Homeಮುಖಪುಟನಾಡಗೀತೆ ವಿವಾದ | ತಮಿಳುನಾಡು ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ಕೇಂದ್ರಕ್ಕೆ ಸ್ಟಾಲಿನ್ ಆಗ್ರಹ

ನಾಡಗೀತೆ ವಿವಾದ | ತಮಿಳುನಾಡು ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ಕೇಂದ್ರಕ್ಕೆ ಸ್ಟಾಲಿನ್ ಆಗ್ರಹ

- Advertisement -
- Advertisement -

ತಮಿಳುನಾಡು ರಾಜ್ಯಪಾಲ ಆರ್‌ಎನ್‌ ರವಿ ಮುಖ್ಯ ಅಥಿಯಾಗಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನಾಡಗೀತೆ (ತಮಿಳ್‌ ತಾಯಿ ವಝುತ್ತು) ಹಾಡುವಾಗ, ಅದರಲ್ಲಿನ ‘ದ್ರಾವಿಡ’ ಪದವಿರುವ ವಾಕ್ಯವನ್ನು ಕೈ ಬಿಟ್ಟಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಶುಕ್ರವಾರ (ಅ.18) ಚೆನ್ನೈನ ದೂರದರ್ಶನ ಕೇಂದ್ರದಲ್ಲಿ ‘ಹಿಂದಿ ಮಾಸಾಚಾರಣೆಯ ಸಮಾರೋಪ ಕಾರ್ಯಕ್ರಮ’ದಲ್ಲಿ ತಮಿಳು ನಾಡಗೀತೆ ಹಾಡುವಾಗ, ಅದರಲ್ಲಿನ ದ್ರಾವಿಡ ನೆಲದ ಹಿರಿಮೆಯನ್ನು ಉಲ್ಲೇಖಿಸುವ ‘ತೆಕ್ಕನಮುಮುಂ ಅಧಿರ್‌ಸಿರಂಧ ದ್ರಾವಿಡ ನಾಲ್ ತಿರುನಾಡುಂ” ಎಂಬ ವಾಕ್ಯವನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗಿದೆ ಎಂದು ಆರೋಪಿಸಲಾಗಿದೆ.

ತಮಿಳುನಾಡು ಸರ್ಕಾರ ಮತ್ತು ಅಲ್ಲಿನ ಜನರ ವಿರುದ್ದ ಭಾವನೆ ಹೊಂದಿರುವ ರಾಜ್ಯಪಾಲರು ಬೇಕಂತಲೇ ದ್ರಾವಿಡ ಪದ ತೆಗೆಸಿದ್ದಾರೆ ಎಂದು ಅನೇಕರು ಆರೋಪಿಸಿದ್ದಾರೆ. ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಿ ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

“ರಾಜ್ಯಪಾಲ ರವಿ ಅವರು ರಾಷ್ಟ್ರಗೀತೆಯಿಂದ ಒಂದು ವಾಕ್ಯ ಅಥವಾ ಪದವನ್ನು ಬಿಟ್ಟು ಬಿಡುವ ಧೈರ್ಯ ಮಾಡುತ್ತಾರೆಯೇ? ಎಂದು ಪ್ರಶ್ನಿಸಿರುವ ಸಿಎಂ ಸ್ಟಾಲಿನ್, ನಾಡ ಗೀತೆಯಿಂದ ‘ದ್ರಾವಿಡ’ ಪದವಿರುವ ಸಾಲನ್ನು ಕೈ ಬಿಟ್ಟಿರುವುದು ತಮಿಳುನಾಡು ಮತ್ತು ತಮಿಳು ಭಾಷೆಗೆ ಮಾಡಿದ ಅವಮಾನ. ರಾಜ್ಯಪಾಲ ರವಿ ಅವರಿಗೆ ‘ದ್ರಾವಿಡ ಅಲರ್ಜಿ’ ಇದೆ” ಎಂದಿದ್ದಾರೆ.

“ದ್ರಾವಿಡ’ ಪದವನ್ನು ಕೈ ಬಿಟ್ಟು ತಮಿಳು ನಾಡಗೀತೆ ಹಾಡುವುದು ತಮಿಳುನಾಡಿನ ಕಾನೂನಿಗೆ ವಿರುದ್ಧವಾಗಿದೆ. ಕಾನೂನಿನ ಪ್ರಕಾರ ನಡೆಯದೆ, ತನ್ನ ಇಚ್ಛೆಗೆ ತಕ್ಕಂತೆ ವರ್ತಿಸುವ ವ್ಯಕ್ತಿಯು ರಾಜ್ಯಪಾಲ ಹುದ್ದೆಯನ್ನು ಅಲಂಕರಿಸಲು ಯೋಗ್ಯನಲ್ಲ. ಭಾರತವನ್ನು ಆಚರಿಸುವ ನೆಪದಲ್ಲಿ, ರಾಜ್ಯಪಾಲರು ದೇಶದ ಏಕತೆ ಮತ್ತು ಈ ನೆಲದಲ್ಲಿ ವಾಸಿಸುವ ವಿವಿಧ ಜನಾಂಗದ ಜನರನ್ನು ಅವಮಾನಿಸುತ್ತಿದ್ದಾರೆ” ಎಂದು ಸ್ಟಾಲಿನ್ ಕಿಡಿಕಾರಿದ್ದಾರೆ.

