Homeಮುಖಪುಟಹೊಲಗಳಿಗೆ ಕ್ರಿಮಿನಾಶಕ ಸಿಂಪಡಣೆಗೆ ಡ್ರೋನ್ ತರಬೇತಿ ಪಡೆದ ಮಹಿಳೆಯರ ನೇಮಕ

ಹೊಲಗಳಿಗೆ ಕ್ರಿಮಿನಾಶಕ ಸಿಂಪಡಣೆಗೆ ಡ್ರೋನ್ ತರಬೇತಿ ಪಡೆದ ಮಹಿಳೆಯರ ನೇಮಕ

- Advertisement -
- Advertisement -

ಚೆನ್ನೈ: ರೈತರ ಹೊಲಗಳಲ್ಲಿ ಡ್ರೋನ್ ಮೂಲಕ ಕೀಟನಾಶಕ ಸಿಂಪಡಣೆಗಾಗಿ ಕೇಂದ್ರ ಯೋಜನೆಯಡಿ ತರಬೇತಿ ಪಡೆದ ರಾಜ್ಯದ ಮೊದಲ ಮಹಿಳಾ ತಂಡವನ್ನು ನಿಯೋಜಿಸಲಾಗಿದೆ. ನೀರು ತುಂಬಿದ ಹೊಲಗಳಿಗೆ ಡ್ರೋನ್‌ ಸಾಗಣೆಯು ಅದರ ಭಾರವಾದ ತೂಕವು ಒಂದು ಸವಾಲಾಗಿದೆ.

ಗಣಿತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರೆಯಾದ 27 ವರ್ಷದ ನಂದಿನಿ ಸುಗುಮಾರ್ ಯಾವಾಗಲೂ ಡ್ರೋನ್‌ಗಳ ಬಗ್ಗೆ ಆಕರ್ಷಣೆಯನ್ನು ಹೊಂದಿದ್ದರು.

ಮದುವೆಗಳಲ್ಲಿ ಫೋಟೊ ಮತ್ತು ವೀಡಿಯೋ ರೆಕಾರ್ಡ್ ಗಳಿಗೆ ಬಳಸುತ್ತಿದ್ದ ಈ ಡ್ರೋನ್ ಗಳು ಜನರ ತಲೆಯ ಮೇಲೆ ಗಿರಕಿ ಹೊಡೆಯುವುದನ್ನು ಮಾತ್ರ ನೋಡಿದ್ದ ಅವರು, ಕೃಷಿ ಪ್ರಧಾನ ಕಲ್ಲಕುರಿಚಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಸಹಾಯ ಮಾಡುವ ಸಲುವಾಗಿ ಈ ಡ್ರೋನ್‌ ತರಬೇತಿ ಪಡೆದ ಮಹಿಳಾ ಡ್ರೋನ್ ಪೈಲಟ್‌ಗಳಲ್ಲಿ ನಂದಿನಿ ಒಬ್ಬರಾಗಿದ್ದಾರೆ.

ಪೊಂಗಲ್‌ಗೆ ಹದಿನೈದು ದಿನಗಳ ಮೊದಲು, ಶಂಕರಪುರಂ ಬಳಿಯ ಗ್ರಾಮವಾದ ದೇವಪಂಡಲಂ ನಿವಾಸಿಗಳು ನಂದಿನಿಯವರು ಡ್ರೋನ್ ಮೂಲಕ ಕಬ್ಬಿನ ಹೊಲದಲ್ಲಿ  ಸುಳಿದಾಡುತ್ತಾ ಮೇಲೆ ಕ್ರಿಮಿನಾಶಕ ಸಿಂಪಡಿಸುವುದನ್ನು ವಿಸ್ಮಯದಿಂದ ನೋಡಿದರು. ಈ ವಿಶಿಷ್ಟವಾದ ಹಾರಾಟವು ಕೇವಲ ಏಳು ನಿಮಿಷಗಳಲ್ಲಿ ಇಡೀ ಕಬ್ಬಿನ ಹೊಲವನ್ನು ಆವರಿಸಿತು ಮತ್ತು ಗ್ರಾಮಸ್ಥರ ಜೋರಾದ ಹರ್ಷೋದ್ಗಾರಗಳ ನಡುವೆ ಭೂಮಿಗೆ ಮರಳಿತು.

