Homeಮುಖಪುಟಆನ್‌ಲೈನ್‌‌ನಲ್ಲೇ ಸಿಗಲಿದೆ ಡ್ರೈವಿಂಗ್‌ ಲೈಸನ್ಸ್‌‌: 18 ಸೇವೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ

ಆನ್‌ಲೈನ್‌‌ನಲ್ಲೇ ಸಿಗಲಿದೆ ಡ್ರೈವಿಂಗ್‌ ಲೈಸನ್ಸ್‌‌: 18 ಸೇವೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ

- Advertisement -
- Advertisement -

ಡ್ರೈವಿಂಗ್‌ ಲೈಸನ್ಸ್ ಮತ್ತು ನೋಂದಣಿ ಪ್ರಮಾಣಪತ್ರಕ್ಕೆ ಸಂಬಂಧಿಸಿದ ಕೆಲವು ಸೇವೆಗಳನ್ನು ಈಗ ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿ ಪಡೆಯಬಹುದು ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಸುತ್ತೋಲೆಯನ್ನು ಬಿಡುಗಡೆ ಮಾಡಿದೆ.

ಇದರರ್ಥ ಇಂದಿನಿಂದ ಪ್ರಾದೇಶಿಕ ಸಾರಿಗೆ ಕಚೇರಿ ಅಥವಾ ಆರ್‌ಟಿಒಗೆ ಭೇಟಿ ನೀಡದೆ ಆಧಾರ್‌ ದೃಢೀಕರಣವನ್ನು ಬಳಸಿಕೊಂಡು, ಸ್ವಯಂಪ್ರೇರಣೆಯಿಂದ ಅಥವಾ ಯಾರಾದರೂ ತಮ್ಮ ಲೈಸನ್ಸ್‌ಅನ್ನು ನವೀಕರಿಸಬಹುದಾಗಿದ್ದು, ಡ್ಯೂಪ್ಲಿಕೆಟ್‌‌ ಆರ್ಸಿ ಮತ್ತು ಅಂತಹುದೇ ಸೇವೆಗಳನ್ನು ಪಡೆಯಬಹುದಾಗಿದೆ.

ಇದನ್ನೂ ಓದಿ: ವಿಶಾಖಪಟ್ಟಣ ಉಕ್ಕು ಕಾರ್ಖಾನೆ ಖಾಸಗೀಕರಣಕ್ಕೆ ವಿರೋಧಿಸಿ ಆಂಧ್ರಪ್ರದೇಶ ಬಂದ್

ಯಾರನ್ನೂ ಸಂಪರ್ಕಿಸದೆ ಗೊಂದಲ ಮುಕ್ತ ಸೇವೆಗಳನ್ನು ಪಡೆಯುವುದು ಇದರ ಉದ್ದೇಶವಾಗಿದ್ದು, ಈ ಮೂಲಕ ಸಚಿವಾಲಯವು ಸುಮಾರು 18 ಸೇವೆಗಳನ್ನು ನೀಡುತ್ತದೆ.

ಉತ್ತಮ ಆಡಳಿತವನ್ನು ಖಚಿತಪಡಿಸಿಕೊಳ್ಳುವುದರ ಜೊತೆಗೆ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳನ್ನು ಬಳಸಲು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಿಂದ ಎಲ್ಲ ಅನುಮೋದನೆಗಳನ್ನು ಸ್ವೀಕರಿಸಲಾಗಿದೆ ಎಂದು ಕೇಂದ್ರ ಸಾರಿಗೆ ಸಚಿವಾಲಯವು ತನ್ನ ಸುತ್ತೋಲೆಯಲ್ಲಿ ತಿಳಿಸಿದೆ. ಆನ್‌ಲೈನ್ ಸೇವೆಗಳನ್ನು ಬಳಸಲು ಬಯಸುವ ಜನರು ಆಧಾರ್ ದೃಢೀಕರಣಕ್ಕೆ ಒಳಗಾಗಬೇಕಾಗುತ್ತದೆ.

ತನ್ನ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನು ಪ್ರಕಟಿಸಿರುವ ಸಚಿವಾಲಯವು, “ಇದು ನಾಗರಿಕರ ಮೇಲಿನ ಹೊರೆಯನ್ನು ಕಡಿಮೆ ಮಾಡುತ್ತದೆ. ಈ ಸೇವೆಗಳನ್ನು ಗೊಂದಲ ಮುಕ್ತ, ಯಾರನ್ನೂ ಸಂಪರ್ಕಿಸದೆ ಸೇವೆಯನ್ನು ಪಡೆಯಲು ಸಹಾಯ ಮಾಡುತ್ತದೆ. ಇದು ಆರ್‌ಟಿಒ ಕಚೇರಿಯಲ್ಲಿನ ಓಡಾಟವನ್ನು ಸಹ ಕಡಿಮೆ ಮಾಡುತ್ತದೆ. ಆರ್‌ಟಿಒ ಕಚೇರಿಗಳ ದಕ್ಷತೆಯನ್ನು ಇನ್ನಷ್ಟು ಹೆಚ್ಚಿಸುತ್ತದೆ” ಎಂದು ತಿಳಿಸಿದೆ.

ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ಫೇಸ್‌ಬುಕ್ ಬ್ಯಾನ್! ಟೆಕ್ ದೈತ್ಯನ ಅಹಂಗೆ ಬಿದ್ದ ಪೆಟ್ಟು: ಎಸ್ ಕುಮಾರ್

ಆನ್‌ಲೈನ್ ಸೇವೆಗಳು ಮಾರ್ಚ್ 3, 2021 ರಿಂದ ಜಾರಿಗೆ ಬಂದಿದ್ದು, ಆಧಾರ್ ದೃಡೀಕರಣಕ್ಕೆ ಒಳಪಟ್ಟ ನಂತರ ಜನರು ಪಡೆಯಬಹುದಾದ ಎಲ್ಲಾ 18 ಆನ್‌ಲೈನ್‌‌ ಸೇವೆಗಳು ಈ ಕೆಳಗಿನಂತಿವೆ.

  1. ಕಲಿಕಾ ಪರವಾನಗಿ (ಎಲ್‌ಎಲ್‌ಆರ್‌)
  2. ಚಾಲನೆಯ ಸಾಮರ್ಥ್ಯದ ಪರೀಕ್ಷೆ ಅಗತ್ಯವಿಲ್ಲದವರ ಡ್ರೈವಿಂಗ್ ಲೈಸನ್ಸ್ ನವೀಕರಣ.
  3. ಡ್ಯೂಪ್ಲಿಕೆಟ್ ಡ್ರೈವಿಂಗ್ ಲೈಸನ್ಸ್.
  4. ಡ್ರೈವಿಂಗ್ ಲೈಸನ್ಸ್ ಮತ್ತು ನೋಂದಣಿ ಪ್ರಮಾಣಪತ್ರದಲ್ಲಿ ವಿಳಾಸ ಬದಲಾವಣೆ.
  5. ಅಂತರರಾಷ್ಟ್ರೀಯ ಡ್ರೈವಿಂಗ್‌ ಲೈಸನ್ಸ್ ನೀಡುವಿಕೆ.
  6. ಲೈಸನ್ಸ್‌ಗೆ ಇತರ ವರ್ಗದ ವಾಹನವನ್ನು ಸೇರಿಸುವುದು.
  7. ಮೋಟಾರು ವಾಹನದ ತಾತ್ಕಾಲಿಕ ನೋಂದಣಿಗೆ ಅರ್ಜಿ.
  8. ಸಂಪೂರ್ಣವಾಗಿ ಬಾಡಿಗಳನ್ನು ಕಟ್ಟಿರುವ ಮೋಟಾರು ವಾಹನದ ನೋಂದಣಿಗೆ ಅರ್ಜಿ.
  9. ನೋಂದಣಿಯ ಡ್ಯೂಪ್ಲಿಕೆಟ್ ಪ್ರಮಾಣಪತ್ರ ವಿತರಣೆಗಾಗಿ ಅರ್ಜಿ.
  10. ನೋಂದಣಿ ಪ್ರಮಾಣಪತ್ರಕ್ಕಾಗಿ ಎನ್ಒಸಿ ಒದಗಿಸಲು ಅರ್ಜಿ.
  11. ಮೋಟಾರು ವಾಹನದ ಮಾಲೀಕತ್ವದ ವರ್ಗಾವಣೆಗೆ ನೋಟಿಸ್‌.
  12. ಮೋಟಾರು ವಾಹನದ ಮಾಲೀಕತ್ವದ ವರ್ಗಾವಣೆಗೆ ಅರ್ಜಿ.
  13. ನೋಂದಣಿ ಪ್ರಮಾಣಪತ್ರದಲ್ಲಿ ವಿಳಾಸ ಬದಲಾವಣೆಯ ಮಾಹಿತಿ.
  14. ಮಾನ್ಯತೆ ಪಡೆದ ಚಾಲಕ ತರಬೇತಿ ಕೇಂದ್ರದಿಂದ ಚಾಲಕ ತರಬೇತಿಗಾಗಿ ನೋಂದಣಿಗೆ ಅರ್ಜಿ.
  15. ರಾಜತಾಂತ್ರಿಕ ಅಧಿಕಾರಿಯ ಮೋಟಾರು ವಾಹನದ ನೋಂದಣಿಗೆ ಅರ್ಜಿ.
  16. ರಾಜತಾಂತ್ರಿಕ ಅಧಿಕಾರಿಯ ಮೋಟಾರು ವಾಹನದ ಮೊದಲ ನೋಂದಣಿ ಗುರುತು ನಿಯೋಜನೆಗಾಗಿ ಅರ್ಜಿ.
  17. ಬಾಡಿಗೆ-ಖರೀದಿ ಒಪ್ಪಂದದ ಅನುಮೋದನೆ.
  18. ಬಾಡಿಗೆ-ಖರೀದಿ ಒಪ್ಪಂದದ ಮುಕ್ತಾಯ.

ಇದನ್ನೂ ಓದಿ: ಸೀಟು ಹಂಚಿಕೆ ವಿವಾದ: ಅಪಾಯದ ಅಂಚಿನಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...