Homeಮುಖಪುಟದ್ರಾವಿಡ ಚಳವಳಿ ನೇತಾರ ಅಣ್ಣಾದೊರೈ ಜನ್ಮದಿನ: #UnitedStatesOfIndia ಟ್ರೆಂಡ್

ದ್ರಾವಿಡ ಚಳವಳಿ ನೇತಾರ ಅಣ್ಣಾದೊರೈ ಜನ್ಮದಿನ: #UnitedStatesOfIndia ಟ್ರೆಂಡ್

ಕೇಂದ್ರ ಸರ್ಕಾರ ಭಾಷೆಯ ಹೆಸರಲ್ಲಿ, ಸಂಸ್ಕೃತಿಯ ಹೆಸರಲ್ಲಿ ಅಧಿಕಾರವನ್ನು ಕೇಂದ್ರೀಕರಣ ಮಾಡುತ್ತಿರುವುದರ ವಿರುದ್ದ ನೆಟ್ಟಿಗರು ಧ್ವನಿ ಎತ್ತಿದ್ದಾರೆ

- Advertisement -
- Advertisement -

ಇಂದು ದ್ರಾವಿಡ ಚಳವಳಿ ನೇತಾರ, ಡಿಎಂಕೆ ಸ್ಥಾಪಕ ಸಿ.ಎನ್.‌ ಅಣ್ಣಾದೊರೈ ಅವರ 112 ನೇ ಜನ್ಮದಿನವಾಗಿದ್ದು ಟ್ವಿಟ್ಟರ್‌ನಲ್ಲಿ  #UnitedStatesOfIndia ಟ್ರೆಂಡ್ ಆಗಿದೆ. ಹಿಂದಿ ಹೇರಿಕೆಯನ್ನು ವಿರೋಧಿಸಿ ನಿರಂತರ ಹೋರಾಟ ನಡೆಸಿದ್ದ ಅಣ್ಣಾದೊರೈ ತಮಿಳುನಾಡಿನಲ್ಲಿ ದ್ವಿಭಾಷಾ ನೀತಿಯನ್ನು ಜಾರಿಗೊಳಿಸಿದವರಾಗಿದ್ದಾರೆ.

ಕೇಂದ್ರ ಸರ್ಕಾರ ಭಾಷೆಯ ಹೆಸರಲ್ಲಿ, ಸಂಸ್ಕೃತಿಯ ಹೆಸರಲ್ಲಿ ಅಧಿಕಾರವನ್ನು ಕೇಂದ್ರೀಕರಣ ಮಾಡುತ್ತಿರುವುದರ ವಿರುದ್ದ ಧ್ವನಿ ಎತ್ತಿರುವ ನೆಟ್ಟಿಗರು ಒಕ್ಕೂಟ ವ್ಯವಸ್ಥೆ ಗಟ್ಟಿಯಾಗಲು ದೇಶವು ’ಭಾರತ ಸಂಯುಕ್ತ ರಾಜ್ಯ’ ಆಗಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ. ಇದನ್ನು ತಮಿಳುನಾಡಿನ ಮೊದಲ ಮುಖ್ಯಮಂತ್ರಿಯಾಗಿದ್ದ ಅಣ್ಣಾದೊರೈ ಕೂಡಾ ಆಗ್ರಹಿಸಿದ್ದರು ಎನ್ನಲಾಗಿದ್ದು, ಈ ಹಿನ್ನಲೆಯಲ್ಲಿ #UnitedStatesOfIndia ಟ್ರೆಂಡ್ ಆಗಿದೆ.

ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ಸಂಯುಕ್ತ ಒಕ್ಕೂಟ ರಾಜ್ಯ ವ್ಯವಸ್ಥೆಯಲ್ಲಿ ಪ್ರತಿಯೊಂದು ರಾಜ್ಯಗಳೂ ತನ್ನದೇ ಆದ ಅಧಿಕಾರವನ್ನು ಹೊಂದಿರುತ್ತದೆ. ಇಲ್ಲಿ ಹೆಚ್ಚನ ಅಧಿಕಾರವು ವಿಕೇಂದ್ರೀಕರಣಗೊಂಡಿರುತ್ತದೆ.

ಪ್ರಸ್ತುತ ಅಣ್ಣಾ ದೊರೈ ಅವರ ಜನ್ಮ ದಿನದ ಹಿನ್ನಲೆಯಲ್ಲಿ #UnitedStatesOfIndia ಟ್ರೆಂಡ್ ಆಗಿದ್ದರೂ ಭಾರತ ಇತರ ಭಾಗದ ಜನರು ಕೂಡಾ ಇದಕ್ಕೆ ಧ್ವನಿ ಸೇರಿಸಿದ್ದಾರೆ.

ನಿತ್ಯಾನಂದನ್ ಎಂಬವರು ಟ್ವೀಟ್ ಮಾಡಿ, “ತಮಿಳುನಾಡು ಒಂದು ರಾಜ್ಯವಾಗಿದೆ, ಅದು ಭಾರತದ ವಸಾಹತು ಅಲ್ಲ” ಎಂದು ಹೇಳಿದ್ದಾರೆ.

ಅಜಿತ್ ಮನ್ನ ಎಂಬುವವರು, “ಫ್ಯಾಸಿಸಮ್ ಕೇಂದ್ರೀಕರಣವನ್ನು ಬಯಸುತ್ತದೆ. ಅಭಿವೃದ್ದಿಗೆ ಒಕ್ಕೂಟ ವ್ಯವಸ್ಥೆಯನ್ನು ಬಯಸುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

ಸೌತ್ ಇಂಡಿಯನ್ ಬಾಯ್ ಎಂಬ ಟ್ವಿಟ್ಟರ್‌ ಹ್ಯಾಂಡಲ್, “ಭಾರತ ಒಂದು ರಾಷ್ಟ್ರವಲ್ಲ, ಅದು ಹಲವಾರು ಜನಾಂಗೀಯ ಗುಂಪಿನ ಒಕ್ಕೂಟವಾಗಿದೆ. ಒಂದೇ ಭಾಷೆ ಇಡೀ ಒಕ್ಕೂಟಕ್ಕೆ ಅಸಾಧ್ಯವಾಗಿದೆ.” ಎಂದು ಬರೆದಿದೆ.

ತಮಿಳಿಗರು ಮಾತ್ರವಲ್ಲದೆ ಬಂಗಾಳಿಗರು ಕೂಡಾ #UnitedStatesOfIndia ಗೆ ಬೆಂಬಲ ನೀಡಿದ್ದು, “ಬಂಗಾಳ ಸಂಪತ್ತನ್ನು ಸೃಷ್ಟಿಸುತ್ತದೆ, ಹಿಂದಿ ಪ್ರದೇಶ ಅದನ್ನು ಉಪಯೋಗಿಸುತ್ತದೆ ಆದರೆ ನಮ್ಮನ್ನು ದೇಶ ವಿರೋಧಿಗಳು ಎಂದು ಕರೆಯುತ್ತಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ’ಹಿಂದಿ’ ದಕ್ಷಿಣ ಭಾರತೀಯರ ಅವಕಾಶಗಳನ್ನು ಕಸಿದಿದೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...