ನಂದಿನಿ ಅವರು ಕೇಂದ್ರ ಸರ್ಕಾರದ ನಮೋ ಡ್ರೋನ್ ದೀದಿ ಯೋಜನೆಯಡಿ ಆಯ್ಕೆಯಾದ ತಮಿಳುನಾಡಿನ ಮೊದಲ ಮಹಿಳಾ ಸ್ವ-ಸಹಾಯ ಗುಂಪು ಸದಸ್ಯರಲ್ಲಿ ಒಬ್ಬರಾಗಿದ್ದಾರೆ. ಗ್ರಾಮೀಣ ಮಹಿಳೆಯರಿಗೆ ಡ್ರೋನ್ ಪೈಲಟ್‌ಗಳಾಗಿ ತರಬೇತಿ ನೀಡುವ ಮೂಲಕ ಅವರನ್ನು ಸಬಲೀಕರಣಗೊಳಿಸುವ ಮತ್ತು ಸ್ಥಳೀಯ ಕೃಷಿ ಚಟುವಟಿಕೆಗೆ ಅವಿಭಾಜ್ಯ ಪಾಲುದಾರರನ್ನಾಗಿ ಮಾಡುವ ಗುರಿಯನ್ನು ಇದು ಹೊಂದಿದೆ.

ಕಲ್ಲಕುರಿಚಿಯಲ್ಲಿ ನಂದಿನಿಯವರು ಡ್ರೋನ್ ದೀದಿ ಯೋಜನೆಯ ಬಗ್ಗೆ ತಿಳಿದುಕೊಂಡರು ಮತ್ತು ಯಾವುದೇ ಆಲೋಚನೆ ಮಾಡದೇ ತರಬೇತಿಗಾಗಿ ಅರ್ಜಿ ಸಲ್ಲಿಸಿದರು. ತಮಿಳುನಾಡು ಮಹಿಳಾ ಅಭಿವೃದ್ಧಿ ನಿಗಮದಿಂದ ಮಹಿಳಾ ಸ್ವಸಹಾಯ ಸಂಘದ ಸದಸ್ಯೆಯಾಗಿ ಗುರುತಿಸಲ್ಪಟ್ಟ ನಂತರ, ಅವರನ್ನು ಕಲ್ಲಕುರಿಚಿ ಜಿಲ್ಲೆಯ ಕ್ಲಸ್ಟರ್‌ಗಳಲ್ಲಿ ಈ ತರಬೇತಿಗಾಗಿ ಆಯ್ಕೆ ಮಾಡಲಾಯಿತು.

ನಂದಿನಿ ಚೆನ್ನೈನಲ್ಲಿ ಗರುಡ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್ ನಡೆಸಿದ ಡ್ರೋನ್‌ಗಳ ಕಾರ್ಯಾಚರಣೆ ಮತ್ತು ನಿರ್ವಹಣೆ ಕುರಿತು ಐದು ದಿನಗಳ ಪ್ರಾಯೋಗಿಕ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡರು. ರಿಮೋಟ್ ಪೈಲಟ್ ತರಬೇತಿ ತರಗತಿಗಳನ್ನು ಪೂರ್ಣಗೊಳಿಸಿದ ನಂತರ, ಅವರಿಗೆ ಎರಡು ಟ್ಯಾಂಕ್‌ಗಳು ಮತ್ತು ಬ್ಯಾಟರಿ ಸೆಟ್ ಹೊಂದಿರುವ 7 ಲಕ್ಷ ರೂ. ಮೌಲ್ಯದ ಉಚಿತ ಡ್ರೋನ್ ನೀಡಲಾಯಿತು.

ನುರಿತ ಡ್ರೋನ್ ಪೈಲಟ್ ಆಗಿ ಪದವಿ ಪಡೆದ ನಂದಿನಿ, ರೈತರ ವ್ಯಾಪಕ ಕೃಷಿ ಚಟುವಟಿಕೆಗಳ ಅವಶ್ಯಕತೆಗಳನ್ನು ಪೂರೈಸುವುದು, ರಸಗೊಬ್ಬರಗಳು ಮತ್ತು ಕೀಟನಾಶಕಗಳನ್ನು ಸಿಂಪಡಿಸುವುದು ಮತ್ತು ಹೊಲಗಳಿಗೆ ನೀರುಣಿಸುವುದಕ್ಕಾಗಿ ಈ ತಂತ್ರಜ್ಞಾನವನ್ನು ಅಳವಡಿಸುವುದಕ್ಕೆ ಉತ್ಸುಕರಾಗಿದ್ದಾರೆ.

