Homeಮುಖಪುಟಹೊಲಗಳಿಗೆ ಕ್ರಿಮಿನಾಶಕ ಸಿಂಪಡಣೆಗೆ ಡ್ರೋನ್ ತರಬೇತಿ ಪಡೆದ ಮಹಿಳೆಯರ ನೇಮಕ

ಹೊಲಗಳಿಗೆ ಕ್ರಿಮಿನಾಶಕ ಸಿಂಪಡಣೆಗೆ ಡ್ರೋನ್ ತರಬೇತಿ ಪಡೆದ ಮಹಿಳೆಯರ ನೇಮಕ

- Advertisement -
- Advertisement -

ಚೆನ್ನೈ: ರೈತರ ಹೊಲಗಳಲ್ಲಿ ಡ್ರೋನ್ ಮೂಲಕ ಕೀಟನಾಶಕ ಸಿಂಪಡಣೆಗಾಗಿ ಕೇಂದ್ರ ಯೋಜನೆಯಡಿ ತರಬೇತಿ ಪಡೆದ ರಾಜ್ಯದ ಮೊದಲ ಮಹಿಳಾ ತಂಡವನ್ನು ನಿಯೋಜಿಸಲಾಗಿದೆ. ನೀರು ತುಂಬಿದ ಹೊಲಗಳಿಗೆ ಡ್ರೋನ್‌ ಸಾಗಣೆಯು ಅದರ ಭಾರವಾದ ತೂಕವು ಒಂದು ಸವಾಲಾಗಿದೆ.

ಗಣಿತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರೆಯಾದ 27 ವರ್ಷದ ನಂದಿನಿ ಸುಗುಮಾರ್ ಯಾವಾಗಲೂ ಡ್ರೋನ್‌ಗಳ ಬಗ್ಗೆ ಆಕರ್ಷಣೆಯನ್ನು ಹೊಂದಿದ್ದರು.

ಮದುವೆಗಳಲ್ಲಿ ಫೋಟೊ ಮತ್ತು ವೀಡಿಯೋ ರೆಕಾರ್ಡ್ ಗಳಿಗೆ ಬಳಸುತ್ತಿದ್ದ ಈ ಡ್ರೋನ್ ಗಳು ಜನರ ತಲೆಯ ಮೇಲೆ ಗಿರಕಿ ಹೊಡೆಯುವುದನ್ನು ಮಾತ್ರ ನೋಡಿದ್ದ ಅವರು, ಕೃಷಿ ಪ್ರಧಾನ ಕಲ್ಲಕುರಿಚಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಸಹಾಯ ಮಾಡುವ ಸಲುವಾಗಿ ಈ ಡ್ರೋನ್‌ ತರಬೇತಿ ಪಡೆದ ಮಹಿಳಾ ಡ್ರೋನ್ ಪೈಲಟ್‌ಗಳಲ್ಲಿ ನಂದಿನಿ ಒಬ್ಬರಾಗಿದ್ದಾರೆ.

ಪೊಂಗಲ್‌ಗೆ ಹದಿನೈದು ದಿನಗಳ ಮೊದಲು, ಶಂಕರಪುರಂ ಬಳಿಯ ಗ್ರಾಮವಾದ ದೇವಪಂಡಲಂ ನಿವಾಸಿಗಳು ನಂದಿನಿಯವರು ಡ್ರೋನ್ ಮೂಲಕ ಕಬ್ಬಿನ ಹೊಲದಲ್ಲಿ  ಸುಳಿದಾಡುತ್ತಾ ಮೇಲೆ ಕ್ರಿಮಿನಾಶಕ ಸಿಂಪಡಿಸುವುದನ್ನು ವಿಸ್ಮಯದಿಂದ ನೋಡಿದರು. ಈ ವಿಶಿಷ್ಟವಾದ ಹಾರಾಟವು ಕೇವಲ ಏಳು ನಿಮಿಷಗಳಲ್ಲಿ ಇಡೀ ಕಬ್ಬಿನ ಹೊಲವನ್ನು ಆವರಿಸಿತು ಮತ್ತು ಗ್ರಾಮಸ್ಥರ ಜೋರಾದ ಹರ್ಷೋದ್ಗಾರಗಳ ನಡುವೆ ಭೂಮಿಗೆ ಮರಳಿತು.

