Homeಮುಖಪುಟಪಾಕಿಸ್ತಾನದ ಗೂಢಚಾರಿಕೆ ದಂಧೆಯಲ್ಲಿ ಸಿಕ್ಕಿಬಿದ್ದಿರುವ ಡಿಆರ್‌ಡಿಒ ವಿಜ್ಞಾನಿ ಆರ್‌ಎಸ್‌ಎಸ್ ವ್ಯಕ್ತಿ: ಕಾಂಗ್ರೆಸ್ ಆರೋಪ

ಪಾಕಿಸ್ತಾನದ ಗೂಢಚಾರಿಕೆ ದಂಧೆಯಲ್ಲಿ ಸಿಕ್ಕಿಬಿದ್ದಿರುವ ಡಿಆರ್‌ಡಿಒ ವಿಜ್ಞಾನಿ ಆರ್‌ಎಸ್‌ಎಸ್ ವ್ಯಕ್ತಿ: ಕಾಂಗ್ರೆಸ್ ಆರೋಪ

- Advertisement -
- Advertisement -

ಪಾಕಿಸ್ತಾನದ ಬೇಹುಗಾರಿಕೆ ಆರೋಪದ ಮೇಲೆ ಇತ್ತೀಚೆಗೆ ಬಂಧನಕ್ಕೊಳಗಾದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ) ಅಧಿಕಾರಿಯೊಬ್ಬರು ಹಲವು ವರ್ಷಗಳಿಂದ ಆರ್‌ಎಸ್‌ಎಸ್ ಸ್ವಯಂಸೇವಕರಾಗಿದ್ದಾರೆ ಮತ್ತು ಅವರ ಕುಟುಂಬವು ನಾಲ್ಕು ತಲೆಮಾರುಗಳಿಂದ ಸಂಘದೊಂದಿಗೆ ಸಂಬಂಧ ಹೊಂದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಬುಧವಾರ, ಡಿಆರ್‌ಡಿಒದ ಅಧಿಕಾರಿಯಾಗಿರುವ ಪ್ರದೀಪ್ ಕುರುಲ್ಕರ್ ಅವರ ಯೂಟ್ಯೂಬ್ ಸಂದರ್ಶನವನ್ನು ಎಐಸಿಸಿ ಪ್ರದರ್ಶಿಸಿತು, ಇದರಲ್ಲಿ ಕುರುಲ್ಕರ್ ಅವರು ಮತ್ತು ಅವರ ಕುಟುಂಬ ಸಂಘದೊಂದಿಗಿನ ಸಂಪರ್ಕಗಳ ಬಗ್ಗೆ ಸುದೀರ್ಘವಾಗಿ ಮಾತನಾಡಿದರು. ಪುಸ್ತಕ ಬಿಡುಗಡೆ ಕಾರ್ಯಕ್ರಮದ ಮತ್ತೊಂದು ವಿಡಿಯೋ ಕ್ಲಿಪ್ಪಿಂಗ್, ವೇದಿಕೆಯ ಮೇಲೆ ಕುಳಿತಿರುವ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ಕುರುಲ್ಕರ್ ಸಭೆಯನ್ನು ಉದ್ದೇಶಿಸಿ ಮಾತನಾಡುವುದನ್ನು ತೋರಿಸಿದೆ. ಇನ್ನೊಂದು ಫೋಟೋದಲ್ಲಿ ಕುರುಲ್ಕರ್ ಅವರು ಸಾವರ್ಕರ್ ಪ್ರತಿಮೆಗೆ ನಮಸ್ಕರಿಸುತ್ತಿರುವುದನ್ನು ತೋರಿಸಿದೆ.

Anjana on Twitter: "A few days ago, DRDO Scientist Pradeep Kurulkar was  arrested by Maha ATS for providing crucial information to Pak Intelligence  Operative. He is a Savarkar fan and RSS member.

