Homeಕರ್ನಾಟಕ“ಡ್ರಿಂಕ್ಸ್‌ಗೆ ಲಾಕ್‍ಡವುನ್ ಇರಬಾರದಿತ್ತು”: ಚಂದ್ರೇಗೌಡರ ಕಟ್ಟೆಪುರಾಣ

“ಡ್ರಿಂಕ್ಸ್‌ಗೆ ಲಾಕ್‍ಡವುನ್ ಇರಬಾರದಿತ್ತು”: ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

ವಾಟಿಸ್ಸೆ ಬಂದು “ಬ್ಯಾಡಲಕ್ಕು ಕಣಕ್ಕ” ಅಂದ.
“ಯಾಕ್ಲ”
“ಮುಂದಿನ ತಿಂಗಳು ಮೂರನೇ ತಾರಿಕಿನವರಿಗೂ ಲಾಕ್‍ಡೌನು ಮಾಡಿದ ಕಣಕ್ಕ ಮೋದಿ.”
“ಅಯ್ಯೊ ಅಯ್ಯೊ ವಸಿದಿನವೆ. ಆಯ್ತು ಬುಡು.”
“ಇಷ್ಟು ದಿನವೆ ಇದ್ಯಲ್ಲ ಬುಡು” ಎಂದ ಉಗ್ರಿ.
“ಹದುನಾಕು ದಿಸ ವನವಾಸದಂಗೆ ಕಳೆದ ಕಂಡ್ಳ.”
“ಏನು ಲಾಸಗಿಲ್ಲ ತಗಳಕ್ಕ. ಕಲರ್ ಬಂದಿದ್ದಿ, ಹೆಲ್ತ ಇಂಪ್ರೂ ಆಗ್ಯದೆ ಇನ್ನೆನಾಗಬೇಕು. ಬಾಗಲಾಯ್ಕಂಡು ಇರದೆ ಹೆಲ್ತಿಗೊಸ್ಕರ ಗೊತ್ತೇನಕ್ಕ” ಎಂದ ವಾಟಿಸ್ಸೆ.
“ಯಾವ ಸೀಮೆ ಹೆಲ್ತಲ, ಹ್ಯಳುವುದಂಗೆ ಮನೆವಳಗೆ ಕುಂತಿದ್ರೆ ಮನಸುನ ಸರೀಳ ಯಾತಕ್ಕೆ ಬಂದತೂ.”
“ಕೊರೊನಾ ಬರದಿಲ್ಲ ಬುಡು”
“ಬರದಿಲ್ಲ ಅಂತರೆ, ಜನ ಸಾಯ್ತಾ ಅವುರೆ ಅಂತರೆ, ಯಾವುದು ನಂಬಲಿ ಯಾವುದು ಬುಡ್ಳಿ ಅನ್ನಂಗಾಗ್ಯಾದೆ.”
“ಮೋದಿ ಮಾತ ನಂಬಕ್ಕ.”
“ಬೂದಿ ಹುಯ್ಕಳದೆಯ ಕಂಡ್ಳ ಅವುನ ಮಾತ ಕೇಳಿದ್ರೆ.”
“ಯಾಕಪ್ಪ.”
“ಮನೆವಳಗಿರಿ ಅಂತನೆ ವರತು ಇನ್ನೆನು ಹೇಳದಿಲ್ಲ.”
“ಏನೇಳಬೇಕಾಗಿತ್ತು.”
“ಇಪ್ಪತ್ತು ದಿನಾತು ದನ ಕಟ್ಟಿತ್ತಾವುಲೆ ಹುಲ್ಲಾಕ್ತ ಇದ್ದಿನಿ. ಯಮ್ಮೆ ಹಿಡದು ಆಚೆಗೆ ಕಟ್ಟಿದ್ದು ತಿರಗ ವಳಿಕೆ ಹಿಡದು ಕಟ್ಟದಾಗ್ಯದೆ. ಆಡು ಮರಿಗಳು ಸೊಪ್ಪಿಲ್ಲದೆ ಕೂಗ್ತವೆ. ಅದ್‍ಯಂಗ್ಲ ಮನೆವಳಗಿದ್ದೀ.”
“ಮೋದಿಗವ್ಯಲ್ಲ ಗೊತ್ತಿಲ್ಲ ಕಣಕ್ಕ. ಅವುನಿಗೆ ಅಂಗಡಿ, ಆಫೀಸು ಅಷ್ಟೆ ಗೊತ್ತಿರದು. ಅದಕ್ಕೆ ಮನೆಲಿರಿ ಅಂದವುನೆ.”
“ಅಂಗರೆ ರೈತಾಪಿ ಜನ ಗೊತ್ತಿಲವೆ ಅವುನಿಗೆ.”
“ಇಲ್ಲ ಕಣಕ್ಕ. ಗೊತ್ತಿದ್ರೆ ಯಲ್ಲಾ ಸಾಮಾನು ಸರಂಜಾಮು ವದಿಗಿಸಿಗಳಿ, ಲಾಕ್‍ಡವುನ್ ಮಾಡ್ತಿನಿ ಅಂತ ಮೂರು ದಿನ ಮದ್ಲೆ ಹೇಳಿ, ಜನಗಳ ತಯಾರು ಮಾಡನು. ಅವುನ ತಲೆಲಿ ಕೂಲಿ ಮಾಡೋರು ಬಡವುರು ಜಮೀನಿಲ್ಲದೊರು ಇಲವೇ ಇಲ್ಲ.”
