Homeಮುಖಪುಟಹೊಲಗಳಿಗೆ ಕ್ರಿಮಿನಾಶಕ ಸಿಂಪಡಣೆಗೆ ಡ್ರೋನ್ ತರಬೇತಿ ಪಡೆದ ಮಹಿಳೆಯರ ನೇಮಕ

ಹೊಲಗಳಿಗೆ ಕ್ರಿಮಿನಾಶಕ ಸಿಂಪಡಣೆಗೆ ಡ್ರೋನ್ ತರಬೇತಿ ಪಡೆದ ಮಹಿಳೆಯರ ನೇಮಕ

- Advertisement -
- Advertisement -

ಚೆನ್ನೈ: ರೈತರ ಹೊಲಗಳಲ್ಲಿ ಡ್ರೋನ್ ಮೂಲಕ ಕೀಟನಾಶಕ ಸಿಂಪಡಣೆಗಾಗಿ ಕೇಂದ್ರ ಯೋಜನೆಯಡಿ ತರಬೇತಿ ಪಡೆದ ರಾಜ್ಯದ ಮೊದಲ ಮಹಿಳಾ ತಂಡವನ್ನು ನಿಯೋಜಿಸಲಾಗಿದೆ. ನೀರು ತುಂಬಿದ ಹೊಲಗಳಿಗೆ ಡ್ರೋನ್‌ ಸಾಗಣೆಯು ಅದರ ಭಾರವಾದ ತೂಕವು ಒಂದು ಸವಾಲಾಗಿದೆ.

ಗಣಿತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರೆಯಾದ 27 ವರ್ಷದ ನಂದಿನಿ ಸುಗುಮಾರ್ ಯಾವಾಗಲೂ ಡ್ರೋನ್‌ಗಳ ಬಗ್ಗೆ ಆಕರ್ಷಣೆಯನ್ನು ಹೊಂದಿದ್ದರು.

ಮದುವೆಗಳಲ್ಲಿ ಫೋಟೊ ಮತ್ತು ವೀಡಿಯೋ ರೆಕಾರ್ಡ್ ಗಳಿಗೆ ಬಳಸುತ್ತಿದ್ದ ಈ ಡ್ರೋನ್ ಗಳು ಜನರ ತಲೆಯ ಮೇಲೆ ಗಿರಕಿ ಹೊಡೆಯುವುದನ್ನು ಮಾತ್ರ ನೋಡಿದ್ದ ಅವರು, ಕೃಷಿ ಪ್ರಧಾನ ಕಲ್ಲಕುರಿಚಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಸಹಾಯ ಮಾಡುವ ಸಲುವಾಗಿ ಈ ಡ್ರೋನ್‌ ತರಬೇತಿ ಪಡೆದ ಮಹಿಳಾ ಡ್ರೋನ್ ಪೈಲಟ್‌ಗಳಲ್ಲಿ ನಂದಿನಿ ಒಬ್ಬರಾಗಿದ್ದಾರೆ.

ಪೊಂಗಲ್‌ಗೆ ಹದಿನೈದು ದಿನಗಳ ಮೊದಲು, ಶಂಕರಪುರಂ ಬಳಿಯ ಗ್ರಾಮವಾದ ದೇವಪಂಡಲಂ ನಿವಾಸಿಗಳು ನಂದಿನಿಯವರು ಡ್ರೋನ್ ಮೂಲಕ ಕಬ್ಬಿನ ಹೊಲದಲ್ಲಿ  ಸುಳಿದಾಡುತ್ತಾ ಮೇಲೆ ಕ್ರಿಮಿನಾಶಕ ಸಿಂಪಡಿಸುವುದನ್ನು ವಿಸ್ಮಯದಿಂದ ನೋಡಿದರು. ಈ ವಿಶಿಷ್ಟವಾದ ಹಾರಾಟವು ಕೇವಲ ಏಳು ನಿಮಿಷಗಳಲ್ಲಿ ಇಡೀ ಕಬ್ಬಿನ ಹೊಲವನ್ನು ಆವರಿಸಿತು ಮತ್ತು ಗ್ರಾಮಸ್ಥರ ಜೋರಾದ ಹರ್ಷೋದ್ಗಾರಗಳ ನಡುವೆ ಭೂಮಿಗೆ ಮರಳಿತು.

