Homeಮುಖಪುಟಪಾಕಿಸ್ತಾನದ ಗೂಢಚಾರಿಕೆ ದಂಧೆಯಲ್ಲಿ ಸಿಕ್ಕಿಬಿದ್ದಿರುವ ಡಿಆರ್‌ಡಿಒ ವಿಜ್ಞಾನಿ ಆರ್‌ಎಸ್‌ಎಸ್ ವ್ಯಕ್ತಿ: ಕಾಂಗ್ರೆಸ್ ಆರೋಪ

ಪಾಕಿಸ್ತಾನದ ಗೂಢಚಾರಿಕೆ ದಂಧೆಯಲ್ಲಿ ಸಿಕ್ಕಿಬಿದ್ದಿರುವ ಡಿಆರ್‌ಡಿಒ ವಿಜ್ಞಾನಿ ಆರ್‌ಎಸ್‌ಎಸ್ ವ್ಯಕ್ತಿ: ಕಾಂಗ್ರೆಸ್ ಆರೋಪ

- Advertisement -
- Advertisement -

ಪಾಕಿಸ್ತಾನದ ಬೇಹುಗಾರಿಕೆ ಆರೋಪದ ಮೇಲೆ ಇತ್ತೀಚೆಗೆ ಬಂಧನಕ್ಕೊಳಗಾದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ) ಅಧಿಕಾರಿಯೊಬ್ಬರು ಹಲವು ವರ್ಷಗಳಿಂದ ಆರ್‌ಎಸ್‌ಎಸ್ ಸ್ವಯಂಸೇವಕರಾಗಿದ್ದಾರೆ ಮತ್ತು ಅವರ ಕುಟುಂಬವು ನಾಲ್ಕು ತಲೆಮಾರುಗಳಿಂದ ಸಂಘದೊಂದಿಗೆ ಸಂಬಂಧ ಹೊಂದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಬುಧವಾರ, ಡಿಆರ್‌ಡಿಒದ ಅಧಿಕಾರಿಯಾಗಿರುವ ಪ್ರದೀಪ್ ಕುರುಲ್ಕರ್ ಅವರ ಯೂಟ್ಯೂಬ್ ಸಂದರ್ಶನವನ್ನು ಎಐಸಿಸಿ ಪ್ರದರ್ಶಿಸಿತು, ಇದರಲ್ಲಿ ಕುರುಲ್ಕರ್ ಅವರು ಮತ್ತು ಅವರ ಕುಟುಂಬ ಸಂಘದೊಂದಿಗಿನ ಸಂಪರ್ಕಗಳ ಬಗ್ಗೆ ಸುದೀರ್ಘವಾಗಿ ಮಾತನಾಡಿದರು. ಪುಸ್ತಕ ಬಿಡುಗಡೆ ಕಾರ್ಯಕ್ರಮದ ಮತ್ತೊಂದು ವಿಡಿಯೋ ಕ್ಲಿಪ್ಪಿಂಗ್, ವೇದಿಕೆಯ ಮೇಲೆ ಕುಳಿತಿರುವ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ಕುರುಲ್ಕರ್ ಸಭೆಯನ್ನು ಉದ್ದೇಶಿಸಿ ಮಾತನಾಡುವುದನ್ನು ತೋರಿಸಿದೆ. ಇನ್ನೊಂದು ಫೋಟೋದಲ್ಲಿ ಕುರುಲ್ಕರ್ ಅವರು ಸಾವರ್ಕರ್ ಪ್ರತಿಮೆಗೆ ನಮಸ್ಕರಿಸುತ್ತಿರುವುದನ್ನು ತೋರಿಸಿದೆ.

Anjana on Twitter: "A few days ago, DRDO Scientist Pradeep Kurulkar was  arrested by Maha ATS for providing crucial information to Pak Intelligence  Operative. He is a Savarkar fan and RSS member.

