Homeಮುಖಪುಟಪಾಕಿಸ್ತಾನದ ಗೂಢಚಾರಿಕೆ ದಂಧೆಯಲ್ಲಿ ಸಿಕ್ಕಿಬಿದ್ದಿರುವ ಡಿಆರ್‌ಡಿಒ ವಿಜ್ಞಾನಿ ಆರ್‌ಎಸ್‌ಎಸ್ ವ್ಯಕ್ತಿ: ಕಾಂಗ್ರೆಸ್ ಆರೋಪ

ಪಾಕಿಸ್ತಾನದ ಗೂಢಚಾರಿಕೆ ದಂಧೆಯಲ್ಲಿ ಸಿಕ್ಕಿಬಿದ್ದಿರುವ ಡಿಆರ್‌ಡಿಒ ವಿಜ್ಞಾನಿ ಆರ್‌ಎಸ್‌ಎಸ್ ವ್ಯಕ್ತಿ: ಕಾಂಗ್ರೆಸ್ ಆರೋಪ

- Advertisement -
- Advertisement -

ಪಾಕಿಸ್ತಾನದ ಬೇಹುಗಾರಿಕೆ ಆರೋಪದ ಮೇಲೆ ಇತ್ತೀಚೆಗೆ ಬಂಧನಕ್ಕೊಳಗಾದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ) ಅಧಿಕಾರಿಯೊಬ್ಬರು ಹಲವು ವರ್ಷಗಳಿಂದ ಆರ್‌ಎಸ್‌ಎಸ್ ಸ್ವಯಂಸೇವಕರಾಗಿದ್ದಾರೆ ಮತ್ತು ಅವರ ಕುಟುಂಬವು ನಾಲ್ಕು ತಲೆಮಾರುಗಳಿಂದ ಸಂಘದೊಂದಿಗೆ ಸಂಬಂಧ ಹೊಂದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಬುಧವಾರ, ಡಿಆರ್‌ಡಿಒದ ಅಧಿಕಾರಿಯಾಗಿರುವ ಪ್ರದೀಪ್ ಕುರುಲ್ಕರ್ ಅವರ ಯೂಟ್ಯೂಬ್ ಸಂದರ್ಶನವನ್ನು ಎಐಸಿಸಿ ಪ್ರದರ್ಶಿಸಿತು, ಇದರಲ್ಲಿ ಕುರುಲ್ಕರ್ ಅವರು ಮತ್ತು ಅವರ ಕುಟುಂಬ ಸಂಘದೊಂದಿಗಿನ ಸಂಪರ್ಕಗಳ ಬಗ್ಗೆ ಸುದೀರ್ಘವಾಗಿ ಮಾತನಾಡಿದರು. ಪುಸ್ತಕ ಬಿಡುಗಡೆ ಕಾರ್ಯಕ್ರಮದ ಮತ್ತೊಂದು ವಿಡಿಯೋ ಕ್ಲಿಪ್ಪಿಂಗ್, ವೇದಿಕೆಯ ಮೇಲೆ ಕುಳಿತಿರುವ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ಕುರುಲ್ಕರ್ ಸಭೆಯನ್ನು ಉದ್ದೇಶಿಸಿ ಮಾತನಾಡುವುದನ್ನು ತೋರಿಸಿದೆ. ಇನ್ನೊಂದು ಫೋಟೋದಲ್ಲಿ ಕುರುಲ್ಕರ್ ಅವರು ಸಾವರ್ಕರ್ ಪ್ರತಿಮೆಗೆ ನಮಸ್ಕರಿಸುತ್ತಿರುವುದನ್ನು ತೋರಿಸಿದೆ.

Anjana on Twitter: "A few days ago, DRDO Scientist Pradeep Kurulkar was  arrested by Maha ATS for providing crucial information to Pak Intelligence  Operative. He is a Savarkar fan and RSS member.