ನಂದಿನಿ ಅವರು ಕೇಂದ್ರ ಸರ್ಕಾರದ ನಮೋ ಡ್ರೋನ್ ದೀದಿ ಯೋಜನೆಯಡಿ ಆಯ್ಕೆಯಾದ ತಮಿಳುನಾಡಿನ ಮೊದಲ ಮಹಿಳಾ ಸ್ವ-ಸಹಾಯ ಗುಂಪು ಸದಸ್ಯರಲ್ಲಿ ಒಬ್ಬರಾಗಿದ್ದಾರೆ. ಗ್ರಾಮೀಣ ಮಹಿಳೆಯರಿಗೆ ಡ್ರೋನ್ ಪೈಲಟ್‌ಗಳಾಗಿ ತರಬೇತಿ ನೀಡುವ ಮೂಲಕ ಅವರನ್ನು ಸಬಲೀಕರಣಗೊಳಿಸುವ ಮತ್ತು ಸ್ಥಳೀಯ ಕೃಷಿ ಚಟುವಟಿಕೆಗೆ ಅವಿಭಾಜ್ಯ ಪಾಲುದಾರರನ್ನಾಗಿ ಮಾಡುವ ಗುರಿಯನ್ನು ಇದು ಹೊಂದಿದೆ.

ಕಲ್ಲಕುರಿಚಿಯಲ್ಲಿ ನಂದಿನಿಯವರು ಡ್ರೋನ್ ದೀದಿ ಯೋಜನೆಯ ಬಗ್ಗೆ ತಿಳಿದುಕೊಂಡರು ಮತ್ತು ಯಾವುದೇ ಆಲೋಚನೆ ಮಾಡದೇ ತರಬೇತಿಗಾಗಿ ಅರ್ಜಿ ಸಲ್ಲಿಸಿದರು. ತಮಿಳುನಾಡು ಮಹಿಳಾ ಅಭಿವೃದ್ಧಿ ನಿಗಮದಿಂದ ಮಹಿಳಾ ಸ್ವಸಹಾಯ ಸಂಘದ ಸದಸ್ಯೆಯಾಗಿ ಗುರುತಿಸಲ್ಪಟ್ಟ ನಂತರ, ಅವರನ್ನು ಕಲ್ಲಕುರಿಚಿ ಜಿಲ್ಲೆಯ ಕ್ಲಸ್ಟರ್‌ಗಳಲ್ಲಿ ಈ ತರಬೇತಿಗಾಗಿ ಆಯ್ಕೆ ಮಾಡಲಾಯಿತು.

ನಂದಿನಿ ಚೆನ್ನೈನಲ್ಲಿ ಗರುಡ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್ ನಡೆಸಿದ ಡ್ರೋನ್‌ಗಳ ಕಾರ್ಯಾಚರಣೆ ಮತ್ತು ನಿರ್ವಹಣೆ ಕುರಿತು ಐದು ದಿನಗಳ ಪ್ರಾಯೋಗಿಕ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡರು. ರಿಮೋಟ್ ಪೈಲಟ್ ತರಬೇತಿ ತರಗತಿಗಳನ್ನು ಪೂರ್ಣಗೊಳಿಸಿದ ನಂತರ, ಅವರಿಗೆ ಎರಡು ಟ್ಯಾಂಕ್‌ಗಳು ಮತ್ತು ಬ್ಯಾಟರಿ ಸೆಟ್ ಹೊಂದಿರುವ 7 ಲಕ್ಷ ರೂ. ಮೌಲ್ಯದ ಉಚಿತ ಡ್ರೋನ್ ನೀಡಲಾಯಿತು.

ನುರಿತ ಡ್ರೋನ್ ಪೈಲಟ್ ಆಗಿ ಪದವಿ ಪಡೆದ ನಂದಿನಿ, ರೈತರ ವ್ಯಾಪಕ ಕೃಷಿ ಚಟುವಟಿಕೆಗಳ ಅವಶ್ಯಕತೆಗಳನ್ನು ಪೂರೈಸುವುದು, ರಸಗೊಬ್ಬರಗಳು ಮತ್ತು ಕೀಟನಾಶಕಗಳನ್ನು ಸಿಂಪಡಿಸುವುದು ಮತ್ತು ಹೊಲಗಳಿಗೆ ನೀರುಣಿಸುವುದಕ್ಕಾಗಿ ಈ ತಂತ್ರಜ್ಞಾನವನ್ನು ಅಳವಡಿಸುವುದಕ್ಕೆ ಉತ್ಸುಕರಾಗಿದ್ದಾರೆ.