ಡ್ರೋನ್ ಹಾರಾಟ ನಡೆಸುವುದು ಎಂದರೆ ನನಗೆ ತುಂಬಾ ಖುಷಿ. ನಾನು ಸ್ಥಳೀಯ ರಸಗೊಬ್ಬರ ಅಂಗಡಿಗಳಿಗೆ ನನ್ನ ಸಂಪರ್ಕ ವಿವರಗಳನ್ನು ನೀಡಿದ್ದೇನೆ ಮತ್ತು ರೈತರಿಗೆ ಸಹಾಯ ಮಾಡಲು ಹತ್ತಿರದ ಹಳ್ಳಿಗಳಿಗೆ ಪ್ರವಾಸ ಮಾಡುತ್ತಿದ್ದೇನೆ. ಡ್ರೋನ್ ಮೂಲಕ ದ್ರವಗೊಬ್ಬರ ಮತ್ತು ಕೀಟನಾಶಕಗಳನ್ನು ಸಿಂಪಡಿಸುವುದು ತುಂಬಾ ವೆಚ್ಚದಾಯಕವಾಗಿದೆ ಮತ್ತು ಒಂದು ಎಕರೆ ಕೃಷಿ ಭೂಮಿಯನ್ನು ಆವರಿಸಲು ಸುಮಾರು ಏಳು ನಿಮಿಷಗಳನ್ನು ತೆಗೆದುಕೊಳ್ಳುತ್ತದೆ ಎಂದು ಅವರು ಹೇಳುತ್ತಾರೆ.

ಅವರು ಡ್ರೋನ್ ಮೂಲಕ ಕ್ರಿಮಿನಾಶಕ ಸಿಂಪಡಿಸುವುದಕ್ಕಾಗಿ ಎಕರೆಗೆ 400 ರೂ. ಶುಲ್ಕ ವಿಧಿಸುತ್ತಾರೆ. ದೇವಪಂಡಲಂ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಹೆಚ್ಚಿನ ರೈತರು 1ರಿಂದ 4 ಎಕರೆಗಳವರೆಗಿನ ಸಣ್ಣ ಭೂ ಹಿಡುವಳಿಗಳನ್ನು ಹೊಂದಿದ್ದಾರೆ.

“ದೇವಪಂಡಲಂನಲ್ಲಿರುವ ರೈತನ ಒಡೆತನದ ಕಬ್ಬಿನ ಹೊಲ ನನ್ನ ಮೊದಲ ಭೇಟಿ. ಇಲ್ಲಿ ನಾನು ಡ್ರೋನ್ ನ ಮೊದಲ ಹಾರಾಟ ನಡೆಸಿದೆ ಮತ್ತು ಈ ಸೇವೆಯು ರೈತನಿಗೆ ತೃಪ್ತಿಕರ ಫಲಿತಾಂಶವನ್ನು ಕೊಟ್ಟಿದೆ ಎಂದು ಖಚಿತಪಡಿಸಿಕೊಳ್ಳಲು ನಾನು ಯಾವ ಶುಲ್ಕವನ್ನು ವಿಧಿಸಲಿಲ್ಲ” ಎಂದು ಅವರು ಹೇಳುತ್ತಾರೆ. ಡ್ರೋನ್ ಸಹಾಯಕ ತರಬೇತಿಯನ್ನು ಪೂರ್ಣಗೊಳಿಸಿದ ಅವರ ಪತಿ ಸುಗುಮಾರ್ ಕೂಡ ಸಾಧನವನ್ನು ನಿರ್ವಹಿಸಲು ಸಹಾಯ ಮಾಡುತ್ತಾರೆ.

ಕಲ್ಲಕುರಿಚಿ ಜಿಲ್ಲೆಯ ಎರೈಯೂರ್ ಬಳಿಯ ಕೊಮ್ಮಸಮುತಿರಂನ ವಿ.ಶರಣ್ಯ ಕೂಡ ತರಬೇತಿ ಪಡೆದ ಮಹಿಳಾ ಡ್ರೋನ್ ಪೈಲಟ್. ಅವರು 10ನೇ ತರಗತಿಯವರೆಗೆ ಅಧ್ಯಯನ ಮಾಡಿದ್ದಾರೆ ಮತ್ತು ಮಹಿಳೆಯರಿಗೆ ಕಡಿಮೆ ಉದ್ಯೋಗಾವಕಾಶಗಳು ಇರುವುದರಿಂದ ಪ್ರಸ್ತುತ ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾರೆ.

