Homeಮುಖಪುಟನಿರಂತರವಾಗಿ ಶೇಂದಿ ಕುಡಿಯುವುದರಿಂದ ಕ್ಯಾನ್ಸರ್‌ ಗುಣವಾಗುತ್ತದೆ: ತೆಲಗಾಂಣ ಸಚಿವ

ನಿರಂತರವಾಗಿ ಶೇಂದಿ ಕುಡಿಯುವುದರಿಂದ ಕ್ಯಾನ್ಸರ್‌ ಗುಣವಾಗುತ್ತದೆ: ತೆಲಗಾಂಣ ಸಚಿವ

ಇದನ್ನು ಹಿಂದೆ ಬಡವನ ಮದ್ಯವೆಂದು ಪರಿಗಣಿಸಲಾಗಿತ್ತು, ಆದರೆ ಈಗ ಮರ್ಸಿಡಿಸ್ ಬೆಂಜ್ ಕಾರುಗಳಲ್ಲಿ ಪ್ರಯಾಣಿಸುವ ಜನರು ಕೂಡ ಶೇಂದಿ ಸೇವಿಸಲು ಆಸಕ್ತಿ ತೋರಿಸುತ್ತಿದ್ದಾರೆ ಎಂದು ಸಚಿವ ಶ್ರೀನಿವಾಸ್ ಗೌಡ ಹೇಳಿದ್ದಾರೆ.

- Advertisement -
- Advertisement -

ತಾಳೆ ಮರಗಳಿಂದ ಇಳಿಸಿದ ಪಾನೀಯವಾದ ಶೇಂದಿಯನ್ನು ಸೇವನೆ ಮಾಡಿದರೆ ಕ್ಯಾನ್ಸರ್ ಸೇರಿದಂತೆ 15 ವಿವಿಧ ಕಾಯಿಲೆಗಳನ್ನು ಗುಣವಾಗುತ್ತದೆ ಎಂದು ತೆಲಂಗಾಣದ ಅಬಕಾರಿ ಸಚಿವ ವಿ ಶ್ರೀನಿವಾಸ್ ಗೌಡ ಹೇಳಿದ್ದಾರೆ.

ಜಂಗಾಂವ್ ಜಿಲ್ಲೆಯ ರಘುನಾಥ್‌ಪಲ್ಲಿ ಬ್ಲಾಕ್‌ನ ಮಂಡಲಗುಡೆಂ ಗ್ರಾಮದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸರ್ವಾಯ್ ಪಾಪಣ್ಣ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವ ತಾಳೆ ಮರಗಳಿಂದ ನೈಸರ್ಗಿಕವಾಗಿ ಹೊರತೆಗೆಯಲಾದ ಶೇಂದಿಯು ಔಷಧೀಯ ಮೌಲ್ಯವನ್ನು ಹೊಂದಿದೆ ಎಂದು ಸಾಬೀತುಪಡಿಸುವ ಅಧ್ಯಯನಗಳಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಐತಿಹಾಸಿಕ ಕುಸಿತಕ್ಕೆ ಸಾಕ್ಷಿಯಾದ ಭಾರತದ ಆರ್ಥಿಕತೆ; ವರ್ಷದ ಮೊದಲ ತ್ರೈಮಾಸಿಕದಲ್ಲೇ ಶೇ.-23.9 ರಷ್ಟು ಕುಸಿತ!

“ಶೇಂದಿ 15 ರೋಗಗಳನ್ನು ಗುಣಪಡಿಸುತ್ತದೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಕ್ಯಾನ್ಸರ್ ಸಹ ಗುಣಪಡಿಸಬಹುದು. ಇದನ್ನು ಹಿಂದೆ ಬಡವನ ಮದ್ಯವೆಂದು ಪರಿಗಣಿಸಲಾಗಿತ್ತು, ಆದರೆ ಈಗ ಮರ್ಸಿಡಿಸ್ ಬೆಂಜ್ ಕಾರುಗಳಲ್ಲಿ ಪ್ರಯಾಣಿಸುವ ಜನರು ಕೂಡ ಶೇಂದಿ ಸೇವಿಸಲು ಆಸಕ್ತಿ ತೋರಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ. ತೆಲಂಗಾಣ ಸರ್ಕಾರವು ಶೇಂದಿ ಟ್ಯಾಪಿಂಗ್ ಅನ್ನು ವೃತ್ತಿಯಾಗಿ ಉತ್ತೇಜಿಸುತ್ತಿದೆ ಎಂದು ಅವರು ಹೇಳಿದರು.

