Homeಕರ್ನಾಟಕಮೈಸೂರಿನಲ್ಲಿ ಹೀಗೊಂದು ‘ದ್ರಾವಿಡ ಮಕ್ಕಳ ಸೌಹಾರ್ದ ಇಫ್ತಾರ್‌ ಕೂಟ’!

ಮೈಸೂರಿನಲ್ಲಿ ಹೀಗೊಂದು ‘ದ್ರಾವಿಡ ಮಕ್ಕಳ ಸೌಹಾರ್ದ ಇಫ್ತಾರ್‌ ಕೂಟ’!

- Advertisement -
- Advertisement -

ಮೈಸೂರಿನ ಸೌಹಾರ್ದ ಪ್ರಿಯ ನಾಗರಿಕರು ತಮ್ಮ ಆಸುಪಾಸು ಕೆಲಸ ಮಾಡುತ್ತಿದ್ದ ಶ್ರಮಜೀವಿ ಮುಸ್ಲಿಮರಿಗೆ ಇಫ್ತಾರ್‌ ಕೂಟ ಆಯೋಜಿಸಿ ಶುಕ್ರವಾರ ಸೌಹಾರ್ದತೆ ಮರೆದಿದ್ದಾರೆ. ಈ ವೇಳೆ ಇಫ್ತಾರಿಗೆ ಆಗಮಿಸಿದ್ದ ಅಥಿತಿಯೊಬ್ಬರು, ‘ಇದು ಹಿಂದೂ ಮುಸ್ಲಿಮರ ಇಫ್ತಾರ್‌‌ ಕೂಟವಲ್ಲ, ದ್ರಾವಿಡ ಮಕ್ಕಳ ಇಫ್ತಾರ್‌‌ ಕೂಟ’ ಎಂದು ಬಣ್ಣಿಸಿದ್ದಾರೆ.

ಸೌಹಾರ್ದ ಪ್ರಿಯ ನಾಗರಿಕರ ಈ ‘ದ್ರಾವಿಡ ಮಕ್ಕಳ ಸೌಹಾರ್ದ ಇಫ್ತಾರ್‌ ಕೂಟ’ ಮೈಸೂರು ಬಸ್‌ ನಿಲ್ದಾಣದ ಮುಂದೆ ಇರುವ ‘ಹೋಟೆಲ್‌ ಮಹಾರಾಜಾ’ದಲ್ಲಿ ಆಯೋಜಿಸಲಾಗಿತ್ತು. ನಿತ್ಯದ ಜೀವನದಲ್ಲಿ ಹಾಸುಹೊಕ್ಕಾಗಿ ಸುತ್ತಮುತ್ತ ಇರುವ ಶ್ರಮಜೀವಿ ಮುಸ್ಲಿಮರು ಈ ಇಪ್ತಾರ್‌ ಕೂಟದ ಅಥಿತಿಗಳಾಗಿದ್ದರು. ಗ್ಯಾರೇಜ್‌ಗಳಲ್ಲಿ ಕೆಲಸ ಮಾಡುವವರು, ಪಂಚರ್‌ ಅಂಗಡಿಗಳಲ್ಲಿ ಇರುವವರು ಹಾಗೂ ಹಣ್ಣಿನ ಅಂಗಡಿಗಳನ್ನು ನಡೆಸುವವರು ಸೇರಿದಂತೆ ಹಲವು ಶ್ರಮ ಜೀವಿ ಮುಸ್ಲಿಮರಿಗೆ ಆಹ್ವಾನ ನೀಡಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಯೋಜಕರು ಅಥಿಗಳಿಗೆ ಹೂವು ನೀಡಿ ಸ್ವಾಗತಿಸಿದರು. ಈ ವೇಳೆ ಆಯೋಜಕರಲ್ಲೊಬ್ಬರಾಗಿರುವ ಅಂಕಣಕಾರ ಕೆ.ಪಿ. ಸುರೇಶ್‌, ದೇಶದ ಪರಂಪರೆ, ಸ್ವಾತಂತ್ರ್ಯ ಹೋರಾಟದ ಕಷ್ಟ ಸುಖವನ್ನು ವಿವರಿಸಿದರು. ಸರಳವಾಗಿ ನಾವೆಲ್ಲರೂ ಜೊತೆಯಾಗಿ ಉಣ್ಣಬೇಕಾದ ಊಟವೆಂಬ ಸಾಮಾನ್ಯ ಸಂಗತಿಯೂ ಅಸೀಮ ಸಾಹಸದ ಸಂಗತಿಯಾಗಿರುವುದು ನಮ್ಮ ದುರಂತ ಎಂದು ಬೇಸರ ವ್ಯಕ್ತಪಡಿಸಿ, ಅಥಿತಿಗಳಿಗೆ ಶುಭ ಹಾರೈಸಿದರು.

