Homeಮುಖಪುಟಚಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಬಿಜೆಪಿ ಮಾಜಿ ನಾಯಕನ ವಿರುದ್ಧ ಪ್ರಕರಣ ದಾಖಲು

ಚಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಬಿಜೆಪಿ ಮಾಜಿ ನಾಯಕನ ವಿರುದ್ಧ ಪ್ರಕರಣ ದಾಖಲು

ಅಂಕಿತಾ ಭಂಡಾರಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯ ತಂದೆ, ಬಿಜೆಪಿಯ ಮಾಜಿ ನಾಯಕ ತನ್ನ ಚಾಲಕನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಪ್ರಕರಣ ದಾಖಲಾಗಿದೆ

- Advertisement -
- Advertisement -

ಅಂಕಿತಾ ಭಂಡಾರಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯ ತಂದೆ, ಬಿಜೆಪಿಯ ಮಾಜಿ ನಾಯಕ ತನ್ನ ಚಾಲಕನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಪ್ರಕರಣ ದಾಖಲಾಗಿದೆ.

ಉತ್ತರಾಖಂಡ್ ರೆಸಾರ್ಟ್ ರಿಸೆಪ್ಷನಿಸ್ಟ್ ಆಗಿದ್ದ ಅಂಕಿತಾ ಭಂಡಾರಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪುಲ್ಕಿತ್ ಆರ್ಯನ ತಂದೆ ವಿನೋದ್ ಆರ್ಯ ತನ್ನ ಚಾಲಕನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪ ಬಂದಿದೆ.

ಕಾರು ಚಾಲಕನನ್ನು ತನ್ನ ಮನೆಗೆ ತಡರಾತ್ರಿ ಕರೆದ ವಿನೋದ್ ಆರ್ಯ ಬಟ್ಟೆ ಬಿಚ್ಚಿಸುವಂತೆ ಸೂಚಿಸಿದ್ದರು ಎಂದು ಮಾಜಿ ಸಚಿವರ ಚಾಲಕ ರೋಹನ್ ಕಾಂಭೋಜ್ (25) ಆರೋಪಿಸಿದ್ದಾರೆ. ಆದರೆ ಚಾಲಕ ಪ್ರತಿಭಟಿಸಿದ ನಂತರ, ವಿನೋದ್‌ ಅವನನ್ನು ನೋಡಿ ನಕ್ಕರು. ವಿಭಿನ್ನ ಲೈಂಗಿಕ ಆದ್ಯತೆಯನ್ನು ಹೊಂದಿರುವೆಯೇ ಎಂದು ಪರಿಶೀಲಿಸಲು ಹೀಗೆ ಮಾಡಿದೆ ಎಂದು ವಿನೋದ್‌ ಹೇಳಿರುವುದಾಗಿ ಆರೋಪಿಸಲಾಗಿದೆ.

ಏತನ್ಮಧ್ಯೆ, ಆಜ್ ತಕ್‌ನೊಂದಿಗೆ ಮಾತನಾಡಿದ ಮಾಜಿ ಸಚಿವರು, ಚಾಲಕನ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಜೈಲಿನಿಂದ ಬಿಡುಗಡೆಯಾದ ನಂತರ ರೋಹನ್ ನಗದು ಮತ್ತು ಸಿಮ್‌ನೊಂದಿಗೆ ತಲೆಮರೆಸಿಕೊಂಡಿದ್ದಾನೆ ಎಂದು ದೂರಿದ್ದಾರೆ.

ಚಾಲಕ ನೀಡಿದ ದೂರು ಆಧರಿಸಿ ಪೊಲೀಸರು ಮಾಜಿ ಸಚಿವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಂಗಳವಾರ ರಾತ್ರಿ ವಿನೋದ್‌ ಆರ್ಯ ವಿರುದ್ಧ ಹರಿದ್ವಾರದ ಜವಳಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಸ್ಪಿ (ನಗರ) ಸ್ವತಂತ್ರ ಕುಮಾರ್ ತಿಳಿಸಿದ್ದಾರೆ.

