Homeಕರ್ನಾಟಕಮೈಸೂರಿನಲ್ಲಿ ಹೀಗೊಂದು ‘ದ್ರಾವಿಡ ಮಕ್ಕಳ ಸೌಹಾರ್ದ ಇಫ್ತಾರ್‌ ಕೂಟ’!

ಮೈಸೂರಿನಲ್ಲಿ ಹೀಗೊಂದು ‘ದ್ರಾವಿಡ ಮಕ್ಕಳ ಸೌಹಾರ್ದ ಇಫ್ತಾರ್‌ ಕೂಟ’!

- Advertisement -
- Advertisement -

ಮೈಸೂರಿನ ಸೌಹಾರ್ದ ಪ್ರಿಯ ನಾಗರಿಕರು ತಮ್ಮ ಆಸುಪಾಸು ಕೆಲಸ ಮಾಡುತ್ತಿದ್ದ ಶ್ರಮಜೀವಿ ಮುಸ್ಲಿಮರಿಗೆ ಇಫ್ತಾರ್‌ ಕೂಟ ಆಯೋಜಿಸಿ ಶುಕ್ರವಾರ ಸೌಹಾರ್ದತೆ ಮರೆದಿದ್ದಾರೆ. ಈ ವೇಳೆ ಇಫ್ತಾರಿಗೆ ಆಗಮಿಸಿದ್ದ ಅಥಿತಿಯೊಬ್ಬರು, ‘ಇದು ಹಿಂದೂ ಮುಸ್ಲಿಮರ ಇಫ್ತಾರ್‌‌ ಕೂಟವಲ್ಲ, ದ್ರಾವಿಡ ಮಕ್ಕಳ ಇಫ್ತಾರ್‌‌ ಕೂಟ’ ಎಂದು ಬಣ್ಣಿಸಿದ್ದಾರೆ.

ಸೌಹಾರ್ದ ಪ್ರಿಯ ನಾಗರಿಕರ ಈ ‘ದ್ರಾವಿಡ ಮಕ್ಕಳ ಸೌಹಾರ್ದ ಇಫ್ತಾರ್‌ ಕೂಟ’ ಮೈಸೂರು ಬಸ್‌ ನಿಲ್ದಾಣದ ಮುಂದೆ ಇರುವ ‘ಹೋಟೆಲ್‌ ಮಹಾರಾಜಾ’ದಲ್ಲಿ ಆಯೋಜಿಸಲಾಗಿತ್ತು. ನಿತ್ಯದ ಜೀವನದಲ್ಲಿ ಹಾಸುಹೊಕ್ಕಾಗಿ ಸುತ್ತಮುತ್ತ ಇರುವ ಶ್ರಮಜೀವಿ ಮುಸ್ಲಿಮರು ಈ ಇಪ್ತಾರ್‌ ಕೂಟದ ಅಥಿತಿಗಳಾಗಿದ್ದರು. ಗ್ಯಾರೇಜ್‌ಗಳಲ್ಲಿ ಕೆಲಸ ಮಾಡುವವರು, ಪಂಚರ್‌ ಅಂಗಡಿಗಳಲ್ಲಿ ಇರುವವರು ಹಾಗೂ ಹಣ್ಣಿನ ಅಂಗಡಿಗಳನ್ನು ನಡೆಸುವವರು ಸೇರಿದಂತೆ ಹಲವು ಶ್ರಮ ಜೀವಿ ಮುಸ್ಲಿಮರಿಗೆ ಆಹ್ವಾನ ನೀಡಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಯೋಜಕರು ಅಥಿಗಳಿಗೆ ಹೂವು ನೀಡಿ ಸ್ವಾಗತಿಸಿದರು. ಈ ವೇಳೆ ಆಯೋಜಕರಲ್ಲೊಬ್ಬರಾಗಿರುವ ಅಂಕಣಕಾರ ಕೆ.ಪಿ. ಸುರೇಶ್‌, ದೇಶದ ಪರಂಪರೆ, ಸ್ವಾತಂತ್ರ್ಯ ಹೋರಾಟದ ಕಷ್ಟ ಸುಖವನ್ನು ವಿವರಿಸಿದರು. ಸರಳವಾಗಿ ನಾವೆಲ್ಲರೂ ಜೊತೆಯಾಗಿ ಉಣ್ಣಬೇಕಾದ ಊಟವೆಂಬ ಸಾಮಾನ್ಯ ಸಂಗತಿಯೂ ಅಸೀಮ ಸಾಹಸದ ಸಂಗತಿಯಾಗಿರುವುದು ನಮ್ಮ ದುರಂತ ಎಂದು ಬೇಸರ ವ್ಯಕ್ತಪಡಿಸಿ, ಅಥಿತಿಗಳಿಗೆ ಶುಭ ಹಾರೈಸಿದರು.

