Homeಕರ್ನಾಟಕ“ಡ್ರಿಂಕ್ಸ್‌ಗೆ ಲಾಕ್‍ಡವುನ್ ಇರಬಾರದಿತ್ತು”: ಚಂದ್ರೇಗೌಡರ ಕಟ್ಟೆಪುರಾಣ

“ಡ್ರಿಂಕ್ಸ್‌ಗೆ ಲಾಕ್‍ಡವುನ್ ಇರಬಾರದಿತ್ತು”: ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

ವಾಟಿಸ್ಸೆ ಬಂದು “ಬ್ಯಾಡಲಕ್ಕು ಕಣಕ್ಕ” ಅಂದ.
“ಯಾಕ್ಲ”
“ಮುಂದಿನ ತಿಂಗಳು ಮೂರನೇ ತಾರಿಕಿನವರಿಗೂ ಲಾಕ್‍ಡೌನು ಮಾಡಿದ ಕಣಕ್ಕ ಮೋದಿ.”
“ಅಯ್ಯೊ ಅಯ್ಯೊ ವಸಿದಿನವೆ. ಆಯ್ತು ಬುಡು.”
“ಇಷ್ಟು ದಿನವೆ ಇದ್ಯಲ್ಲ ಬುಡು” ಎಂದ ಉಗ್ರಿ.
“ಹದುನಾಕು ದಿಸ ವನವಾಸದಂಗೆ ಕಳೆದ ಕಂಡ್ಳ.”
“ಏನು ಲಾಸಗಿಲ್ಲ ತಗಳಕ್ಕ. ಕಲರ್ ಬಂದಿದ್ದಿ, ಹೆಲ್ತ ಇಂಪ್ರೂ ಆಗ್ಯದೆ ಇನ್ನೆನಾಗಬೇಕು. ಬಾಗಲಾಯ್ಕಂಡು ಇರದೆ ಹೆಲ್ತಿಗೊಸ್ಕರ ಗೊತ್ತೇನಕ್ಕ” ಎಂದ ವಾಟಿಸ್ಸೆ.
“ಯಾವ ಸೀಮೆ ಹೆಲ್ತಲ, ಹ್ಯಳುವುದಂಗೆ ಮನೆವಳಗೆ ಕುಂತಿದ್ರೆ ಮನಸುನ ಸರೀಳ ಯಾತಕ್ಕೆ ಬಂದತೂ.”
“ಕೊರೊನಾ ಬರದಿಲ್ಲ ಬುಡು”
“ಬರದಿಲ್ಲ ಅಂತರೆ, ಜನ ಸಾಯ್ತಾ ಅವುರೆ ಅಂತರೆ, ಯಾವುದು ನಂಬಲಿ ಯಾವುದು ಬುಡ್ಳಿ ಅನ್ನಂಗಾಗ್ಯಾದೆ.”
“ಮೋದಿ ಮಾತ ನಂಬಕ್ಕ.”
“ಬೂದಿ ಹುಯ್ಕಳದೆಯ ಕಂಡ್ಳ ಅವುನ ಮಾತ ಕೇಳಿದ್ರೆ.”
“ಯಾಕಪ್ಪ.”
“ಮನೆವಳಗಿರಿ ಅಂತನೆ ವರತು ಇನ್ನೆನು ಹೇಳದಿಲ್ಲ.”
“ಏನೇಳಬೇಕಾಗಿತ್ತು.”
“ಇಪ್ಪತ್ತು ದಿನಾತು ದನ ಕಟ್ಟಿತ್ತಾವುಲೆ ಹುಲ್ಲಾಕ್ತ ಇದ್ದಿನಿ. ಯಮ್ಮೆ ಹಿಡದು ಆಚೆಗೆ ಕಟ್ಟಿದ್ದು ತಿರಗ ವಳಿಕೆ ಹಿಡದು ಕಟ್ಟದಾಗ್ಯದೆ. ಆಡು ಮರಿಗಳು ಸೊಪ್ಪಿಲ್ಲದೆ ಕೂಗ್ತವೆ. ಅದ್‍ಯಂಗ್ಲ ಮನೆವಳಗಿದ್ದೀ.”
“ಮೋದಿಗವ್ಯಲ್ಲ ಗೊತ್ತಿಲ್ಲ ಕಣಕ್ಕ. ಅವುನಿಗೆ ಅಂಗಡಿ, ಆಫೀಸು ಅಷ್ಟೆ ಗೊತ್ತಿರದು. ಅದಕ್ಕೆ ಮನೆಲಿರಿ ಅಂದವುನೆ.”
“ಅಂಗರೆ ರೈತಾಪಿ ಜನ ಗೊತ್ತಿಲವೆ ಅವುನಿಗೆ.”
“ಇಲ್ಲ ಕಣಕ್ಕ. ಗೊತ್ತಿದ್ರೆ ಯಲ್ಲಾ ಸಾಮಾನು ಸರಂಜಾಮು ವದಿಗಿಸಿಗಳಿ, ಲಾಕ್‍ಡವುನ್ ಮಾಡ್ತಿನಿ ಅಂತ ಮೂರು ದಿನ ಮದ್ಲೆ ಹೇಳಿ, ಜನಗಳ ತಯಾರು ಮಾಡನು. ಅವುನ ತಲೆಲಿ ಕೂಲಿ ಮಾಡೋರು ಬಡವುರು ಜಮೀನಿಲ್ಲದೊರು ಇಲವೇ ಇಲ್ಲ.”
