Homeಕರ್ನಾಟಕ“ಡ್ರಿಂಕ್ಸ್‌ಗೆ ಲಾಕ್‍ಡವುನ್ ಇರಬಾರದಿತ್ತು”: ಚಂದ್ರೇಗೌಡರ ಕಟ್ಟೆಪುರಾಣ

“ಡ್ರಿಂಕ್ಸ್‌ಗೆ ಲಾಕ್‍ಡವುನ್ ಇರಬಾರದಿತ್ತು”: ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

ವಾಟಿಸ್ಸೆ ಬಂದು “ಬ್ಯಾಡಲಕ್ಕು ಕಣಕ್ಕ” ಅಂದ.
“ಯಾಕ್ಲ”
“ಮುಂದಿನ ತಿಂಗಳು ಮೂರನೇ ತಾರಿಕಿನವರಿಗೂ ಲಾಕ್‍ಡೌನು ಮಾಡಿದ ಕಣಕ್ಕ ಮೋದಿ.”
“ಅಯ್ಯೊ ಅಯ್ಯೊ ವಸಿದಿನವೆ. ಆಯ್ತು ಬುಡು.”
“ಇಷ್ಟು ದಿನವೆ ಇದ್ಯಲ್ಲ ಬುಡು” ಎಂದ ಉಗ್ರಿ.
“ಹದುನಾಕು ದಿಸ ವನವಾಸದಂಗೆ ಕಳೆದ ಕಂಡ್ಳ.”
“ಏನು ಲಾಸಗಿಲ್ಲ ತಗಳಕ್ಕ. ಕಲರ್ ಬಂದಿದ್ದಿ, ಹೆಲ್ತ ಇಂಪ್ರೂ ಆಗ್ಯದೆ ಇನ್ನೆನಾಗಬೇಕು. ಬಾಗಲಾಯ್ಕಂಡು ಇರದೆ ಹೆಲ್ತಿಗೊಸ್ಕರ ಗೊತ್ತೇನಕ್ಕ” ಎಂದ ವಾಟಿಸ್ಸೆ.
“ಯಾವ ಸೀಮೆ ಹೆಲ್ತಲ, ಹ್ಯಳುವುದಂಗೆ ಮನೆವಳಗೆ ಕುಂತಿದ್ರೆ ಮನಸುನ ಸರೀಳ ಯಾತಕ್ಕೆ ಬಂದತೂ.”
“ಕೊರೊನಾ ಬರದಿಲ್ಲ ಬುಡು”
“ಬರದಿಲ್ಲ ಅಂತರೆ, ಜನ ಸಾಯ್ತಾ ಅವುರೆ ಅಂತರೆ, ಯಾವುದು ನಂಬಲಿ ಯಾವುದು ಬುಡ್ಳಿ ಅನ್ನಂಗಾಗ್ಯಾದೆ.”
“ಮೋದಿ ಮಾತ ನಂಬಕ್ಕ.”
“ಬೂದಿ ಹುಯ್ಕಳದೆಯ ಕಂಡ್ಳ ಅವುನ ಮಾತ ಕೇಳಿದ್ರೆ.”
“ಯಾಕಪ್ಪ.”
“ಮನೆವಳಗಿರಿ ಅಂತನೆ ವರತು ಇನ್ನೆನು ಹೇಳದಿಲ್ಲ.”
“ಏನೇಳಬೇಕಾಗಿತ್ತು.”
“ಇಪ್ಪತ್ತು ದಿನಾತು ದನ ಕಟ್ಟಿತ್ತಾವುಲೆ ಹುಲ್ಲಾಕ್ತ ಇದ್ದಿನಿ. ಯಮ್ಮೆ ಹಿಡದು ಆಚೆಗೆ ಕಟ್ಟಿದ್ದು ತಿರಗ ವಳಿಕೆ ಹಿಡದು ಕಟ್ಟದಾಗ್ಯದೆ. ಆಡು ಮರಿಗಳು ಸೊಪ್ಪಿಲ್ಲದೆ ಕೂಗ್ತವೆ. ಅದ್‍ಯಂಗ್ಲ ಮನೆವಳಗಿದ್ದೀ.”
“ಮೋದಿಗವ್ಯಲ್ಲ ಗೊತ್ತಿಲ್ಲ ಕಣಕ್ಕ. ಅವುನಿಗೆ ಅಂಗಡಿ, ಆಫೀಸು ಅಷ್ಟೆ ಗೊತ್ತಿರದು. ಅದಕ್ಕೆ ಮನೆಲಿರಿ ಅಂದವುನೆ.”
“ಅಂಗರೆ ರೈತಾಪಿ ಜನ ಗೊತ್ತಿಲವೆ ಅವುನಿಗೆ.”
“ಇಲ್ಲ ಕಣಕ್ಕ. ಗೊತ್ತಿದ್ರೆ ಯಲ್ಲಾ ಸಾಮಾನು ಸರಂಜಾಮು ವದಿಗಿಸಿಗಳಿ, ಲಾಕ್‍ಡವುನ್ ಮಾಡ್ತಿನಿ ಅಂತ ಮೂರು ದಿನ ಮದ್ಲೆ ಹೇಳಿ, ಜನಗಳ ತಯಾರು ಮಾಡನು. ಅವುನ ತಲೆಲಿ ಕೂಲಿ ಮಾಡೋರು ಬಡವುರು ಜಮೀನಿಲ್ಲದೊರು ಇಲವೇ ಇಲ್ಲ.”
