Homeಮುಖಪುಟಆನ್‌ಲೈನ್‌‌ನಲ್ಲೇ ಸಿಗಲಿದೆ ಡ್ರೈವಿಂಗ್‌ ಲೈಸನ್ಸ್‌‌: 18 ಸೇವೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ

ಆನ್‌ಲೈನ್‌‌ನಲ್ಲೇ ಸಿಗಲಿದೆ ಡ್ರೈವಿಂಗ್‌ ಲೈಸನ್ಸ್‌‌: 18 ಸೇವೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ

- Advertisement -
- Advertisement -

ಡ್ರೈವಿಂಗ್‌ ಲೈಸನ್ಸ್ ಮತ್ತು ನೋಂದಣಿ ಪ್ರಮಾಣಪತ್ರಕ್ಕೆ ಸಂಬಂಧಿಸಿದ ಕೆಲವು ಸೇವೆಗಳನ್ನು ಈಗ ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿ ಪಡೆಯಬಹುದು ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಸುತ್ತೋಲೆಯನ್ನು ಬಿಡುಗಡೆ ಮಾಡಿದೆ.

ಇದರರ್ಥ ಇಂದಿನಿಂದ ಪ್ರಾದೇಶಿಕ ಸಾರಿಗೆ ಕಚೇರಿ ಅಥವಾ ಆರ್‌ಟಿಒಗೆ ಭೇಟಿ ನೀಡದೆ ಆಧಾರ್‌ ದೃಢೀಕರಣವನ್ನು ಬಳಸಿಕೊಂಡು, ಸ್ವಯಂಪ್ರೇರಣೆಯಿಂದ ಅಥವಾ ಯಾರಾದರೂ ತಮ್ಮ ಲೈಸನ್ಸ್‌ಅನ್ನು ನವೀಕರಿಸಬಹುದಾಗಿದ್ದು, ಡ್ಯೂಪ್ಲಿಕೆಟ್‌‌ ಆರ್ಸಿ ಮತ್ತು ಅಂತಹುದೇ ಸೇವೆಗಳನ್ನು ಪಡೆಯಬಹುದಾಗಿದೆ.

ಇದನ್ನೂ ಓದಿ: ವಿಶಾಖಪಟ್ಟಣ ಉಕ್ಕು ಕಾರ್ಖಾನೆ ಖಾಸಗೀಕರಣಕ್ಕೆ ವಿರೋಧಿಸಿ ಆಂಧ್ರಪ್ರದೇಶ ಬಂದ್

ಯಾರನ್ನೂ ಸಂಪರ್ಕಿಸದೆ ಗೊಂದಲ ಮುಕ್ತ ಸೇವೆಗಳನ್ನು ಪಡೆಯುವುದು ಇದರ ಉದ್ದೇಶವಾಗಿದ್ದು, ಈ ಮೂಲಕ ಸಚಿವಾಲಯವು ಸುಮಾರು 18 ಸೇವೆಗಳನ್ನು ನೀಡುತ್ತದೆ.

ಉತ್ತಮ ಆಡಳಿತವನ್ನು ಖಚಿತಪಡಿಸಿಕೊಳ್ಳುವುದರ ಜೊತೆಗೆ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳನ್ನು ಬಳಸಲು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಿಂದ ಎಲ್ಲ ಅನುಮೋದನೆಗಳನ್ನು ಸ್ವೀಕರಿಸಲಾಗಿದೆ ಎಂದು ಕೇಂದ್ರ ಸಾರಿಗೆ ಸಚಿವಾಲಯವು ತನ್ನ ಸುತ್ತೋಲೆಯಲ್ಲಿ ತಿಳಿಸಿದೆ. ಆನ್‌ಲೈನ್ ಸೇವೆಗಳನ್ನು ಬಳಸಲು ಬಯಸುವ ಜನರು ಆಧಾರ್ ದೃಢೀಕರಣಕ್ಕೆ ಒಳಗಾಗಬೇಕಾಗುತ್ತದೆ.

ತನ್ನ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನು ಪ್ರಕಟಿಸಿರುವ ಸಚಿವಾಲಯವು, “ಇದು ನಾಗರಿಕರ ಮೇಲಿನ ಹೊರೆಯನ್ನು ಕಡಿಮೆ ಮಾಡುತ್ತದೆ. ಈ ಸೇವೆಗಳನ್ನು ಗೊಂದಲ ಮುಕ್ತ, ಯಾರನ್ನೂ ಸಂಪರ್ಕಿಸದೆ ಸೇವೆಯನ್ನು ಪಡೆಯಲು ಸಹಾಯ ಮಾಡುತ್ತದೆ. ಇದು ಆರ್‌ಟಿಒ ಕಚೇರಿಯಲ್ಲಿನ ಓಡಾಟವನ್ನು ಸಹ ಕಡಿಮೆ ಮಾಡುತ್ತದೆ. ಆರ್‌ಟಿಒ ಕಚೇರಿಗಳ ದಕ್ಷತೆಯನ್ನು ಇನ್ನಷ್ಟು ಹೆಚ್ಚಿಸುತ್ತದೆ” ಎಂದು ತಿಳಿಸಿದೆ.

ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ಫೇಸ್‌ಬುಕ್ ಬ್ಯಾನ್! ಟೆಕ್ ದೈತ್ಯನ ಅಹಂಗೆ ಬಿದ್ದ ಪೆಟ್ಟು: ಎಸ್ ಕುಮಾರ್

ಆನ್‌ಲೈನ್ ಸೇವೆಗಳು ಮಾರ್ಚ್ 3, 2021 ರಿಂದ ಜಾರಿಗೆ ಬಂದಿದ್ದು, ಆಧಾರ್ ದೃಡೀಕರಣಕ್ಕೆ ಒಳಪಟ್ಟ ನಂತರ ಜನರು ಪಡೆಯಬಹುದಾದ ಎಲ್ಲಾ 18 ಆನ್‌ಲೈನ್‌‌ ಸೇವೆಗಳು ಈ ಕೆಳಗಿನಂತಿವೆ.

  1. ಕಲಿಕಾ ಪರವಾನಗಿ (ಎಲ್‌ಎಲ್‌ಆರ್‌)
  2. ಚಾಲನೆಯ ಸಾಮರ್ಥ್ಯದ ಪರೀಕ್ಷೆ ಅಗತ್ಯವಿಲ್ಲದವರ ಡ್ರೈವಿಂಗ್ ಲೈಸನ್ಸ್ ನವೀಕರಣ.
  3. ಡ್ಯೂಪ್ಲಿಕೆಟ್ ಡ್ರೈವಿಂಗ್ ಲೈಸನ್ಸ್.
  4. ಡ್ರೈವಿಂಗ್ ಲೈಸನ್ಸ್ ಮತ್ತು ನೋಂದಣಿ ಪ್ರಮಾಣಪತ್ರದಲ್ಲಿ ವಿಳಾಸ ಬದಲಾವಣೆ.
  5. ಅಂತರರಾಷ್ಟ್ರೀಯ ಡ್ರೈವಿಂಗ್‌ ಲೈಸನ್ಸ್ ನೀಡುವಿಕೆ.
  6. ಲೈಸನ್ಸ್‌ಗೆ ಇತರ ವರ್ಗದ ವಾಹನವನ್ನು ಸೇರಿಸುವುದು.
  7. ಮೋಟಾರು ವಾಹನದ ತಾತ್ಕಾಲಿಕ ನೋಂದಣಿಗೆ ಅರ್ಜಿ.
  8. ಸಂಪೂರ್ಣವಾಗಿ ಬಾಡಿಗಳನ್ನು ಕಟ್ಟಿರುವ ಮೋಟಾರು ವಾಹನದ ನೋಂದಣಿಗೆ ಅರ್ಜಿ.
  9. ನೋಂದಣಿಯ ಡ್ಯೂಪ್ಲಿಕೆಟ್ ಪ್ರಮಾಣಪತ್ರ ವಿತರಣೆಗಾಗಿ ಅರ್ಜಿ.
  10. ನೋಂದಣಿ ಪ್ರಮಾಣಪತ್ರಕ್ಕಾಗಿ ಎನ್ಒಸಿ ಒದಗಿಸಲು ಅರ್ಜಿ.
  11. ಮೋಟಾರು ವಾಹನದ ಮಾಲೀಕತ್ವದ ವರ್ಗಾವಣೆಗೆ ನೋಟಿಸ್‌.
  12. ಮೋಟಾರು ವಾಹನದ ಮಾಲೀಕತ್ವದ ವರ್ಗಾವಣೆಗೆ ಅರ್ಜಿ.
  13. ನೋಂದಣಿ ಪ್ರಮಾಣಪತ್ರದಲ್ಲಿ ವಿಳಾಸ ಬದಲಾವಣೆಯ ಮಾಹಿತಿ.
  14. ಮಾನ್ಯತೆ ಪಡೆದ ಚಾಲಕ ತರಬೇತಿ ಕೇಂದ್ರದಿಂದ ಚಾಲಕ ತರಬೇತಿಗಾಗಿ ನೋಂದಣಿಗೆ ಅರ್ಜಿ.
  15. ರಾಜತಾಂತ್ರಿಕ ಅಧಿಕಾರಿಯ ಮೋಟಾರು ವಾಹನದ ನೋಂದಣಿಗೆ ಅರ್ಜಿ.
  16. ರಾಜತಾಂತ್ರಿಕ ಅಧಿಕಾರಿಯ ಮೋಟಾರು ವಾಹನದ ಮೊದಲ ನೋಂದಣಿ ಗುರುತು ನಿಯೋಜನೆಗಾಗಿ ಅರ್ಜಿ.
  17. ಬಾಡಿಗೆ-ಖರೀದಿ ಒಪ್ಪಂದದ ಅನುಮೋದನೆ.
  18. ಬಾಡಿಗೆ-ಖರೀದಿ ಒಪ್ಪಂದದ ಮುಕ್ತಾಯ.

ಇದನ್ನೂ ಓದಿ: ಸೀಟು ಹಂಚಿಕೆ ವಿವಾದ: ಅಪಾಯದ ಅಂಚಿನಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...