Homeಚಳವಳಿಈ ಬಾರಿ ಕೆಂಪುಕೋಟೆಯಲ್ಲಿ ಮೋದಿ ಧ್ವಜಾರೋಹಣ ಮಾಡಲು ಬಿಡುವುದಿಲ್ಲ: ಟ್ರಾಕ್ಟರ್ ರ್ಯಾಲಿಯಲ್ಲಿ ರೈತರ ಎಚ್ಚರಿಕೆ

ಈ ಬಾರಿ ಕೆಂಪುಕೋಟೆಯಲ್ಲಿ ಮೋದಿ ಧ್ವಜಾರೋಹಣ ಮಾಡಲು ಬಿಡುವುದಿಲ್ಲ: ಟ್ರಾಕ್ಟರ್ ರ್ಯಾಲಿಯಲ್ಲಿ ರೈತರ ಎಚ್ಚರಿಕೆ

ಇದೊಂದು ರೈತ ಹೋರಾಟಗಾರರ ಶಕ್ತಿ ಪ್ರದರ್ಶನವಾಗಿದೆ. ಇದಕ್ಕೆ ಯಾವುದೇ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು. ದೆಹಲಿಯ ಎಲ್ಲಾ ಗಡಿಗಳಲ್ಲಿ 400 ಕಿ.ಮೀ‌ ಆಸುಪಾಸಿನಲ್ಲಿ ರ್ಯಾಲಿ ನಡೆಯಲಿದೆ

- Advertisement -
- Advertisement -

ಈ ಬಾರಿ ಜನವರಿ 26 ರಂದು ದೆಹಲಿಯ ಕೆಂಪುಕೋಟೆಯ ಮೇಲೆ ಪ್ರಧಾನಿ ಮೋದಿಯವರಿಗೆ ಧ್ವಜಾರೋಹಣ ಮಾಡಲು ಬಿಡುವುದಿಲ್ಲ. ಕೆಂಪು ಕೋಟೆಯ ಮೇಲೆ ಈ ಬಾರಿ ರೈತರು ತಮ್ಮ ಧ್ವಜ ಹಾರಿಸಲಿದ್ದಾರೆ ಎಂದು ರೈತ ಮುಖಂಡರೊಬ್ಬರು ತಿಳಿಸಿದ್ದಾರೆ.

ಗಣರಾಜ್ಯೋತ್ಸವದ ಪೂರ್ವಭಾವಿಯಾಗಿ ಇಂದು ದೆಹಲಿಯ ಗಡಿಗಳಲ್ಲಿ ಟ್ರಾಕ್ಟರ್ ರ್ಯಾಲಿ ಆರಂಭಿಸಿದ ರೈತರು “ಸರ್ಕಾರಕ್ಕೆ ಕಾಳಜಿಯಿದ್ದರೆ ಜನವರಿ 26ರೊಳಗೆ ಈ ಕರಾಳ ಕಾಯ್ದೆಗಳನ್ನು ವಾಪಸ್ ಪಡೆಯಲಿ. ಇಲ್ಲದಿದ್ದರೆ ಮುಂದೆ ನಡೆಯುವ ಹೋರಾಟಗಳಿಗೆ ಸರ್ಕಾರವೇ ಹೊಣೆ” ಎಂದಿದ್ದಾರೆ.

ಇಂದಿನ ಟ್ರ್ಯಾಕ್ಟರ್‌ ರ್ಯಾಲಿಗೆ ಪಂಜಾಬ್‌ ಮತ್ತು ಹರಿಯಾಣ ಮೂಲದ ಸುಮಾರು 85 ಸಾವಿರಕ್ಕೂ ಹೆಚ್ಚು  ಟ್ರ್ಯಾಕ್ಟರ್‌ಗಳು ಭಾಗವಹಿಸಿವೆ. ಈಗಾಗಲೇ ಸಿಂಘು, ಟಿಕ್ರಿ ಮತ್ತು ಗಾಜಿಪೂರ್‌ ಪ್ರತಿಭಟನಾ ಸ್ಥಳಗಳಿಂದ ರ್ಯಾಲಿ ಹೊರಟಿದ್ದು, ಪಂಜಾಬ್‌, ಹರಿಯಾಣ, ಉತ್ತರ ಪ್ರದೇಶದ ರೈತರು ತಮ್ಮ ಟ್ರ್ಯಾಕ್ಟರ್‌ಗಳೋಂದಿಗೆ ರ್ಯಾಲಿಯ ಜೊತೆಗೂಡಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ನೊಂದಿಗೆ ಮಾತನಾಡಿದ ರೈತ ಮುಖಂಡ ರಿಜಿಂದರ್‌ ಸಿಂಗ್‌, “ನಾವು ನವೆಂಬರ್‌ 27ಕ್ಕೆ ಇಲ್ಲಿಗೆ ಬಂದೆವು. ಸರ್ಕಾರ ನಮ್ಮನ್ನು ತಡೆಯಲು ಹಳ್ಳ ತೋಡಿತು, ಮುಳ್ಳುತಂತಿ, ಬ್ಯಾರಿಕೇಡ್‌ಗಳನ್ನು ಅಡ್ಡ ನಿಲ್ಲಿಸಿತು. ಆದರೂ ಸರ್ಕಾರ ಒಡ್ಡಿದ ಸವಾಲುಗಳನ್ನು ಎದುರಿಸಿ ನಾವು ಇಲ್ಲಿಗೆ ಬಂದಿದೇವೆ. ಇಂದು ಶಾಂತಿಯುತವಾಗಿ ಟ್ರ್ಯಾಕ್ಟರ್‌ ರ್ಯಾಲಿ ಮಾಡುತ್ತೇವೆ. ಆದರೆ, ಸರ್ಕಾರ ಅದಕ್ಕೂ ತಡೆ ಹಾಕಿದರೇ ಬ್ಯಾರಿಕೇಡ್‌ಗಳನ್ನು ಉರುಳಿಸಿ ಮುನ್ನುಗ್ಗುತ್ತೇವೆ” ಎನ್ನುತ್ತಾರೆ.