“ಜಮೀನು ಅಂದೇಟಿಗೆ ನೆಪ್ತಿಗೆ ಬತ್ತು ಕಂಡ್ಳ ಬಿಜೆಪಿಗಳು ಅದೇನೂ ಕಾನೂನು ಮಾಡಿದ್ರಂತೆ.”
“ಏನಕ್ಕ.”
“ವತುವರಿ ಜಮೀನ್ಯಲ್ಲ ನಿಂದೆಯ ಅಂತ ಮಾಡಿದರಂತೆ.”
“ನಂದಂತೂ ಯಾವ ವತುವರಿನೂ ಇಲ್ಲ ಕಣಕ್ಕ ನನ್ನ ಖಾತೆ ಜಮೀನ್ನ ಹಾಳು ಬಿಟ್ಟಿದ್ದಿನಿ.”
“ನಿಂದಿಲ್ಲ ಕಂಡ್ಳ, ಆ ಕಿಸ್ಣೇಗೌಡ ಒಂದು ಕಾಲಿಲ್ದೆಯಿದ್ರೂವೆ ಮನಿಯೋರನ್ನೆಲ್ಲ ಕರಕಂಡೋಗಿ ಯಕರಿಗಟ್ಳೆ ಬೇಲಿ ಹಾಕ್ಯಂಡನಂತೆ.”
“ನೋಡಪ್ಪ, ಕರೊನಾ ಬಂದು ದೇಸಕ್ಕೆ ದೇಸನೆ ಕೊಚಗಂಡೊಯ್ತಾಯಿರುವಾಗ, ಆ ಕುಂಟಣ್ಣನಿಗೆ ಬಂದಿರೊ ದುರಾಸೆ ನೋಡು ಯಂಗದೆ.”
“ಅದೂ ಊರ್ಯಲ್ಲ ಬಾಗಲಾಯ್ಕಂಡು ಮನೆಲಿದ್ರು ನೋಡು, ಯಾರು ನೋಡದಿಲ್ಲ ಅಂತ ತಿಳಗಂಡು ಬದ ಹಾಕಿ ಬೇಲಿ ಹಾಕಿದ್ದಾನಂತೆ.”
“ಅಲ್ಲಾ ಕಣೊ ಉಗ್ರಿ, ಇಂತ ಟೈಮಲ್ಲಿ ಹಿಂಗೆ ಯೋಚನೆ ಮಾಡ್ತರೆ ಜನ ಅಂತ ನನಿಗೆ ಗೊತ್ತಿರಲೇ ಇಲ್ಲ.”
“ಆ ಬಿಜೆಪಿಗಳೇ ಅಂಗೆ ಕಣೊ, ಯಾವಾಗ್ಲೂ ಟೈಂ ನೊಡ್ತರೆ ಜನ ಅಡ್ಡಗ್ಯಾನಾಗಿದ್ದಾಗ ಲಬುಕ್ಕಂತ ಲಪಟಾಯಿಸಿಬುಡ್ತಾರೆ”
“ಈಗ್ಲು ಅಂಗೆ ಆಗ್ಯದೆ ನೋಡೊ, ಊರ್ಯಲ್ಲ ಮನೆಲಿದ್ರೆ ಆ ಕೃಷ್ಣೇಗೌಡ ಬೇಲಿ ಹಾಕ್ಯವುನೆ ಇನ್ನ ಆ ಮಲನಾಡಕಡೆ ಗುಡ್ಡ ಗುಡ್ಡನೆ ನಂದು ಅಂತರೇನೂ.”
“ಹೋಗ್ಲಿ ಬುಡೊ ಉಗ್ರಿ, ಆ ವತ್ತುವರಿ ಮಾತಂಗಿರ್ಲಿ ಡ್ರಿಂಕ್ಸ್ ಬಗ್ಗೆ ಮಾತಾಡನ. ಇಪ್ಪತ್ತು ದಿನಾಯ್ತು ಕಣೊ ಉಗ್ರಿ ನಾನು ಡ್ರಿಂಕ್ಸ್ ಮಾಡಿ.”
“ಯಾಕೆ ಎಂ.ಸಿ ಬ್ರಾಂದಿ ಸಿಗತದಲ್ಲೊ.”
“ಒಂದು ಕ್ವಾಟ್ರಿಗೆ ನಾನೂರ್ರುಪಾಯಿ ಕಣೊ.”
“ಆಟೊಂತರ ದುಡ್ಡೆ.”
“ಯೆಸ್ ಕೊರೋನ ಯಾಕೊ ಡ್ರಿಂಕ್ಸ್ ಆಸೆಗೆ ಬುಡಂಗೆ ಮಾಡ್ತ ಅದೆ ಅಕ್ಚವಲಿ ಲಾಕ್‍ಡೌನು ಡ್ರಿಂಕ್ಸ್‍ಗೆ ಇರಬಾರದಿತ್ತು ಕಣೊ ಉಗ್ರಿ.”
“ಎಡೂರಪ್ಪನಿಗೆ ಫೋನು ಮಾಡು.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...