Homeಕರ್ನಾಟಕ“ಡ್ರಿಂಕ್ಸ್‌ಗೆ ಲಾಕ್‍ಡವುನ್ ಇರಬಾರದಿತ್ತು”: ಚಂದ್ರೇಗೌಡರ ಕಟ್ಟೆಪುರಾಣ

“ಡ್ರಿಂಕ್ಸ್‌ಗೆ ಲಾಕ್‍ಡವುನ್ ಇರಬಾರದಿತ್ತು”: ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

ವಾಟಿಸ್ಸೆ ಬಂದು “ಬ್ಯಾಡಲಕ್ಕು ಕಣಕ್ಕ” ಅಂದ.
“ಯಾಕ್ಲ”
“ಮುಂದಿನ ತಿಂಗಳು ಮೂರನೇ ತಾರಿಕಿನವರಿಗೂ ಲಾಕ್‍ಡೌನು ಮಾಡಿದ ಕಣಕ್ಕ ಮೋದಿ.”
“ಅಯ್ಯೊ ಅಯ್ಯೊ ವಸಿದಿನವೆ. ಆಯ್ತು ಬುಡು.”
“ಇಷ್ಟು ದಿನವೆ ಇದ್ಯಲ್ಲ ಬುಡು” ಎಂದ ಉಗ್ರಿ.
“ಹದುನಾಕು ದಿಸ ವನವಾಸದಂಗೆ ಕಳೆದ ಕಂಡ್ಳ.”
“ಏನು ಲಾಸಗಿಲ್ಲ ತಗಳಕ್ಕ. ಕಲರ್ ಬಂದಿದ್ದಿ, ಹೆಲ್ತ ಇಂಪ್ರೂ ಆಗ್ಯದೆ ಇನ್ನೆನಾಗಬೇಕು. ಬಾಗಲಾಯ್ಕಂಡು ಇರದೆ ಹೆಲ್ತಿಗೊಸ್ಕರ ಗೊತ್ತೇನಕ್ಕ” ಎಂದ ವಾಟಿಸ್ಸೆ.
“ಯಾವ ಸೀಮೆ ಹೆಲ್ತಲ, ಹ್ಯಳುವುದಂಗೆ ಮನೆವಳಗೆ ಕುಂತಿದ್ರೆ ಮನಸುನ ಸರೀಳ ಯಾತಕ್ಕೆ ಬಂದತೂ.”
“ಕೊರೊನಾ ಬರದಿಲ್ಲ ಬುಡು”
“ಬರದಿಲ್ಲ ಅಂತರೆ, ಜನ ಸಾಯ್ತಾ ಅವುರೆ ಅಂತರೆ, ಯಾವುದು ನಂಬಲಿ ಯಾವುದು ಬುಡ್ಳಿ ಅನ್ನಂಗಾಗ್ಯಾದೆ.”
“ಮೋದಿ ಮಾತ ನಂಬಕ್ಕ.”
“ಬೂದಿ ಹುಯ್ಕಳದೆಯ ಕಂಡ್ಳ ಅವುನ ಮಾತ ಕೇಳಿದ್ರೆ.”
“ಯಾಕಪ್ಪ.”
“ಮನೆವಳಗಿರಿ ಅಂತನೆ ವರತು ಇನ್ನೆನು ಹೇಳದಿಲ್ಲ.”
“ಏನೇಳಬೇಕಾಗಿತ್ತು.”
“ಇಪ್ಪತ್ತು ದಿನಾತು ದನ ಕಟ್ಟಿತ್ತಾವುಲೆ ಹುಲ್ಲಾಕ್ತ ಇದ್ದಿನಿ. ಯಮ್ಮೆ ಹಿಡದು ಆಚೆಗೆ ಕಟ್ಟಿದ್ದು ತಿರಗ ವಳಿಕೆ ಹಿಡದು ಕಟ್ಟದಾಗ್ಯದೆ. ಆಡು ಮರಿಗಳು ಸೊಪ್ಪಿಲ್ಲದೆ ಕೂಗ್ತವೆ. ಅದ್‍ಯಂಗ್ಲ ಮನೆವಳಗಿದ್ದೀ.”
“ಮೋದಿಗವ್ಯಲ್ಲ ಗೊತ್ತಿಲ್ಲ ಕಣಕ್ಕ. ಅವುನಿಗೆ ಅಂಗಡಿ, ಆಫೀಸು ಅಷ್ಟೆ ಗೊತ್ತಿರದು. ಅದಕ್ಕೆ ಮನೆಲಿರಿ ಅಂದವುನೆ.”
“ಅಂಗರೆ ರೈತಾಪಿ ಜನ ಗೊತ್ತಿಲವೆ ಅವುನಿಗೆ.”
“ಇಲ್ಲ ಕಣಕ್ಕ. ಗೊತ್ತಿದ್ರೆ ಯಲ್ಲಾ ಸಾಮಾನು ಸರಂಜಾಮು ವದಿಗಿಸಿಗಳಿ, ಲಾಕ್‍ಡವುನ್ ಮಾಡ್ತಿನಿ ಅಂತ ಮೂರು ದಿನ ಮದ್ಲೆ ಹೇಳಿ, ಜನಗಳ ತಯಾರು ಮಾಡನು. ಅವುನ ತಲೆಲಿ ಕೂಲಿ ಮಾಡೋರು ಬಡವುರು ಜಮೀನಿಲ್ಲದೊರು ಇಲವೇ ಇಲ್ಲ.”
