Homeಕರ್ನಾಟಕಮೈಸೂರಿನಲ್ಲಿ ಹೀಗೊಂದು ‘ದ್ರಾವಿಡ ಮಕ್ಕಳ ಸೌಹಾರ್ದ ಇಫ್ತಾರ್‌ ಕೂಟ’!

ಮೈಸೂರಿನಲ್ಲಿ ಹೀಗೊಂದು ‘ದ್ರಾವಿಡ ಮಕ್ಕಳ ಸೌಹಾರ್ದ ಇಫ್ತಾರ್‌ ಕೂಟ’!

- Advertisement -
- Advertisement -

ಮೈಸೂರಿನ ಸೌಹಾರ್ದ ಪ್ರಿಯ ನಾಗರಿಕರು ತಮ್ಮ ಆಸುಪಾಸು ಕೆಲಸ ಮಾಡುತ್ತಿದ್ದ ಶ್ರಮಜೀವಿ ಮುಸ್ಲಿಮರಿಗೆ ಇಫ್ತಾರ್‌ ಕೂಟ ಆಯೋಜಿಸಿ ಶುಕ್ರವಾರ ಸೌಹಾರ್ದತೆ ಮರೆದಿದ್ದಾರೆ. ಈ ವೇಳೆ ಇಫ್ತಾರಿಗೆ ಆಗಮಿಸಿದ್ದ ಅಥಿತಿಯೊಬ್ಬರು, ‘ಇದು ಹಿಂದೂ ಮುಸ್ಲಿಮರ ಇಫ್ತಾರ್‌‌ ಕೂಟವಲ್ಲ, ದ್ರಾವಿಡ ಮಕ್ಕಳ ಇಫ್ತಾರ್‌‌ ಕೂಟ’ ಎಂದು ಬಣ್ಣಿಸಿದ್ದಾರೆ.

ಸೌಹಾರ್ದ ಪ್ರಿಯ ನಾಗರಿಕರ ಈ ‘ದ್ರಾವಿಡ ಮಕ್ಕಳ ಸೌಹಾರ್ದ ಇಫ್ತಾರ್‌ ಕೂಟ’ ಮೈಸೂರು ಬಸ್‌ ನಿಲ್ದಾಣದ ಮುಂದೆ ಇರುವ ‘ಹೋಟೆಲ್‌ ಮಹಾರಾಜಾ’ದಲ್ಲಿ ಆಯೋಜಿಸಲಾಗಿತ್ತು. ನಿತ್ಯದ ಜೀವನದಲ್ಲಿ ಹಾಸುಹೊಕ್ಕಾಗಿ ಸುತ್ತಮುತ್ತ ಇರುವ ಶ್ರಮಜೀವಿ ಮುಸ್ಲಿಮರು ಈ ಇಪ್ತಾರ್‌ ಕೂಟದ ಅಥಿತಿಗಳಾಗಿದ್ದರು. ಗ್ಯಾರೇಜ್‌ಗಳಲ್ಲಿ ಕೆಲಸ ಮಾಡುವವರು, ಪಂಚರ್‌ ಅಂಗಡಿಗಳಲ್ಲಿ ಇರುವವರು ಹಾಗೂ ಹಣ್ಣಿನ ಅಂಗಡಿಗಳನ್ನು ನಡೆಸುವವರು ಸೇರಿದಂತೆ ಹಲವು ಶ್ರಮ ಜೀವಿ ಮುಸ್ಲಿಮರಿಗೆ ಆಹ್ವಾನ ನೀಡಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಯೋಜಕರು ಅಥಿಗಳಿಗೆ ಹೂವು ನೀಡಿ ಸ್ವಾಗತಿಸಿದರು. ಈ ವೇಳೆ ಆಯೋಜಕರಲ್ಲೊಬ್ಬರಾಗಿರುವ ಅಂಕಣಕಾರ ಕೆ.ಪಿ. ಸುರೇಶ್‌, ದೇಶದ ಪರಂಪರೆ, ಸ್ವಾತಂತ್ರ್ಯ ಹೋರಾಟದ ಕಷ್ಟ ಸುಖವನ್ನು ವಿವರಿಸಿದರು. ಸರಳವಾಗಿ ನಾವೆಲ್ಲರೂ ಜೊತೆಯಾಗಿ ಉಣ್ಣಬೇಕಾದ ಊಟವೆಂಬ ಸಾಮಾನ್ಯ ಸಂಗತಿಯೂ ಅಸೀಮ ಸಾಹಸದ ಸಂಗತಿಯಾಗಿರುವುದು ನಮ್ಮ ದುರಂತ ಎಂದು ಬೇಸರ ವ್ಯಕ್ತಪಡಿಸಿ, ಅಥಿತಿಗಳಿಗೆ ಶುಭ ಹಾರೈಸಿದರು.

