Homeಕರ್ನಾಟಕಮೈಸೂರಿನಲ್ಲಿ ಹೀಗೊಂದು ‘ದ್ರಾವಿಡ ಮಕ್ಕಳ ಸೌಹಾರ್ದ ಇಫ್ತಾರ್‌ ಕೂಟ’!

ಮೈಸೂರಿನಲ್ಲಿ ಹೀಗೊಂದು ‘ದ್ರಾವಿಡ ಮಕ್ಕಳ ಸೌಹಾರ್ದ ಇಫ್ತಾರ್‌ ಕೂಟ’!

- Advertisement -
- Advertisement -

ಮೈಸೂರಿನ ಸೌಹಾರ್ದ ಪ್ರಿಯ ನಾಗರಿಕರು ತಮ್ಮ ಆಸುಪಾಸು ಕೆಲಸ ಮಾಡುತ್ತಿದ್ದ ಶ್ರಮಜೀವಿ ಮುಸ್ಲಿಮರಿಗೆ ಇಫ್ತಾರ್‌ ಕೂಟ ಆಯೋಜಿಸಿ ಶುಕ್ರವಾರ ಸೌಹಾರ್ದತೆ ಮರೆದಿದ್ದಾರೆ. ಈ ವೇಳೆ ಇಫ್ತಾರಿಗೆ ಆಗಮಿಸಿದ್ದ ಅಥಿತಿಯೊಬ್ಬರು, ‘ಇದು ಹಿಂದೂ ಮುಸ್ಲಿಮರ ಇಫ್ತಾರ್‌‌ ಕೂಟವಲ್ಲ, ದ್ರಾವಿಡ ಮಕ್ಕಳ ಇಫ್ತಾರ್‌‌ ಕೂಟ’ ಎಂದು ಬಣ್ಣಿಸಿದ್ದಾರೆ.

ಸೌಹಾರ್ದ ಪ್ರಿಯ ನಾಗರಿಕರ ಈ ‘ದ್ರಾವಿಡ ಮಕ್ಕಳ ಸೌಹಾರ್ದ ಇಫ್ತಾರ್‌ ಕೂಟ’ ಮೈಸೂರು ಬಸ್‌ ನಿಲ್ದಾಣದ ಮುಂದೆ ಇರುವ ‘ಹೋಟೆಲ್‌ ಮಹಾರಾಜಾ’ದಲ್ಲಿ ಆಯೋಜಿಸಲಾಗಿತ್ತು. ನಿತ್ಯದ ಜೀವನದಲ್ಲಿ ಹಾಸುಹೊಕ್ಕಾಗಿ ಸುತ್ತಮುತ್ತ ಇರುವ ಶ್ರಮಜೀವಿ ಮುಸ್ಲಿಮರು ಈ ಇಪ್ತಾರ್‌ ಕೂಟದ ಅಥಿತಿಗಳಾಗಿದ್ದರು. ಗ್ಯಾರೇಜ್‌ಗಳಲ್ಲಿ ಕೆಲಸ ಮಾಡುವವರು, ಪಂಚರ್‌ ಅಂಗಡಿಗಳಲ್ಲಿ ಇರುವವರು ಹಾಗೂ ಹಣ್ಣಿನ ಅಂಗಡಿಗಳನ್ನು ನಡೆಸುವವರು ಸೇರಿದಂತೆ ಹಲವು ಶ್ರಮ ಜೀವಿ ಮುಸ್ಲಿಮರಿಗೆ ಆಹ್ವಾನ ನೀಡಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಯೋಜಕರು ಅಥಿಗಳಿಗೆ ಹೂವು ನೀಡಿ ಸ್ವಾಗತಿಸಿದರು. ಈ ವೇಳೆ ಆಯೋಜಕರಲ್ಲೊಬ್ಬರಾಗಿರುವ ಅಂಕಣಕಾರ ಕೆ.ಪಿ. ಸುರೇಶ್‌, ದೇಶದ ಪರಂಪರೆ, ಸ್ವಾತಂತ್ರ್ಯ ಹೋರಾಟದ ಕಷ್ಟ ಸುಖವನ್ನು ವಿವರಿಸಿದರು. ಸರಳವಾಗಿ ನಾವೆಲ್ಲರೂ ಜೊತೆಯಾಗಿ ಉಣ್ಣಬೇಕಾದ ಊಟವೆಂಬ ಸಾಮಾನ್ಯ ಸಂಗತಿಯೂ ಅಸೀಮ ಸಾಹಸದ ಸಂಗತಿಯಾಗಿರುವುದು ನಮ್ಮ ದುರಂತ ಎಂದು ಬೇಸರ ವ್ಯಕ್ತಪಡಿಸಿ, ಅಥಿತಿಗಳಿಗೆ ಶುಭ ಹಾರೈಸಿದರು.

