Homeಚಳವಳಿಈ ಬಾರಿ ಕೆಂಪುಕೋಟೆಯಲ್ಲಿ ಮೋದಿ ಧ್ವಜಾರೋಹಣ ಮಾಡಲು ಬಿಡುವುದಿಲ್ಲ: ಟ್ರಾಕ್ಟರ್ ರ್ಯಾಲಿಯಲ್ಲಿ ರೈತರ ಎಚ್ಚರಿಕೆ

ಈ ಬಾರಿ ಕೆಂಪುಕೋಟೆಯಲ್ಲಿ ಮೋದಿ ಧ್ವಜಾರೋಹಣ ಮಾಡಲು ಬಿಡುವುದಿಲ್ಲ: ಟ್ರಾಕ್ಟರ್ ರ್ಯಾಲಿಯಲ್ಲಿ ರೈತರ ಎಚ್ಚರಿಕೆ

ಇದೊಂದು ರೈತ ಹೋರಾಟಗಾರರ ಶಕ್ತಿ ಪ್ರದರ್ಶನವಾಗಿದೆ. ಇದಕ್ಕೆ ಯಾವುದೇ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು. ದೆಹಲಿಯ ಎಲ್ಲಾ ಗಡಿಗಳಲ್ಲಿ 400 ಕಿ.ಮೀ‌ ಆಸುಪಾಸಿನಲ್ಲಿ ರ್ಯಾಲಿ ನಡೆಯಲಿದೆ

- Advertisement -
- Advertisement -

ಈ ಬಾರಿ ಜನವರಿ 26 ರಂದು ದೆಹಲಿಯ ಕೆಂಪುಕೋಟೆಯ ಮೇಲೆ ಪ್ರಧಾನಿ ಮೋದಿಯವರಿಗೆ ಧ್ವಜಾರೋಹಣ ಮಾಡಲು ಬಿಡುವುದಿಲ್ಲ. ಕೆಂಪು ಕೋಟೆಯ ಮೇಲೆ ಈ ಬಾರಿ ರೈತರು ತಮ್ಮ ಧ್ವಜ ಹಾರಿಸಲಿದ್ದಾರೆ ಎಂದು ರೈತ ಮುಖಂಡರೊಬ್ಬರು ತಿಳಿಸಿದ್ದಾರೆ.

ಗಣರಾಜ್ಯೋತ್ಸವದ ಪೂರ್ವಭಾವಿಯಾಗಿ ಇಂದು ದೆಹಲಿಯ ಗಡಿಗಳಲ್ಲಿ ಟ್ರಾಕ್ಟರ್ ರ್ಯಾಲಿ ಆರಂಭಿಸಿದ ರೈತರು “ಸರ್ಕಾರಕ್ಕೆ ಕಾಳಜಿಯಿದ್ದರೆ ಜನವರಿ 26ರೊಳಗೆ ಈ ಕರಾಳ ಕಾಯ್ದೆಗಳನ್ನು ವಾಪಸ್ ಪಡೆಯಲಿ. ಇಲ್ಲದಿದ್ದರೆ ಮುಂದೆ ನಡೆಯುವ ಹೋರಾಟಗಳಿಗೆ ಸರ್ಕಾರವೇ ಹೊಣೆ” ಎಂದಿದ್ದಾರೆ.

ಇಂದಿನ ಟ್ರ್ಯಾಕ್ಟರ್‌ ರ್ಯಾಲಿಗೆ ಪಂಜಾಬ್‌ ಮತ್ತು ಹರಿಯಾಣ ಮೂಲದ ಸುಮಾರು 85 ಸಾವಿರಕ್ಕೂ ಹೆಚ್ಚು  ಟ್ರ್ಯಾಕ್ಟರ್‌ಗಳು ಭಾಗವಹಿಸಿವೆ. ಈಗಾಗಲೇ ಸಿಂಘು, ಟಿಕ್ರಿ ಮತ್ತು ಗಾಜಿಪೂರ್‌ ಪ್ರತಿಭಟನಾ ಸ್ಥಳಗಳಿಂದ ರ್ಯಾಲಿ ಹೊರಟಿದ್ದು, ಪಂಜಾಬ್‌, ಹರಿಯಾಣ, ಉತ್ತರ ಪ್ರದೇಶದ ರೈತರು ತಮ್ಮ ಟ್ರ್ಯಾಕ್ಟರ್‌ಗಳೋಂದಿಗೆ ರ್ಯಾಲಿಯ ಜೊತೆಗೂಡಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ನೊಂದಿಗೆ ಮಾತನಾಡಿದ ರೈತ ಮುಖಂಡ ರಿಜಿಂದರ್‌ ಸಿಂಗ್‌, “ನಾವು ನವೆಂಬರ್‌ 27ಕ್ಕೆ ಇಲ್ಲಿಗೆ ಬಂದೆವು. ಸರ್ಕಾರ ನಮ್ಮನ್ನು ತಡೆಯಲು ಹಳ್ಳ ತೋಡಿತು, ಮುಳ್ಳುತಂತಿ, ಬ್ಯಾರಿಕೇಡ್‌ಗಳನ್ನು ಅಡ್ಡ ನಿಲ್ಲಿಸಿತು. ಆದರೂ ಸರ್ಕಾರ ಒಡ್ಡಿದ ಸವಾಲುಗಳನ್ನು ಎದುರಿಸಿ ನಾವು ಇಲ್ಲಿಗೆ ಬಂದಿದೇವೆ. ಇಂದು ಶಾಂತಿಯುತವಾಗಿ ಟ್ರ್ಯಾಕ್ಟರ್‌ ರ್ಯಾಲಿ ಮಾಡುತ್ತೇವೆ. ಆದರೆ, ಸರ್ಕಾರ ಅದಕ್ಕೂ ತಡೆ ಹಾಕಿದರೇ ಬ್ಯಾರಿಕೇಡ್‌ಗಳನ್ನು ಉರುಳಿಸಿ ಮುನ್ನುಗ್ಗುತ್ತೇವೆ” ಎನ್ನುತ್ತಾರೆ.