ಇದನ್ನೂ ಓದಿ: ಸೌಹಾರ್ದ ಕಥನ: ಹಿಂದೂ ಯುವಕರಿಗೆ ಕೇಸರಿ ಶಾಲು ತೊಡಿಸಿದ ಮುಸ್ಲಿಮರು – ಹಣ್ಣು ತಿನ್ನಿಸಿ ಇಫ್ತಾರ್ ಆಚರಿಸಿದ ರಾಮ ಮಾಲಾ ಭಕ್ತರು

ಬಳಿಕ ಮಾತನಾಡಿದ ಮಹೇಶ್ ಅವರು, “ವ್ಯಾವಹಾರಿಕವಾಗಿ ನಾವೆಲ್ಲ ಪರಸ್ಪರ ಸ್ನೇಹದಲ್ಲಿದ್ದರೂ ನಮಗೆ ನೆರೆಮನೆಯ ಊಟ ಹಬ್ಬದ ಬಗ್ಗೆ ಗೊತ್ತಿಲ್ಲ. ಪರಸ್ಪರ ಊಟ, ಹಬ್ಬದ ಬಗ್ಗೆ ಕುತೂಹಲ, ಮೆಚ್ಚುಗೆ ಇದ್ದರಾಯಿತಲ್ಲ, ವ್ಯತ್ಯಾಸವೇ ಮುಖ್ಯವಾದರೆ ಹೇಗೆ? ಬಾಗಿಲು ಸರಿಸಿ ನಾವು ಒಳ ನುಗ್ಗಬೇಕಿದೆ, ಇದು ಅಂಥಾ ಒಂದು ವಿನೀತ ಪ್ರಯತ್ನ” ಎಂದು ಹೇಳಿದರು.

ಅಥಿತಿಗಳಲ್ಲೊಬ್ಬರಾದ ಮೈಸೂರಿನ ಕನ್ನಡ ಪ್ರೇಮಿ, ಮೆಡಿಕಲ್‌‌ ಅಂಗಡಿಯ ಮಾಲಿಕ ಮನ್ಸೂರ್ ಅಹ್ಮದ್ ಖಾನ್‌ ಅವರು ಮಾತನಾಡಿ, “ಇದು ಹಿಂದೂ-ಮುಸ್ಲಿಂ ಭೋಜನ ಕೂಟವಲ್ಲ. ನಾವೆಲ್ಲರೂ ದ್ರಾವಿಡ ಮಕ್ಕಳು, ಹಾಗಾಗಿ ಇದು ದ್ರಾವಿಡ ಮಕ್ಕಳ ಭೋಜನ ಕೂಟ. ಇದು ಹೆಚ್ಚಿದಷ್ಟೂ ನಮ್ಮ ಬಾಂಧವ್ಯ ಹೆಚ್ಚುತ್ತದೆ” ಎಂದರು.

ಕಾರ್ಯಕ್ರಮದಲ್ಲಿ, “ಕಟ್ಟುತ್ತೇವೆ ನಾವು, ಕಟ್ಟುತ್ತೇವೆ ನಾವು, ಕಟ್ಟೇ ಕಟ್ಟುತ್ತೇವಾ. ಒಡೆದ ಮನಸುಗಳ, ಕಂಡ ಕನಸುಗಳು ಮತ್ತೆ ಕಟ್ಟುತ್ತೇವೆ” ಹಾಡನ್ನು ಹಾಡಲಾಯಿತು. ಊಟವಾದ ಬಳಿಕ ರಾಷ್ಟ್ರಪಿತ ಮಹಾತ್ಮ ಗಾಂಧಿಜಿಯ ಭಾವಚಿತ್ರಕ್ಕೆ ಹೂ ಹಾಕಿ ಗೌರವಿಸಲಾಯಿತು.

ಇದನ್ನೂ ಓದಿ: ಬಿಹಾರ: ತೇಜಸ್ವಿ ಯಾದವ್‌‌ ಆಯೋಜಿಸಿದ್ದ ಇಫ್ತಾರ್‌‌ ಕೂಟದಲ್ಲಿ ಸಿಎಂ ನಿತೀಶ್‌ ಕುಮಾರ್‌ ಭಾಗಿ!; ಮತ್ತೊಮ್ಮೆ ‘ಮಹಾಘಟಬಂಧನ್‌’?

ಪ್ರಭು, ಗಣೇಶ, ಬೆಟ್ಟೇಗೌಡ, ಚಂದ್ರಶೇಖರ ಐಜೂರ್, ಉಮೇಶ್, ಕುಮಾರ್, ಲೆಕ್ಕ ಪರಿಶೋಧಕ ಆರಾಧ್ಯ ಮತ್ತು ಗೆಳೆಯರು ಸೌಹಾರ್ದ ಇಫ್ತಾರ್‌ ಕೂಟದ ಆಯೋಜನೆಗೆ ಕೈಜೋಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....