Homeಮುಖಪುಟನಿರಂತರವಾಗಿ ಶೇಂದಿ ಕುಡಿಯುವುದರಿಂದ ಕ್ಯಾನ್ಸರ್‌ ಗುಣವಾಗುತ್ತದೆ: ತೆಲಗಾಂಣ ಸಚಿವ

ನಿರಂತರವಾಗಿ ಶೇಂದಿ ಕುಡಿಯುವುದರಿಂದ ಕ್ಯಾನ್ಸರ್‌ ಗುಣವಾಗುತ್ತದೆ: ತೆಲಗಾಂಣ ಸಚಿವ

ಇದನ್ನು ಹಿಂದೆ ಬಡವನ ಮದ್ಯವೆಂದು ಪರಿಗಣಿಸಲಾಗಿತ್ತು, ಆದರೆ ಈಗ ಮರ್ಸಿಡಿಸ್ ಬೆಂಜ್ ಕಾರುಗಳಲ್ಲಿ ಪ್ರಯಾಣಿಸುವ ಜನರು ಕೂಡ ಶೇಂದಿ ಸೇವಿಸಲು ಆಸಕ್ತಿ ತೋರಿಸುತ್ತಿದ್ದಾರೆ ಎಂದು ಸಚಿವ ಶ್ರೀನಿವಾಸ್ ಗೌಡ ಹೇಳಿದ್ದಾರೆ.

- Advertisement -
- Advertisement -

ತಾಳೆ ಮರಗಳಿಂದ ಇಳಿಸಿದ ಪಾನೀಯವಾದ ಶೇಂದಿಯನ್ನು ಸೇವನೆ ಮಾಡಿದರೆ ಕ್ಯಾನ್ಸರ್ ಸೇರಿದಂತೆ 15 ವಿವಿಧ ಕಾಯಿಲೆಗಳನ್ನು ಗುಣವಾಗುತ್ತದೆ ಎಂದು ತೆಲಂಗಾಣದ ಅಬಕಾರಿ ಸಚಿವ ವಿ ಶ್ರೀನಿವಾಸ್ ಗೌಡ ಹೇಳಿದ್ದಾರೆ.

ಜಂಗಾಂವ್ ಜಿಲ್ಲೆಯ ರಘುನಾಥ್‌ಪಲ್ಲಿ ಬ್ಲಾಕ್‌ನ ಮಂಡಲಗುಡೆಂ ಗ್ರಾಮದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸರ್ವಾಯ್ ಪಾಪಣ್ಣ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವ ತಾಳೆ ಮರಗಳಿಂದ ನೈಸರ್ಗಿಕವಾಗಿ ಹೊರತೆಗೆಯಲಾದ ಶೇಂದಿಯು ಔಷಧೀಯ ಮೌಲ್ಯವನ್ನು ಹೊಂದಿದೆ ಎಂದು ಸಾಬೀತುಪಡಿಸುವ ಅಧ್ಯಯನಗಳಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಐತಿಹಾಸಿಕ ಕುಸಿತಕ್ಕೆ ಸಾಕ್ಷಿಯಾದ ಭಾರತದ ಆರ್ಥಿಕತೆ; ವರ್ಷದ ಮೊದಲ ತ್ರೈಮಾಸಿಕದಲ್ಲೇ ಶೇ.-23.9 ರಷ್ಟು ಕುಸಿತ!

“ಶೇಂದಿ 15 ರೋಗಗಳನ್ನು ಗುಣಪಡಿಸುತ್ತದೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಕ್ಯಾನ್ಸರ್ ಸಹ ಗುಣಪಡಿಸಬಹುದು. ಇದನ್ನು ಹಿಂದೆ ಬಡವನ ಮದ್ಯವೆಂದು ಪರಿಗಣಿಸಲಾಗಿತ್ತು, ಆದರೆ ಈಗ ಮರ್ಸಿಡಿಸ್ ಬೆಂಜ್ ಕಾರುಗಳಲ್ಲಿ ಪ್ರಯಾಣಿಸುವ ಜನರು ಕೂಡ ಶೇಂದಿ ಸೇವಿಸಲು ಆಸಕ್ತಿ ತೋರಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ. ತೆಲಂಗಾಣ ಸರ್ಕಾರವು ಶೇಂದಿ ಟ್ಯಾಪಿಂಗ್ ಅನ್ನು ವೃತ್ತಿಯಾಗಿ ಉತ್ತೇಜಿಸುತ್ತಿದೆ ಎಂದು ಅವರು ಹೇಳಿದರು.

