Homeಮುಖಪುಟನಾಡಗೀತೆ ವಿವಾದ | ತಮಿಳುನಾಡು ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ಕೇಂದ್ರಕ್ಕೆ ಸ್ಟಾಲಿನ್ ಆಗ್ರಹ

ನಾಡಗೀತೆ ವಿವಾದ | ತಮಿಳುನಾಡು ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ಕೇಂದ್ರಕ್ಕೆ ಸ್ಟಾಲಿನ್ ಆಗ್ರಹ

- Advertisement -
- Advertisement -

ತಮಿಳುನಾಡು ರಾಜ್ಯಪಾಲ ಆರ್‌ಎನ್‌ ರವಿ ಮುಖ್ಯ ಅಥಿಯಾಗಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನಾಡಗೀತೆ (ತಮಿಳ್‌ ತಾಯಿ ವಝುತ್ತು) ಹಾಡುವಾಗ, ಅದರಲ್ಲಿನ ‘ದ್ರಾವಿಡ’ ಪದವಿರುವ ವಾಕ್ಯವನ್ನು ಕೈ ಬಿಟ್ಟಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಶುಕ್ರವಾರ (ಅ.18) ಚೆನ್ನೈನ ದೂರದರ್ಶನ ಕೇಂದ್ರದಲ್ಲಿ ‘ಹಿಂದಿ ಮಾಸಾಚಾರಣೆಯ ಸಮಾರೋಪ ಕಾರ್ಯಕ್ರಮ’ದಲ್ಲಿ ತಮಿಳು ನಾಡಗೀತೆ ಹಾಡುವಾಗ, ಅದರಲ್ಲಿನ ದ್ರಾವಿಡ ನೆಲದ ಹಿರಿಮೆಯನ್ನು ಉಲ್ಲೇಖಿಸುವ ‘ತೆಕ್ಕನಮುಮುಂ ಅಧಿರ್‌ಸಿರಂಧ ದ್ರಾವಿಡ ನಾಲ್ ತಿರುನಾಡುಂ” ಎಂಬ ವಾಕ್ಯವನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗಿದೆ ಎಂದು ಆರೋಪಿಸಲಾಗಿದೆ.

ತಮಿಳುನಾಡು ಸರ್ಕಾರ ಮತ್ತು ಅಲ್ಲಿನ ಜನರ ವಿರುದ್ದ ಭಾವನೆ ಹೊಂದಿರುವ ರಾಜ್ಯಪಾಲರು ಬೇಕಂತಲೇ ದ್ರಾವಿಡ ಪದ ತೆಗೆಸಿದ್ದಾರೆ ಎಂದು ಅನೇಕರು ಆರೋಪಿಸಿದ್ದಾರೆ. ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಿ ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

“ರಾಜ್ಯಪಾಲ ರವಿ ಅವರು ರಾಷ್ಟ್ರಗೀತೆಯಿಂದ ಒಂದು ವಾಕ್ಯ ಅಥವಾ ಪದವನ್ನು ಬಿಟ್ಟು ಬಿಡುವ ಧೈರ್ಯ ಮಾಡುತ್ತಾರೆಯೇ? ಎಂದು ಪ್ರಶ್ನಿಸಿರುವ ಸಿಎಂ ಸ್ಟಾಲಿನ್, ನಾಡ ಗೀತೆಯಿಂದ ‘ದ್ರಾವಿಡ’ ಪದವಿರುವ ಸಾಲನ್ನು ಕೈ ಬಿಟ್ಟಿರುವುದು ತಮಿಳುನಾಡು ಮತ್ತು ತಮಿಳು ಭಾಷೆಗೆ ಮಾಡಿದ ಅವಮಾನ. ರಾಜ್ಯಪಾಲ ರವಿ ಅವರಿಗೆ ‘ದ್ರಾವಿಡ ಅಲರ್ಜಿ’ ಇದೆ” ಎಂದಿದ್ದಾರೆ.

“ದ್ರಾವಿಡ’ ಪದವನ್ನು ಕೈ ಬಿಟ್ಟು ತಮಿಳು ನಾಡಗೀತೆ ಹಾಡುವುದು ತಮಿಳುನಾಡಿನ ಕಾನೂನಿಗೆ ವಿರುದ್ಧವಾಗಿದೆ. ಕಾನೂನಿನ ಪ್ರಕಾರ ನಡೆಯದೆ, ತನ್ನ ಇಚ್ಛೆಗೆ ತಕ್ಕಂತೆ ವರ್ತಿಸುವ ವ್ಯಕ್ತಿಯು ರಾಜ್ಯಪಾಲ ಹುದ್ದೆಯನ್ನು ಅಲಂಕರಿಸಲು ಯೋಗ್ಯನಲ್ಲ. ಭಾರತವನ್ನು ಆಚರಿಸುವ ನೆಪದಲ್ಲಿ, ರಾಜ್ಯಪಾಲರು ದೇಶದ ಏಕತೆ ಮತ್ತು ಈ ನೆಲದಲ್ಲಿ ವಾಸಿಸುವ ವಿವಿಧ ಜನಾಂಗದ ಜನರನ್ನು ಅವಮಾನಿಸುತ್ತಿದ್ದಾರೆ” ಎಂದು ಸ್ಟಾಲಿನ್ ಕಿಡಿಕಾರಿದ್ದಾರೆ.

