Homeಮುಖಪುಟ'ದೇಶಿ ನಿರ್ಮಿತ ಶಸ್ತ್ರಾಸ್ತ್ರಗಳಿಂದ ಮುಂದಿನ ಯುದ್ಧ ಗೆಲ್ಲುತ್ತೇವೆ': ಸೇನಾ ಮುಖ್ಯಸ್ಥ ಬಿಪಿನ್ ರಾವತ್

‘ದೇಶಿ ನಿರ್ಮಿತ ಶಸ್ತ್ರಾಸ್ತ್ರಗಳಿಂದ ಮುಂದಿನ ಯುದ್ಧ ಗೆಲ್ಲುತ್ತೇವೆ’: ಸೇನಾ ಮುಖ್ಯಸ್ಥ ಬಿಪಿನ್ ರಾವತ್

- Advertisement -
- Advertisement -

ಸ್ಥಳೀಯ ಯುದ್ಧ ವ್ಯವಸ್ಥೆ ಹಾಗೂ ದೇಶೀಯ ಶಸ್ತ್ರಾಸ್ತ್ರಗಳ ಮೂಲಕ ನಾವು ಮುಂದಿನ ಯುದ್ಧವನ್ನು ಗೆಲ್ಲುತ್ತೇವೆ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ. ಸೈಬರ್, ಬಾಹ್ಯಾಕಾಶ ತಂತ್ರಜ್ಞಾನ, ಲೇಸರ್, ಎಲೆಕ್ಟ್ರಾನಿಕ್ ವಾರ್ ಫೇರ್, ರೊಬೋಟಿಕ್ಸ್ ಅಭಿವೃದ್ಧಿಯಲ್ಲಿ ಭವಿಷ್ಯವಿದೆ ಎಂದಿದ್ದಾರೆ.

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) 41 ನೇ ನಿರ್ದೇಶಕರ ಸಮಾವೇಶದಲ್ಲಿ ಮಾತನಾಡಿದ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ದೇಶದಲ್ಲಿ ರಕ್ಷಣಾ ಸೇವೆಗಳ ಅಗತ್ಯತೆಗಳನ್ನು ಪೂರೈಸಲು ಸ್ಥಳೀಯ ಶಸ್ತ್ರಾಸ್ತ್ರ ವ್ಯವಸ್ಥೆಯನ್ನೇ ಬಳಕೆ ಮಾಡಲಾಗುವುದು. ದೇಶೀಯ ಶಸ್ತ್ರಾಸ್ತ್ರ ವ್ಯವಸ್ಥೆಯ ಮೂಲಕವೇ ಮುಂದಿನ ಯುದ್ಧದಲ್ಲಿ ಹೋರಾಟ ಮಾಡಿ ಗೆಲ್ಲುತ್ತೇವೆ. ಸ್ಥಳೀಯವಾಗಿ ತಯಾರಿಸಲಾಗುವ ಶಸ್ತ್ರಾಸ್ತ್ರ, ಯುದ್ಧ ಸಾಮಗ್ರಿಗಳ ತಯಾರಿಕೆಯಲ್ಲಿ ಡಿಆರ್ ಡಿಒ ಪ್ರಗತಿ ಸಾಧಿಸಿದೆ ಎಂದು ರಾವತ್ ಹೇಳಿದ್ದಾರೆ.

ಸರ್ಕಾರಿ ಸಂಸ್ಥೆಯಾಗಿರುವ ಡಿಆರ್ ಡಿಒ, 52 ಪ್ರಯೋಗಾಲಯಗಳ ಸಂಪರ್ಕ ಹೊಂದಿದೆ. ಏರೋನಾಟಿಕ್ಸ್, ಲ್ಯಾಂಡ್ ಕಾಂಬ್ಯಾಟ್ ಎಂಜಿನಿಯರಿಂಗ್, ಶಸ್ತ್ರಾಸ್ತ್ರ, ಎಲೆಕ್ಟ್ರಾನಿಕ್ಸ್, ಕ್ಷಿಪಣಿ ಮತ್ತು ನೌಕಾ ವ್ಯವಸ್ಥೆಗಳಂತಹ ವಿವಿಧ ಕ್ಷೇತ್ರಗಳನ್ನು ಒಳಗೊಂಡ ಮಿಲಿಟರಿಯ ಸಂಶೋಧನೆ ಮತ್ತು ಅಭಿವೃದ್ಧಿಯ ಕೊಂಡಿಯಾಗಿದೆ. ದೇಶದ ರಕ್ಷಣಾ ಉದ್ಯಮ ಈಗ ಮೊಳಕೆಯೊಡೆಯುತ್ತಿದೆ. ಭವಿಷ್ಯದಲ್ಲಿ ಗಡಿಗಳ ಭದ್ರತೆ, ಯುದ್ಧ ಸಮಯದಲ್ಲಿ ಹೋರಾಟ ನಡೆಸಲು ಬೇಕಾದ ಯುದ್ಧ ಸಾಮಗ್ರಿಗಳ ವ್ಯವಸ್ಥೆಯ ಅಭಿವೃದ್ಧಿಯನ್ನು ನೋಡುವ ಸಮಯ ಬಂದಿದೆ. ಸಂಪರ್ಕ ರಹಿತ ಯುದ್ಧ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳುವಂತೆ ರಾವತ್ ಕರೆ ನೀಡಿದ್ದಾರೆ.

ಭವಿಷ್ಯದಲ್ಲಿ ಯುದ್ಧ ಸ್ಥಿತಿಗತಿ ನಿಭಾಯಿಸಲು ಸೈಬರ್, ಬಾಹ್ಯಾಕಾಶ ತಂತ್ರಜ್ಞಾನ, ಲೇಸರ್, ಎಲೆಕ್ಟ್ರಾನಿಕ್ ಮತ್ತು ರೋಬೋಟಿಕ್ ತಂತ್ರಜ್ಞಾನದಲ್ಲಿ ಸಾಕಷ್ಟು ಅಭಿವೃದ್ಧಿ ಹೊಂದಬೇಕಿದೆ. ಶಸ್ತ್ರಾಸ್ತ್ರಗಳ ವಿನ್ಯಾಸ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಅಧಿಕಾರಿಗಳು ಕೈಗೊಳ್ಳಬೇಕಿದೆ. ಜಂಟಿ ಯೋಜನೆಗಳಲ್ಲಿ ಯಶಸ್ಸು ಮತ್ತು ವೈಫಲ್ಯಗಳನ್ನೂ ಸಹ ಸಮವಾಗಿ ಹಂಚಿಕೊಳ್ಳಬೇಕಾಗುತ್ತದೆ. ಆಗ ಪರಸ್ಪರರು ಬೊಟ್ಟು ಮಾಡಿ ತೋರಿಸಲಾಗುವುದಿಲ್ಲ ಎಂದರು.

ಅಲ್ಲದೇ ದಿ. ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರನ್ನು ಸ್ಮರಿಸಿದ ರಾವತ್, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಮುದಾಯಕ್ಕೆ ಮಾನದಂಡಗಳನ್ನು ನಿಗದಿಪಡಿಸಲಾಗಿದ್ದು, ವಿಜ್ಞಾನಿಗಳಿಗೆ ಇದು ಒಂದು ಸವಾಲಾಗಿದೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...