ನಂದಿನಿ ಅವರು ಕೇಂದ್ರ ಸರ್ಕಾರದ ನಮೋ ಡ್ರೋನ್ ದೀದಿ ಯೋಜನೆಯಡಿ ಆಯ್ಕೆಯಾದ ತಮಿಳುನಾಡಿನ ಮೊದಲ ಮಹಿಳಾ ಸ್ವ-ಸಹಾಯ ಗುಂಪು ಸದಸ್ಯರಲ್ಲಿ ಒಬ್ಬರಾಗಿದ್ದಾರೆ. ಗ್ರಾಮೀಣ ಮಹಿಳೆಯರಿಗೆ ಡ್ರೋನ್ ಪೈಲಟ್‌ಗಳಾಗಿ ತರಬೇತಿ ನೀಡುವ ಮೂಲಕ ಅವರನ್ನು ಸಬಲೀಕರಣಗೊಳಿಸುವ ಮತ್ತು ಸ್ಥಳೀಯ ಕೃಷಿ ಚಟುವಟಿಕೆಗೆ ಅವಿಭಾಜ್ಯ ಪಾಲುದಾರರನ್ನಾಗಿ ಮಾಡುವ ಗುರಿಯನ್ನು ಇದು ಹೊಂದಿದೆ.

ಕಲ್ಲಕುರಿಚಿಯಲ್ಲಿ ನಂದಿನಿಯವರು ಡ್ರೋನ್ ದೀದಿ ಯೋಜನೆಯ ಬಗ್ಗೆ ತಿಳಿದುಕೊಂಡರು ಮತ್ತು ಯಾವುದೇ ಆಲೋಚನೆ ಮಾಡದೇ ತರಬೇತಿಗಾಗಿ ಅರ್ಜಿ ಸಲ್ಲಿಸಿದರು. ತಮಿಳುನಾಡು ಮಹಿಳಾ ಅಭಿವೃದ್ಧಿ ನಿಗಮದಿಂದ ಮಹಿಳಾ ಸ್ವಸಹಾಯ ಸಂಘದ ಸದಸ್ಯೆಯಾಗಿ ಗುರುತಿಸಲ್ಪಟ್ಟ ನಂತರ, ಅವರನ್ನು ಕಲ್ಲಕುರಿಚಿ ಜಿಲ್ಲೆಯ ಕ್ಲಸ್ಟರ್‌ಗಳಲ್ಲಿ ಈ ತರಬೇತಿಗಾಗಿ ಆಯ್ಕೆ ಮಾಡಲಾಯಿತು.

ನಂದಿನಿ ಚೆನ್ನೈನಲ್ಲಿ ಗರುಡ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್ ನಡೆಸಿದ ಡ್ರೋನ್‌ಗಳ ಕಾರ್ಯಾಚರಣೆ ಮತ್ತು ನಿರ್ವಹಣೆ ಕುರಿತು ಐದು ದಿನಗಳ ಪ್ರಾಯೋಗಿಕ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡರು. ರಿಮೋಟ್ ಪೈಲಟ್ ತರಬೇತಿ ತರಗತಿಗಳನ್ನು ಪೂರ್ಣಗೊಳಿಸಿದ ನಂತರ, ಅವರಿಗೆ ಎರಡು ಟ್ಯಾಂಕ್‌ಗಳು ಮತ್ತು ಬ್ಯಾಟರಿ ಸೆಟ್ ಹೊಂದಿರುವ 7 ಲಕ್ಷ ರೂ. ಮೌಲ್ಯದ ಉಚಿತ ಡ್ರೋನ್ ನೀಡಲಾಯಿತು.

ನುರಿತ ಡ್ರೋನ್ ಪೈಲಟ್ ಆಗಿ ಪದವಿ ಪಡೆದ ನಂದಿನಿ, ರೈತರ ವ್ಯಾಪಕ ಕೃಷಿ ಚಟುವಟಿಕೆಗಳ ಅವಶ್ಯಕತೆಗಳನ್ನು ಪೂರೈಸುವುದು, ರಸಗೊಬ್ಬರಗಳು ಮತ್ತು ಕೀಟನಾಶಕಗಳನ್ನು ಸಿಂಪಡಿಸುವುದು ಮತ್ತು ಹೊಲಗಳಿಗೆ ನೀರುಣಿಸುವುದಕ್ಕಾಗಿ ಈ ತಂತ್ರಜ್ಞಾನವನ್ನು ಅಳವಡಿಸುವುದಕ್ಕೆ ಉತ್ಸುಕರಾಗಿದ್ದಾರೆ.

