರವಾರ (ಅ.18) ಚೆನ್ನೈನ ದೂರದರ್ಶನ ಕೇಂದ್ರದಲ್ಲಿ ‘ಹಿಂದಿ ಮಾಸಾಚಾರಣೆಯ ಸಮಾರೋಪ ಕಾರ್ಯಕ್ರಮ’ದಲ್ಲಿ ತಮಿಳು ನಾಡಗೀತೆ ಹಾಡುವಾಗ, ಅದರಲ್ಲಿನ ದ್ರಾವಿಡ ನೆಲದ ಹಿರಿಮೆಯನ್ನು ಉಲ್ಲೇಖಿಸುವ ‘ತೆಕ್ಕನಮುಮುಂ ಅಧಿರ್‌ಸಿರಂಧ ದ್ರಾವಿಡ ನಾಲ್ ತಿರುನಾಡುಂ” ಎಂಬ ವಾಕ್ಯವನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗಿದೆ ಎಂದು ಆರೋಪಿಸಲಾಗಿದೆ.

ತಮಿಳುನಾಡು ಸರ್ಕಾರ ಮತ್ತು ಅಲ್ಲಿನ ಜನರ ವಿರುದ್ದ ಭಾವನೆ ಹೊಂದಿರುವ ರಾಜ್ಯಪಾಲರು ಬೇಕಂತಲೇ ದ್ರಾವಿಡ ಪದ ತೆಗೆಸಿದ್ದಾರೆ ಎಂದು ಅನೇಕರು ಆರೋಪಿಸಿದ್ದಾರೆ. ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಿ ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

“ರಾಜ್ಯಪಾಲ ರವಿ ಅವರು ರಾಷ್ಟ್ರಗೀತೆಯಿಂದ ಒಂದು ವಾಕ್ಯ ಅಥವಾ ಪದವನ್ನು ಬಿಟ್ಟು ಬಿಡುವ ಧೈರ್ಯ ಮಾಡುತ್ತಾರೆಯೇ? ಎಂದು ಪ್ರಶ್ನಿಸಿರುವ ಸಿಎಂ ಸ್ಟಾಲಿನ್, ನಾಡ ಗೀತೆಯಿಂದ ‘ದ್ರಾವಿಡ’ ಪದವಿರುವ ಸಾಲನ್ನು ಕೈ ಬಿಟ್ಟಿರುವುದು ತಮಿಳುನಾಡು ಮತ್ತು ತಮಿಳು ಭಾಷೆಗೆ ಮಾಡಿದ ಅವಮಾನ. ರಾಜ್ಯಪಾಲ ರವಿ ಅವರಿಗೆ ‘ದ್ರಾವಿಡ ಅಲರ್ಜಿ’ ಇದೆ” ಎಂದಿದ್ದಾರೆ.

“ದ್ರಾವಿಡ’ ಪದವನ್ನು ಕೈ ಬಿಟ್ಟು ತಮಿಳು ನಾಡಗೀತೆ ಹಾಡುವುದು ತಮಿಳುನಾಡಿನ ಕಾನೂನಿಗೆ ವಿರುದ್ಧವಾಗಿದೆ. ಕಾನೂನಿನ ಪ್ರಕಾರ ನಡೆಯದೆ, ತನ್ನ ಇಚ್ಛೆಗೆ ತಕ್ಕಂತೆ ವರ್ತಿಸುವ ವ್ಯಕ್ತಿಯು ರಾಜ್ಯಪಾಲ ಹುದ್ದೆಯನ್ನು ಅಲಂಕರಿಸಲು ಯೋಗ್ಯನಲ್ಲ. ಭಾರತವನ್ನು ಆಚರಿಸುವ ನೆಪದಲ್ಲಿ, ರಾಜ್ಯಪಾಲರು ದೇಶದ ಏಕತೆ ಮತ್ತು ಈ ನೆಲದಲ್ಲಿ ವಾಸಿಸುವ ವಿವಿಧ ಜನಾಂಗದ ಜನರನ್ನು ಅವಮಾನಿಸುತ್ತಿದ್ದಾರೆ” ಎಂದು ಸ್ಟಾಲಿನ್ ಕಿಡಿಕಾರಿದ್ದಾರೆ.

ಎಲ್ಲೆಡೆಯಿಂದ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಪ್ರಕಟಣೆ ಹೊರಡಿಸಿರುವ ರಾಜ್ಯಪಾಲ ಕಚೇರಿ “ರಾಜ್ಯಪಾಲರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರಷ್ಟೆ, ನಾಡಗೀತೆಯಿಂದ ಒಂದು ಸಾಲು ಕೈಬಿಟ್ಟಿರುವ ವಿಷಯದಲ್ಲಿ ಅವರ ಪಾತ್ರವೇನು ಇಲ್ಲ. ರಾಜ್ಯಪಾಲರು ತಮಿಳುನಾಡು ಮತ್ತು ಇಲ್ಲಿನ ಜನರ ಮೇಲೆ ಉನ್ನತ ಗೌರವನ್ನು ಹೊಂದಿದ್ದಾರೆ. ಅದನ್ನು ಉಳಿಸಿಕೊಳ್ಳಲಿದ್ದಾರೆ” ಎಂದಿದೆ.

