Homeಚಳವಳಿಈ ಬಾರಿ ಕೆಂಪುಕೋಟೆಯಲ್ಲಿ ಮೋದಿ ಧ್ವಜಾರೋಹಣ ಮಾಡಲು ಬಿಡುವುದಿಲ್ಲ: ಟ್ರಾಕ್ಟರ್ ರ್ಯಾಲಿಯಲ್ಲಿ ರೈತರ ಎಚ್ಚರಿಕೆ

ಈ ಬಾರಿ ಕೆಂಪುಕೋಟೆಯಲ್ಲಿ ಮೋದಿ ಧ್ವಜಾರೋಹಣ ಮಾಡಲು ಬಿಡುವುದಿಲ್ಲ: ಟ್ರಾಕ್ಟರ್ ರ್ಯಾಲಿಯಲ್ಲಿ ರೈತರ ಎಚ್ಚರಿಕೆ

ಇದೊಂದು ರೈತ ಹೋರಾಟಗಾರರ ಶಕ್ತಿ ಪ್ರದರ್ಶನವಾಗಿದೆ. ಇದಕ್ಕೆ ಯಾವುದೇ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು. ದೆಹಲಿಯ ಎಲ್ಲಾ ಗಡಿಗಳಲ್ಲಿ 400 ಕಿ.ಮೀ‌ ಆಸುಪಾಸಿನಲ್ಲಿ ರ್ಯಾಲಿ ನಡೆಯಲಿದೆ

- Advertisement -
- Advertisement -

ಈ ಬಾರಿ ಜನವರಿ 26 ರಂದು ದೆಹಲಿಯ ಕೆಂಪುಕೋಟೆಯ ಮೇಲೆ ಪ್ರಧಾನಿ ಮೋದಿಯವರಿಗೆ ಧ್ವಜಾರೋಹಣ ಮಾಡಲು ಬಿಡುವುದಿಲ್ಲ. ಕೆಂಪು ಕೋಟೆಯ ಮೇಲೆ ಈ ಬಾರಿ ರೈತರು ತಮ್ಮ ಧ್ವಜ ಹಾರಿಸಲಿದ್ದಾರೆ ಎಂದು ರೈತ ಮುಖಂಡರೊಬ್ಬರು ತಿಳಿಸಿದ್ದಾರೆ.

ಗಣರಾಜ್ಯೋತ್ಸವದ ಪೂರ್ವಭಾವಿಯಾಗಿ ಇಂದು ದೆಹಲಿಯ ಗಡಿಗಳಲ್ಲಿ ಟ್ರಾಕ್ಟರ್ ರ್ಯಾಲಿ ಆರಂಭಿಸಿದ ರೈತರು “ಸರ್ಕಾರಕ್ಕೆ ಕಾಳಜಿಯಿದ್ದರೆ ಜನವರಿ 26ರೊಳಗೆ ಈ ಕರಾಳ ಕಾಯ್ದೆಗಳನ್ನು ವಾಪಸ್ ಪಡೆಯಲಿ. ಇಲ್ಲದಿದ್ದರೆ ಮುಂದೆ ನಡೆಯುವ ಹೋರಾಟಗಳಿಗೆ ಸರ್ಕಾರವೇ ಹೊಣೆ” ಎಂದಿದ್ದಾರೆ.

ಇಂದಿನ ಟ್ರ್ಯಾಕ್ಟರ್‌ ರ್ಯಾಲಿಗೆ ಪಂಜಾಬ್‌ ಮತ್ತು ಹರಿಯಾಣ ಮೂಲದ ಸುಮಾರು 85 ಸಾವಿರಕ್ಕೂ ಹೆಚ್ಚು  ಟ್ರ್ಯಾಕ್ಟರ್‌ಗಳು ಭಾಗವಹಿಸಿವೆ. ಈಗಾಗಲೇ ಸಿಂಘು, ಟಿಕ್ರಿ ಮತ್ತು ಗಾಜಿಪೂರ್‌ ಪ್ರತಿಭಟನಾ ಸ್ಥಳಗಳಿಂದ ರ್ಯಾಲಿ ಹೊರಟಿದ್ದು, ಪಂಜಾಬ್‌, ಹರಿಯಾಣ, ಉತ್ತರ ಪ್ರದೇಶದ ರೈತರು ತಮ್ಮ ಟ್ರ್ಯಾಕ್ಟರ್‌ಗಳೋಂದಿಗೆ ರ್ಯಾಲಿಯ ಜೊತೆಗೂಡಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ನೊಂದಿಗೆ ಮಾತನಾಡಿದ ರೈತ ಮುಖಂಡ ರಿಜಿಂದರ್‌ ಸಿಂಗ್‌, “ನಾವು ನವೆಂಬರ್‌ 27ಕ್ಕೆ ಇಲ್ಲಿಗೆ ಬಂದೆವು. ಸರ್ಕಾರ ನಮ್ಮನ್ನು ತಡೆಯಲು ಹಳ್ಳ ತೋಡಿತು, ಮುಳ್ಳುತಂತಿ, ಬ್ಯಾರಿಕೇಡ್‌ಗಳನ್ನು ಅಡ್ಡ ನಿಲ್ಲಿಸಿತು. ಆದರೂ ಸರ್ಕಾರ ಒಡ್ಡಿದ ಸವಾಲುಗಳನ್ನು ಎದುರಿಸಿ ನಾವು ಇಲ್ಲಿಗೆ ಬಂದಿದೇವೆ. ಇಂದು ಶಾಂತಿಯುತವಾಗಿ ಟ್ರ್ಯಾಕ್ಟರ್‌ ರ್ಯಾಲಿ ಮಾಡುತ್ತೇವೆ. ಆದರೆ, ಸರ್ಕಾರ ಅದಕ್ಕೂ ತಡೆ ಹಾಕಿದರೇ ಬ್ಯಾರಿಕೇಡ್‌ಗಳನ್ನು ಉರುಳಿಸಿ ಮುನ್ನುಗ್ಗುತ್ತೇವೆ” ಎನ್ನುತ್ತಾರೆ.

