Homeಕರ್ನಾಟಕ“ಡ್ರಿಂಕ್ಸ್‌ಗೆ ಲಾಕ್‍ಡವುನ್ ಇರಬಾರದಿತ್ತು”: ಚಂದ್ರೇಗೌಡರ ಕಟ್ಟೆಪುರಾಣ

“ಡ್ರಿಂಕ್ಸ್‌ಗೆ ಲಾಕ್‍ಡವುನ್ ಇರಬಾರದಿತ್ತು”: ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

ವಾಟಿಸ್ಸೆ ಬಂದು “ಬ್ಯಾಡಲಕ್ಕು ಕಣಕ್ಕ” ಅಂದ.
“ಯಾಕ್ಲ”
“ಮುಂದಿನ ತಿಂಗಳು ಮೂರನೇ ತಾರಿಕಿನವರಿಗೂ ಲಾಕ್‍ಡೌನು ಮಾಡಿದ ಕಣಕ್ಕ ಮೋದಿ.”
“ಅಯ್ಯೊ ಅಯ್ಯೊ ವಸಿದಿನವೆ. ಆಯ್ತು ಬುಡು.”
“ಇಷ್ಟು ದಿನವೆ ಇದ್ಯಲ್ಲ ಬುಡು” ಎಂದ ಉಗ್ರಿ.
“ಹದುನಾಕು ದಿಸ ವನವಾಸದಂಗೆ ಕಳೆದ ಕಂಡ್ಳ.”
“ಏನು ಲಾಸಗಿಲ್ಲ ತಗಳಕ್ಕ. ಕಲರ್ ಬಂದಿದ್ದಿ, ಹೆಲ್ತ ಇಂಪ್ರೂ ಆಗ್ಯದೆ ಇನ್ನೆನಾಗಬೇಕು. ಬಾಗಲಾಯ್ಕಂಡು ಇರದೆ ಹೆಲ್ತಿಗೊಸ್ಕರ ಗೊತ್ತೇನಕ್ಕ” ಎಂದ ವಾಟಿಸ್ಸೆ.
“ಯಾವ ಸೀಮೆ ಹೆಲ್ತಲ, ಹ್ಯಳುವುದಂಗೆ ಮನೆವಳಗೆ ಕುಂತಿದ್ರೆ ಮನಸುನ ಸರೀಳ ಯಾತಕ್ಕೆ ಬಂದತೂ.”
“ಕೊರೊನಾ ಬರದಿಲ್ಲ ಬುಡು”
“ಬರದಿಲ್ಲ ಅಂತರೆ, ಜನ ಸಾಯ್ತಾ ಅವುರೆ ಅಂತರೆ, ಯಾವುದು ನಂಬಲಿ ಯಾವುದು ಬುಡ್ಳಿ ಅನ್ನಂಗಾಗ್ಯಾದೆ.”
“ಮೋದಿ ಮಾತ ನಂಬಕ್ಕ.”
“ಬೂದಿ ಹುಯ್ಕಳದೆಯ ಕಂಡ್ಳ ಅವುನ ಮಾತ ಕೇಳಿದ್ರೆ.”
“ಯಾಕಪ್ಪ.”
“ಮನೆವಳಗಿರಿ ಅಂತನೆ ವರತು ಇನ್ನೆನು ಹೇಳದಿಲ್ಲ.”
“ಏನೇಳಬೇಕಾಗಿತ್ತು.”
“ಇಪ್ಪತ್ತು ದಿನಾತು ದನ ಕಟ್ಟಿತ್ತಾವುಲೆ ಹುಲ್ಲಾಕ್ತ ಇದ್ದಿನಿ. ಯಮ್ಮೆ ಹಿಡದು ಆಚೆಗೆ ಕಟ್ಟಿದ್ದು ತಿರಗ ವಳಿಕೆ ಹಿಡದು ಕಟ್ಟದಾಗ್ಯದೆ. ಆಡು ಮರಿಗಳು ಸೊಪ್ಪಿಲ್ಲದೆ ಕೂಗ್ತವೆ. ಅದ್‍ಯಂಗ್ಲ ಮನೆವಳಗಿದ್ದೀ.”
“ಮೋದಿಗವ್ಯಲ್ಲ ಗೊತ್ತಿಲ್ಲ ಕಣಕ್ಕ. ಅವುನಿಗೆ ಅಂಗಡಿ, ಆಫೀಸು ಅಷ್ಟೆ ಗೊತ್ತಿರದು. ಅದಕ್ಕೆ ಮನೆಲಿರಿ ಅಂದವುನೆ.”
“ಅಂಗರೆ ರೈತಾಪಿ ಜನ ಗೊತ್ತಿಲವೆ ಅವುನಿಗೆ.”
“ಇಲ್ಲ ಕಣಕ್ಕ. ಗೊತ್ತಿದ್ರೆ ಯಲ್ಲಾ ಸಾಮಾನು ಸರಂಜಾಮು ವದಿಗಿಸಿಗಳಿ, ಲಾಕ್‍ಡವುನ್ ಮಾಡ್ತಿನಿ ಅಂತ ಮೂರು ದಿನ ಮದ್ಲೆ ಹೇಳಿ, ಜನಗಳ ತಯಾರು ಮಾಡನು. ಅವುನ ತಲೆಲಿ ಕೂಲಿ ಮಾಡೋರು ಬಡವುರು ಜಮೀನಿಲ್ಲದೊರು ಇಲವೇ ಇಲ್ಲ.”
