Homeಮುಖಪುಟಹೊಲಗಳಿಗೆ ಕ್ರಿಮಿನಾಶಕ ಸಿಂಪಡಣೆಗೆ ಡ್ರೋನ್ ತರಬೇತಿ ಪಡೆದ ಮಹಿಳೆಯರ ನೇಮಕ

ಹೊಲಗಳಿಗೆ ಕ್ರಿಮಿನಾಶಕ ಸಿಂಪಡಣೆಗೆ ಡ್ರೋನ್ ತರಬೇತಿ ಪಡೆದ ಮಹಿಳೆಯರ ನೇಮಕ

- Advertisement -
- Advertisement -

ಚೆನ್ನೈ: ರೈತರ ಹೊಲಗಳಲ್ಲಿ ಡ್ರೋನ್ ಮೂಲಕ ಕೀಟನಾಶಕ ಸಿಂಪಡಣೆಗಾಗಿ ಕೇಂದ್ರ ಯೋಜನೆಯಡಿ ತರಬೇತಿ ಪಡೆದ ರಾಜ್ಯದ ಮೊದಲ ಮಹಿಳಾ ತಂಡವನ್ನು ನಿಯೋಜಿಸಲಾಗಿದೆ. ನೀರು ತುಂಬಿದ ಹೊಲಗಳಿಗೆ ಡ್ರೋನ್‌ ಸಾಗಣೆಯು ಅದರ ಭಾರವಾದ ತೂಕವು ಒಂದು ಸವಾಲಾಗಿದೆ.

ಗಣಿತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರೆಯಾದ 27 ವರ್ಷದ ನಂದಿನಿ ಸುಗುಮಾರ್ ಯಾವಾಗಲೂ ಡ್ರೋನ್‌ಗಳ ಬಗ್ಗೆ ಆಕರ್ಷಣೆಯನ್ನು ಹೊಂದಿದ್ದರು.

ಮದುವೆಗಳಲ್ಲಿ ಫೋಟೊ ಮತ್ತು ವೀಡಿಯೋ ರೆಕಾರ್ಡ್ ಗಳಿಗೆ ಬಳಸುತ್ತಿದ್ದ ಈ ಡ್ರೋನ್ ಗಳು ಜನರ ತಲೆಯ ಮೇಲೆ ಗಿರಕಿ ಹೊಡೆಯುವುದನ್ನು ಮಾತ್ರ ನೋಡಿದ್ದ ಅವರು, ಕೃಷಿ ಪ್ರಧಾನ ಕಲ್ಲಕುರಿಚಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಸಹಾಯ ಮಾಡುವ ಸಲುವಾಗಿ ಈ ಡ್ರೋನ್‌ ತರಬೇತಿ ಪಡೆದ ಮಹಿಳಾ ಡ್ರೋನ್ ಪೈಲಟ್‌ಗಳಲ್ಲಿ ನಂದಿನಿ ಒಬ್ಬರಾಗಿದ್ದಾರೆ.

ಪೊಂಗಲ್‌ಗೆ ಹದಿನೈದು ದಿನಗಳ ಮೊದಲು, ಶಂಕರಪುರಂ ಬಳಿಯ ಗ್ರಾಮವಾದ ದೇವಪಂಡಲಂ ನಿವಾಸಿಗಳು ನಂದಿನಿಯವರು ಡ್ರೋನ್ ಮೂಲಕ ಕಬ್ಬಿನ ಹೊಲದಲ್ಲಿ  ಸುಳಿದಾಡುತ್ತಾ ಮೇಲೆ ಕ್ರಿಮಿನಾಶಕ ಸಿಂಪಡಿಸುವುದನ್ನು ವಿಸ್ಮಯದಿಂದ ನೋಡಿದರು. ಈ ವಿಶಿಷ್ಟವಾದ ಹಾರಾಟವು ಕೇವಲ ಏಳು ನಿಮಿಷಗಳಲ್ಲಿ ಇಡೀ ಕಬ್ಬಿನ ಹೊಲವನ್ನು ಆವರಿಸಿತು ಮತ್ತು ಗ್ರಾಮಸ್ಥರ ಜೋರಾದ ಹರ್ಷೋದ್ಗಾರಗಳ ನಡುವೆ ಭೂಮಿಗೆ ಮರಳಿತು.

