Homeಮುಖಪುಟನಾಡಗೀತೆ ವಿವಾದ | ತಮಿಳುನಾಡು ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ಕೇಂದ್ರಕ್ಕೆ ಸ್ಟಾಲಿನ್ ಆಗ್ರಹ

ನಾಡಗೀತೆ ವಿವಾದ | ತಮಿಳುನಾಡು ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ಕೇಂದ್ರಕ್ಕೆ ಸ್ಟಾಲಿನ್ ಆಗ್ರಹ

- Advertisement -
- Advertisement -

ತಮಿಳುನಾಡು ರಾಜ್ಯಪಾಲ ಆರ್‌ಎನ್‌ ರವಿ ಮುಖ್ಯ ಅಥಿಯಾಗಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನಾಡಗೀತೆ (ತಮಿಳ್‌ ತಾಯಿ ವಝುತ್ತು) ಹಾಡುವಾಗ, ಅದರಲ್ಲಿನ ‘ದ್ರಾವಿಡ’ ಪದವಿರುವ ವಾಕ್ಯವನ್ನು ಕೈ ಬಿಟ್ಟಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಶುಕ್ರವಾರ (ಅ.18) ಚೆನ್ನೈನ ದೂರದರ್ಶನ ಕೇಂದ್ರದಲ್ಲಿ ‘ಹಿಂದಿ ಮಾಸಾಚಾರಣೆಯ ಸಮಾರೋಪ ಕಾರ್ಯಕ್ರಮ’ದಲ್ಲಿ ತಮಿಳು ನಾಡಗೀತೆ ಹಾಡುವಾಗ, ಅದರಲ್ಲಿನ ದ್ರಾವಿಡ ನೆಲದ ಹಿರಿಮೆಯನ್ನು ಉಲ್ಲೇಖಿಸುವ ‘ತೆಕ್ಕನಮುಮುಂ ಅಧಿರ್‌ಸಿರಂಧ ದ್ರಾವಿಡ ನಾಲ್ ತಿರುನಾಡುಂ” ಎಂಬ ವಾಕ್ಯವನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗಿದೆ ಎಂದು ಆರೋಪಿಸಲಾಗಿದೆ.

ತಮಿಳುನಾಡು ಸರ್ಕಾರ ಮತ್ತು ಅಲ್ಲಿನ ಜನರ ವಿರುದ್ದ ಭಾವನೆ ಹೊಂದಿರುವ ರಾಜ್ಯಪಾಲರು ಬೇಕಂತಲೇ ದ್ರಾವಿಡ ಪದ ತೆಗೆಸಿದ್ದಾರೆ ಎಂದು ಅನೇಕರು ಆರೋಪಿಸಿದ್ದಾರೆ. ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಿ ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

“ರಾಜ್ಯಪಾಲ ರವಿ ಅವರು ರಾಷ್ಟ್ರಗೀತೆಯಿಂದ ಒಂದು ವಾಕ್ಯ ಅಥವಾ ಪದವನ್ನು ಬಿಟ್ಟು ಬಿಡುವ ಧೈರ್ಯ ಮಾಡುತ್ತಾರೆಯೇ? ಎಂದು ಪ್ರಶ್ನಿಸಿರುವ ಸಿಎಂ ಸ್ಟಾಲಿನ್, ನಾಡ ಗೀತೆಯಿಂದ ‘ದ್ರಾವಿಡ’ ಪದವಿರುವ ಸಾಲನ್ನು ಕೈ ಬಿಟ್ಟಿರುವುದು ತಮಿಳುನಾಡು ಮತ್ತು ತಮಿಳು ಭಾಷೆಗೆ ಮಾಡಿದ ಅವಮಾನ. ರಾಜ್ಯಪಾಲ ರವಿ ಅವರಿಗೆ ‘ದ್ರಾವಿಡ ಅಲರ್ಜಿ’ ಇದೆ” ಎಂದಿದ್ದಾರೆ.

“ದ್ರಾವಿಡ’ ಪದವನ್ನು ಕೈ ಬಿಟ್ಟು ತಮಿಳು ನಾಡಗೀತೆ ಹಾಡುವುದು ತಮಿಳುನಾಡಿನ ಕಾನೂನಿಗೆ ವಿರುದ್ಧವಾಗಿದೆ. ಕಾನೂನಿನ ಪ್ರಕಾರ ನಡೆಯದೆ, ತನ್ನ ಇಚ್ಛೆಗೆ ತಕ್ಕಂತೆ ವರ್ತಿಸುವ ವ್ಯಕ್ತಿಯು ರಾಜ್ಯಪಾಲ ಹುದ್ದೆಯನ್ನು ಅಲಂಕರಿಸಲು ಯೋಗ್ಯನಲ್ಲ. ಭಾರತವನ್ನು ಆಚರಿಸುವ ನೆಪದಲ್ಲಿ, ರಾಜ್ಯಪಾಲರು ದೇಶದ ಏಕತೆ ಮತ್ತು ಈ ನೆಲದಲ್ಲಿ ವಾಸಿಸುವ ವಿವಿಧ ಜನಾಂಗದ ಜನರನ್ನು ಅವಮಾನಿಸುತ್ತಿದ್ದಾರೆ” ಎಂದು ಸ್ಟಾಲಿನ್ ಕಿಡಿಕಾರಿದ್ದಾರೆ.