“ಜಮೀನು ಅಂದೇಟಿಗೆ ನೆಪ್ತಿಗೆ ಬತ್ತು ಕಂಡ್ಳ ಬಿಜೆಪಿಗಳು ಅದೇನೂ ಕಾನೂನು ಮಾಡಿದ್ರಂತೆ.”
“ಏನಕ್ಕ.”
“ವತುವರಿ ಜಮೀನ್ಯಲ್ಲ ನಿಂದೆಯ ಅಂತ ಮಾಡಿದರಂತೆ.”
“ನಂದಂತೂ ಯಾವ ವತುವರಿನೂ ಇಲ್ಲ ಕಣಕ್ಕ ನನ್ನ ಖಾತೆ ಜಮೀನ್ನ ಹಾಳು ಬಿಟ್ಟಿದ್ದಿನಿ.”
“ನಿಂದಿಲ್ಲ ಕಂಡ್ಳ, ಆ ಕಿಸ್ಣೇಗೌಡ ಒಂದು ಕಾಲಿಲ್ದೆಯಿದ್ರೂವೆ ಮನಿಯೋರನ್ನೆಲ್ಲ ಕರಕಂಡೋಗಿ ಯಕರಿಗಟ್ಳೆ ಬೇಲಿ ಹಾಕ್ಯಂಡನಂತೆ.”
“ನೋಡಪ್ಪ, ಕರೊನಾ ಬಂದು ದೇಸಕ್ಕೆ ದೇಸನೆ ಕೊಚಗಂಡೊಯ್ತಾಯಿರುವಾಗ, ಆ ಕುಂಟಣ್ಣನಿಗೆ ಬಂದಿರೊ ದುರಾಸೆ ನೋಡು ಯಂಗದೆ.”
“ಅದೂ ಊರ್ಯಲ್ಲ ಬಾಗಲಾಯ್ಕಂಡು ಮನೆಲಿದ್ರು ನೋಡು, ಯಾರು ನೋಡದಿಲ್ಲ ಅಂತ ತಿಳಗಂಡು ಬದ ಹಾಕಿ ಬೇಲಿ ಹಾಕಿದ್ದಾನಂತೆ.”
“ಅಲ್ಲಾ ಕಣೊ ಉಗ್ರಿ, ಇಂತ ಟೈಮಲ್ಲಿ ಹಿಂಗೆ ಯೋಚನೆ ಮಾಡ್ತರೆ ಜನ ಅಂತ ನನಿಗೆ ಗೊತ್ತಿರಲೇ ಇಲ್ಲ.”
“ಆ ಬಿಜೆಪಿಗಳೇ ಅಂಗೆ ಕಣೊ, ಯಾವಾಗ್ಲೂ ಟೈಂ ನೊಡ್ತರೆ ಜನ ಅಡ್ಡಗ್ಯಾನಾಗಿದ್ದಾಗ ಲಬುಕ್ಕಂತ ಲಪಟಾಯಿಸಿಬುಡ್ತಾರೆ”
“ಈಗ್ಲು ಅಂಗೆ ಆಗ್ಯದೆ ನೋಡೊ, ಊರ್ಯಲ್ಲ ಮನೆಲಿದ್ರೆ ಆ ಕೃಷ್ಣೇಗೌಡ ಬೇಲಿ ಹಾಕ್ಯವುನೆ ಇನ್ನ ಆ ಮಲನಾಡಕಡೆ ಗುಡ್ಡ ಗುಡ್ಡನೆ ನಂದು ಅಂತರೇನೂ.”
“ಹೋಗ್ಲಿ ಬುಡೊ ಉಗ್ರಿ, ಆ ವತ್ತುವರಿ ಮಾತಂಗಿರ್ಲಿ ಡ್ರಿಂಕ್ಸ್ ಬಗ್ಗೆ ಮಾತಾಡನ. ಇಪ್ಪತ್ತು ದಿನಾಯ್ತು ಕಣೊ ಉಗ್ರಿ ನಾನು ಡ್ರಿಂಕ್ಸ್ ಮಾಡಿ.”
“ಯಾಕೆ ಎಂ.ಸಿ ಬ್ರಾಂದಿ ಸಿಗತದಲ್ಲೊ.”
“ಒಂದು ಕ್ವಾಟ್ರಿಗೆ ನಾನೂರ್ರುಪಾಯಿ ಕಣೊ.”
“ಆಟೊಂತರ ದುಡ್ಡೆ.”
“ಯೆಸ್ ಕೊರೋನ ಯಾಕೊ ಡ್ರಿಂಕ್ಸ್ ಆಸೆಗೆ ಬುಡಂಗೆ ಮಾಡ್ತ ಅದೆ ಅಕ್ಚವಲಿ ಲಾಕ್‍ಡೌನು ಡ್ರಿಂಕ್ಸ್‍ಗೆ ಇರಬಾರದಿತ್ತು ಕಣೊ ಉಗ್ರಿ.”
“ಎಡೂರಪ್ಪನಿಗೆ ಫೋನು ಮಾಡು.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...