Homeಮುಖಪುಟಆನ್‌ಲೈನ್‌‌ನಲ್ಲೇ ಸಿಗಲಿದೆ ಡ್ರೈವಿಂಗ್‌ ಲೈಸನ್ಸ್‌‌: 18 ಸೇವೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ

ಆನ್‌ಲೈನ್‌‌ನಲ್ಲೇ ಸಿಗಲಿದೆ ಡ್ರೈವಿಂಗ್‌ ಲೈಸನ್ಸ್‌‌: 18 ಸೇವೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ

- Advertisement -
- Advertisement -

ಡ್ರೈವಿಂಗ್‌ ಲೈಸನ್ಸ್ ಮತ್ತು ನೋಂದಣಿ ಪ್ರಮಾಣಪತ್ರಕ್ಕೆ ಸಂಬಂಧಿಸಿದ ಕೆಲವು ಸೇವೆಗಳನ್ನು ಈಗ ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿ ಪಡೆಯಬಹುದು ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಸುತ್ತೋಲೆಯನ್ನು ಬಿಡುಗಡೆ ಮಾಡಿದೆ.

ಇದರರ್ಥ ಇಂದಿನಿಂದ ಪ್ರಾದೇಶಿಕ ಸಾರಿಗೆ ಕಚೇರಿ ಅಥವಾ ಆರ್‌ಟಿಒಗೆ ಭೇಟಿ ನೀಡದೆ ಆಧಾರ್‌ ದೃಢೀಕರಣವನ್ನು ಬಳಸಿಕೊಂಡು, ಸ್ವಯಂಪ್ರೇರಣೆಯಿಂದ ಅಥವಾ ಯಾರಾದರೂ ತಮ್ಮ ಲೈಸನ್ಸ್‌ಅನ್ನು ನವೀಕರಿಸಬಹುದಾಗಿದ್ದು, ಡ್ಯೂಪ್ಲಿಕೆಟ್‌‌ ಆರ್ಸಿ ಮತ್ತು ಅಂತಹುದೇ ಸೇವೆಗಳನ್ನು ಪಡೆಯಬಹುದಾಗಿದೆ.

ಇದನ್ನೂ ಓದಿ: ವಿಶಾಖಪಟ್ಟಣ ಉಕ್ಕು ಕಾರ್ಖಾನೆ ಖಾಸಗೀಕರಣಕ್ಕೆ ವಿರೋಧಿಸಿ ಆಂಧ್ರಪ್ರದೇಶ ಬಂದ್

ಯಾರನ್ನೂ ಸಂಪರ್ಕಿಸದೆ ಗೊಂದಲ ಮುಕ್ತ ಸೇವೆಗಳನ್ನು ಪಡೆಯುವುದು ಇದರ ಉದ್ದೇಶವಾಗಿದ್ದು, ಈ ಮೂಲಕ ಸಚಿವಾಲಯವು ಸುಮಾರು 18 ಸೇವೆಗಳನ್ನು ನೀಡುತ್ತದೆ.

ಉತ್ತಮ ಆಡಳಿತವನ್ನು ಖಚಿತಪಡಿಸಿಕೊಳ್ಳುವುದರ ಜೊತೆಗೆ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳನ್ನು ಬಳಸಲು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಿಂದ ಎಲ್ಲ ಅನುಮೋದನೆಗಳನ್ನು ಸ್ವೀಕರಿಸಲಾಗಿದೆ ಎಂದು ಕೇಂದ್ರ ಸಾರಿಗೆ ಸಚಿವಾಲಯವು ತನ್ನ ಸುತ್ತೋಲೆಯಲ್ಲಿ ತಿಳಿಸಿದೆ. ಆನ್‌ಲೈನ್ ಸೇವೆಗಳನ್ನು ಬಳಸಲು ಬಯಸುವ ಜನರು ಆಧಾರ್ ದೃಢೀಕರಣಕ್ಕೆ ಒಳಗಾಗಬೇಕಾಗುತ್ತದೆ.

ತನ್ನ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನು ಪ್ರಕಟಿಸಿರುವ ಸಚಿವಾಲಯವು, “ಇದು ನಾಗರಿಕರ ಮೇಲಿನ ಹೊರೆಯನ್ನು ಕಡಿಮೆ ಮಾಡುತ್ತದೆ. ಈ ಸೇವೆಗಳನ್ನು ಗೊಂದಲ ಮುಕ್ತ, ಯಾರನ್ನೂ ಸಂಪರ್ಕಿಸದೆ ಸೇವೆಯನ್ನು ಪಡೆಯಲು ಸಹಾಯ ಮಾಡುತ್ತದೆ. ಇದು ಆರ್‌ಟಿಒ ಕಚೇರಿಯಲ್ಲಿನ ಓಡಾಟವನ್ನು ಸಹ ಕಡಿಮೆ ಮಾಡುತ್ತದೆ. ಆರ್‌ಟಿಒ ಕಚೇರಿಗಳ ದಕ್ಷತೆಯನ್ನು ಇನ್ನಷ್ಟು ಹೆಚ್ಚಿಸುತ್ತದೆ” ಎಂದು ತಿಳಿಸಿದೆ.

ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ಫೇಸ್‌ಬುಕ್ ಬ್ಯಾನ್! ಟೆಕ್ ದೈತ್ಯನ ಅಹಂಗೆ ಬಿದ್ದ ಪೆಟ್ಟು: ಎಸ್ ಕುಮಾರ್

ಆನ್‌ಲೈನ್ ಸೇವೆಗಳು ಮಾರ್ಚ್ 3, 2021 ರಿಂದ ಜಾರಿಗೆ ಬಂದಿದ್ದು, ಆಧಾರ್ ದೃಡೀಕರಣಕ್ಕೆ ಒಳಪಟ್ಟ ನಂತರ ಜನರು ಪಡೆಯಬಹುದಾದ ಎಲ್ಲಾ 18 ಆನ್‌ಲೈನ್‌‌ ಸೇವೆಗಳು ಈ ಕೆಳಗಿನಂತಿವೆ.

  1. ಕಲಿಕಾ ಪರವಾನಗಿ (ಎಲ್‌ಎಲ್‌ಆರ್‌)
  2. ಚಾಲನೆಯ ಸಾಮರ್ಥ್ಯದ ಪರೀಕ್ಷೆ ಅಗತ್ಯವಿಲ್ಲದವರ ಡ್ರೈವಿಂಗ್ ಲೈಸನ್ಸ್ ನವೀಕರಣ.
  3. ಡ್ಯೂಪ್ಲಿಕೆಟ್ ಡ್ರೈವಿಂಗ್ ಲೈಸನ್ಸ್.
  4. ಡ್ರೈವಿಂಗ್ ಲೈಸನ್ಸ್ ಮತ್ತು ನೋಂದಣಿ ಪ್ರಮಾಣಪತ್ರದಲ್ಲಿ ವಿಳಾಸ ಬದಲಾವಣೆ.
  5. ಅಂತರರಾಷ್ಟ್ರೀಯ ಡ್ರೈವಿಂಗ್‌ ಲೈಸನ್ಸ್ ನೀಡುವಿಕೆ.
  6. ಲೈಸನ್ಸ್‌ಗೆ ಇತರ ವರ್ಗದ ವಾಹನವನ್ನು ಸೇರಿಸುವುದು.
  7. ಮೋಟಾರು ವಾಹನದ ತಾತ್ಕಾಲಿಕ ನೋಂದಣಿಗೆ ಅರ್ಜಿ.
  8. ಸಂಪೂರ್ಣವಾಗಿ ಬಾಡಿಗಳನ್ನು ಕಟ್ಟಿರುವ ಮೋಟಾರು ವಾಹನದ ನೋಂದಣಿಗೆ ಅರ್ಜಿ.
  9. ನೋಂದಣಿಯ ಡ್ಯೂಪ್ಲಿಕೆಟ್ ಪ್ರಮಾಣಪತ್ರ ವಿತರಣೆಗಾಗಿ ಅರ್ಜಿ.
  10. ನೋಂದಣಿ ಪ್ರಮಾಣಪತ್ರಕ್ಕಾಗಿ ಎನ್ಒಸಿ ಒದಗಿಸಲು ಅರ್ಜಿ.
  11. ಮೋಟಾರು ವಾಹನದ ಮಾಲೀಕತ್ವದ ವರ್ಗಾವಣೆಗೆ ನೋಟಿಸ್‌.
  12. ಮೋಟಾರು ವಾಹನದ ಮಾಲೀಕತ್ವದ ವರ್ಗಾವಣೆಗೆ ಅರ್ಜಿ.
  13. ನೋಂದಣಿ ಪ್ರಮಾಣಪತ್ರದಲ್ಲಿ ವಿಳಾಸ ಬದಲಾವಣೆಯ ಮಾಹಿತಿ.
  14. ಮಾನ್ಯತೆ ಪಡೆದ ಚಾಲಕ ತರಬೇತಿ ಕೇಂದ್ರದಿಂದ ಚಾಲಕ ತರಬೇತಿಗಾಗಿ ನೋಂದಣಿಗೆ ಅರ್ಜಿ.
  15. ರಾಜತಾಂತ್ರಿಕ ಅಧಿಕಾರಿಯ ಮೋಟಾರು ವಾಹನದ ನೋಂದಣಿಗೆ ಅರ್ಜಿ.
  16. ರಾಜತಾಂತ್ರಿಕ ಅಧಿಕಾರಿಯ ಮೋಟಾರು ವಾಹನದ ಮೊದಲ ನೋಂದಣಿ ಗುರುತು ನಿಯೋಜನೆಗಾಗಿ ಅರ್ಜಿ.
  17. ಬಾಡಿಗೆ-ಖರೀದಿ ಒಪ್ಪಂದದ ಅನುಮೋದನೆ.
  18. ಬಾಡಿಗೆ-ಖರೀದಿ ಒಪ್ಪಂದದ ಮುಕ್ತಾಯ.

ಇದನ್ನೂ ಓದಿ: ಸೀಟು ಹಂಚಿಕೆ ವಿವಾದ: ಅಪಾಯದ ಅಂಚಿನಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...