Homeಮುಖಪುಟಹೊಲಗಳಿಗೆ ಕ್ರಿಮಿನಾಶಕ ಸಿಂಪಡಣೆಗೆ ಡ್ರೋನ್ ತರಬೇತಿ ಪಡೆದ ಮಹಿಳೆಯರ ನೇಮಕ

ಹೊಲಗಳಿಗೆ ಕ್ರಿಮಿನಾಶಕ ಸಿಂಪಡಣೆಗೆ ಡ್ರೋನ್ ತರಬೇತಿ ಪಡೆದ ಮಹಿಳೆಯರ ನೇಮಕ

- Advertisement -
- Advertisement -

ಚೆನ್ನೈ: ರೈತರ ಹೊಲಗಳಲ್ಲಿ ಡ್ರೋನ್ ಮೂಲಕ ಕೀಟನಾಶಕ ಸಿಂಪಡಣೆಗಾಗಿ ಕೇಂದ್ರ ಯೋಜನೆಯಡಿ ತರಬೇತಿ ಪಡೆದ ರಾಜ್ಯದ ಮೊದಲ ಮಹಿಳಾ ತಂಡವನ್ನು ನಿಯೋಜಿಸಲಾಗಿದೆ. ನೀರು ತುಂಬಿದ ಹೊಲಗಳಿಗೆ ಡ್ರೋನ್‌ ಸಾಗಣೆಯು ಅದರ ಭಾರವಾದ ತೂಕವು ಒಂದು ಸವಾಲಾಗಿದೆ.

ಗಣಿತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರೆಯಾದ 27 ವರ್ಷದ ನಂದಿನಿ ಸುಗುಮಾರ್ ಯಾವಾಗಲೂ ಡ್ರೋನ್‌ಗಳ ಬಗ್ಗೆ ಆಕರ್ಷಣೆಯನ್ನು ಹೊಂದಿದ್ದರು.

ಮದುವೆಗಳಲ್ಲಿ ಫೋಟೊ ಮತ್ತು ವೀಡಿಯೋ ರೆಕಾರ್ಡ್ ಗಳಿಗೆ ಬಳಸುತ್ತಿದ್ದ ಈ ಡ್ರೋನ್ ಗಳು ಜನರ ತಲೆಯ ಮೇಲೆ ಗಿರಕಿ ಹೊಡೆಯುವುದನ್ನು ಮಾತ್ರ ನೋಡಿದ್ದ ಅವರು, ಕೃಷಿ ಪ್ರಧಾನ ಕಲ್ಲಕುರಿಚಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಸಹಾಯ ಮಾಡುವ ಸಲುವಾಗಿ ಈ ಡ್ರೋನ್‌ ತರಬೇತಿ ಪಡೆದ ಮಹಿಳಾ ಡ್ರೋನ್ ಪೈಲಟ್‌ಗಳಲ್ಲಿ ನಂದಿನಿ ಒಬ್ಬರಾಗಿದ್ದಾರೆ.

ಪೊಂಗಲ್‌ಗೆ ಹದಿನೈದು ದಿನಗಳ ಮೊದಲು, ಶಂಕರಪುರಂ ಬಳಿಯ ಗ್ರಾಮವಾದ ದೇವಪಂಡಲಂ ನಿವಾಸಿಗಳು ನಂದಿನಿಯವರು ಡ್ರೋನ್ ಮೂಲಕ ಕಬ್ಬಿನ ಹೊಲದಲ್ಲಿ  ಸುಳಿದಾಡುತ್ತಾ ಮೇಲೆ ಕ್ರಿಮಿನಾಶಕ ಸಿಂಪಡಿಸುವುದನ್ನು ವಿಸ್ಮಯದಿಂದ ನೋಡಿದರು. ಈ ವಿಶಿಷ್ಟವಾದ ಹಾರಾಟವು ಕೇವಲ ಏಳು ನಿಮಿಷಗಳಲ್ಲಿ ಇಡೀ ಕಬ್ಬಿನ ಹೊಲವನ್ನು ಆವರಿಸಿತು ಮತ್ತು ಗ್ರಾಮಸ್ಥರ ಜೋರಾದ ಹರ್ಷೋದ್ಗಾರಗಳ ನಡುವೆ ಭೂಮಿಗೆ ಮರಳಿತು.