ಇದೊಂದು ರೈತ ಹೋರಾಟಗಾರರ ಶಕ್ತಿ ಪ್ರದರ್ಶನವಾಗಿದೆ. ಇದಕ್ಕೆ ಯಾವುದೇ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು. ದೆಹಲಿಯ ಎಲ್ಲಾ ಗಡಿಗಳಲ್ಲಿ 400 ಕಿ.ಮೀ‌ ಆಸುಪಾಸಿನಲ್ಲಿ ರ್ಯಾಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

ಟ್ರಾಕ್ಟರ್ ರ್ಯಾಲಿಯಲ್ಲಿ ಭಾಗವಹಿಸಿರುವ ರೈತ ಮಹಿಳೆಯನ್ನು ಇನ್ನು ಎಷ್ಟು ದಿನ ಹೋರಾಟ ಮಾಡುತ್ತೀರಿ ಎಂದು ಕೇಳಿದರೆ “ನಾವು ಈ ಕಾಯ್ದೆಗಳು ರದ್ದಾಗುವವರೆಗೂ ಇಲ್ಲಿಯೇ ಇರುತ್ತೇವೆ. ಅದಕ್ಕಾಗಿ ಎಷ್ಟು ವರ್ಷಗಳು ತೆಗೆದುಕೊಂಡರೂ ಸರಿಯೇ ಹೋರಾಟದಿಂದ ಹಿಂದೆ ಸರಿಯುವುದಿಲ್ಲ” ಎಂದಿದ್ದಾರೆ.

ಹರಿಯಾಣದ ಇತರ ಭಾಗಗಳಲ್ಲೂ ರೈತರು ಮೂರು ಕೃಷಿ ಕಾನೂನುಗಳನ್ನು ವಿರೋಧಿಸಲು ಗುರುವಾರ ಟ್ರಾಕ್ಟರ್ ಮೆರವಣಿಗೆ ನಡೆಸಲಿದ್ದಾರೆ. ಅಲ್ಲದೆ, ರೈತರ ಟ್ರ್ಯಾಕ್ಟರ್​ ಮೆರವಣಿಗೆಯಿಂದಾಗಿ ಕುಂಡ್ಲಿ ಗಡಿಯಿಂದ ಟಿಕ್ರಿ ಗಡಿಯವರೆಗೆ ಸುಮಾರು ನಾಲ್ಕು ಗಂಟೆಗಳ ಕಾಲ ಸಾಮಾನ್ಯ ಸಂಚಾರದ ಮೇಲೆ ಪರಿಣಾಮ ಬೀರಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

“ನಾವು ರೈತ ಮೆರವಣಿಗೆಯನ್ನು ಸುರಕ್ಷಿತವಾಗಿ ನಡೆಯುವಂತೆ ಮತ್ತು ಜನರಿಗೆ ಹೆಚ್ಚಿನ ಅನಾನುಕೂಲತೆ ಉಂಟುಮಾಡದೆ ನಡೆಯುವಂತೆ ನೋಡಿಕೊಳ್ಳಲು ಪ್ರಯತ್ನಿಸುತ್ತೇವೆ” ಎಂದು ಹರಿಯಾಣ ಡಿಜಿಪಿ ಮನೋಜ್​ ಯಾದವ್ ತಿಳಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟದ ಕೇಂದ್ರಗಳಾದ ಟಿಕ್ರಿ- ಸಿಂಘು ಗಡಿಗಳು ಹೇಗಿವೆ? ಅವುಗಳ ಹಿನ್ನೆಲೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...