Homeಕರ್ನಾಟಕಮೈಸೂರಿನಲ್ಲಿ ಹೀಗೊಂದು ‘ದ್ರಾವಿಡ ಮಕ್ಕಳ ಸೌಹಾರ್ದ ಇಫ್ತಾರ್‌ ಕೂಟ’!

ಮೈಸೂರಿನಲ್ಲಿ ಹೀಗೊಂದು ‘ದ್ರಾವಿಡ ಮಕ್ಕಳ ಸೌಹಾರ್ದ ಇಫ್ತಾರ್‌ ಕೂಟ’!

- Advertisement -
- Advertisement -

ಮೈಸೂರಿನ ಸೌಹಾರ್ದ ಪ್ರಿಯ ನಾಗರಿಕರು ತಮ್ಮ ಆಸುಪಾಸು ಕೆಲಸ ಮಾಡುತ್ತಿದ್ದ ಶ್ರಮಜೀವಿ ಮುಸ್ಲಿಮರಿಗೆ ಇಫ್ತಾರ್‌ ಕೂಟ ಆಯೋಜಿಸಿ ಶುಕ್ರವಾರ ಸೌಹಾರ್ದತೆ ಮರೆದಿದ್ದಾರೆ. ಈ ವೇಳೆ ಇಫ್ತಾರಿಗೆ ಆಗಮಿಸಿದ್ದ ಅಥಿತಿಯೊಬ್ಬರು, ‘ಇದು ಹಿಂದೂ ಮುಸ್ಲಿಮರ ಇಫ್ತಾರ್‌‌ ಕೂಟವಲ್ಲ, ದ್ರಾವಿಡ ಮಕ್ಕಳ ಇಫ್ತಾರ್‌‌ ಕೂಟ’ ಎಂದು ಬಣ್ಣಿಸಿದ್ದಾರೆ.

ಸೌಹಾರ್ದ ಪ್ರಿಯ ನಾಗರಿಕರ ಈ ‘ದ್ರಾವಿಡ ಮಕ್ಕಳ ಸೌಹಾರ್ದ ಇಫ್ತಾರ್‌ ಕೂಟ’ ಮೈಸೂರು ಬಸ್‌ ನಿಲ್ದಾಣದ ಮುಂದೆ ಇರುವ ‘ಹೋಟೆಲ್‌ ಮಹಾರಾಜಾ’ದಲ್ಲಿ ಆಯೋಜಿಸಲಾಗಿತ್ತು. ನಿತ್ಯದ ಜೀವನದಲ್ಲಿ ಹಾಸುಹೊಕ್ಕಾಗಿ ಸುತ್ತಮುತ್ತ ಇರುವ ಶ್ರಮಜೀವಿ ಮುಸ್ಲಿಮರು ಈ ಇಪ್ತಾರ್‌ ಕೂಟದ ಅಥಿತಿಗಳಾಗಿದ್ದರು. ಗ್ಯಾರೇಜ್‌ಗಳಲ್ಲಿ ಕೆಲಸ ಮಾಡುವವರು, ಪಂಚರ್‌ ಅಂಗಡಿಗಳಲ್ಲಿ ಇರುವವರು ಹಾಗೂ ಹಣ್ಣಿನ ಅಂಗಡಿಗಳನ್ನು ನಡೆಸುವವರು ಸೇರಿದಂತೆ ಹಲವು ಶ್ರಮ ಜೀವಿ ಮುಸ್ಲಿಮರಿಗೆ ಆಹ್ವಾನ ನೀಡಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಯೋಜಕರು ಅಥಿಗಳಿಗೆ ಹೂವು ನೀಡಿ ಸ್ವಾಗತಿಸಿದರು. ಈ ವೇಳೆ ಆಯೋಜಕರಲ್ಲೊಬ್ಬರಾಗಿರುವ ಅಂಕಣಕಾರ ಕೆ.ಪಿ. ಸುರೇಶ್‌, ದೇಶದ ಪರಂಪರೆ, ಸ್ವಾತಂತ್ರ್ಯ ಹೋರಾಟದ ಕಷ್ಟ ಸುಖವನ್ನು ವಿವರಿಸಿದರು. ಸರಳವಾಗಿ ನಾವೆಲ್ಲರೂ ಜೊತೆಯಾಗಿ ಉಣ್ಣಬೇಕಾದ ಊಟವೆಂಬ ಸಾಮಾನ್ಯ ಸಂಗತಿಯೂ ಅಸೀಮ ಸಾಹಸದ ಸಂಗತಿಯಾಗಿರುವುದು ನಮ್ಮ ದುರಂತ ಎಂದು ಬೇಸರ ವ್ಯಕ್ತಪಡಿಸಿ, ಅಥಿತಿಗಳಿಗೆ ಶುಭ ಹಾರೈಸಿದರು.