ನಂದಿನಿ ಅವರು ಕೇಂದ್ರ ಸರ್ಕಾರದ ನಮೋ ಡ್ರೋನ್ ದೀದಿ ಯೋಜನೆಯಡಿ ಆಯ್ಕೆಯಾದ ತಮಿಳುನಾಡಿನ ಮೊದಲ ಮಹಿಳಾ ಸ್ವ-ಸಹಾಯ ಗುಂಪು ಸದಸ್ಯರಲ್ಲಿ ಒಬ್ಬರಾಗಿದ್ದಾರೆ. ಗ್ರಾಮೀಣ ಮಹಿಳೆಯರಿಗೆ ಡ್ರೋನ್ ಪೈಲಟ್‌ಗಳಾಗಿ ತರಬೇತಿ ನೀಡುವ ಮೂಲಕ ಅವರನ್ನು ಸಬಲೀಕರಣಗೊಳಿಸುವ ಮತ್ತು ಸ್ಥಳೀಯ ಕೃಷಿ ಚಟುವಟಿಕೆಗೆ ಅವಿಭಾಜ್ಯ ಪಾಲುದಾರರನ್ನಾಗಿ ಮಾಡುವ ಗುರಿಯನ್ನು ಇದು ಹೊಂದಿದೆ.

ಕಲ್ಲಕುರಿಚಿಯಲ್ಲಿ ನಂದಿನಿಯವರು ಡ್ರೋನ್ ದೀದಿ ಯೋಜನೆಯ ಬಗ್ಗೆ ತಿಳಿದುಕೊಂಡರು ಮತ್ತು ಯಾವುದೇ ಆಲೋಚನೆ ಮಾಡದೇ ತರಬೇತಿಗಾಗಿ ಅರ್ಜಿ ಸಲ್ಲಿಸಿದರು. ತಮಿಳುನಾಡು ಮಹಿಳಾ ಅಭಿವೃದ್ಧಿ ನಿಗಮದಿಂದ ಮಹಿಳಾ ಸ್ವಸಹಾಯ ಸಂಘದ ಸದಸ್ಯೆಯಾಗಿ ಗುರುತಿಸಲ್ಪಟ್ಟ ನಂತರ, ಅವರನ್ನು ಕಲ್ಲಕುರಿಚಿ ಜಿಲ್ಲೆಯ ಕ್ಲಸ್ಟರ್‌ಗಳಲ್ಲಿ ಈ ತರಬೇತಿಗಾಗಿ ಆಯ್ಕೆ ಮಾಡಲಾಯಿತು.

ನಂದಿನಿ ಚೆನ್ನೈನಲ್ಲಿ ಗರುಡ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್ ನಡೆಸಿದ ಡ್ರೋನ್‌ಗಳ ಕಾರ್ಯಾಚರಣೆ ಮತ್ತು ನಿರ್ವಹಣೆ ಕುರಿತು ಐದು ದಿನಗಳ ಪ್ರಾಯೋಗಿಕ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡರು. ರಿಮೋಟ್ ಪೈಲಟ್ ತರಬೇತಿ ತರಗತಿಗಳನ್ನು ಪೂರ್ಣಗೊಳಿಸಿದ ನಂತರ, ಅವರಿಗೆ ಎರಡು ಟ್ಯಾಂಕ್‌ಗಳು ಮತ್ತು ಬ್ಯಾಟರಿ ಸೆಟ್ ಹೊಂದಿರುವ 7 ಲಕ್ಷ ರೂ. ಮೌಲ್ಯದ ಉಚಿತ ಡ್ರೋನ್ ನೀಡಲಾಯಿತು.

ನುರಿತ ಡ್ರೋನ್ ಪೈಲಟ್ ಆಗಿ ಪದವಿ ಪಡೆದ ನಂದಿನಿ, ರೈತರ ವ್ಯಾಪಕ ಕೃಷಿ ಚಟುವಟಿಕೆಗಳ ಅವಶ್ಯಕತೆಗಳನ್ನು ಪೂರೈಸುವುದು, ರಸಗೊಬ್ಬರಗಳು ಮತ್ತು ಕೀಟನಾಶಕಗಳನ್ನು ಸಿಂಪಡಿಸುವುದು ಮತ್ತು ಹೊಲಗಳಿಗೆ ನೀರುಣಿಸುವುದಕ್ಕಾಗಿ ಈ ತಂತ್ರಜ್ಞಾನವನ್ನು ಅಳವಡಿಸುವುದಕ್ಕೆ ಉತ್ಸುಕರಾಗಿದ್ದಾರೆ.