ಇದನ್ನೂ ಓದಿ: ಸೌಹಾರ್ದ ಕಥನ: ಹಿಂದೂ ಯುವಕರಿಗೆ ಕೇಸರಿ ಶಾಲು ತೊಡಿಸಿದ ಮುಸ್ಲಿಮರು – ಹಣ್ಣು ತಿನ್ನಿಸಿ ಇಫ್ತಾರ್ ಆಚರಿಸಿದ ರಾಮ ಮಾಲಾ ಭಕ್ತರು

ಬಳಿಕ ಮಾತನಾಡಿದ ಮಹೇಶ್ ಅವರು, “ವ್ಯಾವಹಾರಿಕವಾಗಿ ನಾವೆಲ್ಲ ಪರಸ್ಪರ ಸ್ನೇಹದಲ್ಲಿದ್ದರೂ ನಮಗೆ ನೆರೆಮನೆಯ ಊಟ ಹಬ್ಬದ ಬಗ್ಗೆ ಗೊತ್ತಿಲ್ಲ. ಪರಸ್ಪರ ಊಟ, ಹಬ್ಬದ ಬಗ್ಗೆ ಕುತೂಹಲ, ಮೆಚ್ಚುಗೆ ಇದ್ದರಾಯಿತಲ್ಲ, ವ್ಯತ್ಯಾಸವೇ ಮುಖ್ಯವಾದರೆ ಹೇಗೆ? ಬಾಗಿಲು ಸರಿಸಿ ನಾವು ಒಳ ನುಗ್ಗಬೇಕಿದೆ, ಇದು ಅಂಥಾ ಒಂದು ವಿನೀತ ಪ್ರಯತ್ನ” ಎಂದು ಹೇಳಿದರು.

ಅಥಿತಿಗಳಲ್ಲೊಬ್ಬರಾದ ಮೈಸೂರಿನ ಕನ್ನಡ ಪ್ರೇಮಿ, ಮೆಡಿಕಲ್‌‌ ಅಂಗಡಿಯ ಮಾಲಿಕ ಮನ್ಸೂರ್ ಅಹ್ಮದ್ ಖಾನ್‌ ಅವರು ಮಾತನಾಡಿ, “ಇದು ಹಿಂದೂ-ಮುಸ್ಲಿಂ ಭೋಜನ ಕೂಟವಲ್ಲ. ನಾವೆಲ್ಲರೂ ದ್ರಾವಿಡ ಮಕ್ಕಳು, ಹಾಗಾಗಿ ಇದು ದ್ರಾವಿಡ ಮಕ್ಕಳ ಭೋಜನ ಕೂಟ. ಇದು ಹೆಚ್ಚಿದಷ್ಟೂ ನಮ್ಮ ಬಾಂಧವ್ಯ ಹೆಚ್ಚುತ್ತದೆ” ಎಂದರು.

ಕಾರ್ಯಕ್ರಮದಲ್ಲಿ, “ಕಟ್ಟುತ್ತೇವೆ ನಾವು, ಕಟ್ಟುತ್ತೇವೆ ನಾವು, ಕಟ್ಟೇ ಕಟ್ಟುತ್ತೇವಾ. ಒಡೆದ ಮನಸುಗಳ, ಕಂಡ ಕನಸುಗಳು ಮತ್ತೆ ಕಟ್ಟುತ್ತೇವೆ” ಹಾಡನ್ನು ಹಾಡಲಾಯಿತು. ಊಟವಾದ ಬಳಿಕ ರಾಷ್ಟ್ರಪಿತ ಮಹಾತ್ಮ ಗಾಂಧಿಜಿಯ ಭಾವಚಿತ್ರಕ್ಕೆ ಹೂ ಹಾಕಿ ಗೌರವಿಸಲಾಯಿತು.

ಇದನ್ನೂ ಓದಿ: ಬಿಹಾರ: ತೇಜಸ್ವಿ ಯಾದವ್‌‌ ಆಯೋಜಿಸಿದ್ದ ಇಫ್ತಾರ್‌‌ ಕೂಟದಲ್ಲಿ ಸಿಎಂ ನಿತೀಶ್‌ ಕುಮಾರ್‌ ಭಾಗಿ!; ಮತ್ತೊಮ್ಮೆ ‘ಮಹಾಘಟಬಂಧನ್‌’?

ಪ್ರಭು, ಗಣೇಶ, ಬೆಟ್ಟೇಗೌಡ, ಚಂದ್ರಶೇಖರ ಐಜೂರ್, ಉಮೇಶ್, ಕುಮಾರ್, ಲೆಕ್ಕ ಪರಿಶೋಧಕ ಆರಾಧ್ಯ ಮತ್ತು ಗೆಳೆಯರು ಸೌಹಾರ್ದ ಇಫ್ತಾರ್‌ ಕೂಟದ ಆಯೋಜನೆಗೆ ಕೈಜೋಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...