“ಡಿಆರ್‌ಡಿಒದ ‘ಪಾಕಿಸ್ತಾನಿ ಗೂಢಚಾರ’ ವಿಜ್ಞಾನಿ ಮತ್ತು ದೇಶದ್ರೋಹಿ ಪ್ರದೀಪ್ ಕುರುಲ್ಕರ್ ಆರೆಸ್ಸೆಸ್ ನ ನಿಕಟ ಸಂಪರ್ಕ ಹೊಂದಿದ್ದಾರೆ. ಆರ್‌ಎಸ್‌ಎಸ್‌ನೊಂದಿಗಿನ ಕುರುಲ್ಕರ್ ಅವರ ಒಡನಾಟವು ತಲೆಮಾರುಗಳ ಹಿಂದಿನದು ಎಂದು ಅವರು ಕಳೆದ ವರ್ಷ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಬಹಿರಂಗಪಡಿಸಿದ್ದಾರೆ” ಎಂದು ಎಐಸಿಸಿ ವಕ್ತಾರ ಪವನ್ ಖೇರಾ ಅಧಿಕೃತ ಬ್ರೀಫಿಂಗ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ, ಆರ್‌ಎಸ್‌ಎಸ್‌ನಿಂದ ಭಾರತದ ಪ್ರಜಾಪ್ರಭುತ್ವದ ಮೇಲೆ ದಾಳಿ: ರಾಹುಲ್ ವಾಗ್ದಾಳಿ

”ಅವರ ತಾತ ಆರ್‌ಎಸ್‌ಎಸ್ ಕಾರ್ಯಕರ್ತರಾಗಿದ್ದರು, ಅವರು ಗಣಿತಶಾಸ್ತ್ರಜ್ಞರಾಗಿ ಕೆಲಸ ಮಾಡಿದರು ಮತ್ತು ಅವರ ತಂದೆ ಸಂಘಕ್ಕಾಗಿ ತಮ್ಮ ಕೆಲಸವನ್ನು ನಿರ್ವಹಿಸುತ್ತಿದ್ದರು. ಅವರು ಪುಣೆಯ ಆರ್‌ಎಸ್‌ಎಸ್ ಶಾಖೆಯ ಖಜಾಂಚಿಯಾಗಿದ್ದರು. ಕುರುಲ್ಕರ್ ಗಣಿತ ಮತ್ತು ವಿಜ್ಞಾನ ಶಿಕ್ಷಕರಾಗಿದ್ದರು ಮತ್ತು ಅವರು ಐದು ವರ್ಷದವರಾಗಿನಿಂದಲೂ ಶಾಖೆಗೆ ಹೋಗುತ್ತಿದ್ದರು. ಅವರಿಗೆ ಶಾಖೆಯು ದೈನಂದಿನ ದಿನಚರಿಯ ಅವಿಭಾಜ್ಯ ಅಂಗವಾಗಿತ್ತು. ಇದು ಅತ್ಯಂತ ಗಂಭೀರವಾದ ವಿಷಯವಾಗಿದೆ, ಇದು ಬಿಜೆಪಿ-ಆರ್‌ಎಸ್‌ಎಸ್‌ನ ದೇಶವಿರೋಧಿ ಮುಖವನ್ನು ಬಹಿರಂಗಪಡಿಸುತ್ತದೆ. ಈ ಪ್ರಕರಣವು ಭಾರತದ ರಾಷ್ಟ್ರೀಯ ಭದ್ರತೆಗೆ ನೇರವಾಗಿ ಅಪಾಯವನ್ನುಂಟುಮಾಡುವ ಆರ್‌ಎಸ್‌ಎಸ್ ನಾಯಕನಿಗೆ ಸಂಬಂಧಿಸಿದ ವಿಚಾರವಾಗಿದೆ” ಎಂದು ಪವನ್ ಖಾರಾ ಹೇಳಿದರು.

”ಕುರುಲ್ಕರ್ ಮತ್ತು ಆರ್‌ಎಸ್‌ಎಸ್ ನಡುವಿನ ಸಂಬಂಧವೇನು ಎಂಬುದನ್ನು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಬೇಕು. ಅನೇಕ ಬಾರಿ ವಿದೇಶಕ್ಕೆ ಹೋಗಿದ್ದ ಕುರುಲ್ಕರ್ ಆರ್‌ಎಸ್‌ಎಸ್ ಅಥವಾ ಪಾಕಿಸ್ತಾನಕ್ಕೆ ಸ್ವಂತ ಬೇಹುಗಾರಿಕೆಗೆ ಹೋಗಿದ್ದಾರಾ? ಇದು ‘ಟೂಲ್‌ಕಿಟ್’ನ ಭಾಗವೇ? ಭಾರತ ವಿರೋಧಿ ಚಟುವಟಿಕೆಗಳಲ್ಲಿ ಆರ್‌ಎಸ್‌ಎಸ್-ಬಿಜೆಪಿಯ ಟೂಲ್‌ಕಿಟ್ ಏನು?” ಖೇರಾ ಗಂಭೀರ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...