“ಜಮೀನು ಅಂದೇಟಿಗೆ ನೆಪ್ತಿಗೆ ಬತ್ತು ಕಂಡ್ಳ ಬಿಜೆಪಿಗಳು ಅದೇನೂ ಕಾನೂನು ಮಾಡಿದ್ರಂತೆ.”
“ಏನಕ್ಕ.”
“ವತುವರಿ ಜಮೀನ್ಯಲ್ಲ ನಿಂದೆಯ ಅಂತ ಮಾಡಿದರಂತೆ.”
“ನಂದಂತೂ ಯಾವ ವತುವರಿನೂ ಇಲ್ಲ ಕಣಕ್ಕ ನನ್ನ ಖಾತೆ ಜಮೀನ್ನ ಹಾಳು ಬಿಟ್ಟಿದ್ದಿನಿ.”
“ನಿಂದಿಲ್ಲ ಕಂಡ್ಳ, ಆ ಕಿಸ್ಣೇಗೌಡ ಒಂದು ಕಾಲಿಲ್ದೆಯಿದ್ರೂವೆ ಮನಿಯೋರನ್ನೆಲ್ಲ ಕರಕಂಡೋಗಿ ಯಕರಿಗಟ್ಳೆ ಬೇಲಿ ಹಾಕ್ಯಂಡನಂತೆ.”
“ನೋಡಪ್ಪ, ಕರೊನಾ ಬಂದು ದೇಸಕ್ಕೆ ದೇಸನೆ ಕೊಚಗಂಡೊಯ್ತಾಯಿರುವಾಗ, ಆ ಕುಂಟಣ್ಣನಿಗೆ ಬಂದಿರೊ ದುರಾಸೆ ನೋಡು ಯಂಗದೆ.”
“ಅದೂ ಊರ್ಯಲ್ಲ ಬಾಗಲಾಯ್ಕಂಡು ಮನೆಲಿದ್ರು ನೋಡು, ಯಾರು ನೋಡದಿಲ್ಲ ಅಂತ ತಿಳಗಂಡು ಬದ ಹಾಕಿ ಬೇಲಿ ಹಾಕಿದ್ದಾನಂತೆ.”
“ಅಲ್ಲಾ ಕಣೊ ಉಗ್ರಿ, ಇಂತ ಟೈಮಲ್ಲಿ ಹಿಂಗೆ ಯೋಚನೆ ಮಾಡ್ತರೆ ಜನ ಅಂತ ನನಿಗೆ ಗೊತ್ತಿರಲೇ ಇಲ್ಲ.”
“ಆ ಬಿಜೆಪಿಗಳೇ ಅಂಗೆ ಕಣೊ, ಯಾವಾಗ್ಲೂ ಟೈಂ ನೊಡ್ತರೆ ಜನ ಅಡ್ಡಗ್ಯಾನಾಗಿದ್ದಾಗ ಲಬುಕ್ಕಂತ ಲಪಟಾಯಿಸಿಬುಡ್ತಾರೆ”
“ಈಗ್ಲು ಅಂಗೆ ಆಗ್ಯದೆ ನೋಡೊ, ಊರ್ಯಲ್ಲ ಮನೆಲಿದ್ರೆ ಆ ಕೃಷ್ಣೇಗೌಡ ಬೇಲಿ ಹಾಕ್ಯವುನೆ ಇನ್ನ ಆ ಮಲನಾಡಕಡೆ ಗುಡ್ಡ ಗುಡ್ಡನೆ ನಂದು ಅಂತರೇನೂ.”
“ಹೋಗ್ಲಿ ಬುಡೊ ಉಗ್ರಿ, ಆ ವತ್ತುವರಿ ಮಾತಂಗಿರ್ಲಿ ಡ್ರಿಂಕ್ಸ್ ಬಗ್ಗೆ ಮಾತಾಡನ. ಇಪ್ಪತ್ತು ದಿನಾಯ್ತು ಕಣೊ ಉಗ್ರಿ ನಾನು ಡ್ರಿಂಕ್ಸ್ ಮಾಡಿ.”
“ಯಾಕೆ ಎಂ.ಸಿ ಬ್ರಾಂದಿ ಸಿಗತದಲ್ಲೊ.”
“ಒಂದು ಕ್ವಾಟ್ರಿಗೆ ನಾನೂರ್ರುಪಾಯಿ ಕಣೊ.”
“ಆಟೊಂತರ ದುಡ್ಡೆ.”
“ಯೆಸ್ ಕೊರೋನ ಯಾಕೊ ಡ್ರಿಂಕ್ಸ್ ಆಸೆಗೆ ಬುಡಂಗೆ ಮಾಡ್ತ ಅದೆ ಅಕ್ಚವಲಿ ಲಾಕ್‍ಡೌನು ಡ್ರಿಂಕ್ಸ್‍ಗೆ ಇರಬಾರದಿತ್ತು ಕಣೊ ಉಗ್ರಿ.”
“ಎಡೂರಪ್ಪನಿಗೆ ಫೋನು ಮಾಡು.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...