Homeಮುಖಪುಟಹೊಲಗಳಿಗೆ ಕ್ರಿಮಿನಾಶಕ ಸಿಂಪಡಣೆಗೆ ಡ್ರೋನ್ ತರಬೇತಿ ಪಡೆದ ಮಹಿಳೆಯರ ನೇಮಕ

ಹೊಲಗಳಿಗೆ ಕ್ರಿಮಿನಾಶಕ ಸಿಂಪಡಣೆಗೆ ಡ್ರೋನ್ ತರಬೇತಿ ಪಡೆದ ಮಹಿಳೆಯರ ನೇಮಕ

- Advertisement -
- Advertisement -

ಚೆನ್ನೈ: ರೈತರ ಹೊಲಗಳಲ್ಲಿ ಡ್ರೋನ್ ಮೂಲಕ ಕೀಟನಾಶಕ ಸಿಂಪಡಣೆಗಾಗಿ ಕೇಂದ್ರ ಯೋಜನೆಯಡಿ ತರಬೇತಿ ಪಡೆದ ರಾಜ್ಯದ ಮೊದಲ ಮಹಿಳಾ ತಂಡವನ್ನು ನಿಯೋಜಿಸಲಾಗಿದೆ. ನೀರು ತುಂಬಿದ ಹೊಲಗಳಿಗೆ ಡ್ರೋನ್‌ ಸಾಗಣೆಯು ಅದರ ಭಾರವಾದ ತೂಕವು ಒಂದು ಸವಾಲಾಗಿದೆ.

ಗಣಿತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರೆಯಾದ 27 ವರ್ಷದ ನಂದಿನಿ ಸುಗುಮಾರ್ ಯಾವಾಗಲೂ ಡ್ರೋನ್‌ಗಳ ಬಗ್ಗೆ ಆಕರ್ಷಣೆಯನ್ನು ಹೊಂದಿದ್ದರು.

ಮದುವೆಗಳಲ್ಲಿ ಫೋಟೊ ಮತ್ತು ವೀಡಿಯೋ ರೆಕಾರ್ಡ್ ಗಳಿಗೆ ಬಳಸುತ್ತಿದ್ದ ಈ ಡ್ರೋನ್ ಗಳು ಜನರ ತಲೆಯ ಮೇಲೆ ಗಿರಕಿ ಹೊಡೆಯುವುದನ್ನು ಮಾತ್ರ ನೋಡಿದ್ದ ಅವರು, ಕೃಷಿ ಪ್ರಧಾನ ಕಲ್ಲಕುರಿಚಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಸಹಾಯ ಮಾಡುವ ಸಲುವಾಗಿ ಈ ಡ್ರೋನ್‌ ತರಬೇತಿ ಪಡೆದ ಮಹಿಳಾ ಡ್ರೋನ್ ಪೈಲಟ್‌ಗಳಲ್ಲಿ ನಂದಿನಿ ಒಬ್ಬರಾಗಿದ್ದಾರೆ.

ಪೊಂಗಲ್‌ಗೆ ಹದಿನೈದು ದಿನಗಳ ಮೊದಲು, ಶಂಕರಪುರಂ ಬಳಿಯ ಗ್ರಾಮವಾದ ದೇವಪಂಡಲಂ ನಿವಾಸಿಗಳು ನಂದಿನಿಯವರು ಡ್ರೋನ್ ಮೂಲಕ ಕಬ್ಬಿನ ಹೊಲದಲ್ಲಿ  ಸುಳಿದಾಡುತ್ತಾ ಮೇಲೆ ಕ್ರಿಮಿನಾಶಕ ಸಿಂಪಡಿಸುವುದನ್ನು ವಿಸ್ಮಯದಿಂದ ನೋಡಿದರು. ಈ ವಿಶಿಷ್ಟವಾದ ಹಾರಾಟವು ಕೇವಲ ಏಳು ನಿಮಿಷಗಳಲ್ಲಿ ಇಡೀ ಕಬ್ಬಿನ ಹೊಲವನ್ನು ಆವರಿಸಿತು ಮತ್ತು ಗ್ರಾಮಸ್ಥರ ಜೋರಾದ ಹರ್ಷೋದ್ಗಾರಗಳ ನಡುವೆ ಭೂಮಿಗೆ ಮರಳಿತು.