ಡ್ರೋನ್ ಹಾರಾಟ ನಡೆಸುವುದು ಎಂದರೆ ನನಗೆ ತುಂಬಾ ಖುಷಿ. ನಾನು ಸ್ಥಳೀಯ ರಸಗೊಬ್ಬರ ಅಂಗಡಿಗಳಿಗೆ ನನ್ನ ಸಂಪರ್ಕ ವಿವರಗಳನ್ನು ನೀಡಿದ್ದೇನೆ ಮತ್ತು ರೈತರಿಗೆ ಸಹಾಯ ಮಾಡಲು ಹತ್ತಿರದ ಹಳ್ಳಿಗಳಿಗೆ ಪ್ರವಾಸ ಮಾಡುತ್ತಿದ್ದೇನೆ. ಡ್ರೋನ್ ಮೂಲಕ ದ್ರವಗೊಬ್ಬರ ಮತ್ತು ಕೀಟನಾಶಕಗಳನ್ನು ಸಿಂಪಡಿಸುವುದು ತುಂಬಾ ವೆಚ್ಚದಾಯಕವಾಗಿದೆ ಮತ್ತು ಒಂದು ಎಕರೆ ಕೃಷಿ ಭೂಮಿಯನ್ನು ಆವರಿಸಲು ಸುಮಾರು ಏಳು ನಿಮಿಷಗಳನ್ನು ತೆಗೆದುಕೊಳ್ಳುತ್ತದೆ ಎಂದು ಅವರು ಹೇಳುತ್ತಾರೆ.

ಅವರು ಡ್ರೋನ್ ಮೂಲಕ ಕ್ರಿಮಿನಾಶಕ ಸಿಂಪಡಿಸುವುದಕ್ಕಾಗಿ ಎಕರೆಗೆ 400 ರೂ. ಶುಲ್ಕ ವಿಧಿಸುತ್ತಾರೆ. ದೇವಪಂಡಲಂ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಹೆಚ್ಚಿನ ರೈತರು 1ರಿಂದ 4 ಎಕರೆಗಳವರೆಗಿನ ಸಣ್ಣ ಭೂ ಹಿಡುವಳಿಗಳನ್ನು ಹೊಂದಿದ್ದಾರೆ.

“ದೇವಪಂಡಲಂನಲ್ಲಿರುವ ರೈತನ ಒಡೆತನದ ಕಬ್ಬಿನ ಹೊಲ ನನ್ನ ಮೊದಲ ಭೇಟಿ. ಇಲ್ಲಿ ನಾನು ಡ್ರೋನ್ ನ ಮೊದಲ ಹಾರಾಟ ನಡೆಸಿದೆ ಮತ್ತು ಈ ಸೇವೆಯು ರೈತನಿಗೆ ತೃಪ್ತಿಕರ ಫಲಿತಾಂಶವನ್ನು ಕೊಟ್ಟಿದೆ ಎಂದು ಖಚಿತಪಡಿಸಿಕೊಳ್ಳಲು ನಾನು ಯಾವ ಶುಲ್ಕವನ್ನು ವಿಧಿಸಲಿಲ್ಲ” ಎಂದು ಅವರು ಹೇಳುತ್ತಾರೆ. ಡ್ರೋನ್ ಸಹಾಯಕ ತರಬೇತಿಯನ್ನು ಪೂರ್ಣಗೊಳಿಸಿದ ಅವರ ಪತಿ ಸುಗುಮಾರ್ ಕೂಡ ಸಾಧನವನ್ನು ನಿರ್ವಹಿಸಲು ಸಹಾಯ ಮಾಡುತ್ತಾರೆ.

ಕಲ್ಲಕುರಿಚಿ ಜಿಲ್ಲೆಯ ಎರೈಯೂರ್ ಬಳಿಯ ಕೊಮ್ಮಸಮುತಿರಂನ ವಿ.ಶರಣ್ಯ ಕೂಡ ತರಬೇತಿ ಪಡೆದ ಮಹಿಳಾ ಡ್ರೋನ್ ಪೈಲಟ್. ಅವರು 10ನೇ ತರಗತಿಯವರೆಗೆ ಅಧ್ಯಯನ ಮಾಡಿದ್ದಾರೆ ಮತ್ತು ಮಹಿಳೆಯರಿಗೆ ಕಡಿಮೆ ಉದ್ಯೋಗಾವಕಾಶಗಳು ಇರುವುದರಿಂದ ಪ್ರಸ್ತುತ ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾರೆ.