ನಂದಿನಿ ಅವರು ಕೇಂದ್ರ ಸರ್ಕಾರದ ನಮೋ ಡ್ರೋನ್ ದೀದಿ ಯೋಜನೆಯಡಿ ಆಯ್ಕೆಯಾದ ತಮಿಳುನಾಡಿನ ಮೊದಲ ಮಹಿಳಾ ಸ್ವ-ಸಹಾಯ ಗುಂಪು ಸದಸ್ಯರಲ್ಲಿ ಒಬ್ಬರಾಗಿದ್ದಾರೆ. ಗ್ರಾಮೀಣ ಮಹಿಳೆಯರಿಗೆ ಡ್ರೋನ್ ಪೈಲಟ್‌ಗಳಾಗಿ ತರಬೇತಿ ನೀಡುವ ಮೂಲಕ ಅವರನ್ನು ಸಬಲೀಕರಣಗೊಳಿಸುವ ಮತ್ತು ಸ್ಥಳೀಯ ಕೃಷಿ ಚಟುವಟಿಕೆಗೆ ಅವಿಭಾಜ್ಯ ಪಾಲುದಾರರನ್ನಾಗಿ ಮಾಡುವ ಗುರಿಯನ್ನು ಇದು ಹೊಂದಿದೆ.

ಕಲ್ಲಕುರಿಚಿಯಲ್ಲಿ ನಂದಿನಿಯವರು ಡ್ರೋನ್ ದೀದಿ ಯೋಜನೆಯ ಬಗ್ಗೆ ತಿಳಿದುಕೊಂಡರು ಮತ್ತು ಯಾವುದೇ ಆಲೋಚನೆ ಮಾಡದೇ ತರಬೇತಿಗಾಗಿ ಅರ್ಜಿ ಸಲ್ಲಿಸಿದರು. ತಮಿಳುನಾಡು ಮಹಿಳಾ ಅಭಿವೃದ್ಧಿ ನಿಗಮದಿಂದ ಮಹಿಳಾ ಸ್ವಸಹಾಯ ಸಂಘದ ಸದಸ್ಯೆಯಾಗಿ ಗುರುತಿಸಲ್ಪಟ್ಟ ನಂತರ, ಅವರನ್ನು ಕಲ್ಲಕುರಿಚಿ ಜಿಲ್ಲೆಯ ಕ್ಲಸ್ಟರ್‌ಗಳಲ್ಲಿ ಈ ತರಬೇತಿಗಾಗಿ ಆಯ್ಕೆ ಮಾಡಲಾಯಿತು.

ನಂದಿನಿ ಚೆನ್ನೈನಲ್ಲಿ ಗರುಡ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್ ನಡೆಸಿದ ಡ್ರೋನ್‌ಗಳ ಕಾರ್ಯಾಚರಣೆ ಮತ್ತು ನಿರ್ವಹಣೆ ಕುರಿತು ಐದು ದಿನಗಳ ಪ್ರಾಯೋಗಿಕ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡರು. ರಿಮೋಟ್ ಪೈಲಟ್ ತರಬೇತಿ ತರಗತಿಗಳನ್ನು ಪೂರ್ಣಗೊಳಿಸಿದ ನಂತರ, ಅವರಿಗೆ ಎರಡು ಟ್ಯಾಂಕ್‌ಗಳು ಮತ್ತು ಬ್ಯಾಟರಿ ಸೆಟ್ ಹೊಂದಿರುವ 7 ಲಕ್ಷ ರೂ. ಮೌಲ್ಯದ ಉಚಿತ ಡ್ರೋನ್ ನೀಡಲಾಯಿತು.

ನುರಿತ ಡ್ರೋನ್ ಪೈಲಟ್ ಆಗಿ ಪದವಿ ಪಡೆದ ನಂದಿನಿ, ರೈತರ ವ್ಯಾಪಕ ಕೃಷಿ ಚಟುವಟಿಕೆಗಳ ಅವಶ್ಯಕತೆಗಳನ್ನು ಪೂರೈಸುವುದು, ರಸಗೊಬ್ಬರಗಳು ಮತ್ತು ಕೀಟನಾಶಕಗಳನ್ನು ಸಿಂಪಡಿಸುವುದು ಮತ್ತು ಹೊಲಗಳಿಗೆ ನೀರುಣಿಸುವುದಕ್ಕಾಗಿ ಈ ತಂತ್ರಜ್ಞಾನವನ್ನು ಅಳವಡಿಸುವುದಕ್ಕೆ ಉತ್ಸುಕರಾಗಿದ್ದಾರೆ.