ಸಿಎಂ ಸ್ಟಾಲಿನ್ ವಿರುದ್ದ ರಾಜ್ಯಪಾಲ ರವಿ ಕಿಡಿಕಾರಿದ್ದು, ಅವರನ್ನು ‘ಜನಾಂಗೀಯ ವಾದಿ’ ಎಂದು ಕರೆದಿದ್ದಾರೆ. “ನಾನು ಪ್ರತಿ ಕಾರ್ಯಕ್ರಮಗಳಲ್ಲಿ ತಮಿಳು ನಾಡಗೀತೆಯನ್ನು ಸಂಪೂರ್ಣವಾಗಿ ಹಾಡಿಸುತ್ತೇನೆ. ದೂರದರ್ಶನದ ಕಾರ್ಯಕ್ರಮದಲ್ಲಿ ‘ದ್ರಾವಿಡ’ ಪದ ಕೈ ಬಿಡಲಾಗಿದೆ ಎಂದು ಸಿಎಂ ಸುಳ್ಳಾರೋಪ ಮಾಡಿದ್ದಾರೆ. ನನಗೆ ತಮಿಳು ನಾಡಗೀತೆಯ ಬಗ್ಗೆ ಗೌರವ ಇದೆ” ಎಂದಿದ್ದಾರೆ.

ಹಿಂದಿ ಮಾಸಾಚರಣೆಗೆ ಸ್ಟಾಲಿನ್ ಖಂಡನೆ 

ಚೆನ್ನೈ ದೂರದರ್ಶನದ ಸುವರ್ಣ ಮಹೋತ್ಸವದ ಜೊತೆ ಹಿಂದಿ ಮಾಸಾಚರಣೆ ಸಮಾರೋಪ ಸಮಾರಂಭ ಆಯೋಜಿಸಿದ್ದನ್ನು ಕೂಡ ಸಿಎಂ ಎಂ.ಕೆ ಸ್ಟಾಲಿನ್ ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಪ್ರಧಾನಿ ಮೋದಿಯವರಿಗೆ ಟ್ಯಾಗ್‌ ಮಾಡಿ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಸ್ಟಾಲಿನ್ “ಚೆನ್ನೈ ದೂರದರ್ಶನದ ಸುವರ್ಣ ಮಹೋತ್ಸವದ ಸಂಭ್ರಮಾಚರಣೆಯ ಜೊತೆಗೆ ಹಿಂದಿ ತಿಂಗಳ ಸಮಾರೋಪ ಸಮಾರಂಭ ಆಯೋಜಿಸಿದ್ದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.

ಮಾನ್ಯ ಪ್ರಧಾನಿಯವರೇ..ಭಾರತದ ಸಂವಿಧಾನವು ಯಾವುದೇ ಭಾಷೆಗೆ ರಾಷ್ಟ್ರೀಯ ಭಾಷಾ ಸ್ಥಾನಮಾನವನ್ನು ನೀಡಿಲ್ಲ. ಬಹುಭಾಷಾ ರಾಷ್ಟ್ರದಲ್ಲಿ, ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿ ಮಾಸವನ್ನು ಆಚರಿಸುವುದು ಇತರ ಭಾಷೆಗಳನ್ನು ಕೀಳಾಗಿ ಕಾಣುವ ಪ್ರಯತ್ನವಾಗಿದೆ.

ಆದ್ದರಿಂದ, ಹಿಂದಿಯೇತರ ರಾಜ್ಯಗಳಲ್ಲಿ ಇಂತಹ ಹಿಂದಿ ಆಧಾರಿತ ಕಾರ್ಯಕ್ರಮಗಳನ್ನು ನಡೆಸುವುದನ್ನು ನಿಲ್ಲಿಸಿ, ಬದಲಿಗೆ ಆಯಾ ರಾಜ್ಯಗಳಲ್ಲಿ ಸ್ಥಳೀಯ ಭಾಷಾ ತಿಂಗಳ ಆಚರಣೆಯನ್ನು ಪ್ರೋತ್ಸಾಹಿಸಬೇಕು ಎಂದು ನಾನು ಸಲಹೆ ನೀಡುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ : ಮಹಿಳೆಯರ ಅಕ್ರಮ ಬಂಧನ ಆರೋಪ : ಇಶಾ ಫೌಂಡೇಶನ್ ವಿರುದ್ದದ ಪ್ರಕರಣ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...