ಚೆನ್ನೈನಲ್ಲಿ ಡ್ರೋನ್ ಪೈಲಟ್ ತರಬೇತಿಯನ್ನು ಪೂರ್ಣಗೊಳಿಸಿದ ಶರಣ್ಯ, ಈಗ ಉಲುಂದೂರ್ಪೇಟೆ ಬ್ಲಾಕ್‌ನ ಹಳ್ಳಿಗಳಲ್ಲಿ ಸಂಚರಿಸಿ, ಮಾಸಿಕ ಆದಾಯವನ್ನು ಕೊಡುವ ಹೊಲಗಳಲ್ಲಿ ಕೃಷಿ ಸಂಬಂಧಿತ ಡ್ರೋನ್ ಸಿಂಪಡಣೆಯ ಕಾರ್ಯವನ್ನು ಕೈಗೆತ್ತಿಕೊಂಡಿದ್ದಾರೆ.

“ರೈತರಿಂದ ಬರುವ ಸಾಮಾನ್ಯ ಬೇಡಿಕೆಯೆಂದರೆ ರಸಗೊಬ್ಬರಗಳು ಮತ್ತು ಕೀಟನಾಶಕಗಳ ಸಿಂಪಡಣೆ. ನಾನು ಡ್ರೋನ್ ನಿಂದ ಒಂದು ಎಕರೆಯನ್ನು ಆವರಿಸಿದ ತಕ್ಷಣ ಬ್ಯಾಟರಿ ಬೇಗನೆ ಖಾಲಿಯಾಗುತ್ತದೆ. ಆಗ ನಾನು ಅದನ್ನು ಚಾರ್ಜ್ ಮಾಡಬೇಕಾಗುತ್ತದೆ. ಇನ್ನೂ ಎರಡು ಬ್ಯಾಟರಿಗಳನ್ನು ಖರೀದಿಸಲು ನಾನು ಪಂಚಾಯತ್ ಮಟ್ಟದ ಒಕ್ಕೂಟದಿಂದ ಸಾಲಕ್ಕಾಗಿ ಅರ್ಜಿ ಸಲ್ಲಿಸಿದ್ದೇನೆ” ಎಂದು ಅವರು ಹೇಳುತ್ತಾರೆ.

ಇದರಲ್ಲಿ ಇತರ ಸವಾಲುಗಳು ಸಹ ಇವೆ. “ಸಮೀಪದ ಬ್ಲಾಕ್‌ಗಳಿಂದ ರೈತರಿಂದ ನನಗೆ ಕರೆಗಳು ಬಂದರೂ, ಡ್ರೋನ್ ಅನ್ನು ಸಾಗಿಸುವುದು ಒಂದು ಸಮಸ್ಯೆಯಾಗಿದೆ. ಏಕೆಂದರೆ ಅದು ಗೊಬ್ಬರ ಮತ್ತು ನೀರಿನಿಂದ ತುಂಬಿದ ನಂತರ ಸುಮಾರು 30 ಕೆಜಿ ತೂಗುತ್ತದೆ. ಅದನ್ನು ಸಾಗಿಸಲು ಇಬ್ಬರು ಜನರು ಬೇಕಾಗುತ್ತದೆ ಮತ್ತು ಡ್ರೋನ್ ಸಾಗಿಸಲು ಸೆಕೆಂಡ್ ಹ್ಯಾಂಡ್ ವಾಹನ ಖರೀದಿಗೆ ಸುಮಾರು 3 ರೂ. ಲಕ್ಷ ವೆಚ್ಚವಾಗುತ್ತದೆ. ಆದಾಗ್ಯೂ, ನನ್ನ ಹೊಸ ಉದ್ಯೋಗವು ನನ್ನ ಆದಾಯವನ್ನು ಪೂರೈಸುತ್ತದೆ ಮತ್ತು ದೀರ್ಘಾವಧಿಯಲ್ಲಿ ಇದು ಪ್ರಯೋಜನಕಾರಿಯಾಗಿದೆ ಎಂದು ಭಾವಿಸುತ್ತೇನೆ” ಎಂದು ಶರಣ್ಯ ಹೇಳುತ್ತಾರೆ.

ಕೃಪೆ: ದಿ ಹಿಂದೂ

ಮಹಿಳೆಯರ ವಿರುದ್ಧ ಅಸಭ್ಯ, ಅಶ್ಲೀಲ ಆರೋಪ: ತಂತ್ರಜ್ಞಾನ ಸಂಸ್ಥೆಯ ನಿರ್ದೇಶಕನ ವಿರುದ್ಧ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...