ಇದೊಂದು ರೈತ ಹೋರಾಟಗಾರರ ಶಕ್ತಿ ಪ್ರದರ್ಶನವಾಗಿದೆ. ಇದಕ್ಕೆ ಯಾವುದೇ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು. ದೆಹಲಿಯ ಎಲ್ಲಾ ಗಡಿಗಳಲ್ಲಿ 400 ಕಿ.ಮೀ‌ ಆಸುಪಾಸಿನಲ್ಲಿ ರ್ಯಾಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

ಟ್ರಾಕ್ಟರ್ ರ್ಯಾಲಿಯಲ್ಲಿ ಭಾಗವಹಿಸಿರುವ ರೈತ ಮಹಿಳೆಯನ್ನು ಇನ್ನು ಎಷ್ಟು ದಿನ ಹೋರಾಟ ಮಾಡುತ್ತೀರಿ ಎಂದು ಕೇಳಿದರೆ “ನಾವು ಈ ಕಾಯ್ದೆಗಳು ರದ್ದಾಗುವವರೆಗೂ ಇಲ್ಲಿಯೇ ಇರುತ್ತೇವೆ. ಅದಕ್ಕಾಗಿ ಎಷ್ಟು ವರ್ಷಗಳು ತೆಗೆದುಕೊಂಡರೂ ಸರಿಯೇ ಹೋರಾಟದಿಂದ ಹಿಂದೆ ಸರಿಯುವುದಿಲ್ಲ” ಎಂದಿದ್ದಾರೆ.

ಹರಿಯಾಣದ ಇತರ ಭಾಗಗಳಲ್ಲೂ ರೈತರು ಮೂರು ಕೃಷಿ ಕಾನೂನುಗಳನ್ನು ವಿರೋಧಿಸಲು ಗುರುವಾರ ಟ್ರಾಕ್ಟರ್ ಮೆರವಣಿಗೆ ನಡೆಸಲಿದ್ದಾರೆ. ಅಲ್ಲದೆ, ರೈತರ ಟ್ರ್ಯಾಕ್ಟರ್​ ಮೆರವಣಿಗೆಯಿಂದಾಗಿ ಕುಂಡ್ಲಿ ಗಡಿಯಿಂದ ಟಿಕ್ರಿ ಗಡಿಯವರೆಗೆ ಸುಮಾರು ನಾಲ್ಕು ಗಂಟೆಗಳ ಕಾಲ ಸಾಮಾನ್ಯ ಸಂಚಾರದ ಮೇಲೆ ಪರಿಣಾಮ ಬೀರಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

“ನಾವು ರೈತ ಮೆರವಣಿಗೆಯನ್ನು ಸುರಕ್ಷಿತವಾಗಿ ನಡೆಯುವಂತೆ ಮತ್ತು ಜನರಿಗೆ ಹೆಚ್ಚಿನ ಅನಾನುಕೂಲತೆ ಉಂಟುಮಾಡದೆ ನಡೆಯುವಂತೆ ನೋಡಿಕೊಳ್ಳಲು ಪ್ರಯತ್ನಿಸುತ್ತೇವೆ” ಎಂದು ಹರಿಯಾಣ ಡಿಜಿಪಿ ಮನೋಜ್​ ಯಾದವ್ ತಿಳಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟದ ಕೇಂದ್ರಗಳಾದ ಟಿಕ್ರಿ- ಸಿಂಘು ಗಡಿಗಳು ಹೇಗಿವೆ? ಅವುಗಳ ಹಿನ್ನೆಲೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...