ಇದನ್ನೂ ಓದಿ: ಸೌಹಾರ್ದ ಕಥನ: ಹಿಂದೂ ಯುವಕರಿಗೆ ಕೇಸರಿ ಶಾಲು ತೊಡಿಸಿದ ಮುಸ್ಲಿಮರು – ಹಣ್ಣು ತಿನ್ನಿಸಿ ಇಫ್ತಾರ್ ಆಚರಿಸಿದ ರಾಮ ಮಾಲಾ ಭಕ್ತರು

ಬಳಿಕ ಮಾತನಾಡಿದ ಮಹೇಶ್ ಅವರು, “ವ್ಯಾವಹಾರಿಕವಾಗಿ ನಾವೆಲ್ಲ ಪರಸ್ಪರ ಸ್ನೇಹದಲ್ಲಿದ್ದರೂ ನಮಗೆ ನೆರೆಮನೆಯ ಊಟ ಹಬ್ಬದ ಬಗ್ಗೆ ಗೊತ್ತಿಲ್ಲ. ಪರಸ್ಪರ ಊಟ, ಹಬ್ಬದ ಬಗ್ಗೆ ಕುತೂಹಲ, ಮೆಚ್ಚುಗೆ ಇದ್ದರಾಯಿತಲ್ಲ, ವ್ಯತ್ಯಾಸವೇ ಮುಖ್ಯವಾದರೆ ಹೇಗೆ? ಬಾಗಿಲು ಸರಿಸಿ ನಾವು ಒಳ ನುಗ್ಗಬೇಕಿದೆ, ಇದು ಅಂಥಾ ಒಂದು ವಿನೀತ ಪ್ರಯತ್ನ” ಎಂದು ಹೇಳಿದರು.

ಅಥಿತಿಗಳಲ್ಲೊಬ್ಬರಾದ ಮೈಸೂರಿನ ಕನ್ನಡ ಪ್ರೇಮಿ, ಮೆಡಿಕಲ್‌‌ ಅಂಗಡಿಯ ಮಾಲಿಕ ಮನ್ಸೂರ್ ಅಹ್ಮದ್ ಖಾನ್‌ ಅವರು ಮಾತನಾಡಿ, “ಇದು ಹಿಂದೂ-ಮುಸ್ಲಿಂ ಭೋಜನ ಕೂಟವಲ್ಲ. ನಾವೆಲ್ಲರೂ ದ್ರಾವಿಡ ಮಕ್ಕಳು, ಹಾಗಾಗಿ ಇದು ದ್ರಾವಿಡ ಮಕ್ಕಳ ಭೋಜನ ಕೂಟ. ಇದು ಹೆಚ್ಚಿದಷ್ಟೂ ನಮ್ಮ ಬಾಂಧವ್ಯ ಹೆಚ್ಚುತ್ತದೆ” ಎಂದರು.

ಕಾರ್ಯಕ್ರಮದಲ್ಲಿ, “ಕಟ್ಟುತ್ತೇವೆ ನಾವು, ಕಟ್ಟುತ್ತೇವೆ ನಾವು, ಕಟ್ಟೇ ಕಟ್ಟುತ್ತೇವಾ. ಒಡೆದ ಮನಸುಗಳ, ಕಂಡ ಕನಸುಗಳು ಮತ್ತೆ ಕಟ್ಟುತ್ತೇವೆ” ಹಾಡನ್ನು ಹಾಡಲಾಯಿತು. ಊಟವಾದ ಬಳಿಕ ರಾಷ್ಟ್ರಪಿತ ಮಹಾತ್ಮ ಗಾಂಧಿಜಿಯ ಭಾವಚಿತ್ರಕ್ಕೆ ಹೂ ಹಾಕಿ ಗೌರವಿಸಲಾಯಿತು.

ಇದನ್ನೂ ಓದಿ: ಬಿಹಾರ: ತೇಜಸ್ವಿ ಯಾದವ್‌‌ ಆಯೋಜಿಸಿದ್ದ ಇಫ್ತಾರ್‌‌ ಕೂಟದಲ್ಲಿ ಸಿಎಂ ನಿತೀಶ್‌ ಕುಮಾರ್‌ ಭಾಗಿ!; ಮತ್ತೊಮ್ಮೆ ‘ಮಹಾಘಟಬಂಧನ್‌’?

ಪ್ರಭು, ಗಣೇಶ, ಬೆಟ್ಟೇಗೌಡ, ಚಂದ್ರಶೇಖರ ಐಜೂರ್, ಉಮೇಶ್, ಕುಮಾರ್, ಲೆಕ್ಕ ಪರಿಶೋಧಕ ಆರಾಧ್ಯ ಮತ್ತು ಗೆಳೆಯರು ಸೌಹಾರ್ದ ಇಫ್ತಾರ್‌ ಕೂಟದ ಆಯೋಜನೆಗೆ ಕೈಜೋಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...