ಡ್ರೋನ್ ಹಾರಾಟ ನಡೆಸುವುದು ಎಂದರೆ ನನಗೆ ತುಂಬಾ ಖುಷಿ. ನಾನು ಸ್ಥಳೀಯ ರಸಗೊಬ್ಬರ ಅಂಗಡಿಗಳಿಗೆ ನನ್ನ ಸಂಪರ್ಕ ವಿವರಗಳನ್ನು ನೀಡಿದ್ದೇನೆ ಮತ್ತು ರೈತರಿಗೆ ಸಹಾಯ ಮಾಡಲು ಹತ್ತಿರದ ಹಳ್ಳಿಗಳಿಗೆ ಪ್ರವಾಸ ಮಾಡುತ್ತಿದ್ದೇನೆ. ಡ್ರೋನ್ ಮೂಲಕ ದ್ರವಗೊಬ್ಬರ ಮತ್ತು ಕೀಟನಾಶಕಗಳನ್ನು ಸಿಂಪಡಿಸುವುದು ತುಂಬಾ ವೆಚ್ಚದಾಯಕವಾಗಿದೆ ಮತ್ತು ಒಂದು ಎಕರೆ ಕೃಷಿ ಭೂಮಿಯನ್ನು ಆವರಿಸಲು ಸುಮಾರು ಏಳು ನಿಮಿಷಗಳನ್ನು ತೆಗೆದುಕೊಳ್ಳುತ್ತದೆ ಎಂದು ಅವರು ಹೇಳುತ್ತಾರೆ.

ಅವರು ಡ್ರೋನ್ ಮೂಲಕ ಕ್ರಿಮಿನಾಶಕ ಸಿಂಪಡಿಸುವುದಕ್ಕಾಗಿ ಎಕರೆಗೆ 400 ರೂ. ಶುಲ್ಕ ವಿಧಿಸುತ್ತಾರೆ. ದೇವಪಂಡಲಂ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಹೆಚ್ಚಿನ ರೈತರು 1ರಿಂದ 4 ಎಕರೆಗಳವರೆಗಿನ ಸಣ್ಣ ಭೂ ಹಿಡುವಳಿಗಳನ್ನು ಹೊಂದಿದ್ದಾರೆ.

“ದೇವಪಂಡಲಂನಲ್ಲಿರುವ ರೈತನ ಒಡೆತನದ ಕಬ್ಬಿನ ಹೊಲ ನನ್ನ ಮೊದಲ ಭೇಟಿ. ಇಲ್ಲಿ ನಾನು ಡ್ರೋನ್ ನ ಮೊದಲ ಹಾರಾಟ ನಡೆಸಿದೆ ಮತ್ತು ಈ ಸೇವೆಯು ರೈತನಿಗೆ ತೃಪ್ತಿಕರ ಫಲಿತಾಂಶವನ್ನು ಕೊಟ್ಟಿದೆ ಎಂದು ಖಚಿತಪಡಿಸಿಕೊಳ್ಳಲು ನಾನು ಯಾವ ಶುಲ್ಕವನ್ನು ವಿಧಿಸಲಿಲ್ಲ” ಎಂದು ಅವರು ಹೇಳುತ್ತಾರೆ. ಡ್ರೋನ್ ಸಹಾಯಕ ತರಬೇತಿಯನ್ನು ಪೂರ್ಣಗೊಳಿಸಿದ ಅವರ ಪತಿ ಸುಗುಮಾರ್ ಕೂಡ ಸಾಧನವನ್ನು ನಿರ್ವಹಿಸಲು ಸಹಾಯ ಮಾಡುತ್ತಾರೆ.

ಕಲ್ಲಕುರಿಚಿ ಜಿಲ್ಲೆಯ ಎರೈಯೂರ್ ಬಳಿಯ ಕೊಮ್ಮಸಮುತಿರಂನ ವಿ.ಶರಣ್ಯ ಕೂಡ ತರಬೇತಿ ಪಡೆದ ಮಹಿಳಾ ಡ್ರೋನ್ ಪೈಲಟ್. ಅವರು 10ನೇ ತರಗತಿಯವರೆಗೆ ಅಧ್ಯಯನ ಮಾಡಿದ್ದಾರೆ ಮತ್ತು ಮಹಿಳೆಯರಿಗೆ ಕಡಿಮೆ ಉದ್ಯೋಗಾವಕಾಶಗಳು ಇರುವುದರಿಂದ ಪ್ರಸ್ತುತ ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾರೆ.