“ಜಮೀನು ಅಂದೇಟಿಗೆ ನೆಪ್ತಿಗೆ ಬತ್ತು ಕಂಡ್ಳ ಬಿಜೆಪಿಗಳು ಅದೇನೂ ಕಾನೂನು ಮಾಡಿದ್ರಂತೆ.”
“ಏನಕ್ಕ.”
“ವತುವರಿ ಜಮೀನ್ಯಲ್ಲ ನಿಂದೆಯ ಅಂತ ಮಾಡಿದರಂತೆ.”
“ನಂದಂತೂ ಯಾವ ವತುವರಿನೂ ಇಲ್ಲ ಕಣಕ್ಕ ನನ್ನ ಖಾತೆ ಜಮೀನ್ನ ಹಾಳು ಬಿಟ್ಟಿದ್ದಿನಿ.”
“ನಿಂದಿಲ್ಲ ಕಂಡ್ಳ, ಆ ಕಿಸ್ಣೇಗೌಡ ಒಂದು ಕಾಲಿಲ್ದೆಯಿದ್ರೂವೆ ಮನಿಯೋರನ್ನೆಲ್ಲ ಕರಕಂಡೋಗಿ ಯಕರಿಗಟ್ಳೆ ಬೇಲಿ ಹಾಕ್ಯಂಡನಂತೆ.”
“ನೋಡಪ್ಪ, ಕರೊನಾ ಬಂದು ದೇಸಕ್ಕೆ ದೇಸನೆ ಕೊಚಗಂಡೊಯ್ತಾಯಿರುವಾಗ, ಆ ಕುಂಟಣ್ಣನಿಗೆ ಬಂದಿರೊ ದುರಾಸೆ ನೋಡು ಯಂಗದೆ.”
“ಅದೂ ಊರ್ಯಲ್ಲ ಬಾಗಲಾಯ್ಕಂಡು ಮನೆಲಿದ್ರು ನೋಡು, ಯಾರು ನೋಡದಿಲ್ಲ ಅಂತ ತಿಳಗಂಡು ಬದ ಹಾಕಿ ಬೇಲಿ ಹಾಕಿದ್ದಾನಂತೆ.”
“ಅಲ್ಲಾ ಕಣೊ ಉಗ್ರಿ, ಇಂತ ಟೈಮಲ್ಲಿ ಹಿಂಗೆ ಯೋಚನೆ ಮಾಡ್ತರೆ ಜನ ಅಂತ ನನಿಗೆ ಗೊತ್ತಿರಲೇ ಇಲ್ಲ.”
“ಆ ಬಿಜೆಪಿಗಳೇ ಅಂಗೆ ಕಣೊ, ಯಾವಾಗ್ಲೂ ಟೈಂ ನೊಡ್ತರೆ ಜನ ಅಡ್ಡಗ್ಯಾನಾಗಿದ್ದಾಗ ಲಬುಕ್ಕಂತ ಲಪಟಾಯಿಸಿಬುಡ್ತಾರೆ”
“ಈಗ್ಲು ಅಂಗೆ ಆಗ್ಯದೆ ನೋಡೊ, ಊರ್ಯಲ್ಲ ಮನೆಲಿದ್ರೆ ಆ ಕೃಷ್ಣೇಗೌಡ ಬೇಲಿ ಹಾಕ್ಯವುನೆ ಇನ್ನ ಆ ಮಲನಾಡಕಡೆ ಗುಡ್ಡ ಗುಡ್ಡನೆ ನಂದು ಅಂತರೇನೂ.”
“ಹೋಗ್ಲಿ ಬುಡೊ ಉಗ್ರಿ, ಆ ವತ್ತುವರಿ ಮಾತಂಗಿರ್ಲಿ ಡ್ರಿಂಕ್ಸ್ ಬಗ್ಗೆ ಮಾತಾಡನ. ಇಪ್ಪತ್ತು ದಿನಾಯ್ತು ಕಣೊ ಉಗ್ರಿ ನಾನು ಡ್ರಿಂಕ್ಸ್ ಮಾಡಿ.”
“ಯಾಕೆ ಎಂ.ಸಿ ಬ್ರಾಂದಿ ಸಿಗತದಲ್ಲೊ.”
“ಒಂದು ಕ್ವಾಟ್ರಿಗೆ ನಾನೂರ್ರುಪಾಯಿ ಕಣೊ.”
“ಆಟೊಂತರ ದುಡ್ಡೆ.”
“ಯೆಸ್ ಕೊರೋನ ಯಾಕೊ ಡ್ರಿಂಕ್ಸ್ ಆಸೆಗೆ ಬುಡಂಗೆ ಮಾಡ್ತ ಅದೆ ಅಕ್ಚವಲಿ ಲಾಕ್‍ಡೌನು ಡ್ರಿಂಕ್ಸ್‍ಗೆ ಇರಬಾರದಿತ್ತು ಕಣೊ ಉಗ್ರಿ.”
“ಎಡೂರಪ್ಪನಿಗೆ ಫೋನು ಮಾಡು.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...