ಡ್ರೋನ್ ಹಾರಾಟ ನಡೆಸುವುದು ಎಂದರೆ ನನಗೆ ತುಂಬಾ ಖುಷಿ. ನಾನು ಸ್ಥಳೀಯ ರಸಗೊಬ್ಬರ ಅಂಗಡಿಗಳಿಗೆ ನನ್ನ ಸಂಪರ್ಕ ವಿವರಗಳನ್ನು ನೀಡಿದ್ದೇನೆ ಮತ್ತು ರೈತರಿಗೆ ಸಹಾಯ ಮಾಡಲು ಹತ್ತಿರದ ಹಳ್ಳಿಗಳಿಗೆ ಪ್ರವಾಸ ಮಾಡುತ್ತಿದ್ದೇನೆ. ಡ್ರೋನ್ ಮೂಲಕ ದ್ರವಗೊಬ್ಬರ ಮತ್ತು ಕೀಟನಾಶಕಗಳನ್ನು ಸಿಂಪಡಿಸುವುದು ತುಂಬಾ ವೆಚ್ಚದಾಯಕವಾಗಿದೆ ಮತ್ತು ಒಂದು ಎಕರೆ ಕೃಷಿ ಭೂಮಿಯನ್ನು ಆವರಿಸಲು ಸುಮಾರು ಏಳು ನಿಮಿಷಗಳನ್ನು ತೆಗೆದುಕೊಳ್ಳುತ್ತದೆ ಎಂದು ಅವರು ಹೇಳುತ್ತಾರೆ.

ಅವರು ಡ್ರೋನ್ ಮೂಲಕ ಕ್ರಿಮಿನಾಶಕ ಸಿಂಪಡಿಸುವುದಕ್ಕಾಗಿ ಎಕರೆಗೆ 400 ರೂ. ಶುಲ್ಕ ವಿಧಿಸುತ್ತಾರೆ. ದೇವಪಂಡಲಂ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಹೆಚ್ಚಿನ ರೈತರು 1ರಿಂದ 4 ಎಕರೆಗಳವರೆಗಿನ ಸಣ್ಣ ಭೂ ಹಿಡುವಳಿಗಳನ್ನು ಹೊಂದಿದ್ದಾರೆ.

“ದೇವಪಂಡಲಂನಲ್ಲಿರುವ ರೈತನ ಒಡೆತನದ ಕಬ್ಬಿನ ಹೊಲ ನನ್ನ ಮೊದಲ ಭೇಟಿ. ಇಲ್ಲಿ ನಾನು ಡ್ರೋನ್ ನ ಮೊದಲ ಹಾರಾಟ ನಡೆಸಿದೆ ಮತ್ತು ಈ ಸೇವೆಯು ರೈತನಿಗೆ ತೃಪ್ತಿಕರ ಫಲಿತಾಂಶವನ್ನು ಕೊಟ್ಟಿದೆ ಎಂದು ಖಚಿತಪಡಿಸಿಕೊಳ್ಳಲು ನಾನು ಯಾವ ಶುಲ್ಕವನ್ನು ವಿಧಿಸಲಿಲ್ಲ” ಎಂದು ಅವರು ಹೇಳುತ್ತಾರೆ. ಡ್ರೋನ್ ಸಹಾಯಕ ತರಬೇತಿಯನ್ನು ಪೂರ್ಣಗೊಳಿಸಿದ ಅವರ ಪತಿ ಸುಗುಮಾರ್ ಕೂಡ ಸಾಧನವನ್ನು ನಿರ್ವಹಿಸಲು ಸಹಾಯ ಮಾಡುತ್ತಾರೆ.

ಕಲ್ಲಕುರಿಚಿ ಜಿಲ್ಲೆಯ ಎರೈಯೂರ್ ಬಳಿಯ ಕೊಮ್ಮಸಮುತಿರಂನ ವಿ.ಶರಣ್ಯ ಕೂಡ ತರಬೇತಿ ಪಡೆದ ಮಹಿಳಾ ಡ್ರೋನ್ ಪೈಲಟ್. ಅವರು 10ನೇ ತರಗತಿಯವರೆಗೆ ಅಧ್ಯಯನ ಮಾಡಿದ್ದಾರೆ ಮತ್ತು ಮಹಿಳೆಯರಿಗೆ ಕಡಿಮೆ ಉದ್ಯೋಗಾವಕಾಶಗಳು ಇರುವುದರಿಂದ ಪ್ರಸ್ತುತ ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾರೆ.