ಡ್ರೋನ್ ಹಾರಾಟ ನಡೆಸುವುದು ಎಂದರೆ ನನಗೆ ತುಂಬಾ ಖುಷಿ. ನಾನು ಸ್ಥಳೀಯ ರಸಗೊಬ್ಬರ ಅಂಗಡಿಗಳಿಗೆ ನನ್ನ ಸಂಪರ್ಕ ವಿವರಗಳನ್ನು ನೀಡಿದ್ದೇನೆ ಮತ್ತು ರೈತರಿಗೆ ಸಹಾಯ ಮಾಡಲು ಹತ್ತಿರದ ಹಳ್ಳಿಗಳಿಗೆ ಪ್ರವಾಸ ಮಾಡುತ್ತಿದ್ದೇನೆ. ಡ್ರೋನ್ ಮೂಲಕ ದ್ರವಗೊಬ್ಬರ ಮತ್ತು ಕೀಟನಾಶಕಗಳನ್ನು ಸಿಂಪಡಿಸುವುದು ತುಂಬಾ ವೆಚ್ಚದಾಯಕವಾಗಿದೆ ಮತ್ತು ಒಂದು ಎಕರೆ ಕೃಷಿ ಭೂಮಿಯನ್ನು ಆವರಿಸಲು ಸುಮಾರು ಏಳು ನಿಮಿಷಗಳನ್ನು ತೆಗೆದುಕೊಳ್ಳುತ್ತದೆ ಎಂದು ಅವರು ಹೇಳುತ್ತಾರೆ.

ಅವರು ಡ್ರೋನ್ ಮೂಲಕ ಕ್ರಿಮಿನಾಶಕ ಸಿಂಪಡಿಸುವುದಕ್ಕಾಗಿ ಎಕರೆಗೆ 400 ರೂ. ಶುಲ್ಕ ವಿಧಿಸುತ್ತಾರೆ. ದೇವಪಂಡಲಂ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಹೆಚ್ಚಿನ ರೈತರು 1ರಿಂದ 4 ಎಕರೆಗಳವರೆಗಿನ ಸಣ್ಣ ಭೂ ಹಿಡುವಳಿಗಳನ್ನು ಹೊಂದಿದ್ದಾರೆ.

“ದೇವಪಂಡಲಂನಲ್ಲಿರುವ ರೈತನ ಒಡೆತನದ ಕಬ್ಬಿನ ಹೊಲ ನನ್ನ ಮೊದಲ ಭೇಟಿ. ಇಲ್ಲಿ ನಾನು ಡ್ರೋನ್ ನ ಮೊದಲ ಹಾರಾಟ ನಡೆಸಿದೆ ಮತ್ತು ಈ ಸೇವೆಯು ರೈತನಿಗೆ ತೃಪ್ತಿಕರ ಫಲಿತಾಂಶವನ್ನು ಕೊಟ್ಟಿದೆ ಎಂದು ಖಚಿತಪಡಿಸಿಕೊಳ್ಳಲು ನಾನು ಯಾವ ಶುಲ್ಕವನ್ನು ವಿಧಿಸಲಿಲ್ಲ” ಎಂದು ಅವರು ಹೇಳುತ್ತಾರೆ. ಡ್ರೋನ್ ಸಹಾಯಕ ತರಬೇತಿಯನ್ನು ಪೂರ್ಣಗೊಳಿಸಿದ ಅವರ ಪತಿ ಸುಗುಮಾರ್ ಕೂಡ ಸಾಧನವನ್ನು ನಿರ್ವಹಿಸಲು ಸಹಾಯ ಮಾಡುತ್ತಾರೆ.

ಕಲ್ಲಕುರಿಚಿ ಜಿಲ್ಲೆಯ ಎರೈಯೂರ್ ಬಳಿಯ ಕೊಮ್ಮಸಮುತಿರಂನ ವಿ.ಶರಣ್ಯ ಕೂಡ ತರಬೇತಿ ಪಡೆದ ಮಹಿಳಾ ಡ್ರೋನ್ ಪೈಲಟ್. ಅವರು 10ನೇ ತರಗತಿಯವರೆಗೆ ಅಧ್ಯಯನ ಮಾಡಿದ್ದಾರೆ ಮತ್ತು ಮಹಿಳೆಯರಿಗೆ ಕಡಿಮೆ ಉದ್ಯೋಗಾವಕಾಶಗಳು ಇರುವುದರಿಂದ ಪ್ರಸ್ತುತ ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾರೆ.