ಎಲ್ಲೆಡೆಯಿಂದ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಪ್ರಕಟಣೆ ಹೊರಡಿಸಿರುವ ರಾಜ್ಯಪಾಲ ಕಚೇರಿ “ರಾಜ್ಯಪಾಲರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರಷ್ಟೆ, ನಾಡಗೀತೆಯಿಂದ ಒಂದು ಸಾಲು ಕೈಬಿಟ್ಟಿರುವ ವಿಷಯದಲ್ಲಿ ಅವರ ಪಾತ್ರವೇನು ಇಲ್ಲ. ರಾಜ್ಯಪಾಲರು ತಮಿಳುನಾಡು ಮತ್ತು ಇಲ್ಲಿನ ಜನರ ಮೇಲೆ ಉನ್ನತ ಗೌರವನ್ನು ಹೊಂದಿದ್ದಾರೆ. ಅದನ್ನು ಉಳಿಸಿಕೊಳ್ಳಲಿದ್ದಾರೆ” ಎಂದಿದೆ.

ಸಿಎಂ ಸ್ಟಾಲಿನ್ ವಿರುದ್ದ ರಾಜ್ಯಪಾಲ ರವಿ ಕಿಡಿಕಾರಿದ್ದು, ಅವರನ್ನು ‘ಜನಾಂಗೀಯ ವಾದಿ’ ಎಂದು ಕರೆದಿದ್ದಾರೆ. “ನಾನು ಪ್ರತಿ ಕಾರ್ಯಕ್ರಮಗಳಲ್ಲಿ ತಮಿಳು ನಾಡಗೀತೆಯನ್ನು ಸಂಪೂರ್ಣವಾಗಿ ಹಾಡಿಸುತ್ತೇನೆ. ದೂರದರ್ಶನದ ಕಾರ್ಯಕ್ರಮದಲ್ಲಿ ‘ದ್ರಾವಿಡ’ ಪದ ಕೈ ಬಿಡಲಾಗಿದೆ ಎಂದು ಸಿಎಂ ಸುಳ್ಳಾರೋಪ ಮಾಡಿದ್ದಾರೆ. ನನಗೆ ತಮಿಳು ನಾಡಗೀತೆಯ ಬಗ್ಗೆ ಗೌರವ ಇದೆ” ಎಂದಿದ್ದಾರೆ.

ಹಿಂದಿ ಮಾಸಾಚರಣೆಗೆ ಸ್ಟಾಲಿನ್ ಖಂಡನೆ 

ಚೆನ್ನೈ ದೂರದರ್ಶನದ ಸುವರ್ಣ ಮಹೋತ್ಸವದ ಜೊತೆ ಹಿಂದಿ ಮಾಸಾಚರಣೆ ಸಮಾರೋಪ ಸಮಾರಂಭ ಆಯೋಜಿಸಿದ್ದನ್ನು ಕೂಡ ಸಿಎಂ ಎಂ.ಕೆ ಸ್ಟಾಲಿನ್ ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಪ್ರಧಾನಿ ಮೋದಿಯವರಿಗೆ ಟ್ಯಾಗ್‌ ಮಾಡಿ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಸ್ಟಾಲಿನ್ “ಚೆನ್ನೈ ದೂರದರ್ಶನದ ಸುವರ್ಣ ಮಹೋತ್ಸವದ ಸಂಭ್ರಮಾಚರಣೆಯ ಜೊತೆಗೆ ಹಿಂದಿ ತಿಂಗಳ ಸಮಾರೋಪ ಸಮಾರಂಭ ಆಯೋಜಿಸಿದ್ದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.

ಮಾನ್ಯ ಪ್ರಧಾನಿಯವರೇ..ಭಾರತದ ಸಂವಿಧಾನವು ಯಾವುದೇ ಭಾಷೆಗೆ ರಾಷ್ಟ್ರೀಯ ಭಾಷಾ ಸ್ಥಾನಮಾನವನ್ನು ನೀಡಿಲ್ಲ. ಬಹುಭಾಷಾ ರಾಷ್ಟ್ರದಲ್ಲಿ, ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿ ಮಾಸವನ್ನು ಆಚರಿಸುವುದು ಇತರ ಭಾಷೆಗಳನ್ನು ಕೀಳಾಗಿ ಕಾಣುವ ಪ್ರಯತ್ನವಾಗಿದೆ.

ಆದ್ದರಿಂದ, ಹಿಂದಿಯೇತರ ರಾಜ್ಯಗಳಲ್ಲಿ ಇಂತಹ ಹಿಂದಿ ಆಧಾರಿತ ಕಾರ್ಯಕ್ರಮಗಳನ್ನು ನಡೆಸುವುದನ್ನು ನಿಲ್ಲಿಸಿ, ಬದಲಿಗೆ ಆಯಾ ರಾಜ್ಯಗಳಲ್ಲಿ ಸ್ಥಳೀಯ ಭಾಷಾ ತಿಂಗಳ ಆಚರಣೆಯನ್ನು ಪ್ರೋತ್ಸಾಹಿಸಬೇಕು ಎಂದು ನಾನು ಸಲಹೆ ನೀಡುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ : ಮಹಿಳೆಯರ ಅಕ್ರಮ ಬಂಧನ ಆರೋಪ : ಇಶಾ ಫೌಂಡೇಶನ್ ವಿರುದ್ದದ ಪ್ರಕರಣ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...