ನಂದಿನಿ ಅವರು ಕೇಂದ್ರ ಸರ್ಕಾರದ ನಮೋ ಡ್ರೋನ್ ದೀದಿ ಯೋಜನೆಯಡಿ ಆಯ್ಕೆಯಾದ ತಮಿಳುನಾಡಿನ ಮೊದಲ ಮಹಿಳಾ ಸ್ವ-ಸಹಾಯ ಗುಂಪು ಸದಸ್ಯರಲ್ಲಿ ಒಬ್ಬರಾಗಿದ್ದಾರೆ. ಗ್ರಾಮೀಣ ಮಹಿಳೆಯರಿಗೆ ಡ್ರೋನ್ ಪೈಲಟ್‌ಗಳಾಗಿ ತರಬೇತಿ ನೀಡುವ ಮೂಲಕ ಅವರನ್ನು ಸಬಲೀಕರಣಗೊಳಿಸುವ ಮತ್ತು ಸ್ಥಳೀಯ ಕೃಷಿ ಚಟುವಟಿಕೆಗೆ ಅವಿಭಾಜ್ಯ ಪಾಲುದಾರರನ್ನಾಗಿ ಮಾಡುವ ಗುರಿಯನ್ನು ಇದು ಹೊಂದಿದೆ.

ಕಲ್ಲಕುರಿಚಿಯಲ್ಲಿ ನಂದಿನಿಯವರು ಡ್ರೋನ್ ದೀದಿ ಯೋಜನೆಯ ಬಗ್ಗೆ ತಿಳಿದುಕೊಂಡರು ಮತ್ತು ಯಾವುದೇ ಆಲೋಚನೆ ಮಾಡದೇ ತರಬೇತಿಗಾಗಿ ಅರ್ಜಿ ಸಲ್ಲಿಸಿದರು. ತಮಿಳುನಾಡು ಮಹಿಳಾ ಅಭಿವೃದ್ಧಿ ನಿಗಮದಿಂದ ಮಹಿಳಾ ಸ್ವಸಹಾಯ ಸಂಘದ ಸದಸ್ಯೆಯಾಗಿ ಗುರುತಿಸಲ್ಪಟ್ಟ ನಂತರ, ಅವರನ್ನು ಕಲ್ಲಕುರಿಚಿ ಜಿಲ್ಲೆಯ ಕ್ಲಸ್ಟರ್‌ಗಳಲ್ಲಿ ಈ ತರಬೇತಿಗಾಗಿ ಆಯ್ಕೆ ಮಾಡಲಾಯಿತು.

ನಂದಿನಿ ಚೆನ್ನೈನಲ್ಲಿ ಗರುಡ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್ ನಡೆಸಿದ ಡ್ರೋನ್‌ಗಳ ಕಾರ್ಯಾಚರಣೆ ಮತ್ತು ನಿರ್ವಹಣೆ ಕುರಿತು ಐದು ದಿನಗಳ ಪ್ರಾಯೋಗಿಕ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡರು. ರಿಮೋಟ್ ಪೈಲಟ್ ತರಬೇತಿ ತರಗತಿಗಳನ್ನು ಪೂರ್ಣಗೊಳಿಸಿದ ನಂತರ, ಅವರಿಗೆ ಎರಡು ಟ್ಯಾಂಕ್‌ಗಳು ಮತ್ತು ಬ್ಯಾಟರಿ ಸೆಟ್ ಹೊಂದಿರುವ 7 ಲಕ್ಷ ರೂ. ಮೌಲ್ಯದ ಉಚಿತ ಡ್ರೋನ್ ನೀಡಲಾಯಿತು.

ನುರಿತ ಡ್ರೋನ್ ಪೈಲಟ್ ಆಗಿ ಪದವಿ ಪಡೆದ ನಂದಿನಿ, ರೈತರ ವ್ಯಾಪಕ ಕೃಷಿ ಚಟುವಟಿಕೆಗಳ ಅವಶ್ಯಕತೆಗಳನ್ನು ಪೂರೈಸುವುದು, ರಸಗೊಬ್ಬರಗಳು ಮತ್ತು ಕೀಟನಾಶಕಗಳನ್ನು ಸಿಂಪಡಿಸುವುದು ಮತ್ತು ಹೊಲಗಳಿಗೆ ನೀರುಣಿಸುವುದಕ್ಕಾಗಿ ಈ ತಂತ್ರಜ್ಞಾನವನ್ನು ಅಳವಡಿಸುವುದಕ್ಕೆ ಉತ್ಸುಕರಾಗಿದ್ದಾರೆ.

