Homeಮುಖಪುಟನಾಡಗೀತೆ ವಿವಾದ | ತಮಿಳುನಾಡು ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ಕೇಂದ್ರಕ್ಕೆ ಸ್ಟಾಲಿನ್ ಆಗ್ರಹ

ನಾಡಗೀತೆ ವಿವಾದ | ತಮಿಳುನಾಡು ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ಕೇಂದ್ರಕ್ಕೆ ಸ್ಟಾಲಿನ್ ಆಗ್ರಹ

- Advertisement -
- Advertisement -

ತಮಿಳುನಾಡು ರಾಜ್ಯಪಾಲ ಆರ್‌ಎನ್‌ ರವಿ ಮುಖ್ಯ ಅಥಿಯಾಗಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನಾಡಗೀತೆ (ತಮಿಳ್‌ ತಾಯಿ ವಝುತ್ತು) ಹಾಡುವಾಗ, ಅದರಲ್ಲಿನ ‘ದ್ರಾವಿಡ’ ಪದವಿರುವ ವಾಕ್ಯವನ್ನು ಕೈ ಬಿಟ್ಟಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಶುಕ್ರವಾರ (ಅ.18) ಚೆನ್ನೈನ ದೂರದರ್ಶನ ಕೇಂದ್ರದಲ್ಲಿ ‘ಹಿಂದಿ ಮಾಸಾಚಾರಣೆಯ ಸಮಾರೋಪ ಕಾರ್ಯಕ್ರಮ’ದಲ್ಲಿ ತಮಿಳು ನಾಡಗೀತೆ ಹಾಡುವಾಗ, ಅದರಲ್ಲಿನ ದ್ರಾವಿಡ ನೆಲದ ಹಿರಿಮೆಯನ್ನು ಉಲ್ಲೇಖಿಸುವ ‘ತೆಕ್ಕನಮುಮುಂ ಅಧಿರ್‌ಸಿರಂಧ ದ್ರಾವಿಡ ನಾಲ್ ತಿರುನಾಡುಂ” ಎಂಬ ವಾಕ್ಯವನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗಿದೆ ಎಂದು ಆರೋಪಿಸಲಾಗಿದೆ.

ತಮಿಳುನಾಡು ಸರ್ಕಾರ ಮತ್ತು ಅಲ್ಲಿನ ಜನರ ವಿರುದ್ದ ಭಾವನೆ ಹೊಂದಿರುವ ರಾಜ್ಯಪಾಲರು ಬೇಕಂತಲೇ ದ್ರಾವಿಡ ಪದ ತೆಗೆಸಿದ್ದಾರೆ ಎಂದು ಅನೇಕರು ಆರೋಪಿಸಿದ್ದಾರೆ. ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಿ ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

“ರಾಜ್ಯಪಾಲ ರವಿ ಅವರು ರಾಷ್ಟ್ರಗೀತೆಯಿಂದ ಒಂದು ವಾಕ್ಯ ಅಥವಾ ಪದವನ್ನು ಬಿಟ್ಟು ಬಿಡುವ ಧೈರ್ಯ ಮಾಡುತ್ತಾರೆಯೇ? ಎಂದು ಪ್ರಶ್ನಿಸಿರುವ ಸಿಎಂ ಸ್ಟಾಲಿನ್, ನಾಡ ಗೀತೆಯಿಂದ ‘ದ್ರಾವಿಡ’ ಪದವಿರುವ ಸಾಲನ್ನು ಕೈ ಬಿಟ್ಟಿರುವುದು ತಮಿಳುನಾಡು ಮತ್ತು ತಮಿಳು ಭಾಷೆಗೆ ಮಾಡಿದ ಅವಮಾನ. ರಾಜ್ಯಪಾಲ ರವಿ ಅವರಿಗೆ ‘ದ್ರಾವಿಡ ಅಲರ್ಜಿ’ ಇದೆ” ಎಂದಿದ್ದಾರೆ.

“ದ್ರಾವಿಡ’ ಪದವನ್ನು ಕೈ ಬಿಟ್ಟು ತಮಿಳು ನಾಡಗೀತೆ ಹಾಡುವುದು ತಮಿಳುನಾಡಿನ ಕಾನೂನಿಗೆ ವಿರುದ್ಧವಾಗಿದೆ. ಕಾನೂನಿನ ಪ್ರಕಾರ ನಡೆಯದೆ, ತನ್ನ ಇಚ್ಛೆಗೆ ತಕ್ಕಂತೆ ವರ್ತಿಸುವ ವ್ಯಕ್ತಿಯು ರಾಜ್ಯಪಾಲ ಹುದ್ದೆಯನ್ನು ಅಲಂಕರಿಸಲು ಯೋಗ್ಯನಲ್ಲ. ಭಾರತವನ್ನು ಆಚರಿಸುವ ನೆಪದಲ್ಲಿ, ರಾಜ್ಯಪಾಲರು ದೇಶದ ಏಕತೆ ಮತ್ತು ಈ ನೆಲದಲ್ಲಿ ವಾಸಿಸುವ ವಿವಿಧ ಜನಾಂಗದ ಜನರನ್ನು ಅವಮಾನಿಸುತ್ತಿದ್ದಾರೆ” ಎಂದು ಸ್ಟಾಲಿನ್ ಕಿಡಿಕಾರಿದ್ದಾರೆ.

