Homeಮುಖಪುಟಆನ್‌ಲೈನ್‌‌ನಲ್ಲೇ ಸಿಗಲಿದೆ ಡ್ರೈವಿಂಗ್‌ ಲೈಸನ್ಸ್‌‌: 18 ಸೇವೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ

ಆನ್‌ಲೈನ್‌‌ನಲ್ಲೇ ಸಿಗಲಿದೆ ಡ್ರೈವಿಂಗ್‌ ಲೈಸನ್ಸ್‌‌: 18 ಸೇವೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ

- Advertisement -
- Advertisement -

ಡ್ರೈವಿಂಗ್‌ ಲೈಸನ್ಸ್ ಮತ್ತು ನೋಂದಣಿ ಪ್ರಮಾಣಪತ್ರಕ್ಕೆ ಸಂಬಂಧಿಸಿದ ಕೆಲವು ಸೇವೆಗಳನ್ನು ಈಗ ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿ ಪಡೆಯಬಹುದು ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಸುತ್ತೋಲೆಯನ್ನು ಬಿಡುಗಡೆ ಮಾಡಿದೆ.

ಇದರರ್ಥ ಇಂದಿನಿಂದ ಪ್ರಾದೇಶಿಕ ಸಾರಿಗೆ ಕಚೇರಿ ಅಥವಾ ಆರ್‌ಟಿಒಗೆ ಭೇಟಿ ನೀಡದೆ ಆಧಾರ್‌ ದೃಢೀಕರಣವನ್ನು ಬಳಸಿಕೊಂಡು, ಸ್ವಯಂಪ್ರೇರಣೆಯಿಂದ ಅಥವಾ ಯಾರಾದರೂ ತಮ್ಮ ಲೈಸನ್ಸ್‌ಅನ್ನು ನವೀಕರಿಸಬಹುದಾಗಿದ್ದು, ಡ್ಯೂಪ್ಲಿಕೆಟ್‌‌ ಆರ್ಸಿ ಮತ್ತು ಅಂತಹುದೇ ಸೇವೆಗಳನ್ನು ಪಡೆಯಬಹುದಾಗಿದೆ.

ಇದನ್ನೂ ಓದಿ: ವಿಶಾಖಪಟ್ಟಣ ಉಕ್ಕು ಕಾರ್ಖಾನೆ ಖಾಸಗೀಕರಣಕ್ಕೆ ವಿರೋಧಿಸಿ ಆಂಧ್ರಪ್ರದೇಶ ಬಂದ್

ಯಾರನ್ನೂ ಸಂಪರ್ಕಿಸದೆ ಗೊಂದಲ ಮುಕ್ತ ಸೇವೆಗಳನ್ನು ಪಡೆಯುವುದು ಇದರ ಉದ್ದೇಶವಾಗಿದ್ದು, ಈ ಮೂಲಕ ಸಚಿವಾಲಯವು ಸುಮಾರು 18 ಸೇವೆಗಳನ್ನು ನೀಡುತ್ತದೆ.

ಉತ್ತಮ ಆಡಳಿತವನ್ನು ಖಚಿತಪಡಿಸಿಕೊಳ್ಳುವುದರ ಜೊತೆಗೆ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳನ್ನು ಬಳಸಲು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಿಂದ ಎಲ್ಲ ಅನುಮೋದನೆಗಳನ್ನು ಸ್ವೀಕರಿಸಲಾಗಿದೆ ಎಂದು ಕೇಂದ್ರ ಸಾರಿಗೆ ಸಚಿವಾಲಯವು ತನ್ನ ಸುತ್ತೋಲೆಯಲ್ಲಿ ತಿಳಿಸಿದೆ. ಆನ್‌ಲೈನ್ ಸೇವೆಗಳನ್ನು ಬಳಸಲು ಬಯಸುವ ಜನರು ಆಧಾರ್ ದೃಢೀಕರಣಕ್ಕೆ ಒಳಗಾಗಬೇಕಾಗುತ್ತದೆ.

ತನ್ನ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನು ಪ್ರಕಟಿಸಿರುವ ಸಚಿವಾಲಯವು, “ಇದು ನಾಗರಿಕರ ಮೇಲಿನ ಹೊರೆಯನ್ನು ಕಡಿಮೆ ಮಾಡುತ್ತದೆ. ಈ ಸೇವೆಗಳನ್ನು ಗೊಂದಲ ಮುಕ್ತ, ಯಾರನ್ನೂ ಸಂಪರ್ಕಿಸದೆ ಸೇವೆಯನ್ನು ಪಡೆಯಲು ಸಹಾಯ ಮಾಡುತ್ತದೆ. ಇದು ಆರ್‌ಟಿಒ ಕಚೇರಿಯಲ್ಲಿನ ಓಡಾಟವನ್ನು ಸಹ ಕಡಿಮೆ ಮಾಡುತ್ತದೆ. ಆರ್‌ಟಿಒ ಕಚೇರಿಗಳ ದಕ್ಷತೆಯನ್ನು ಇನ್ನಷ್ಟು ಹೆಚ್ಚಿಸುತ್ತದೆ” ಎಂದು ತಿಳಿಸಿದೆ.

ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ಫೇಸ್‌ಬುಕ್ ಬ್ಯಾನ್! ಟೆಕ್ ದೈತ್ಯನ ಅಹಂಗೆ ಬಿದ್ದ ಪೆಟ್ಟು: ಎಸ್ ಕುಮಾರ್

ಆನ್‌ಲೈನ್ ಸೇವೆಗಳು ಮಾರ್ಚ್ 3, 2021 ರಿಂದ ಜಾರಿಗೆ ಬಂದಿದ್ದು, ಆಧಾರ್ ದೃಡೀಕರಣಕ್ಕೆ ಒಳಪಟ್ಟ ನಂತರ ಜನರು ಪಡೆಯಬಹುದಾದ ಎಲ್ಲಾ 18 ಆನ್‌ಲೈನ್‌‌ ಸೇವೆಗಳು ಈ ಕೆಳಗಿನಂತಿವೆ.

  1. ಕಲಿಕಾ ಪರವಾನಗಿ (ಎಲ್‌ಎಲ್‌ಆರ್‌)
  2. ಚಾಲನೆಯ ಸಾಮರ್ಥ್ಯದ ಪರೀಕ್ಷೆ ಅಗತ್ಯವಿಲ್ಲದವರ ಡ್ರೈವಿಂಗ್ ಲೈಸನ್ಸ್ ನವೀಕರಣ.
  3. ಡ್ಯೂಪ್ಲಿಕೆಟ್ ಡ್ರೈವಿಂಗ್ ಲೈಸನ್ಸ್.
  4. ಡ್ರೈವಿಂಗ್ ಲೈಸನ್ಸ್ ಮತ್ತು ನೋಂದಣಿ ಪ್ರಮಾಣಪತ್ರದಲ್ಲಿ ವಿಳಾಸ ಬದಲಾವಣೆ.
  5. ಅಂತರರಾಷ್ಟ್ರೀಯ ಡ್ರೈವಿಂಗ್‌ ಲೈಸನ್ಸ್ ನೀಡುವಿಕೆ.
  6. ಲೈಸನ್ಸ್‌ಗೆ ಇತರ ವರ್ಗದ ವಾಹನವನ್ನು ಸೇರಿಸುವುದು.
  7. ಮೋಟಾರು ವಾಹನದ ತಾತ್ಕಾಲಿಕ ನೋಂದಣಿಗೆ ಅರ್ಜಿ.
  8. ಸಂಪೂರ್ಣವಾಗಿ ಬಾಡಿಗಳನ್ನು ಕಟ್ಟಿರುವ ಮೋಟಾರು ವಾಹನದ ನೋಂದಣಿಗೆ ಅರ್ಜಿ.
  9. ನೋಂದಣಿಯ ಡ್ಯೂಪ್ಲಿಕೆಟ್ ಪ್ರಮಾಣಪತ್ರ ವಿತರಣೆಗಾಗಿ ಅರ್ಜಿ.
  10. ನೋಂದಣಿ ಪ್ರಮಾಣಪತ್ರಕ್ಕಾಗಿ ಎನ್ಒಸಿ ಒದಗಿಸಲು ಅರ್ಜಿ.
  11. ಮೋಟಾರು ವಾಹನದ ಮಾಲೀಕತ್ವದ ವರ್ಗಾವಣೆಗೆ ನೋಟಿಸ್‌.
  12. ಮೋಟಾರು ವಾಹನದ ಮಾಲೀಕತ್ವದ ವರ್ಗಾವಣೆಗೆ ಅರ್ಜಿ.
  13. ನೋಂದಣಿ ಪ್ರಮಾಣಪತ್ರದಲ್ಲಿ ವಿಳಾಸ ಬದಲಾವಣೆಯ ಮಾಹಿತಿ.
  14. ಮಾನ್ಯತೆ ಪಡೆದ ಚಾಲಕ ತರಬೇತಿ ಕೇಂದ್ರದಿಂದ ಚಾಲಕ ತರಬೇತಿಗಾಗಿ ನೋಂದಣಿಗೆ ಅರ್ಜಿ.
  15. ರಾಜತಾಂತ್ರಿಕ ಅಧಿಕಾರಿಯ ಮೋಟಾರು ವಾಹನದ ನೋಂದಣಿಗೆ ಅರ್ಜಿ.
  16. ರಾಜತಾಂತ್ರಿಕ ಅಧಿಕಾರಿಯ ಮೋಟಾರು ವಾಹನದ ಮೊದಲ ನೋಂದಣಿ ಗುರುತು ನಿಯೋಜನೆಗಾಗಿ ಅರ್ಜಿ.
  17. ಬಾಡಿಗೆ-ಖರೀದಿ ಒಪ್ಪಂದದ ಅನುಮೋದನೆ.
  18. ಬಾಡಿಗೆ-ಖರೀದಿ ಒಪ್ಪಂದದ ಮುಕ್ತಾಯ.

ಇದನ್ನೂ ಓದಿ: ಸೀಟು ಹಂಚಿಕೆ ವಿವಾದ: ಅಪಾಯದ ಅಂಚಿನಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...