ಇದನ್ನೂ ಓದಿ: ಸೌಹಾರ್ದ ಕಥನ: ಹಿಂದೂ ಯುವಕರಿಗೆ ಕೇಸರಿ ಶಾಲು ತೊಡಿಸಿದ ಮುಸ್ಲಿಮರು – ಹಣ್ಣು ತಿನ್ನಿಸಿ ಇಫ್ತಾರ್ ಆಚರಿಸಿದ ರಾಮ ಮಾಲಾ ಭಕ್ತರು

ಬಳಿಕ ಮಾತನಾಡಿದ ಮಹೇಶ್ ಅವರು, “ವ್ಯಾವಹಾರಿಕವಾಗಿ ನಾವೆಲ್ಲ ಪರಸ್ಪರ ಸ್ನೇಹದಲ್ಲಿದ್ದರೂ ನಮಗೆ ನೆರೆಮನೆಯ ಊಟ ಹಬ್ಬದ ಬಗ್ಗೆ ಗೊತ್ತಿಲ್ಲ. ಪರಸ್ಪರ ಊಟ, ಹಬ್ಬದ ಬಗ್ಗೆ ಕುತೂಹಲ, ಮೆಚ್ಚುಗೆ ಇದ್ದರಾಯಿತಲ್ಲ, ವ್ಯತ್ಯಾಸವೇ ಮುಖ್ಯವಾದರೆ ಹೇಗೆ? ಬಾಗಿಲು ಸರಿಸಿ ನಾವು ಒಳ ನುಗ್ಗಬೇಕಿದೆ, ಇದು ಅಂಥಾ ಒಂದು ವಿನೀತ ಪ್ರಯತ್ನ” ಎಂದು ಹೇಳಿದರು.

ಅಥಿತಿಗಳಲ್ಲೊಬ್ಬರಾದ ಮೈಸೂರಿನ ಕನ್ನಡ ಪ್ರೇಮಿ, ಮೆಡಿಕಲ್‌‌ ಅಂಗಡಿಯ ಮಾಲಿಕ ಮನ್ಸೂರ್ ಅಹ್ಮದ್ ಖಾನ್‌ ಅವರು ಮಾತನಾಡಿ, “ಇದು ಹಿಂದೂ-ಮುಸ್ಲಿಂ ಭೋಜನ ಕೂಟವಲ್ಲ. ನಾವೆಲ್ಲರೂ ದ್ರಾವಿಡ ಮಕ್ಕಳು, ಹಾಗಾಗಿ ಇದು ದ್ರಾವಿಡ ಮಕ್ಕಳ ಭೋಜನ ಕೂಟ. ಇದು ಹೆಚ್ಚಿದಷ್ಟೂ ನಮ್ಮ ಬಾಂಧವ್ಯ ಹೆಚ್ಚುತ್ತದೆ” ಎಂದರು.

ಕಾರ್ಯಕ್ರಮದಲ್ಲಿ, “ಕಟ್ಟುತ್ತೇವೆ ನಾವು, ಕಟ್ಟುತ್ತೇವೆ ನಾವು, ಕಟ್ಟೇ ಕಟ್ಟುತ್ತೇವಾ. ಒಡೆದ ಮನಸುಗಳ, ಕಂಡ ಕನಸುಗಳು ಮತ್ತೆ ಕಟ್ಟುತ್ತೇವೆ” ಹಾಡನ್ನು ಹಾಡಲಾಯಿತು. ಊಟವಾದ ಬಳಿಕ ರಾಷ್ಟ್ರಪಿತ ಮಹಾತ್ಮ ಗಾಂಧಿಜಿಯ ಭಾವಚಿತ್ರಕ್ಕೆ ಹೂ ಹಾಕಿ ಗೌರವಿಸಲಾಯಿತು.

ಇದನ್ನೂ ಓದಿ: ಬಿಹಾರ: ತೇಜಸ್ವಿ ಯಾದವ್‌‌ ಆಯೋಜಿಸಿದ್ದ ಇಫ್ತಾರ್‌‌ ಕೂಟದಲ್ಲಿ ಸಿಎಂ ನಿತೀಶ್‌ ಕುಮಾರ್‌ ಭಾಗಿ!; ಮತ್ತೊಮ್ಮೆ ‘ಮಹಾಘಟಬಂಧನ್‌’?

ಪ್ರಭು, ಗಣೇಶ, ಬೆಟ್ಟೇಗೌಡ, ಚಂದ್ರಶೇಖರ ಐಜೂರ್, ಉಮೇಶ್, ಕುಮಾರ್, ಲೆಕ್ಕ ಪರಿಶೋಧಕ ಆರಾಧ್ಯ ಮತ್ತು ಗೆಳೆಯರು ಸೌಹಾರ್ದ ಇಫ್ತಾರ್‌ ಕೂಟದ ಆಯೋಜನೆಗೆ ಕೈಜೋಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...