ಐಪಿಸಿಯ 377 (ಅಸ್ವಾಭಾವಿಕ ಅಪರಾಧಗಳು), 307 (ಕೊಲೆ ಯತ್ನ), 323 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು) ಮತ್ತು 506 (ಕ್ರಿಮಿನಲ್ ಬೆದರಿಕೆ) ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಕುಮಾರ್ ಮಾಹಿತಿ ನೀಡಿದ್ದಾರೆ.

ಅಂಕಿತಾ ಕೊಲೆ ಪ್ರಕರಣ

ಪುಲ್ಕಿತ್ ಆರ್ಯನ ರೆಸಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿ ಅಂಕಿತಾ ಭಂಡಾರಿ ಸೆಪ್ಟಂಬರ್ 18ರಂದು ಕಾಣೆಯಾಗಿದ್ದರು. ಸ್ವತಃ ಪುಲ್ಕಿತ್ ಆರ್ಯನೇ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದನು. ಯುವತಿ ಕಾಣೆಯಾಗಿದ್ದಾಳೆ ಎಂದು ತಿಳಿಸಿದ್ದನು. ಆದರೆ 5 ದಿನದ ನಂತರ ಪ್ರಕರಣಕ್ಕೆ ತಿರುವು ಸಿಕ್ಕಿತ್ತು.

ಪುಲ್ಕಿತ್ ಆರ್ಯ ತನ್ನ ಇಬ್ಬರು ಸಿಬ್ಬಂದಿಯೊಡನೆ ಸೇರಿ ಯುವತಿಯನ್ನು ಕೊಂದಿದ್ದಾನೆ ಎಂಬ ಅಂಶ ಬೆಳಕಿಗೆ ಬಂದಿತ್ತು. ರೆಸಾರ್ಟ್ ಮೇಲೆ ಬುಲ್ಡೋಜರ್‌ ಹತ್ತಿಸಿ ಸಾಕ್ಷಿ ನಾಶಕ್ಕೆ ಸರ್ಕಾರ ಅವಕಾಶ ನೀಡಿರುವುದಾಗಿ ಯುವತಿಯ ಕುಟುಂಬ ಆರೋಪಿಸಿತ್ತು. ಈ ರೆಸಾರ್ಟ್‌ನಲ್ಲಿ ಕಾನೂನು ಬಾಹಿರ ಕೃತ್ಯಗಳು ನಡೆದಿರುವ ಅನುಮಾನಗಳು ವ್ಯಕ್ತವಾಗಿದ್ದವು.

ಆರೆಸ್ಸೆಸ್‌ ಮತ್ತು ಬಿಜೆಪಿ ನಾಯಕನ ಮಗ ನಡೆಸಿರುವ ಉತ್ತರಖಂಡ ಯುವತಿ ಕೊಲೆ ಪ್ರಕರಣದ ಮತ್ತಷ್ಟು ವಿವರಗಳು ಹೊರಬೀಳತೊಡಗಿದ್ದವು. ಆರೋಪಿಗಳು ರೆಸಾರ್ಟ್‌ನಲ್ಲಿ ಹದಿಹರೆಯದವರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದಾರೆ ಎಂದು ಹತ್ಯೆಗೀಡಾದ ಯುವತಿಯು ತನ್ನ ಸ್ನೇಹಿತೆಗೆ ಮಾಡಿದ್ದ ವಾಟ್ಸಾಪ್ ಸಂದೇಶಗಳ ಕುರಿತು ಎನ್‌ಡಿಟಿವಿ ವರದಿ ಮಾಡಿತ್ತು.

“ಅವರು ನನ್ನನ್ನು ವೇಶ್ಯೆಯನ್ನಾಗಿ ಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಕೊಲೆಗೀಡಾದ ಯುವತಿಯು ತನ್ನ ಸ್ನೇಹಿತರಿಗೆ ಸಂದೇಶ ಕಳುಹಿಸಿದ್ದು ಮತ್ತು ರೆಸಾರ್ಟ್‌ನಲ್ಲಿ ಸ್ವಾಗತಕಾರಿಣಿಯಾಗಿ ಕೆಲಸ ಮಾಡಿದ ಅನುಭವವನ್ನು ವಿವರಿಸುತ್ತಿದ್ದ ಬಗ್ಗೆ ವರದಿಗಳು ಬಹಿರಂಗಗೊಂಡಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...