ಡ್ರೋನ್ ಹಾರಾಟ ನಡೆಸುವುದು ಎಂದರೆ ನನಗೆ ತುಂಬಾ ಖುಷಿ. ನಾನು ಸ್ಥಳೀಯ ರಸಗೊಬ್ಬರ ಅಂಗಡಿಗಳಿಗೆ ನನ್ನ ಸಂಪರ್ಕ ವಿವರಗಳನ್ನು ನೀಡಿದ್ದೇನೆ ಮತ್ತು ರೈತರಿಗೆ ಸಹಾಯ ಮಾಡಲು ಹತ್ತಿರದ ಹಳ್ಳಿಗಳಿಗೆ ಪ್ರವಾಸ ಮಾಡುತ್ತಿದ್ದೇನೆ. ಡ್ರೋನ್ ಮೂಲಕ ದ್ರವಗೊಬ್ಬರ ಮತ್ತು ಕೀಟನಾಶಕಗಳನ್ನು ಸಿಂಪಡಿಸುವುದು ತುಂಬಾ ವೆಚ್ಚದಾಯಕವಾಗಿದೆ ಮತ್ತು ಒಂದು ಎಕರೆ ಕೃಷಿ ಭೂಮಿಯನ್ನು ಆವರಿಸಲು ಸುಮಾರು ಏಳು ನಿಮಿಷಗಳನ್ನು ತೆಗೆದುಕೊಳ್ಳುತ್ತದೆ ಎಂದು ಅವರು ಹೇಳುತ್ತಾರೆ.

ಅವರು ಡ್ರೋನ್ ಮೂಲಕ ಕ್ರಿಮಿನಾಶಕ ಸಿಂಪಡಿಸುವುದಕ್ಕಾಗಿ ಎಕರೆಗೆ 400 ರೂ. ಶುಲ್ಕ ವಿಧಿಸುತ್ತಾರೆ. ದೇವಪಂಡಲಂ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಹೆಚ್ಚಿನ ರೈತರು 1ರಿಂದ 4 ಎಕರೆಗಳವರೆಗಿನ ಸಣ್ಣ ಭೂ ಹಿಡುವಳಿಗಳನ್ನು ಹೊಂದಿದ್ದಾರೆ.

“ದೇವಪಂಡಲಂನಲ್ಲಿರುವ ರೈತನ ಒಡೆತನದ ಕಬ್ಬಿನ ಹೊಲ ನನ್ನ ಮೊದಲ ಭೇಟಿ. ಇಲ್ಲಿ ನಾನು ಡ್ರೋನ್ ನ ಮೊದಲ ಹಾರಾಟ ನಡೆಸಿದೆ ಮತ್ತು ಈ ಸೇವೆಯು ರೈತನಿಗೆ ತೃಪ್ತಿಕರ ಫಲಿತಾಂಶವನ್ನು ಕೊಟ್ಟಿದೆ ಎಂದು ಖಚಿತಪಡಿಸಿಕೊಳ್ಳಲು ನಾನು ಯಾವ ಶುಲ್ಕವನ್ನು ವಿಧಿಸಲಿಲ್ಲ” ಎಂದು ಅವರು ಹೇಳುತ್ತಾರೆ. ಡ್ರೋನ್ ಸಹಾಯಕ ತರಬೇತಿಯನ್ನು ಪೂರ್ಣಗೊಳಿಸಿದ ಅವರ ಪತಿ ಸುಗುಮಾರ್ ಕೂಡ ಸಾಧನವನ್ನು ನಿರ್ವಹಿಸಲು ಸಹಾಯ ಮಾಡುತ್ತಾರೆ.

ಕಲ್ಲಕುರಿಚಿ ಜಿಲ್ಲೆಯ ಎರೈಯೂರ್ ಬಳಿಯ ಕೊಮ್ಮಸಮುತಿರಂನ ವಿ.ಶರಣ್ಯ ಕೂಡ ತರಬೇತಿ ಪಡೆದ ಮಹಿಳಾ ಡ್ರೋನ್ ಪೈಲಟ್. ಅವರು 10ನೇ ತರಗತಿಯವರೆಗೆ ಅಧ್ಯಯನ ಮಾಡಿದ್ದಾರೆ ಮತ್ತು ಮಹಿಳೆಯರಿಗೆ ಕಡಿಮೆ ಉದ್ಯೋಗಾವಕಾಶಗಳು ಇರುವುದರಿಂದ ಪ್ರಸ್ತುತ ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾರೆ.