“ಡಿಆರ್‌ಡಿಒದ ‘ಪಾಕಿಸ್ತಾನಿ ಗೂಢಚಾರ’ ವಿಜ್ಞಾನಿ ಮತ್ತು ದೇಶದ್ರೋಹಿ ಪ್ರದೀಪ್ ಕುರುಲ್ಕರ್ ಆರೆಸ್ಸೆಸ್ ನ ನಿಕಟ ಸಂಪರ್ಕ ಹೊಂದಿದ್ದಾರೆ. ಆರ್‌ಎಸ್‌ಎಸ್‌ನೊಂದಿಗಿನ ಕುರುಲ್ಕರ್ ಅವರ ಒಡನಾಟವು ತಲೆಮಾರುಗಳ ಹಿಂದಿನದು ಎಂದು ಅವರು ಕಳೆದ ವರ್ಷ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಬಹಿರಂಗಪಡಿಸಿದ್ದಾರೆ” ಎಂದು ಎಐಸಿಸಿ ವಕ್ತಾರ ಪವನ್ ಖೇರಾ ಅಧಿಕೃತ ಬ್ರೀಫಿಂಗ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ, ಆರ್‌ಎಸ್‌ಎಸ್‌ನಿಂದ ಭಾರತದ ಪ್ರಜಾಪ್ರಭುತ್ವದ ಮೇಲೆ ದಾಳಿ: ರಾಹುಲ್ ವಾಗ್ದಾಳಿ

”ಅವರ ತಾತ ಆರ್‌ಎಸ್‌ಎಸ್ ಕಾರ್ಯಕರ್ತರಾಗಿದ್ದರು, ಅವರು ಗಣಿತಶಾಸ್ತ್ರಜ್ಞರಾಗಿ ಕೆಲಸ ಮಾಡಿದರು ಮತ್ತು ಅವರ ತಂದೆ ಸಂಘಕ್ಕಾಗಿ ತಮ್ಮ ಕೆಲಸವನ್ನು ನಿರ್ವಹಿಸುತ್ತಿದ್ದರು. ಅವರು ಪುಣೆಯ ಆರ್‌ಎಸ್‌ಎಸ್ ಶಾಖೆಯ ಖಜಾಂಚಿಯಾಗಿದ್ದರು. ಕುರುಲ್ಕರ್ ಗಣಿತ ಮತ್ತು ವಿಜ್ಞಾನ ಶಿಕ್ಷಕರಾಗಿದ್ದರು ಮತ್ತು ಅವರು ಐದು ವರ್ಷದವರಾಗಿನಿಂದಲೂ ಶಾಖೆಗೆ ಹೋಗುತ್ತಿದ್ದರು. ಅವರಿಗೆ ಶಾಖೆಯು ದೈನಂದಿನ ದಿನಚರಿಯ ಅವಿಭಾಜ್ಯ ಅಂಗವಾಗಿತ್ತು. ಇದು ಅತ್ಯಂತ ಗಂಭೀರವಾದ ವಿಷಯವಾಗಿದೆ, ಇದು ಬಿಜೆಪಿ-ಆರ್‌ಎಸ್‌ಎಸ್‌ನ ದೇಶವಿರೋಧಿ ಮುಖವನ್ನು ಬಹಿರಂಗಪಡಿಸುತ್ತದೆ. ಈ ಪ್ರಕರಣವು ಭಾರತದ ರಾಷ್ಟ್ರೀಯ ಭದ್ರತೆಗೆ ನೇರವಾಗಿ ಅಪಾಯವನ್ನುಂಟುಮಾಡುವ ಆರ್‌ಎಸ್‌ಎಸ್ ನಾಯಕನಿಗೆ ಸಂಬಂಧಿಸಿದ ವಿಚಾರವಾಗಿದೆ” ಎಂದು ಪವನ್ ಖಾರಾ ಹೇಳಿದರು.

”ಕುರುಲ್ಕರ್ ಮತ್ತು ಆರ್‌ಎಸ್‌ಎಸ್ ನಡುವಿನ ಸಂಬಂಧವೇನು ಎಂಬುದನ್ನು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಬೇಕು. ಅನೇಕ ಬಾರಿ ವಿದೇಶಕ್ಕೆ ಹೋಗಿದ್ದ ಕುರುಲ್ಕರ್ ಆರ್‌ಎಸ್‌ಎಸ್ ಅಥವಾ ಪಾಕಿಸ್ತಾನಕ್ಕೆ ಸ್ವಂತ ಬೇಹುಗಾರಿಕೆಗೆ ಹೋಗಿದ್ದಾರಾ? ಇದು ‘ಟೂಲ್‌ಕಿಟ್’ನ ಭಾಗವೇ? ಭಾರತ ವಿರೋಧಿ ಚಟುವಟಿಕೆಗಳಲ್ಲಿ ಆರ್‌ಎಸ್‌ಎಸ್-ಬಿಜೆಪಿಯ ಟೂಲ್‌ಕಿಟ್ ಏನು?” ಖೇರಾ ಗಂಭೀರ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...