ಅಬಕಾರಿ ಸಚಿವ ಶೇಂದಿ ಬಳಕೆ ಉತ್ತೇಜಿಸುತ್ತಿರುವುದು ಇದೇ ಮೊದಲಲ್ಲ. ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ವೈನ್ ಅಂಗಡಿಗಳು ಮುಚ್ಚಿದ ಹಿನ್ನೆಲೆಯಲ್ಲಿ, ಎಲ್ಲಾ ಜಿಲ್ಲೆಗಳಲ್ಲಿ ಶೇಂದಿ ಟ್ಯಾಪ್ಪರ್‌ಗಳಿಗೆ ಮದ್ಯಕ್ಕೆ ಪರ್ಯಾಯವಾಗಿ ಶೇಂದಿ ಮಾರಾಟ ಮಾಡಲು ಅನುಮತಿ ನೀಡಲಾಗುವುದು ಎಂದು ಮೇ ತಿಂಗಳಲ್ಲಿ ಗೌಡ್ ಘೋಷಿಸಿದ್ದರು.

ಜೂನ್ ತಿಂಗಳಲ್ಲಿ ಸಚಿವರು ಶೇಂದಿಯ ಮತ್ತೊಂದು ರೂಪವಾದ ’ನೀರಾ’ ಎಂಬ ಪಾಮ್-ವೈನ್ ಅನ್ನು ಪರಿಚಯಿಸಿದ್ದರು. ಇದು ತೆಲಂಗಾಣ ಪಾಮ್ ನೀರಾ ಮತ್ತು ಪಾಮ್ ಪ್ರಾಡಕ್ಟ್ಸ್ ರಿಸರ್ಚ್ ಫೌಂಡೇಶನ್ ತಯಾರಿಸಿದ ಅದರ ಉಪ ಉತ್ಪನ್ನಗಳಾಗಿದೆ.

ಇದನ್ನೂ ಓದಿ: ಕೊರೊನಾ ವಿಚಾರದಲ್ಲಿ ತಬ್ಲೀಘಿಗಳನ್ನು ’ಬಲಿಪಶು’ ಮಾಡಲಾಗಿದೆ: ಬಾಂಬೆ ಹೈಕೋರ್ಟ್

“ನೀರಾ ಮೂತ್ರಪಿಂಡದ ಕಲ್ಲುಗಳನ್ನು ಕರಗಿಸಲು ಸಹಾಯ ಮಾಡುತ್ತದೆ, ಮಧುಮೇಹವನ್ನು ನಿಭಾಯಿಸಲು ಸಹಾಯ ಮಾಡುತ್ತದೆ ಮತ್ತು ಮೂತ್ರನಾಳವನ್ನು ಪರಿಪೂರ್ಣ ಆರೋಗ್ಯದಲ್ಲಿಡಲು ಸಹಾಯ ಮಾಡುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಮಲಬದ್ಧತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ನೀರಾದಲ್ಲಿನ ಪೋಷಕಾಂಶಗಳಾದ ಪೊಟ್ಯಾಸಿಯಮ್ ಮತ್ತು ಕಬ್ಬಿಣವು ಶ್ವಾಸಕೋಶದ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ” ಎಂದು ಅವರು ಹೇಳಿದ್ದರು.

ತಲೆನೋವಿಗೆ ಚಿಕಿತ್ಸೆ ನೀಡಲು ಮತ್ತು ದೇಹದ ಉಷ್ಣತೆಯನ್ನು ಕಡಿಮೆ ಮಾಡಲು ನೀರಾ ಸಹಕಾರಿಯಾಗಿದೆ ಎಂದು ಹೇಳಿದ ಗೌಡ್, ಹೆಚ್ಚಿನ ನೀರಾ ಉಪ-ಉತ್ಪನ್ನಗಳ ತಯಾರಿಕೆಯನ್ನು ಸರ್ಕಾರ ಪ್ರೋತ್ಸಾಹಿಸುತ್ತದೆ ಎಂದು ಹೇಳಿದರು.


ಇದನ್ನೂ ಓದಿ: ಕೊರೊನಾ, ನಿರುದ್ಯೋಗದ ಕುರಿತು ಎಚ್ಚರಿಸಿದ್ದೆ, ಮಾಧ್ಯಮಗಳು ಅಣಕಿಸಿದ್ದವು: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...