ಎಲ್ಲೆಡೆಯಿಂದ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಪ್ರಕಟಣೆ ಹೊರಡಿಸಿರುವ ರಾಜ್ಯಪಾಲ ಕಚೇರಿ “ರಾಜ್ಯಪಾಲರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರಷ್ಟೆ, ನಾಡಗೀತೆಯಿಂದ ಒಂದು ಸಾಲು ಕೈಬಿಟ್ಟಿರುವ ವಿಷಯದಲ್ಲಿ ಅವರ ಪಾತ್ರವೇನು ಇಲ್ಲ. ರಾಜ್ಯಪಾಲರು ತಮಿಳುನಾಡು ಮತ್ತು ಇಲ್ಲಿನ ಜನರ ಮೇಲೆ ಉನ್ನತ ಗೌರವನ್ನು ಹೊಂದಿದ್ದಾರೆ. ಅದನ್ನು ಉಳಿಸಿಕೊಳ್ಳಲಿದ್ದಾರೆ” ಎಂದಿದೆ.

ಸಿಎಂ ಸ್ಟಾಲಿನ್ ವಿರುದ್ದ ರಾಜ್ಯಪಾಲ ರವಿ ಕಿಡಿಕಾರಿದ್ದು, ಅವರನ್ನು ‘ಜನಾಂಗೀಯ ವಾದಿ’ ಎಂದು ಕರೆದಿದ್ದಾರೆ. “ನಾನು ಪ್ರತಿ ಕಾರ್ಯಕ್ರಮಗಳಲ್ಲಿ ತಮಿಳು ನಾಡಗೀತೆಯನ್ನು ಸಂಪೂರ್ಣವಾಗಿ ಹಾಡಿಸುತ್ತೇನೆ. ದೂರದರ್ಶನದ ಕಾರ್ಯಕ್ರಮದಲ್ಲಿ ‘ದ್ರಾವಿಡ’ ಪದ ಕೈ ಬಿಡಲಾಗಿದೆ ಎಂದು ಸಿಎಂ ಸುಳ್ಳಾರೋಪ ಮಾಡಿದ್ದಾರೆ. ನನಗೆ ತಮಿಳು ನಾಡಗೀತೆಯ ಬಗ್ಗೆ ಗೌರವ ಇದೆ” ಎಂದಿದ್ದಾರೆ.

ಹಿಂದಿ ಮಾಸಾಚರಣೆಗೆ ಸ್ಟಾಲಿನ್ ಖಂಡನೆ 

ಚೆನ್ನೈ ದೂರದರ್ಶನದ ಸುವರ್ಣ ಮಹೋತ್ಸವದ ಜೊತೆ ಹಿಂದಿ ಮಾಸಾಚರಣೆ ಸಮಾರೋಪ ಸಮಾರಂಭ ಆಯೋಜಿಸಿದ್ದನ್ನು ಕೂಡ ಸಿಎಂ ಎಂ.ಕೆ ಸ್ಟಾಲಿನ್ ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಪ್ರಧಾನಿ ಮೋದಿಯವರಿಗೆ ಟ್ಯಾಗ್‌ ಮಾಡಿ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಸ್ಟಾಲಿನ್ “ಚೆನ್ನೈ ದೂರದರ್ಶನದ ಸುವರ್ಣ ಮಹೋತ್ಸವದ ಸಂಭ್ರಮಾಚರಣೆಯ ಜೊತೆಗೆ ಹಿಂದಿ ತಿಂಗಳ ಸಮಾರೋಪ ಸಮಾರಂಭ ಆಯೋಜಿಸಿದ್ದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.

ಮಾನ್ಯ ಪ್ರಧಾನಿಯವರೇ..ಭಾರತದ ಸಂವಿಧಾನವು ಯಾವುದೇ ಭಾಷೆಗೆ ರಾಷ್ಟ್ರೀಯ ಭಾಷಾ ಸ್ಥಾನಮಾನವನ್ನು ನೀಡಿಲ್ಲ. ಬಹುಭಾಷಾ ರಾಷ್ಟ್ರದಲ್ಲಿ, ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿ ಮಾಸವನ್ನು ಆಚರಿಸುವುದು ಇತರ ಭಾಷೆಗಳನ್ನು ಕೀಳಾಗಿ ಕಾಣುವ ಪ್ರಯತ್ನವಾಗಿದೆ.

ಆದ್ದರಿಂದ, ಹಿಂದಿಯೇತರ ರಾಜ್ಯಗಳಲ್ಲಿ ಇಂತಹ ಹಿಂದಿ ಆಧಾರಿತ ಕಾರ್ಯಕ್ರಮಗಳನ್ನು ನಡೆಸುವುದನ್ನು ನಿಲ್ಲಿಸಿ, ಬದಲಿಗೆ ಆಯಾ ರಾಜ್ಯಗಳಲ್ಲಿ ಸ್ಥಳೀಯ ಭಾಷಾ ತಿಂಗಳ ಆಚರಣೆಯನ್ನು ಪ್ರೋತ್ಸಾಹಿಸಬೇಕು ಎಂದು ನಾನು ಸಲಹೆ ನೀಡುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ : ಮಹಿಳೆಯರ ಅಕ್ರಮ ಬಂಧನ ಆರೋಪ : ಇಶಾ ಫೌಂಡೇಶನ್ ವಿರುದ್ದದ ಪ್ರಕರಣ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...