ಚೆನ್ನೈನಲ್ಲಿ ಡ್ರೋನ್ ಪೈಲಟ್ ತರಬೇತಿಯನ್ನು ಪೂರ್ಣಗೊಳಿಸಿದ ಶರಣ್ಯ, ಈಗ ಉಲುಂದೂರ್ಪೇಟೆ ಬ್ಲಾಕ್‌ನ ಹಳ್ಳಿಗಳಲ್ಲಿ ಸಂಚರಿಸಿ, ಮಾಸಿಕ ಆದಾಯವನ್ನು ಕೊಡುವ ಹೊಲಗಳಲ್ಲಿ ಕೃಷಿ ಸಂಬಂಧಿತ ಡ್ರೋನ್ ಸಿಂಪಡಣೆಯ ಕಾರ್ಯವನ್ನು ಕೈಗೆತ್ತಿಕೊಂಡಿದ್ದಾರೆ.

“ರೈತರಿಂದ ಬರುವ ಸಾಮಾನ್ಯ ಬೇಡಿಕೆಯೆಂದರೆ ರಸಗೊಬ್ಬರಗಳು ಮತ್ತು ಕೀಟನಾಶಕಗಳ ಸಿಂಪಡಣೆ. ನಾನು ಡ್ರೋನ್ ನಿಂದ ಒಂದು ಎಕರೆಯನ್ನು ಆವರಿಸಿದ ತಕ್ಷಣ ಬ್ಯಾಟರಿ ಬೇಗನೆ ಖಾಲಿಯಾಗುತ್ತದೆ. ಆಗ ನಾನು ಅದನ್ನು ಚಾರ್ಜ್ ಮಾಡಬೇಕಾಗುತ್ತದೆ. ಇನ್ನೂ ಎರಡು ಬ್ಯಾಟರಿಗಳನ್ನು ಖರೀದಿಸಲು ನಾನು ಪಂಚಾಯತ್ ಮಟ್ಟದ ಒಕ್ಕೂಟದಿಂದ ಸಾಲಕ್ಕಾಗಿ ಅರ್ಜಿ ಸಲ್ಲಿಸಿದ್ದೇನೆ” ಎಂದು ಅವರು ಹೇಳುತ್ತಾರೆ.

ಇದರಲ್ಲಿ ಇತರ ಸವಾಲುಗಳು ಸಹ ಇವೆ. “ಸಮೀಪದ ಬ್ಲಾಕ್‌ಗಳಿಂದ ರೈತರಿಂದ ನನಗೆ ಕರೆಗಳು ಬಂದರೂ, ಡ್ರೋನ್ ಅನ್ನು ಸಾಗಿಸುವುದು ಒಂದು ಸಮಸ್ಯೆಯಾಗಿದೆ. ಏಕೆಂದರೆ ಅದು ಗೊಬ್ಬರ ಮತ್ತು ನೀರಿನಿಂದ ತುಂಬಿದ ನಂತರ ಸುಮಾರು 30 ಕೆಜಿ ತೂಗುತ್ತದೆ. ಅದನ್ನು ಸಾಗಿಸಲು ಇಬ್ಬರು ಜನರು ಬೇಕಾಗುತ್ತದೆ ಮತ್ತು ಡ್ರೋನ್ ಸಾಗಿಸಲು ಸೆಕೆಂಡ್ ಹ್ಯಾಂಡ್ ವಾಹನ ಖರೀದಿಗೆ ಸುಮಾರು 3 ರೂ. ಲಕ್ಷ ವೆಚ್ಚವಾಗುತ್ತದೆ. ಆದಾಗ್ಯೂ, ನನ್ನ ಹೊಸ ಉದ್ಯೋಗವು ನನ್ನ ಆದಾಯವನ್ನು ಪೂರೈಸುತ್ತದೆ ಮತ್ತು ದೀರ್ಘಾವಧಿಯಲ್ಲಿ ಇದು ಪ್ರಯೋಜನಕಾರಿಯಾಗಿದೆ ಎಂದು ಭಾವಿಸುತ್ತೇನೆ” ಎಂದು ಶರಣ್ಯ ಹೇಳುತ್ತಾರೆ.

ಕೃಪೆ: ದಿ ಹಿಂದೂ

ಮಹಿಳೆಯರ ವಿರುದ್ಧ ಅಸಭ್ಯ, ಅಶ್ಲೀಲ ಆರೋಪ: ತಂತ್ರಜ್ಞಾನ ಸಂಸ್ಥೆಯ ನಿರ್ದೇಶಕನ ವಿರುದ್ಧ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...