ಚೆನ್ನೈನಲ್ಲಿ ಡ್ರೋನ್ ಪೈಲಟ್ ತರಬೇತಿಯನ್ನು ಪೂರ್ಣಗೊಳಿಸಿದ ಶರಣ್ಯ, ಈಗ ಉಲುಂದೂರ್ಪೇಟೆ ಬ್ಲಾಕ್‌ನ ಹಳ್ಳಿಗಳಲ್ಲಿ ಸಂಚರಿಸಿ, ಮಾಸಿಕ ಆದಾಯವನ್ನು ಕೊಡುವ ಹೊಲಗಳಲ್ಲಿ ಕೃಷಿ ಸಂಬಂಧಿತ ಡ್ರೋನ್ ಸಿಂಪಡಣೆಯ ಕಾರ್ಯವನ್ನು ಕೈಗೆತ್ತಿಕೊಂಡಿದ್ದಾರೆ.

“ರೈತರಿಂದ ಬರುವ ಸಾಮಾನ್ಯ ಬೇಡಿಕೆಯೆಂದರೆ ರಸಗೊಬ್ಬರಗಳು ಮತ್ತು ಕೀಟನಾಶಕಗಳ ಸಿಂಪಡಣೆ. ನಾನು ಡ್ರೋನ್ ನಿಂದ ಒಂದು ಎಕರೆಯನ್ನು ಆವರಿಸಿದ ತಕ್ಷಣ ಬ್ಯಾಟರಿ ಬೇಗನೆ ಖಾಲಿಯಾಗುತ್ತದೆ. ಆಗ ನಾನು ಅದನ್ನು ಚಾರ್ಜ್ ಮಾಡಬೇಕಾಗುತ್ತದೆ. ಇನ್ನೂ ಎರಡು ಬ್ಯಾಟರಿಗಳನ್ನು ಖರೀದಿಸಲು ನಾನು ಪಂಚಾಯತ್ ಮಟ್ಟದ ಒಕ್ಕೂಟದಿಂದ ಸಾಲಕ್ಕಾಗಿ ಅರ್ಜಿ ಸಲ್ಲಿಸಿದ್ದೇನೆ” ಎಂದು ಅವರು ಹೇಳುತ್ತಾರೆ.

ಇದರಲ್ಲಿ ಇತರ ಸವಾಲುಗಳು ಸಹ ಇವೆ. “ಸಮೀಪದ ಬ್ಲಾಕ್‌ಗಳಿಂದ ರೈತರಿಂದ ನನಗೆ ಕರೆಗಳು ಬಂದರೂ, ಡ್ರೋನ್ ಅನ್ನು ಸಾಗಿಸುವುದು ಒಂದು ಸಮಸ್ಯೆಯಾಗಿದೆ. ಏಕೆಂದರೆ ಅದು ಗೊಬ್ಬರ ಮತ್ತು ನೀರಿನಿಂದ ತುಂಬಿದ ನಂತರ ಸುಮಾರು 30 ಕೆಜಿ ತೂಗುತ್ತದೆ. ಅದನ್ನು ಸಾಗಿಸಲು ಇಬ್ಬರು ಜನರು ಬೇಕಾಗುತ್ತದೆ ಮತ್ತು ಡ್ರೋನ್ ಸಾಗಿಸಲು ಸೆಕೆಂಡ್ ಹ್ಯಾಂಡ್ ವಾಹನ ಖರೀದಿಗೆ ಸುಮಾರು 3 ರೂ. ಲಕ್ಷ ವೆಚ್ಚವಾಗುತ್ತದೆ. ಆದಾಗ್ಯೂ, ನನ್ನ ಹೊಸ ಉದ್ಯೋಗವು ನನ್ನ ಆದಾಯವನ್ನು ಪೂರೈಸುತ್ತದೆ ಮತ್ತು ದೀರ್ಘಾವಧಿಯಲ್ಲಿ ಇದು ಪ್ರಯೋಜನಕಾರಿಯಾಗಿದೆ ಎಂದು ಭಾವಿಸುತ್ತೇನೆ” ಎಂದು ಶರಣ್ಯ ಹೇಳುತ್ತಾರೆ.

ಕೃಪೆ: ದಿ ಹಿಂದೂ

ಮಹಿಳೆಯರ ವಿರುದ್ಧ ಅಸಭ್ಯ, ಅಶ್ಲೀಲ ಆರೋಪ: ತಂತ್ರಜ್ಞಾನ ಸಂಸ್ಥೆಯ ನಿರ್ದೇಶಕನ ವಿರುದ್ಧ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...