ಚೆನ್ನೈನಲ್ಲಿ ಡ್ರೋನ್ ಪೈಲಟ್ ತರಬೇತಿಯನ್ನು ಪೂರ್ಣಗೊಳಿಸಿದ ಶರಣ್ಯ, ಈಗ ಉಲುಂದೂರ್ಪೇಟೆ ಬ್ಲಾಕ್‌ನ ಹಳ್ಳಿಗಳಲ್ಲಿ ಸಂಚರಿಸಿ, ಮಾಸಿಕ ಆದಾಯವನ್ನು ಕೊಡುವ ಹೊಲಗಳಲ್ಲಿ ಕೃಷಿ ಸಂಬಂಧಿತ ಡ್ರೋನ್ ಸಿಂಪಡಣೆಯ ಕಾರ್ಯವನ್ನು ಕೈಗೆತ್ತಿಕೊಂಡಿದ್ದಾರೆ.

“ರೈತರಿಂದ ಬರುವ ಸಾಮಾನ್ಯ ಬೇಡಿಕೆಯೆಂದರೆ ರಸಗೊಬ್ಬರಗಳು ಮತ್ತು ಕೀಟನಾಶಕಗಳ ಸಿಂಪಡಣೆ. ನಾನು ಡ್ರೋನ್ ನಿಂದ ಒಂದು ಎಕರೆಯನ್ನು ಆವರಿಸಿದ ತಕ್ಷಣ ಬ್ಯಾಟರಿ ಬೇಗನೆ ಖಾಲಿಯಾಗುತ್ತದೆ. ಆಗ ನಾನು ಅದನ್ನು ಚಾರ್ಜ್ ಮಾಡಬೇಕಾಗುತ್ತದೆ. ಇನ್ನೂ ಎರಡು ಬ್ಯಾಟರಿಗಳನ್ನು ಖರೀದಿಸಲು ನಾನು ಪಂಚಾಯತ್ ಮಟ್ಟದ ಒಕ್ಕೂಟದಿಂದ ಸಾಲಕ್ಕಾಗಿ ಅರ್ಜಿ ಸಲ್ಲಿಸಿದ್ದೇನೆ” ಎಂದು ಅವರು ಹೇಳುತ್ತಾರೆ.

ಇದರಲ್ಲಿ ಇತರ ಸವಾಲುಗಳು ಸಹ ಇವೆ. “ಸಮೀಪದ ಬ್ಲಾಕ್‌ಗಳಿಂದ ರೈತರಿಂದ ನನಗೆ ಕರೆಗಳು ಬಂದರೂ, ಡ್ರೋನ್ ಅನ್ನು ಸಾಗಿಸುವುದು ಒಂದು ಸಮಸ್ಯೆಯಾಗಿದೆ. ಏಕೆಂದರೆ ಅದು ಗೊಬ್ಬರ ಮತ್ತು ನೀರಿನಿಂದ ತುಂಬಿದ ನಂತರ ಸುಮಾರು 30 ಕೆಜಿ ತೂಗುತ್ತದೆ. ಅದನ್ನು ಸಾಗಿಸಲು ಇಬ್ಬರು ಜನರು ಬೇಕಾಗುತ್ತದೆ ಮತ್ತು ಡ್ರೋನ್ ಸಾಗಿಸಲು ಸೆಕೆಂಡ್ ಹ್ಯಾಂಡ್ ವಾಹನ ಖರೀದಿಗೆ ಸುಮಾರು 3 ರೂ. ಲಕ್ಷ ವೆಚ್ಚವಾಗುತ್ತದೆ. ಆದಾಗ್ಯೂ, ನನ್ನ ಹೊಸ ಉದ್ಯೋಗವು ನನ್ನ ಆದಾಯವನ್ನು ಪೂರೈಸುತ್ತದೆ ಮತ್ತು ದೀರ್ಘಾವಧಿಯಲ್ಲಿ ಇದು ಪ್ರಯೋಜನಕಾರಿಯಾಗಿದೆ ಎಂದು ಭಾವಿಸುತ್ತೇನೆ” ಎಂದು ಶರಣ್ಯ ಹೇಳುತ್ತಾರೆ.

ಕೃಪೆ: ದಿ ಹಿಂದೂ

ಮಹಿಳೆಯರ ವಿರುದ್ಧ ಅಸಭ್ಯ, ಅಶ್ಲೀಲ ಆರೋಪ: ತಂತ್ರಜ್ಞಾನ ಸಂಸ್ಥೆಯ ನಿರ್ದೇಶಕನ ವಿರುದ್ಧ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...