Homeಕರ್ನಾಟಕಮೈಸೂರಿನಲ್ಲಿ ಹೀಗೊಂದು ‘ದ್ರಾವಿಡ ಮಕ್ಕಳ ಸೌಹಾರ್ದ ಇಫ್ತಾರ್‌ ಕೂಟ’!

ಮೈಸೂರಿನಲ್ಲಿ ಹೀಗೊಂದು ‘ದ್ರಾವಿಡ ಮಕ್ಕಳ ಸೌಹಾರ್ದ ಇಫ್ತಾರ್‌ ಕೂಟ’!

- Advertisement -
- Advertisement -

ಮೈಸೂರಿನ ಸೌಹಾರ್ದ ಪ್ರಿಯ ನಾಗರಿಕರು ತಮ್ಮ ಆಸುಪಾಸು ಕೆಲಸ ಮಾಡುತ್ತಿದ್ದ ಶ್ರಮಜೀವಿ ಮುಸ್ಲಿಮರಿಗೆ ಇಫ್ತಾರ್‌ ಕೂಟ ಆಯೋಜಿಸಿ ಶುಕ್ರವಾರ ಸೌಹಾರ್ದತೆ ಮರೆದಿದ್ದಾರೆ. ಈ ವೇಳೆ ಇಫ್ತಾರಿಗೆ ಆಗಮಿಸಿದ್ದ ಅಥಿತಿಯೊಬ್ಬರು, ‘ಇದು ಹಿಂದೂ ಮುಸ್ಲಿಮರ ಇಫ್ತಾರ್‌‌ ಕೂಟವಲ್ಲ, ದ್ರಾವಿಡ ಮಕ್ಕಳ ಇಫ್ತಾರ್‌‌ ಕೂಟ’ ಎಂದು ಬಣ್ಣಿಸಿದ್ದಾರೆ.

ಸೌಹಾರ್ದ ಪ್ರಿಯ ನಾಗರಿಕರ ಈ ‘ದ್ರಾವಿಡ ಮಕ್ಕಳ ಸೌಹಾರ್ದ ಇಫ್ತಾರ್‌ ಕೂಟ’ ಮೈಸೂರು ಬಸ್‌ ನಿಲ್ದಾಣದ ಮುಂದೆ ಇರುವ ‘ಹೋಟೆಲ್‌ ಮಹಾರಾಜಾ’ದಲ್ಲಿ ಆಯೋಜಿಸಲಾಗಿತ್ತು. ನಿತ್ಯದ ಜೀವನದಲ್ಲಿ ಹಾಸುಹೊಕ್ಕಾಗಿ ಸುತ್ತಮುತ್ತ ಇರುವ ಶ್ರಮಜೀವಿ ಮುಸ್ಲಿಮರು ಈ ಇಪ್ತಾರ್‌ ಕೂಟದ ಅಥಿತಿಗಳಾಗಿದ್ದರು. ಗ್ಯಾರೇಜ್‌ಗಳಲ್ಲಿ ಕೆಲಸ ಮಾಡುವವರು, ಪಂಚರ್‌ ಅಂಗಡಿಗಳಲ್ಲಿ ಇರುವವರು ಹಾಗೂ ಹಣ್ಣಿನ ಅಂಗಡಿಗಳನ್ನು ನಡೆಸುವವರು ಸೇರಿದಂತೆ ಹಲವು ಶ್ರಮ ಜೀವಿ ಮುಸ್ಲಿಮರಿಗೆ ಆಹ್ವಾನ ನೀಡಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಯೋಜಕರು ಅಥಿಗಳಿಗೆ ಹೂವು ನೀಡಿ ಸ್ವಾಗತಿಸಿದರು. ಈ ವೇಳೆ ಆಯೋಜಕರಲ್ಲೊಬ್ಬರಾಗಿರುವ ಅಂಕಣಕಾರ ಕೆ.ಪಿ. ಸುರೇಶ್‌, ದೇಶದ ಪರಂಪರೆ, ಸ್ವಾತಂತ್ರ್ಯ ಹೋರಾಟದ ಕಷ್ಟ ಸುಖವನ್ನು ವಿವರಿಸಿದರು. ಸರಳವಾಗಿ ನಾವೆಲ್ಲರೂ ಜೊತೆಯಾಗಿ ಉಣ್ಣಬೇಕಾದ ಊಟವೆಂಬ ಸಾಮಾನ್ಯ ಸಂಗತಿಯೂ ಅಸೀಮ ಸಾಹಸದ ಸಂಗತಿಯಾಗಿರುವುದು ನಮ್ಮ ದುರಂತ ಎಂದು ಬೇಸರ ವ್ಯಕ್ತಪಡಿಸಿ, ಅಥಿತಿಗಳಿಗೆ ಶುಭ ಹಾರೈಸಿದರು.