ಇದನ್ನೂ ಓದಿ: ಸೌಹಾರ್ದ ಕಥನ: ಹಿಂದೂ ಯುವಕರಿಗೆ ಕೇಸರಿ ಶಾಲು ತೊಡಿಸಿದ ಮುಸ್ಲಿಮರು – ಹಣ್ಣು ತಿನ್ನಿಸಿ ಇಫ್ತಾರ್ ಆಚರಿಸಿದ ರಾಮ ಮಾಲಾ ಭಕ್ತರು

ಬಳಿಕ ಮಾತನಾಡಿದ ಮಹೇಶ್ ಅವರು, “ವ್ಯಾವಹಾರಿಕವಾಗಿ ನಾವೆಲ್ಲ ಪರಸ್ಪರ ಸ್ನೇಹದಲ್ಲಿದ್ದರೂ ನಮಗೆ ನೆರೆಮನೆಯ ಊಟ ಹಬ್ಬದ ಬಗ್ಗೆ ಗೊತ್ತಿಲ್ಲ. ಪರಸ್ಪರ ಊಟ, ಹಬ್ಬದ ಬಗ್ಗೆ ಕುತೂಹಲ, ಮೆಚ್ಚುಗೆ ಇದ್ದರಾಯಿತಲ್ಲ, ವ್ಯತ್ಯಾಸವೇ ಮುಖ್ಯವಾದರೆ ಹೇಗೆ? ಬಾಗಿಲು ಸರಿಸಿ ನಾವು ಒಳ ನುಗ್ಗಬೇಕಿದೆ, ಇದು ಅಂಥಾ ಒಂದು ವಿನೀತ ಪ್ರಯತ್ನ” ಎಂದು ಹೇಳಿದರು.

ಅಥಿತಿಗಳಲ್ಲೊಬ್ಬರಾದ ಮೈಸೂರಿನ ಕನ್ನಡ ಪ್ರೇಮಿ, ಮೆಡಿಕಲ್‌‌ ಅಂಗಡಿಯ ಮಾಲಿಕ ಮನ್ಸೂರ್ ಅಹ್ಮದ್ ಖಾನ್‌ ಅವರು ಮಾತನಾಡಿ, “ಇದು ಹಿಂದೂ-ಮುಸ್ಲಿಂ ಭೋಜನ ಕೂಟವಲ್ಲ. ನಾವೆಲ್ಲರೂ ದ್ರಾವಿಡ ಮಕ್ಕಳು, ಹಾಗಾಗಿ ಇದು ದ್ರಾವಿಡ ಮಕ್ಕಳ ಭೋಜನ ಕೂಟ. ಇದು ಹೆಚ್ಚಿದಷ್ಟೂ ನಮ್ಮ ಬಾಂಧವ್ಯ ಹೆಚ್ಚುತ್ತದೆ” ಎಂದರು.

ಕಾರ್ಯಕ್ರಮದಲ್ಲಿ, “ಕಟ್ಟುತ್ತೇವೆ ನಾವು, ಕಟ್ಟುತ್ತೇವೆ ನಾವು, ಕಟ್ಟೇ ಕಟ್ಟುತ್ತೇವಾ. ಒಡೆದ ಮನಸುಗಳ, ಕಂಡ ಕನಸುಗಳು ಮತ್ತೆ ಕಟ್ಟುತ್ತೇವೆ” ಹಾಡನ್ನು ಹಾಡಲಾಯಿತು. ಊಟವಾದ ಬಳಿಕ ರಾಷ್ಟ್ರಪಿತ ಮಹಾತ್ಮ ಗಾಂಧಿಜಿಯ ಭಾವಚಿತ್ರಕ್ಕೆ ಹೂ ಹಾಕಿ ಗೌರವಿಸಲಾಯಿತು.

ಇದನ್ನೂ ಓದಿ: ಬಿಹಾರ: ತೇಜಸ್ವಿ ಯಾದವ್‌‌ ಆಯೋಜಿಸಿದ್ದ ಇಫ್ತಾರ್‌‌ ಕೂಟದಲ್ಲಿ ಸಿಎಂ ನಿತೀಶ್‌ ಕುಮಾರ್‌ ಭಾಗಿ!; ಮತ್ತೊಮ್ಮೆ ‘ಮಹಾಘಟಬಂಧನ್‌’?

ಪ್ರಭು, ಗಣೇಶ, ಬೆಟ್ಟೇಗೌಡ, ಚಂದ್ರಶೇಖರ ಐಜೂರ್, ಉಮೇಶ್, ಕುಮಾರ್, ಲೆಕ್ಕ ಪರಿಶೋಧಕ ಆರಾಧ್ಯ ಮತ್ತು ಗೆಳೆಯರು ಸೌಹಾರ್ದ ಇಫ್ತಾರ್‌ ಕೂಟದ ಆಯೋಜನೆಗೆ ಕೈಜೋಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...