“ಡಿಆರ್‌ಡಿಒದ ‘ಪಾಕಿಸ್ತಾನಿ ಗೂಢಚಾರ’ ವಿಜ್ಞಾನಿ ಮತ್ತು ದೇಶದ್ರೋಹಿ ಪ್ರದೀಪ್ ಕುರುಲ್ಕರ್ ಆರೆಸ್ಸೆಸ್ ನ ನಿಕಟ ಸಂಪರ್ಕ ಹೊಂದಿದ್ದಾರೆ. ಆರ್‌ಎಸ್‌ಎಸ್‌ನೊಂದಿಗಿನ ಕುರುಲ್ಕರ್ ಅವರ ಒಡನಾಟವು ತಲೆಮಾರುಗಳ ಹಿಂದಿನದು ಎಂದು ಅವರು ಕಳೆದ ವರ್ಷ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಬಹಿರಂಗಪಡಿಸಿದ್ದಾರೆ” ಎಂದು ಎಐಸಿಸಿ ವಕ್ತಾರ ಪವನ್ ಖೇರಾ ಅಧಿಕೃತ ಬ್ರೀಫಿಂಗ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ, ಆರ್‌ಎಸ್‌ಎಸ್‌ನಿಂದ ಭಾರತದ ಪ್ರಜಾಪ್ರಭುತ್ವದ ಮೇಲೆ ದಾಳಿ: ರಾಹುಲ್ ವಾಗ್ದಾಳಿ

”ಅವರ ತಾತ ಆರ್‌ಎಸ್‌ಎಸ್ ಕಾರ್ಯಕರ್ತರಾಗಿದ್ದರು, ಅವರು ಗಣಿತಶಾಸ್ತ್ರಜ್ಞರಾಗಿ ಕೆಲಸ ಮಾಡಿದರು ಮತ್ತು ಅವರ ತಂದೆ ಸಂಘಕ್ಕಾಗಿ ತಮ್ಮ ಕೆಲಸವನ್ನು ನಿರ್ವಹಿಸುತ್ತಿದ್ದರು. ಅವರು ಪುಣೆಯ ಆರ್‌ಎಸ್‌ಎಸ್ ಶಾಖೆಯ ಖಜಾಂಚಿಯಾಗಿದ್ದರು. ಕುರುಲ್ಕರ್ ಗಣಿತ ಮತ್ತು ವಿಜ್ಞಾನ ಶಿಕ್ಷಕರಾಗಿದ್ದರು ಮತ್ತು ಅವರು ಐದು ವರ್ಷದವರಾಗಿನಿಂದಲೂ ಶಾಖೆಗೆ ಹೋಗುತ್ತಿದ್ದರು. ಅವರಿಗೆ ಶಾಖೆಯು ದೈನಂದಿನ ದಿನಚರಿಯ ಅವಿಭಾಜ್ಯ ಅಂಗವಾಗಿತ್ತು. ಇದು ಅತ್ಯಂತ ಗಂಭೀರವಾದ ವಿಷಯವಾಗಿದೆ, ಇದು ಬಿಜೆಪಿ-ಆರ್‌ಎಸ್‌ಎಸ್‌ನ ದೇಶವಿರೋಧಿ ಮುಖವನ್ನು ಬಹಿರಂಗಪಡಿಸುತ್ತದೆ. ಈ ಪ್ರಕರಣವು ಭಾರತದ ರಾಷ್ಟ್ರೀಯ ಭದ್ರತೆಗೆ ನೇರವಾಗಿ ಅಪಾಯವನ್ನುಂಟುಮಾಡುವ ಆರ್‌ಎಸ್‌ಎಸ್ ನಾಯಕನಿಗೆ ಸಂಬಂಧಿಸಿದ ವಿಚಾರವಾಗಿದೆ” ಎಂದು ಪವನ್ ಖಾರಾ ಹೇಳಿದರು.

”ಕುರುಲ್ಕರ್ ಮತ್ತು ಆರ್‌ಎಸ್‌ಎಸ್ ನಡುವಿನ ಸಂಬಂಧವೇನು ಎಂಬುದನ್ನು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಬೇಕು. ಅನೇಕ ಬಾರಿ ವಿದೇಶಕ್ಕೆ ಹೋಗಿದ್ದ ಕುರುಲ್ಕರ್ ಆರ್‌ಎಸ್‌ಎಸ್ ಅಥವಾ ಪಾಕಿಸ್ತಾನಕ್ಕೆ ಸ್ವಂತ ಬೇಹುಗಾರಿಕೆಗೆ ಹೋಗಿದ್ದಾರಾ? ಇದು ‘ಟೂಲ್‌ಕಿಟ್’ನ ಭಾಗವೇ? ಭಾರತ ವಿರೋಧಿ ಚಟುವಟಿಕೆಗಳಲ್ಲಿ ಆರ್‌ಎಸ್‌ಎಸ್-ಬಿಜೆಪಿಯ ಟೂಲ್‌ಕಿಟ್ ಏನು?” ಖೇರಾ ಗಂಭೀರ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...