ಎಲ್ಲೆಡೆಯಿಂದ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಪ್ರಕಟಣೆ ಹೊರಡಿಸಿರುವ ರಾಜ್ಯಪಾಲ ಕಚೇರಿ “ರಾಜ್ಯಪಾಲರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರಷ್ಟೆ, ನಾಡಗೀತೆಯಿಂದ ಒಂದು ಸಾಲು ಕೈಬಿಟ್ಟಿರುವ ವಿಷಯದಲ್ಲಿ ಅವರ ಪಾತ್ರವೇನು ಇಲ್ಲ. ರಾಜ್ಯಪಾಲರು ತಮಿಳುನಾಡು ಮತ್ತು ಇಲ್ಲಿನ ಜನರ ಮೇಲೆ ಉನ್ನತ ಗೌರವನ್ನು ಹೊಂದಿದ್ದಾರೆ. ಅದನ್ನು ಉಳಿಸಿಕೊಳ್ಳಲಿದ್ದಾರೆ” ಎಂದಿದೆ.

ಸಿಎಂ ಸ್ಟಾಲಿನ್ ವಿರುದ್ದ ರಾಜ್ಯಪಾಲ ರವಿ ಕಿಡಿಕಾರಿದ್ದು, ಅವರನ್ನು ‘ಜನಾಂಗೀಯ ವಾದಿ’ ಎಂದು ಕರೆದಿದ್ದಾರೆ. “ನಾನು ಪ್ರತಿ ಕಾರ್ಯಕ್ರಮಗಳಲ್ಲಿ ತಮಿಳು ನಾಡಗೀತೆಯನ್ನು ಸಂಪೂರ್ಣವಾಗಿ ಹಾಡಿಸುತ್ತೇನೆ. ದೂರದರ್ಶನದ ಕಾರ್ಯಕ್ರಮದಲ್ಲಿ ‘ದ್ರಾವಿಡ’ ಪದ ಕೈ ಬಿಡಲಾಗಿದೆ ಎಂದು ಸಿಎಂ ಸುಳ್ಳಾರೋಪ ಮಾಡಿದ್ದಾರೆ. ನನಗೆ ತಮಿಳು ನಾಡಗೀತೆಯ ಬಗ್ಗೆ ಗೌರವ ಇದೆ” ಎಂದಿದ್ದಾರೆ.

ಹಿಂದಿ ಮಾಸಾಚರಣೆಗೆ ಸ್ಟಾಲಿನ್ ಖಂಡನೆ 

ಚೆನ್ನೈ ದೂರದರ್ಶನದ ಸುವರ್ಣ ಮಹೋತ್ಸವದ ಜೊತೆ ಹಿಂದಿ ಮಾಸಾಚರಣೆ ಸಮಾರೋಪ ಸಮಾರಂಭ ಆಯೋಜಿಸಿದ್ದನ್ನು ಕೂಡ ಸಿಎಂ ಎಂ.ಕೆ ಸ್ಟಾಲಿನ್ ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಪ್ರಧಾನಿ ಮೋದಿಯವರಿಗೆ ಟ್ಯಾಗ್‌ ಮಾಡಿ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಸ್ಟಾಲಿನ್ “ಚೆನ್ನೈ ದೂರದರ್ಶನದ ಸುವರ್ಣ ಮಹೋತ್ಸವದ ಸಂಭ್ರಮಾಚರಣೆಯ ಜೊತೆಗೆ ಹಿಂದಿ ತಿಂಗಳ ಸಮಾರೋಪ ಸಮಾರಂಭ ಆಯೋಜಿಸಿದ್ದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.

ಮಾನ್ಯ ಪ್ರಧಾನಿಯವರೇ..ಭಾರತದ ಸಂವಿಧಾನವು ಯಾವುದೇ ಭಾಷೆಗೆ ರಾಷ್ಟ್ರೀಯ ಭಾಷಾ ಸ್ಥಾನಮಾನವನ್ನು ನೀಡಿಲ್ಲ. ಬಹುಭಾಷಾ ರಾಷ್ಟ್ರದಲ್ಲಿ, ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿ ಮಾಸವನ್ನು ಆಚರಿಸುವುದು ಇತರ ಭಾಷೆಗಳನ್ನು ಕೀಳಾಗಿ ಕಾಣುವ ಪ್ರಯತ್ನವಾಗಿದೆ.

ಆದ್ದರಿಂದ, ಹಿಂದಿಯೇತರ ರಾಜ್ಯಗಳಲ್ಲಿ ಇಂತಹ ಹಿಂದಿ ಆಧಾರಿತ ಕಾರ್ಯಕ್ರಮಗಳನ್ನು ನಡೆಸುವುದನ್ನು ನಿಲ್ಲಿಸಿ, ಬದಲಿಗೆ ಆಯಾ ರಾಜ್ಯಗಳಲ್ಲಿ ಸ್ಥಳೀಯ ಭಾಷಾ ತಿಂಗಳ ಆಚರಣೆಯನ್ನು ಪ್ರೋತ್ಸಾಹಿಸಬೇಕು ಎಂದು ನಾನು ಸಲಹೆ ನೀಡುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ : ಮಹಿಳೆಯರ ಅಕ್ರಮ ಬಂಧನ ಆರೋಪ : ಇಶಾ ಫೌಂಡೇಶನ್ ವಿರುದ್ದದ ಪ್ರಕರಣ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...