ಚೆನ್ನೈನಲ್ಲಿ ಡ್ರೋನ್ ಪೈಲಟ್ ತರಬೇತಿಯನ್ನು ಪೂರ್ಣಗೊಳಿಸಿದ ಶರಣ್ಯ, ಈಗ ಉಲುಂದೂರ್ಪೇಟೆ ಬ್ಲಾಕ್‌ನ ಹಳ್ಳಿಗಳಲ್ಲಿ ಸಂಚರಿಸಿ, ಮಾಸಿಕ ಆದಾಯವನ್ನು ಕೊಡುವ ಹೊಲಗಳಲ್ಲಿ ಕೃಷಿ ಸಂಬಂಧಿತ ಡ್ರೋನ್ ಸಿಂಪಡಣೆಯ ಕಾರ್ಯವನ್ನು ಕೈಗೆತ್ತಿಕೊಂಡಿದ್ದಾರೆ.

“ರೈತರಿಂದ ಬರುವ ಸಾಮಾನ್ಯ ಬೇಡಿಕೆಯೆಂದರೆ ರಸಗೊಬ್ಬರಗಳು ಮತ್ತು ಕೀಟನಾಶಕಗಳ ಸಿಂಪಡಣೆ. ನಾನು ಡ್ರೋನ್ ನಿಂದ ಒಂದು ಎಕರೆಯನ್ನು ಆವರಿಸಿದ ತಕ್ಷಣ ಬ್ಯಾಟರಿ ಬೇಗನೆ ಖಾಲಿಯಾಗುತ್ತದೆ. ಆಗ ನಾನು ಅದನ್ನು ಚಾರ್ಜ್ ಮಾಡಬೇಕಾಗುತ್ತದೆ. ಇನ್ನೂ ಎರಡು ಬ್ಯಾಟರಿಗಳನ್ನು ಖರೀದಿಸಲು ನಾನು ಪಂಚಾಯತ್ ಮಟ್ಟದ ಒಕ್ಕೂಟದಿಂದ ಸಾಲಕ್ಕಾಗಿ ಅರ್ಜಿ ಸಲ್ಲಿಸಿದ್ದೇನೆ” ಎಂದು ಅವರು ಹೇಳುತ್ತಾರೆ.

ಇದರಲ್ಲಿ ಇತರ ಸವಾಲುಗಳು ಸಹ ಇವೆ. “ಸಮೀಪದ ಬ್ಲಾಕ್‌ಗಳಿಂದ ರೈತರಿಂದ ನನಗೆ ಕರೆಗಳು ಬಂದರೂ, ಡ್ರೋನ್ ಅನ್ನು ಸಾಗಿಸುವುದು ಒಂದು ಸಮಸ್ಯೆಯಾಗಿದೆ. ಏಕೆಂದರೆ ಅದು ಗೊಬ್ಬರ ಮತ್ತು ನೀರಿನಿಂದ ತುಂಬಿದ ನಂತರ ಸುಮಾರು 30 ಕೆಜಿ ತೂಗುತ್ತದೆ. ಅದನ್ನು ಸಾಗಿಸಲು ಇಬ್ಬರು ಜನರು ಬೇಕಾಗುತ್ತದೆ ಮತ್ತು ಡ್ರೋನ್ ಸಾಗಿಸಲು ಸೆಕೆಂಡ್ ಹ್ಯಾಂಡ್ ವಾಹನ ಖರೀದಿಗೆ ಸುಮಾರು 3 ರೂ. ಲಕ್ಷ ವೆಚ್ಚವಾಗುತ್ತದೆ. ಆದಾಗ್ಯೂ, ನನ್ನ ಹೊಸ ಉದ್ಯೋಗವು ನನ್ನ ಆದಾಯವನ್ನು ಪೂರೈಸುತ್ತದೆ ಮತ್ತು ದೀರ್ಘಾವಧಿಯಲ್ಲಿ ಇದು ಪ್ರಯೋಜನಕಾರಿಯಾಗಿದೆ ಎಂದು ಭಾವಿಸುತ್ತೇನೆ” ಎಂದು ಶರಣ್ಯ ಹೇಳುತ್ತಾರೆ.

ಕೃಪೆ: ದಿ ಹಿಂದೂ

ಮಹಿಳೆಯರ ವಿರುದ್ಧ ಅಸಭ್ಯ, ಅಶ್ಲೀಲ ಆರೋಪ: ತಂತ್ರಜ್ಞಾನ ಸಂಸ್ಥೆಯ ನಿರ್ದೇಶಕನ ವಿರುದ್ಧ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...