ಚೆನ್ನೈನಲ್ಲಿ ಡ್ರೋನ್ ಪೈಲಟ್ ತರಬೇತಿಯನ್ನು ಪೂರ್ಣಗೊಳಿಸಿದ ಶರಣ್ಯ, ಈಗ ಉಲುಂದೂರ್ಪೇಟೆ ಬ್ಲಾಕ್‌ನ ಹಳ್ಳಿಗಳಲ್ಲಿ ಸಂಚರಿಸಿ, ಮಾಸಿಕ ಆದಾಯವನ್ನು ಕೊಡುವ ಹೊಲಗಳಲ್ಲಿ ಕೃಷಿ ಸಂಬಂಧಿತ ಡ್ರೋನ್ ಸಿಂಪಡಣೆಯ ಕಾರ್ಯವನ್ನು ಕೈಗೆತ್ತಿಕೊಂಡಿದ್ದಾರೆ.

“ರೈತರಿಂದ ಬರುವ ಸಾಮಾನ್ಯ ಬೇಡಿಕೆಯೆಂದರೆ ರಸಗೊಬ್ಬರಗಳು ಮತ್ತು ಕೀಟನಾಶಕಗಳ ಸಿಂಪಡಣೆ. ನಾನು ಡ್ರೋನ್ ನಿಂದ ಒಂದು ಎಕರೆಯನ್ನು ಆವರಿಸಿದ ತಕ್ಷಣ ಬ್ಯಾಟರಿ ಬೇಗನೆ ಖಾಲಿಯಾಗುತ್ತದೆ. ಆಗ ನಾನು ಅದನ್ನು ಚಾರ್ಜ್ ಮಾಡಬೇಕಾಗುತ್ತದೆ. ಇನ್ನೂ ಎರಡು ಬ್ಯಾಟರಿಗಳನ್ನು ಖರೀದಿಸಲು ನಾನು ಪಂಚಾಯತ್ ಮಟ್ಟದ ಒಕ್ಕೂಟದಿಂದ ಸಾಲಕ್ಕಾಗಿ ಅರ್ಜಿ ಸಲ್ಲಿಸಿದ್ದೇನೆ” ಎಂದು ಅವರು ಹೇಳುತ್ತಾರೆ.

ಇದರಲ್ಲಿ ಇತರ ಸವಾಲುಗಳು ಸಹ ಇವೆ. “ಸಮೀಪದ ಬ್ಲಾಕ್‌ಗಳಿಂದ ರೈತರಿಂದ ನನಗೆ ಕರೆಗಳು ಬಂದರೂ, ಡ್ರೋನ್ ಅನ್ನು ಸಾಗಿಸುವುದು ಒಂದು ಸಮಸ್ಯೆಯಾಗಿದೆ. ಏಕೆಂದರೆ ಅದು ಗೊಬ್ಬರ ಮತ್ತು ನೀರಿನಿಂದ ತುಂಬಿದ ನಂತರ ಸುಮಾರು 30 ಕೆಜಿ ತೂಗುತ್ತದೆ. ಅದನ್ನು ಸಾಗಿಸಲು ಇಬ್ಬರು ಜನರು ಬೇಕಾಗುತ್ತದೆ ಮತ್ತು ಡ್ರೋನ್ ಸಾಗಿಸಲು ಸೆಕೆಂಡ್ ಹ್ಯಾಂಡ್ ವಾಹನ ಖರೀದಿಗೆ ಸುಮಾರು 3 ರೂ. ಲಕ್ಷ ವೆಚ್ಚವಾಗುತ್ತದೆ. ಆದಾಗ್ಯೂ, ನನ್ನ ಹೊಸ ಉದ್ಯೋಗವು ನನ್ನ ಆದಾಯವನ್ನು ಪೂರೈಸುತ್ತದೆ ಮತ್ತು ದೀರ್ಘಾವಧಿಯಲ್ಲಿ ಇದು ಪ್ರಯೋಜನಕಾರಿಯಾಗಿದೆ ಎಂದು ಭಾವಿಸುತ್ತೇನೆ” ಎಂದು ಶರಣ್ಯ ಹೇಳುತ್ತಾರೆ.

ಕೃಪೆ: ದಿ ಹಿಂದೂ

ಮಹಿಳೆಯರ ವಿರುದ್ಧ ಅಸಭ್ಯ, ಅಶ್ಲೀಲ ಆರೋಪ: ತಂತ್ರಜ್ಞಾನ ಸಂಸ್ಥೆಯ ನಿರ್ದೇಶಕನ ವಿರುದ್ಧ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...