“ಜಮೀನು ಅಂದೇಟಿಗೆ ನೆಪ್ತಿಗೆ ಬತ್ತು ಕಂಡ್ಳ ಬಿಜೆಪಿಗಳು ಅದೇನೂ ಕಾನೂನು ಮಾಡಿದ್ರಂತೆ.”
“ಏನಕ್ಕ.”
“ವತುವರಿ ಜಮೀನ್ಯಲ್ಲ ನಿಂದೆಯ ಅಂತ ಮಾಡಿದರಂತೆ.”
“ನಂದಂತೂ ಯಾವ ವತುವರಿನೂ ಇಲ್ಲ ಕಣಕ್ಕ ನನ್ನ ಖಾತೆ ಜಮೀನ್ನ ಹಾಳು ಬಿಟ್ಟಿದ್ದಿನಿ.”
“ನಿಂದಿಲ್ಲ ಕಂಡ್ಳ, ಆ ಕಿಸ್ಣೇಗೌಡ ಒಂದು ಕಾಲಿಲ್ದೆಯಿದ್ರೂವೆ ಮನಿಯೋರನ್ನೆಲ್ಲ ಕರಕಂಡೋಗಿ ಯಕರಿಗಟ್ಳೆ ಬೇಲಿ ಹಾಕ್ಯಂಡನಂತೆ.”
“ನೋಡಪ್ಪ, ಕರೊನಾ ಬಂದು ದೇಸಕ್ಕೆ ದೇಸನೆ ಕೊಚಗಂಡೊಯ್ತಾಯಿರುವಾಗ, ಆ ಕುಂಟಣ್ಣನಿಗೆ ಬಂದಿರೊ ದುರಾಸೆ ನೋಡು ಯಂಗದೆ.”
“ಅದೂ ಊರ್ಯಲ್ಲ ಬಾಗಲಾಯ್ಕಂಡು ಮನೆಲಿದ್ರು ನೋಡು, ಯಾರು ನೋಡದಿಲ್ಲ ಅಂತ ತಿಳಗಂಡು ಬದ ಹಾಕಿ ಬೇಲಿ ಹಾಕಿದ್ದಾನಂತೆ.”
“ಅಲ್ಲಾ ಕಣೊ ಉಗ್ರಿ, ಇಂತ ಟೈಮಲ್ಲಿ ಹಿಂಗೆ ಯೋಚನೆ ಮಾಡ್ತರೆ ಜನ ಅಂತ ನನಿಗೆ ಗೊತ್ತಿರಲೇ ಇಲ್ಲ.”
“ಆ ಬಿಜೆಪಿಗಳೇ ಅಂಗೆ ಕಣೊ, ಯಾವಾಗ್ಲೂ ಟೈಂ ನೊಡ್ತರೆ ಜನ ಅಡ್ಡಗ್ಯಾನಾಗಿದ್ದಾಗ ಲಬುಕ್ಕಂತ ಲಪಟಾಯಿಸಿಬುಡ್ತಾರೆ”
“ಈಗ್ಲು ಅಂಗೆ ಆಗ್ಯದೆ ನೋಡೊ, ಊರ್ಯಲ್ಲ ಮನೆಲಿದ್ರೆ ಆ ಕೃಷ್ಣೇಗೌಡ ಬೇಲಿ ಹಾಕ್ಯವುನೆ ಇನ್ನ ಆ ಮಲನಾಡಕಡೆ ಗುಡ್ಡ ಗುಡ್ಡನೆ ನಂದು ಅಂತರೇನೂ.”
“ಹೋಗ್ಲಿ ಬುಡೊ ಉಗ್ರಿ, ಆ ವತ್ತುವರಿ ಮಾತಂಗಿರ್ಲಿ ಡ್ರಿಂಕ್ಸ್ ಬಗ್ಗೆ ಮಾತಾಡನ. ಇಪ್ಪತ್ತು ದಿನಾಯ್ತು ಕಣೊ ಉಗ್ರಿ ನಾನು ಡ್ರಿಂಕ್ಸ್ ಮಾಡಿ.”
“ಯಾಕೆ ಎಂ.ಸಿ ಬ್ರಾಂದಿ ಸಿಗತದಲ್ಲೊ.”
“ಒಂದು ಕ್ವಾಟ್ರಿಗೆ ನಾನೂರ್ರುಪಾಯಿ ಕಣೊ.”
“ಆಟೊಂತರ ದುಡ್ಡೆ.”
“ಯೆಸ್ ಕೊರೋನ ಯಾಕೊ ಡ್ರಿಂಕ್ಸ್ ಆಸೆಗೆ ಬುಡಂಗೆ ಮಾಡ್ತ ಅದೆ ಅಕ್ಚವಲಿ ಲಾಕ್‍ಡೌನು ಡ್ರಿಂಕ್ಸ್‍ಗೆ ಇರಬಾರದಿತ್ತು ಕಣೊ ಉಗ್ರಿ.”
“ಎಡೂರಪ್ಪನಿಗೆ ಫೋನು ಮಾಡು.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...