ಅಬಕಾರಿ ಸಚಿವ ಶೇಂದಿ ಬಳಕೆ ಉತ್ತೇಜಿಸುತ್ತಿರುವುದು ಇದೇ ಮೊದಲಲ್ಲ. ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ವೈನ್ ಅಂಗಡಿಗಳು ಮುಚ್ಚಿದ ಹಿನ್ನೆಲೆಯಲ್ಲಿ, ಎಲ್ಲಾ ಜಿಲ್ಲೆಗಳಲ್ಲಿ ಶೇಂದಿ ಟ್ಯಾಪ್ಪರ್‌ಗಳಿಗೆ ಮದ್ಯಕ್ಕೆ ಪರ್ಯಾಯವಾಗಿ ಶೇಂದಿ ಮಾರಾಟ ಮಾಡಲು ಅನುಮತಿ ನೀಡಲಾಗುವುದು ಎಂದು ಮೇ ತಿಂಗಳಲ್ಲಿ ಗೌಡ್ ಘೋಷಿಸಿದ್ದರು.

ಜೂನ್ ತಿಂಗಳಲ್ಲಿ ಸಚಿವರು ಶೇಂದಿಯ ಮತ್ತೊಂದು ರೂಪವಾದ ’ನೀರಾ’ ಎಂಬ ಪಾಮ್-ವೈನ್ ಅನ್ನು ಪರಿಚಯಿಸಿದ್ದರು. ಇದು ತೆಲಂಗಾಣ ಪಾಮ್ ನೀರಾ ಮತ್ತು ಪಾಮ್ ಪ್ರಾಡಕ್ಟ್ಸ್ ರಿಸರ್ಚ್ ಫೌಂಡೇಶನ್ ತಯಾರಿಸಿದ ಅದರ ಉಪ ಉತ್ಪನ್ನಗಳಾಗಿದೆ.

ಇದನ್ನೂ ಓದಿ: ಕೊರೊನಾ ವಿಚಾರದಲ್ಲಿ ತಬ್ಲೀಘಿಗಳನ್ನು ’ಬಲಿಪಶು’ ಮಾಡಲಾಗಿದೆ: ಬಾಂಬೆ ಹೈಕೋರ್ಟ್

“ನೀರಾ ಮೂತ್ರಪಿಂಡದ ಕಲ್ಲುಗಳನ್ನು ಕರಗಿಸಲು ಸಹಾಯ ಮಾಡುತ್ತದೆ, ಮಧುಮೇಹವನ್ನು ನಿಭಾಯಿಸಲು ಸಹಾಯ ಮಾಡುತ್ತದೆ ಮತ್ತು ಮೂತ್ರನಾಳವನ್ನು ಪರಿಪೂರ್ಣ ಆರೋಗ್ಯದಲ್ಲಿಡಲು ಸಹಾಯ ಮಾಡುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಮಲಬದ್ಧತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ನೀರಾದಲ್ಲಿನ ಪೋಷಕಾಂಶಗಳಾದ ಪೊಟ್ಯಾಸಿಯಮ್ ಮತ್ತು ಕಬ್ಬಿಣವು ಶ್ವಾಸಕೋಶದ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ” ಎಂದು ಅವರು ಹೇಳಿದ್ದರು.

ತಲೆನೋವಿಗೆ ಚಿಕಿತ್ಸೆ ನೀಡಲು ಮತ್ತು ದೇಹದ ಉಷ್ಣತೆಯನ್ನು ಕಡಿಮೆ ಮಾಡಲು ನೀರಾ ಸಹಕಾರಿಯಾಗಿದೆ ಎಂದು ಹೇಳಿದ ಗೌಡ್, ಹೆಚ್ಚಿನ ನೀರಾ ಉಪ-ಉತ್ಪನ್ನಗಳ ತಯಾರಿಕೆಯನ್ನು ಸರ್ಕಾರ ಪ್ರೋತ್ಸಾಹಿಸುತ್ತದೆ ಎಂದು ಹೇಳಿದರು.


ಇದನ್ನೂ ಓದಿ: ಕೊರೊನಾ, ನಿರುದ್ಯೋಗದ ಕುರಿತು ಎಚ್ಚರಿಸಿದ್ದೆ, ಮಾಧ್ಯಮಗಳು ಅಣಕಿಸಿದ್ದವು: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...