ಇದನ್ನೂ ಓದಿ: ಸೌಹಾರ್ದ ಕಥನ: ಹಿಂದೂ ಯುವಕರಿಗೆ ಕೇಸರಿ ಶಾಲು ತೊಡಿಸಿದ ಮುಸ್ಲಿಮರು – ಹಣ್ಣು ತಿನ್ನಿಸಿ ಇಫ್ತಾರ್ ಆಚರಿಸಿದ ರಾಮ ಮಾಲಾ ಭಕ್ತರು

ಬಳಿಕ ಮಾತನಾಡಿದ ಮಹೇಶ್ ಅವರು, “ವ್ಯಾವಹಾರಿಕವಾಗಿ ನಾವೆಲ್ಲ ಪರಸ್ಪರ ಸ್ನೇಹದಲ್ಲಿದ್ದರೂ ನಮಗೆ ನೆರೆಮನೆಯ ಊಟ ಹಬ್ಬದ ಬಗ್ಗೆ ಗೊತ್ತಿಲ್ಲ. ಪರಸ್ಪರ ಊಟ, ಹಬ್ಬದ ಬಗ್ಗೆ ಕುತೂಹಲ, ಮೆಚ್ಚುಗೆ ಇದ್ದರಾಯಿತಲ್ಲ, ವ್ಯತ್ಯಾಸವೇ ಮುಖ್ಯವಾದರೆ ಹೇಗೆ? ಬಾಗಿಲು ಸರಿಸಿ ನಾವು ಒಳ ನುಗ್ಗಬೇಕಿದೆ, ಇದು ಅಂಥಾ ಒಂದು ವಿನೀತ ಪ್ರಯತ್ನ” ಎಂದು ಹೇಳಿದರು.

ಅಥಿತಿಗಳಲ್ಲೊಬ್ಬರಾದ ಮೈಸೂರಿನ ಕನ್ನಡ ಪ್ರೇಮಿ, ಮೆಡಿಕಲ್‌‌ ಅಂಗಡಿಯ ಮಾಲಿಕ ಮನ್ಸೂರ್ ಅಹ್ಮದ್ ಖಾನ್‌ ಅವರು ಮಾತನಾಡಿ, “ಇದು ಹಿಂದೂ-ಮುಸ್ಲಿಂ ಭೋಜನ ಕೂಟವಲ್ಲ. ನಾವೆಲ್ಲರೂ ದ್ರಾವಿಡ ಮಕ್ಕಳು, ಹಾಗಾಗಿ ಇದು ದ್ರಾವಿಡ ಮಕ್ಕಳ ಭೋಜನ ಕೂಟ. ಇದು ಹೆಚ್ಚಿದಷ್ಟೂ ನಮ್ಮ ಬಾಂಧವ್ಯ ಹೆಚ್ಚುತ್ತದೆ” ಎಂದರು.

ಕಾರ್ಯಕ್ರಮದಲ್ಲಿ, “ಕಟ್ಟುತ್ತೇವೆ ನಾವು, ಕಟ್ಟುತ್ತೇವೆ ನಾವು, ಕಟ್ಟೇ ಕಟ್ಟುತ್ತೇವಾ. ಒಡೆದ ಮನಸುಗಳ, ಕಂಡ ಕನಸುಗಳು ಮತ್ತೆ ಕಟ್ಟುತ್ತೇವೆ” ಹಾಡನ್ನು ಹಾಡಲಾಯಿತು. ಊಟವಾದ ಬಳಿಕ ರಾಷ್ಟ್ರಪಿತ ಮಹಾತ್ಮ ಗಾಂಧಿಜಿಯ ಭಾವಚಿತ್ರಕ್ಕೆ ಹೂ ಹಾಕಿ ಗೌರವಿಸಲಾಯಿತು.

ಇದನ್ನೂ ಓದಿ: ಬಿಹಾರ: ತೇಜಸ್ವಿ ಯಾದವ್‌‌ ಆಯೋಜಿಸಿದ್ದ ಇಫ್ತಾರ್‌‌ ಕೂಟದಲ್ಲಿ ಸಿಎಂ ನಿತೀಶ್‌ ಕುಮಾರ್‌ ಭಾಗಿ!; ಮತ್ತೊಮ್ಮೆ ‘ಮಹಾಘಟಬಂಧನ್‌’?

ಪ್ರಭು, ಗಣೇಶ, ಬೆಟ್ಟೇಗೌಡ, ಚಂದ್ರಶೇಖರ ಐಜೂರ್, ಉಮೇಶ್, ಕುಮಾರ್, ಲೆಕ್ಕ ಪರಿಶೋಧಕ ಆರಾಧ್ಯ ಮತ್ತು ಗೆಳೆಯರು ಸೌಹಾರ್ದ ಇಫ್ತಾರ್‌ ಕೂಟದ ಆಯೋಜನೆಗೆ ಕೈಜೋಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...