ಎಲ್ಲೆಡೆಯಿಂದ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಪ್ರಕಟಣೆ ಹೊರಡಿಸಿರುವ ರಾಜ್ಯಪಾಲ ಕಚೇರಿ “ರಾಜ್ಯಪಾಲರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರಷ್ಟೆ, ನಾಡಗೀತೆಯಿಂದ ಒಂದು ಸಾಲು ಕೈಬಿಟ್ಟಿರುವ ವಿಷಯದಲ್ಲಿ ಅವರ ಪಾತ್ರವೇನು ಇಲ್ಲ. ರಾಜ್ಯಪಾಲರು ತಮಿಳುನಾಡು ಮತ್ತು ಇಲ್ಲಿನ ಜನರ ಮೇಲೆ ಉನ್ನತ ಗೌರವನ್ನು ಹೊಂದಿದ್ದಾರೆ. ಅದನ್ನು ಉಳಿಸಿಕೊಳ್ಳಲಿದ್ದಾರೆ” ಎಂದಿದೆ.

ಸಿಎಂ ಸ್ಟಾಲಿನ್ ವಿರುದ್ದ ರಾಜ್ಯಪಾಲ ರವಿ ಕಿಡಿಕಾರಿದ್ದು, ಅವರನ್ನು ‘ಜನಾಂಗೀಯ ವಾದಿ’ ಎಂದು ಕರೆದಿದ್ದಾರೆ. “ನಾನು ಪ್ರತಿ ಕಾರ್ಯಕ್ರಮಗಳಲ್ಲಿ ತಮಿಳು ನಾಡಗೀತೆಯನ್ನು ಸಂಪೂರ್ಣವಾಗಿ ಹಾಡಿಸುತ್ತೇನೆ. ದೂರದರ್ಶನದ ಕಾರ್ಯಕ್ರಮದಲ್ಲಿ ‘ದ್ರಾವಿಡ’ ಪದ ಕೈ ಬಿಡಲಾಗಿದೆ ಎಂದು ಸಿಎಂ ಸುಳ್ಳಾರೋಪ ಮಾಡಿದ್ದಾರೆ. ನನಗೆ ತಮಿಳು ನಾಡಗೀತೆಯ ಬಗ್ಗೆ ಗೌರವ ಇದೆ” ಎಂದಿದ್ದಾರೆ.

ಹಿಂದಿ ಮಾಸಾಚರಣೆಗೆ ಸ್ಟಾಲಿನ್ ಖಂಡನೆ 

ಚೆನ್ನೈ ದೂರದರ್ಶನದ ಸುವರ್ಣ ಮಹೋತ್ಸವದ ಜೊತೆ ಹಿಂದಿ ಮಾಸಾಚರಣೆ ಸಮಾರೋಪ ಸಮಾರಂಭ ಆಯೋಜಿಸಿದ್ದನ್ನು ಕೂಡ ಸಿಎಂ ಎಂ.ಕೆ ಸ್ಟಾಲಿನ್ ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಪ್ರಧಾನಿ ಮೋದಿಯವರಿಗೆ ಟ್ಯಾಗ್‌ ಮಾಡಿ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಸ್ಟಾಲಿನ್ “ಚೆನ್ನೈ ದೂರದರ್ಶನದ ಸುವರ್ಣ ಮಹೋತ್ಸವದ ಸಂಭ್ರಮಾಚರಣೆಯ ಜೊತೆಗೆ ಹಿಂದಿ ತಿಂಗಳ ಸಮಾರೋಪ ಸಮಾರಂಭ ಆಯೋಜಿಸಿದ್ದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.

ಮಾನ್ಯ ಪ್ರಧಾನಿಯವರೇ..ಭಾರತದ ಸಂವಿಧಾನವು ಯಾವುದೇ ಭಾಷೆಗೆ ರಾಷ್ಟ್ರೀಯ ಭಾಷಾ ಸ್ಥಾನಮಾನವನ್ನು ನೀಡಿಲ್ಲ. ಬಹುಭಾಷಾ ರಾಷ್ಟ್ರದಲ್ಲಿ, ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿ ಮಾಸವನ್ನು ಆಚರಿಸುವುದು ಇತರ ಭಾಷೆಗಳನ್ನು ಕೀಳಾಗಿ ಕಾಣುವ ಪ್ರಯತ್ನವಾಗಿದೆ.

ಆದ್ದರಿಂದ, ಹಿಂದಿಯೇತರ ರಾಜ್ಯಗಳಲ್ಲಿ ಇಂತಹ ಹಿಂದಿ ಆಧಾರಿತ ಕಾರ್ಯಕ್ರಮಗಳನ್ನು ನಡೆಸುವುದನ್ನು ನಿಲ್ಲಿಸಿ, ಬದಲಿಗೆ ಆಯಾ ರಾಜ್ಯಗಳಲ್ಲಿ ಸ್ಥಳೀಯ ಭಾಷಾ ತಿಂಗಳ ಆಚರಣೆಯನ್ನು ಪ್ರೋತ್ಸಾಹಿಸಬೇಕು ಎಂದು ನಾನು ಸಲಹೆ ನೀಡುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ : ಮಹಿಳೆಯರ ಅಕ್ರಮ ಬಂಧನ ಆರೋಪ : ಇಶಾ ಫೌಂಡೇಶನ್ ವಿರುದ್ದದ ಪ್ರಕರಣ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...