ಇದೊಂದು ರೈತ ಹೋರಾಟಗಾರರ ಶಕ್ತಿ ಪ್ರದರ್ಶನವಾಗಿದೆ. ಇದಕ್ಕೆ ಯಾವುದೇ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು. ದೆಹಲಿಯ ಎಲ್ಲಾ ಗಡಿಗಳಲ್ಲಿ 400 ಕಿ.ಮೀ‌ ಆಸುಪಾಸಿನಲ್ಲಿ ರ್ಯಾಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

ಟ್ರಾಕ್ಟರ್ ರ್ಯಾಲಿಯಲ್ಲಿ ಭಾಗವಹಿಸಿರುವ ರೈತ ಮಹಿಳೆಯನ್ನು ಇನ್ನು ಎಷ್ಟು ದಿನ ಹೋರಾಟ ಮಾಡುತ್ತೀರಿ ಎಂದು ಕೇಳಿದರೆ “ನಾವು ಈ ಕಾಯ್ದೆಗಳು ರದ್ದಾಗುವವರೆಗೂ ಇಲ್ಲಿಯೇ ಇರುತ್ತೇವೆ. ಅದಕ್ಕಾಗಿ ಎಷ್ಟು ವರ್ಷಗಳು ತೆಗೆದುಕೊಂಡರೂ ಸರಿಯೇ ಹೋರಾಟದಿಂದ ಹಿಂದೆ ಸರಿಯುವುದಿಲ್ಲ” ಎಂದಿದ್ದಾರೆ.

ಹರಿಯಾಣದ ಇತರ ಭಾಗಗಳಲ್ಲೂ ರೈತರು ಮೂರು ಕೃಷಿ ಕಾನೂನುಗಳನ್ನು ವಿರೋಧಿಸಲು ಗುರುವಾರ ಟ್ರಾಕ್ಟರ್ ಮೆರವಣಿಗೆ ನಡೆಸಲಿದ್ದಾರೆ. ಅಲ್ಲದೆ, ರೈತರ ಟ್ರ್ಯಾಕ್ಟರ್​ ಮೆರವಣಿಗೆಯಿಂದಾಗಿ ಕುಂಡ್ಲಿ ಗಡಿಯಿಂದ ಟಿಕ್ರಿ ಗಡಿಯವರೆಗೆ ಸುಮಾರು ನಾಲ್ಕು ಗಂಟೆಗಳ ಕಾಲ ಸಾಮಾನ್ಯ ಸಂಚಾರದ ಮೇಲೆ ಪರಿಣಾಮ ಬೀರಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

“ನಾವು ರೈತ ಮೆರವಣಿಗೆಯನ್ನು ಸುರಕ್ಷಿತವಾಗಿ ನಡೆಯುವಂತೆ ಮತ್ತು ಜನರಿಗೆ ಹೆಚ್ಚಿನ ಅನಾನುಕೂಲತೆ ಉಂಟುಮಾಡದೆ ನಡೆಯುವಂತೆ ನೋಡಿಕೊಳ್ಳಲು ಪ್ರಯತ್ನಿಸುತ್ತೇವೆ” ಎಂದು ಹರಿಯಾಣ ಡಿಜಿಪಿ ಮನೋಜ್​ ಯಾದವ್ ತಿಳಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟದ ಕೇಂದ್ರಗಳಾದ ಟಿಕ್ರಿ- ಸಿಂಘು ಗಡಿಗಳು ಹೇಗಿವೆ? ಅವುಗಳ ಹಿನ್ನೆಲೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...